Homeಚಳವಳಿದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದು ಖಂಡನಾರ್ಹ: PFI

ದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದು ಖಂಡನಾರ್ಹ: PFI

- Advertisement -
- Advertisement -

ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ರೀತಿಯ ದುಷ್ಕೃತ್ಯಗಳ ಹೆಸರಿನಲ್ಲಿ ಮುಸ್ಲಿಮ್ ಸಮುದಾಯವನ್ನು ಗುರಿಪಡಿಸುತ್ತಿರುವುದನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ.ಕ.ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಶುಕ್ರವಾರ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಎ ಕೆ ಅಶ್ರಫ್, “ಜಿಲ್ಲೆಯಲ್ಲಿ ಸರಣಿ ದುಷ್ಕೃತ್ಯಗಳು ನಡೆದಾಗಲೆಲ್ಲಾ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಸಂಘಪರಿವಾರವು ಮುಸ್ಲಿಮರನ್ನು ಗುರಿಪಡಿಸಿಕೊಂಡು ಅಪಪ್ರಚಾರಗಳನ್ನು ನಡೆಸುತ್ತಾ ಬಂದಿದೆ. ಜೊತೆಗೆ ಸಂಘಪರಿವಾರದ ನಾಯಕರು ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತಾ ಶಾಂತಿ ಕದಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಡೆಯುವ ಪೊಲೀಸರ ಕೋಮು ಪೂರ್ವಾಗ್ರಹಪೀಡಿತ ತನಿಖೆಗಳು ಕಳವಳಕಾರಿಯಾಗಿವೆ. ಇದೀಗ ಮಂಗಳೂರಿನ ನಂದಿಗುಡ್ಡೆಯಲ್ಲಿ ಕೊರಗಜ್ಜ ದೈವಸ್ಥಾನ ಕಟ್ಟೆಯನ್ನು ಅಪವಿತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ದೇವದಾಸ್ ದೇಸಾಯಿ ಎಂಬಾತನನ್ನು ಬಂಧಿಸಿದ್ದಾರೆ. ತಾನು 18 ಕಡೆ ಇಂತಹ ದುಷ್ಕೃತ್ಯಗಳನ್ನು ಎಸಗಿದ್ದೆ ಎಂಬ ವಿಚಾರವನ್ನು ಆರೋಪಿ ಒಪ್ಪಿಕೊಂಡಿರುವುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಜೊತೆಗೆ ಕೃತ್ಯ ನಡೆಸಿರುವುದರ ಬಗ್ಗೆ ಆರೋಪಿಯ ಹೇಳಿಕೆಯೂ ಪ್ರಸಾರವಾಗಿದೆ. ಆದರೆ ಅದಕ್ಕೂ ಮೊದಲು ಮುಸ್ಲಿಂ ಯುವಕರನ್ನು ಆರೋಪಿಗಳೆಂದು ಬಿಂಬಿಸಿ ಚಿತ್ರಹಿಂಸೆ ನೀಡಲಾಗಿದ್ದು ಸರಿಯೇ” ಎಂದು ಪ್ರಶ್ನಿಸಿದ್ದಾರೆ.

ಈ ಮೊದಲು ಮಂಗಳೂರು ನಗರದ ಸುತ್ತಮುತ್ತಲಿನ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಎಸಗಿದ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಹೇಳಿ ಪೊಲೀಸರು ಜೋಕಟ್ಟೆ ಪರಿಸರದ ರಹೀಂ ಮತ್ತು ತೌಫೀಕ್ ಎಂಬ ಇಬ್ಬರು ಯುವಕರನ್ನು ಮಾಧ್ಯಮದವರ ಮುಂದೆ ಹಾಜರುಪಡಿಸಿದ್ದರು. ಆರೋಪಿಗಳು ತಮ್ಮ ಕೃತ್ಯಗಳನ್ನು ಒಪ್ಪಿಕೊಂಡಿದ್ದಾರೆಂದು ಪೊಲೀಸ್ ಕಮಿಷನರ್ ಎನ್.ಶಶಿ ಕುಮಾರ್ ಸ್ವತಃ ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದರು. ಮಾಧ್ಯಮಗಳಲ್ಲೂ ಪೊಲೀಸ್ ಕಮಿಷನರ್ ಅವರ ಹೇಳಿಕೆಗಳು ಪ್ರಕಟವಾಗಿದ್ದವು. ಇವರಿಬ್ಬರ ಬಂಧನದ ಬಳಿಕ ಒಟ್ಟು ಮುಸ್ಲಿಮ್ ಸಮುದಾಯವನ್ನು ಸಂಶಯದ ದೃಷ್ಟಿಯಿಂದ ನೋಡಲಾಯಿತು. ಪತ್ರಿಕಾಗೋಷ್ಠಿಯಲ್ಲಿ ನೀಡಲಾದ ಹೇಳಿಕೆಗಳನ್ನು ಆಧರಿಸಿ ಸಂಘಪರಿವಾರದ ಶಕ್ತಿಗಳು ಮುಸ್ಲಿಮರ ವಿರುದ್ಧ ದ್ವೇಷ ಹರಡುವ ಅಭಿಯಾನವನ್ನು ಹಮ್ಮಿಕೊಂಡವು. ಜೋಕಟ್ಟೆಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ಮುಸ್ಲಿಮ್ ಯುವಕ ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದ್ದರಿಂದಲೇ ರಕ್ತ ವಾಂತಿ ಮಾಡಿ ಸತ್ತಿದ್ದಾನೆಂದು ಹೇಳಿ ಭಾವನಾತ್ಮಕವಾಗಿ ಪ್ರಚೋದಿಸುವ ಹುನ್ನಾರವೂ ನಡೆಯಿತು. ಇದು ಸೌಹಾರ್ದದಿಂದ ಬದುಕುತ್ತಿದ್ದ ಹಿಂದು-ಮುಸ್ಲಿಮರ ನಡುವೆ ಮತ್ತಷ್ಟು ಅಪನಂಬಿಕೆ ಸೃಷ್ಟಿಸಲು ಕಾರಣವಾಯಿತು. ಧಾರ್ಮಿಕ ಸ್ಥಳಗಳನ್ನು ಅಪವಿತ್ರಗೊಳಿಸಿದ ಹೆಸರಿನಲ್ಲಿ ಸಂಘಪರಿವಾರ ಮುಸ್ಲಿಮರ ತೇಜೋವಧೆ ನಡೆಸುತ್ತಿದ್ದರೆ, ಜಿಲ್ಲೆಯ ಪೊಲೀಸ್ ಇಲಾಖೆಯೂ ತನಿಖೆಗೆ ಮುನ್ನವೇ ಮುಸ್ಲಿಮರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿಬಿಟ್ಟಿತು ಎಂದು ದೂರಿದ್ದಾರೆ.

ಸತತ 4 ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕವೂ ಪೊಲೀಸರಿಗೆ, ರಹೀಂ ಮತ್ತು ತೌಫೀಕ್ ಎಂಬ ಇಬ್ಬರು ಯುವಕರ ವಿರುದ್ಧವೂ ಯಾವುದೇ ಸಾಕ್ಷ್ಯಾಧಾರ ದೊರಕಲಿಲ್ಲ. ನಂತರದಲ್ಲಿ ಈ ಘಟನೆಗಳ ಸಂಬಂಧ ಯಾವುದೇ ಪ್ರಕರಣ ದಾಖಲಿಸದೇ ಅವರಿಬ್ಬರನ್ನೂ ಬಿಡುಗಡೆಗೊಳಿಸಲಾಗಿತ್ತು. ಬಂಧನದ ವೇಳೆ ಪೊಲೀಸರು ಪತ್ರಿಕಾಗೋಷ್ಠಿ ನಡೆಸಿದ್ದರು. ಆದರೆ ಅಮಾಯಕರ ಬಿಡುಗಡೆಯ ವೇಳೆ ಮೌನವಹಿಸಿದ್ದರು. ಇದು ಸಮಾಜಕ್ಕೆ ಯಾವ ರೀತಿಯ ಸಂದೇಶ ನೀಡುತ್ತದೆ ಎಂದು ಎ ಕೆ ಅಶ್ರಫ್ ಪ್ರಶ್ನಿಸಿದ್ದಾರೆ.

ಕೆಲ ಸಮಯಗಳ ಹಿಂದೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕರ್ಕೇರ ಮೂಲ ದೈವಸ್ಥಾನದಲ್ಲಿ ಮೂರ್ತಿಗಳನ್ನು ಭಗ್ನಗೊಳಿಸಿದ ಘಟನೆ ನಡೆದಿತ್ತು. ಈ ವೇಳೆ ಸಂಘಪರಿವಾರವು ಘಟನೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆ, ಕೋಮುಪ್ರಚೋದನಕಾರಿ ಹೇಳಿಕೆಗಳ ಮೂಲಕ ಶಾಂತಿ ಕದಡುವ ಪ್ರಯತ್ನ ನಡೆಸಿತ್ತು. ಆದರೆ ಆ ಘಟನೆಯಲ್ಲಿ ಆರೋಪಿ ರೋಹಿತಾಶ್ವ ಎಂಬಾತನ ಬಂಧನದೊಂದಿಗೆ ಸಂಘಪರಿವಾರದ ಗಲಭೆ ನಡೆಸುವ ಷಡ್ಯಂತ್ರ ವಿಫಲವಾಗಿತ್ತು. ಮಂಜನಾಡಿ ವಿಷ್ಣುಮೂರ್ತಿ ಜನಾರ್ದನ ದೈವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕಳವು ಮತ್ತು ಇತರ ಬೈಕುಗಳು ಕಳವಾದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂಬಾತನನ್ನು ಬಂಧಿಸಿದ್ದು, ಈತ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಉಳ್ಳಾಲ ಪ್ರಖಂಡದ ಸಂಚಾಲಕನಾಗಿದ್ದ ಎಂಬ ಮಾಹಿತಿಯೂ ಬಹಿರಂಗವಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದ ಹೆಸರಿನಲ್ಲಿ ಬಜರಂಗ ದಳವು ಕದ್ರಿಯಿಂದ ಕುತ್ತಾರ್ ವರೆಗೆ ಪಾದಯಾತ್ರೆ ನಡೆಸಿ ಮುಸ್ಲಿಮ್ ವಿರೋಧಿ ಭಾವನೆಗಳನ್ನು ಹುಟ್ಟು ಹಾಕಲು ಶ್ರಮಿಸಿತ್ತು. ಈ ಹಿಂದೆ ಕೊಣಾಜೆಯ ಕಾರ್ತಿಕ್ ರಾಜ್ ಕೊಲೆ ನಡೆದಾಗಲೂ ಪೊಲೀಸರು ಅಮಾಯಕ ಮುಸ್ಲಿಮ್ ಯುವಕರನ್ನು ಠಾಣೆಯಲ್ಲಿಟ್ಟು ನಿರಂತರವಾಗಿ ಚಿತ್ರಹಿಂಸೆ ನೀಡಿದ್ದರು. ಜವಾಬ್ದಾರಿಯುತ ಸಂಸದರು ಅಂದು ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಗೆ ಬೆಂಕಿ ಹಚ್ಚುವ ಅವಿವೇಕದ ಹೇಳಿಕೆಯನ್ನೂ ನೀಡಿದ್ದರು. ಕೆಲ ಸಮಯಗಳ ಬಳಿಕ ಹತ್ಯೆಯಲ್ಲಿ ಕಾರ್ತಿಕ್ ರಾಜ್ ಸಹೋದರಿ ಮತ್ತು ಪ್ರಿಯಕರನ ಪಾತ್ರವಿರುವುದು ಬಹಿರಂಗವಾಗಿತ್ತು ಎಂದು ದ.ಕ ಜಿಲ್ಲಾಧ್ಯಕ್ಷರಾದ ಏಜಾಜ್ ಅಹ್ಮದ್ ಅಸಮಾಧಾನ ವ್ಯಕ್ತಪಡಿಸಿದರು.

ಸಂಘಪರಿವಾರದ ನಿರಂತರ ಅಪಪ್ರಚಾರದೊಂದಿಗೆ ಜಿಲ್ಲಾ ಪೊಲೀಸರ ಕೋಮು ಪೂರ್ವಾಗ್ರಹಪೀಡಿತ ತನಿಖೆಗಳೂ ಆತಂಕ ಹುಟ್ಟಿಸುತ್ತಿವೆ. ತನಿಖೆಯಲ್ಲಿ ನೈಜ ಆರೋಪಿಗಳು ಪತ್ತೆಯಾದಾಗ ಪೊಲೀಸರು ಘಟನೆಯನ್ನು ಕೇವಲವಾಗಿ ಪ್ರಸ್ತುತಪಡಿಸುತ್ತಿರುವುದು ಕಂಡು ಬರುತ್ತಿದೆ. ಪೊಲೀಸ್ ಇಲಾಖೆಯ ಇಂತಹ ವರ್ತನೆಗಳು ಯಾವುದೇ ಕಾರಣಕ್ಕೂ ಸಹಿಸುವಂಥದ್ದಲ್ಲ. ಈ ಸರಣಿ ದುಷ್ಕೃತ್ಯಗಳ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಸಂಘಪರಿವಾರದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು. ತನಿಖೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಇಲಾಖೆ ಮುಸ್ಲಿಮ್ ಯುವಕರನ್ನು ಸಾರ್ವಜನಿಕವಾಗಿ ಅಪರಾಧಿಗಳನ್ನಾಗಿ ಬಿಂಬಿಸಿದ್ದು ಯಾರನ್ನು ತೃಪ್ತಿಪಡಿಸಲು ಎಂಬುದು ಬಹಿರಂಗವಾಗಬೇಕು. ಅಮಾಯಕ ಮುಸ್ಲಿಮ್ ಯುವಕರನ್ನು ಬಂಧಿಸಿ ಜನರಿಗೆ ತಪ್ಪು ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು, ಅಮಾಯಕ ಯುವಕರು ಮತ್ತು ಒಟ್ಟು ಮುಸ್ಲಿಮ್ ಸಮುದಾಯದ ಮೇಲಾದ ಮಾನಹಾನಿಗೆ ಕ್ಷಮೆ ಯಾಚಿಸಬೇಕು. ಪೊಲೀಸ್ ಇಲಾಖೆ ಪಕ್ಷಪಾತವಾಗಿ ಮತ್ತು ಪೂರ್ವಾಗ್ರಹಪೀಡಿತವಾಗಿ ಕಾರ್ಯನಿರ್ವಹಿಸದೇ, ಸಂವಿಧಾನದ ಸಮಾನ ನ್ಯಾಯದ ಆಶಯಕ್ಕೆ ಬದ್ಧರಾಗಿ ಕರ್ತವ್ಯ ನಿಷ್ಠೆ ತೋರಬೇಕೆಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...