Homeಅಂತರಾಷ್ಟ್ರೀಯಅಲ್ಪಸಂಖ್ಯಾತರನ್ನು ಗುರಿಯಾಗಿಸುವುದು ಸ್ವೀಕಾರಾರ್ಹವಲ್ಲ: ಭಾರತಕ್ಕೆ ಅಮೇರಿಕಾದ ಕಠಿಣ ಸಂದೇಶ

ಅಲ್ಪಸಂಖ್ಯಾತರನ್ನು ಗುರಿಯಾಗಿಸುವುದು ಸ್ವೀಕಾರಾರ್ಹವಲ್ಲ: ಭಾರತಕ್ಕೆ ಅಮೇರಿಕಾದ ಕಠಿಣ ಸಂದೇಶ

- Advertisement -
- Advertisement -

ಮಧ್ಯ ಮತ್ತು ದಕ್ಷಿಣ ಏಷ್ಯಾದೊಂದಿಗೆ ವ್ಯವಹರಿಸುವ ಹಿರಿಯ ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ರಾಜತಾಂತ್ರಿಕ, ಆಲಿಸ್ ಜಿ ವೆಲ್ಸ್ ಅವರು ಕೋವಿಡ್ 19 ಅನ್ನು ಬಳಸಿ ಜನಾಂಗೀಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಸುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ಅವರು ಟ್ವೀಟ್‌ನಲ್ಲಿ, “ಯಾವುದೇ ಸಮಯದಲ್ಲಿ ಹಾಗೂ ಯಾವುದೇ ಸ್ಥಳದಲ್ಲಿ ಜನಾಂಗೀಯ ಅಥವಾ ಧಾರ್ಮಿಕ ಅಲ್ಪಸಂಖ್ಯಾತರನ್ನು ಕಳಂಕಿತಗೊಳಿಸುವುದು ಸ್ವೀಕಾರಾರ್ಹವಲ್ಲ. ಕೊವಿಡ್ 19 ರ ಆತಂಕ ಮತ್ತು ಭಯ ನಮ್ಮನ್ನು ವಿಭಜಿಸಲು ಬಿಡಬಾರದು …” ಎಂದು ಬರೆದಿದ್ದಾರೆ.

ಲಾರ್ಜ್ ಫಾರ್ ಇಂಟರ್ನ್ಯಾಷನಲ್ ರಿಲೀಜಿಯಸ್ ಫ್ರೀಡಂ ಇದರ ಅಮೆರಿಕಾ ರಾಯಭಾರಿ ಸ್ಯಾಮ್ ಬ್ರೌನ್ಬ್ಯಾಕ್ ಭಾರತದಲ್ಲಿ ‘ಕರೋನಾ ಜಿಹಾದ್’ ಹ್ಯಾಶ್‌ಟ್ಯಾಗ್ ಟ್ರೆಂಡ್ “ದುರದೃಷ್ಟಕರ” ಎಂದು ಹೇಳಿದ್ದಾರೆ.

“ಸರ್ಕಾರಗಳು ತಪ್ಪು ಮಾಡುತ್ತಿದೆ. ಸರ್ಕಾರಗಳು ಇದನ್ನು ನಿಯಂತ್ರಿಸಬೇಕು ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳು ಕೊರೊನ ವೈರಸ್‌ನ ಮೂಲವಲ್ಲ ಎಂದು ಸ್ಪಷ್ಟವಾಗಿ ಹೇಳಬೇಕು” ಎಂದು ಅವರು ಹೇಳಿದ್ದರು.

ಸರ್ಕಾರದ ಮೇಲೆ ಹೊಣೆಗಾರಿಕೆಯನ್ನು ಹೇರುತ್ತಿರುವಾಗ, “ಆತಿಥೇಯ ಸರ್ಕಾರಗಳು ಅದನ್ನು ಆಕ್ರಮಣಕಾರಿಯಾಗಿ ಹಿಂದಕ್ಕೆ ತಳ್ಳುತ್ತವೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದರು. ಆದರೆ ಈ ವಿಷಯದ ಬಗ್ಗೆ ಅವರು ಇನ್ನೂ ಭಾರತೀಯ ಅಧಿಕಾರಿಗಳೊಂದಿಗೆ ಯಾವುದೇ ನಿರ್ದಿಷ್ಟ ಸಂಭಾಷಣೆ ನಡೆಸಿಲ್ಲ ಎಂದು ಅವರು ಹೇಳಿದರು.

ಮಾರ್ಚ್ ಮೊದಲಾರ್ಧದಲ್ಲಿ ಧಾರ್ಮಿಕ ಸಭೆ ನಡೆದ ದೆಹಲಿಯ ನಿಜಾಮುದ್ದೀನ್‌ನಿಂದ ಕೋವಿಡ್ -19 ರ ಹರಡುವಿಕೆ ವರದಿಯಾದ ನಂತರ, ಈ ಘಟನೆಯಲ್ಲಿ ಭಾಗವಹಿಸಿದ ತಬ್ಲೀಘಿ ಜಮಾಅತ್ ಸದಸ್ಯರ ವಿರುದ್ಧ ಮಾತ್ರವಲ್ಲದೆ ಇಡೀ ಮುಸ್ಲಿಂ ಸಮುದಾಯವನ್ನು ಹೊಣೆಯನ್ನಾಗಹಿ ಮಾಡಲಾಗುತ್ತಿದೆ.

ದೇಶದಲ್ಲಿ ಮುಸ್ಲಿಂ ಸಮುದಾಯವು ಉದ್ದೇಶಪೂರ್ವಕವಾಗಿ ಕೋವಿಡ್ -19 ಅನ್ನು ಹರಡುತ್ತಿದೆ ಎನ್ನುವಂತೆ ಮಾಧ್ಯಮಗಳು ನಕಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ. ಎಷ್ಟರಮಟ್ಟಿಗೆಂದರೆ, ಸ್ವತಃ ಪೊಲೀಸರೇ ಮಾಧ್ಯಮಗಳಿಗೆ ಸುಳ್ಳು ಸುದ್ದಿಗಳನ್ನು ವರದಿ ಮಾಡದಿರಿ ಎಂದು ಹೇಳತೊಡಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...