Homeಮುಖಪುಟಸುಂಕ ಬೆದರಿಕೆ, ಭಾರತೀಯರ ಗಡಿಪಾರು ನಡುವೆ ಅಮೆರಿಕಕ್ಕೆ ಭೇಟಿ ನೀಡಲಿರುವ ಮೋದಿ

ಸುಂಕ ಬೆದರಿಕೆ, ಭಾರತೀಯರ ಗಡಿಪಾರು ನಡುವೆ ಅಮೆರಿಕಕ್ಕೆ ಭೇಟಿ ನೀಡಲಿರುವ ಮೋದಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 12-13 ರಂದು ಅಮೆರಿಕಕ್ಕೆ ಭೇಟಿ ನೀಡಲಿದ್ದು, ತಮ್ಮ ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷರಾಗಿರುವ “ಆತ್ಮೀಯ ಸ್ನೇಹಿತ” ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮೊದಲ ಸಭೆ ನಡೆಸಲಿದ್ದಾರೆ. ಟ್ರಂಪ್ ಅಧಿಕಾರ ವಹಿಸಿಕೊಂಡ ಮೊದಲ ತಿಂಗಳೊಳಗೆ ನಡೆಯಲಿರುವ ಈ ಭೇಟಿಯು ಟ್ರಂಪ್ ಭಾರತಕ್ಕೆ ಸುಂಕ ವಿಧಿಸುವ ಬೆದರಿಕೆಗಳು ಮತ್ತು ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರು ಮಾಡುತ್ತಿರುವ ಮಧ್ಯೆ ನಡೆಯುತ್ತಿದೆ. ಸುಂಕ ಬೆದರಿಕೆ

ಪ್ರಧಾನಿ ಮೋದಿಯ ಭೇಟಿಯನ್ನು ಘೋಷಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, “ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ಅಮೆರಿಕಕ್ಕೆ ಭೇಟಿ ನೀಡುವ ಮೊದಲ ಕೆಲವು ವಿಶ್ವ ನಾಯಕರಲ್ಲಿ ಪ್ರಧಾನಿ ಮೋದಿ ಕೂಡ ಒಬ್ಬರು. ಹೊಸ ಆಡಳಿತ ಅಧಿಕಾರ ವಹಿಸಿಕೊಂಡ ಕೇವಲ ಮೂರು ವಾರಗಳಲ್ಲಿ ಪ್ರಧಾನಿಯನ್ನು ಅಮೆರಿಕಕ್ಕೆ ಭೇಟಿ ನೀಡಲು ಆಹ್ವಾನಿಸಲಾಗಿದೆ. ಇದು ಭಾರತ-ಅಮೆರಿಕದ ಪಾಲುದಾರಿಕೆಯ ಮಹತ್ವವನ್ನು ತೋರಿಸುತ್ತದೆ. ಈ ಪಾಲುದಾರಿಕೆ ಅಮೆರಿಕದಲ್ಲಿ ಅನುಭವಿಸುವ ದ್ವಿಪಕ್ಷೀಯ ಬೆಂಬಲವನ್ನು ಪ್ರತಿಬಿಂಬಿಸುತ್ತದೆ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಟ್ರಂಪ್ ಈಗಾಗಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿ ಮಾಡಿದ್ದಾರೆ ಮತ್ತು ಈ ವಾರ ವಾಷಿಂಗ್ಟನ್‌ನಲ್ಲಿ ಜಪಾನ್‌ನ ಶಿಗೇರು ಇಶಿಬಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಟ್ರಂಪ್ ಅವರ ಮೊದಲ ಅವಧಿಯಲ್ಲಿ ಆತ್ಮೀಯ ಸಂಬಂಧಗಳನ್ನು ಹಂಚಿಕೊಂಡ ಇಬ್ಬರು ನಾಯಕರು ಕಳೆದ ವಾರ ಫೋನ್ ಕರೆ ನಡೆಸಿದ್ದರು. ಈ ವೇಳೆ ವಲಸೆ, ಭದ್ರತೆ ಮತ್ತು ವ್ಯಾಪಾರ ಸಂಬಂಧಗಳ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಸುಂಕ ಬೆದರಿಕೆ

ಟ್ರಂಪ್ ಅವರನ್ನು ತಮ್ಮ “ಆತ್ಮೀಯ ಸ್ನೇಹಿತ” ಎಂದು ಉಲ್ಲೇಖಿಸಿದ ಪ್ರಧಾನಿ ಮೋದಿ, “ನಮ್ಮ ಜನರ ಕಲ್ಯಾಣಕ್ಕಾಗಿ” ಮತ್ತು “ಜಾಗತಿಕ ಶಾಂತಿಯ ಕಡೆಗೆ” ಇಬ್ಬರೂ ನಾಯಕರು ಒಟ್ಟಾಗಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ಟ್ರಂಪ್‌ ಕೂಡಾ ಕಳೆದ ವರ್ಷ ಪ್ರಧಾನಿ ಮೋದಿ ಅವರನ್ನು “ಶ್ರೇಷ್ಠ ನಾಯಕ” ಎಂದು ಕರೆದಿದ್ದರು. ಅದಾಗ್ಯೂ, ಈ ಹಿಂದೆ ಅವರು ಭಾರತವನ್ನು “ಸುಂಕದ ರಾಜ” ಮತ್ತು ವ್ಯಾಪಾರ ಸಂಬಂಧಗಳ “ದೊಡ್ಡ ದುರುಪಯೋಗ ಮಾಡುವ” ದೇಶ ಎಂದು ಬಣ್ಣಿಸಿದ್ದರು.

ಇದನ್ನೂಓದಿ:  ಶೀಘ್ರದಲ್ಲೇ ಅಮೆರಿಕದಿಂದ 487 ಅಕ್ರಮ ಭಾರತೀಯ ವಲಸಿಗರ ಗಡೀಪಾರು: ಕೇಂದ್ರ ಸರ್ಕಾರ

ಶೀಘ್ರದಲ್ಲೇ ಅಮೆರಿಕದಿಂದ 487 ಅಕ್ರಮ ಭಾರತೀಯ ವಲಸಿಗರ ಗಡೀಪಾರು: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...