Homeಅಂತರಾಷ್ಟ್ರೀಯಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

- Advertisement -
- Advertisement -

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು.

ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ ಸಂಸತ್ ಭವನದ (ಜಾತಿಯ ಸಂಸದ್) ದಕ್ಷಿಣ ಪ್ಲಾಝಾದಲ್ಲಿ ನಡೆಯಿತು.

ಬಾಂಗ್ಲಾದೇಶದ ಅಧ್ಯಕ್ಷರಾದ ಮೊಹಮ್ಮದ್ ಶಹಾಬುದ್ದೀನ್ ಅವರು ರೆಹಮಾನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ತಾರಿಖ್ ರೆಹಮಾನ್ ಅವರೊಂದಿಗೆ 49 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೊಸ ಸರ್ಕಾರವು 25 ಸಂಪುಟ ಸಚಿವರು ಮತ್ತು 24 ರಾಜ್ಯ ಸಚಿವರನ್ನು ಒಳಗೊಂಡಿದೆ.

ಬಿಎನ್‌ಪಿಯ ಹಿರಿಯ ನಾಯಕ ಮಿರ್ಜಾ ಫಕ್ರುಲ್ ಇಸ್ಲಾಂ ಆಲಂಗೀರ್, ಪಕ್ಷದ ಇತರ ಪ್ರಮುಖ ನಾಯಕರಾದ ಅಮೀರ್ ಖಸ್ರು ಮಹಮೂದ್ ಚೌಧರಿ, ಸಲಾವುದ್ದೀನ್ ಅಹ್ಮದ್, ಡಾ. ಖಲೀಲುರ್ ರೆಹಮಾನ್, ಇಕ್ಬಾಲ್ ಹಸನ್ ಮಹಮೂದ್ ಟುಕು ಮತ್ತು ಹಫೀಝ್ ಉದ್ದೀನ್ ಅಹ್ಮದ್ ಬೀರ್ ವಿಕ್ರಮ್ ಸಚಿವ ಸಂಪುಟ ಸೇರಿದ್ದಾರೆ.

ಸಲಾವುದ್ದೀನ್ ಅಹ್ಮದ್ ಅವರು ನೂತನ ಗೃಹ ಸಚಿವರಾಗಿ ನೇಮಕಗೊಂಡಿದ್ದಾರೆ. ಅಮೀರ್ ಖಸ್ರು ಮಹಮೂದ್ ಚೌಧರಿ ಅವರು ನೂತನ ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಡಾ. ಖಲೀಲುರ್ ರೆಹಮಾನ್ ನೂತನ ವಿದೇಶಾಂಗ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೊಹಮ್ಮದ್ ಅಮೀನ್ ಉರ್ ರಶೀದ್ ಅವರು ತಾಂತ್ರಿಕ ಸಚಿವರಾಗಿ ಅಧಿಕಾರವಹಿಸಿಕೊಂಡಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಗಳಿಂದ ಹಿಂದೂ ಸಮುದಾಯವನ್ನು ಪ್ರತಿನಿಧಿಸುವ ನಿತೈ ರಾಯ್ ಚೌಧರಿ, ಚಕ್ಮಾ ಬೌದ್ಧ ಸಮುದಾಯವನ್ನು ಪ್ರತಿನಿಧಿಸುವ ದೀಪನ್ ದಿವಾನ್ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಯುವ ಪ್ರತಿಭಟನಾಕಾರರ ಪರವಾಗಿ ರಾಜ್ಯ ಸಚಿವರಾಗಿ ಜುನೈದ್ ಸಾಕಿ ಆಯ್ಕೆಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ನೂತನವಾಗಿ ಚುನಾಯಿತರಾದ ಬಿಎನ್‌ಪಿಯ ಎಲ್ಲಾ 209 ಸಂಸದರು ಕೂಡ ಸಂಸತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇತ್ತೀಚೆಗೆ ನಡೆದ 13ನೇ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್‌ಪಿ ಪಕ್ಷವು 297 ಸ್ಥಾನಗಳ ಪೈಕಿ 209 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತ ಸಾಧಿಸಿತ್ತು. ಸುಮಾರು 17 ವರ್ಷಗಳ ವನವಾಸದ ನಂತರ ತಾರಿಖ್ ರೆಹಮಾನ್ ಅವರು ಅಧಿಕಾರಕ್ಕೆ ಮರಳಿದ್ದಾರೆ.

ಭಾರತದಿಂದ ಓಂ ಬಿರ್ಲಾ ಭಾಗಿ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನವಿತ್ತಾದರೂ, ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷರೊಂದಿಗೆ ನಿಗದಿತ ಸಭೆಗಳಿದ್ದ ಕಾರಣ ಅವರು ಭಾಗವಹಿಸಿಲ್ಲ. ಪ್ರಧಾನಿ ಪರವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾರತವನ್ನು ಪ್ರತಿನಿಧಿಸಿ ಸಮಾರಂಭದಲ್ಲಿ ಪಾಲ್ಗೊಂಡರು.

ಇತರ ದೇಶಗಳಿಂದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಭೂತಾನ್ ಪ್ರಧಾನಿ ತ್ಶೆರಿಂಗ್ ಟೋಬ್ಗೇ, ಪಾಕಿಸ್ತಾನದ ಪ್ರಧಾನಿ ಶಹಬಾಝ್ ಶರೀಫ್ ಪರವಾಗಿ ಅಲ್ಲಿನ ಯೋಜನಾ ಸಚಿವ ಅಹ್ಸಾನ್ ಇಕ್ಬಾಲ್, ನೇಪಾಳದ ವಿದೇಶಾಂಗ ಸಚಿವ ಬಾಲ ನಂದ ಶರ್ಮಾ, ಶ್ರೀಲಂಕಾದ ಆರೋಗ್ಯ ಮತ್ತು ಸಮೂಹ ಮಾಧ್ಯಮ ಸಚಿವ ಡಾ. ನಳಿಂದ ಜಯತಿಸ್ಸ, ಯುನೈಟೆಡ್ ಕಿಂಗ್‌ಡಮ್‌ನ ಇಂಡೋ-ಪೆಸಿಫಿಕ್ ಉಪ ಕಾರ್ಯದರ್ಶಿ ಸೀಮಾ ಮಲ್ಹೋತ್ರಾ, ಚೀನಾ, ಸೌದಿ ಅರೇಬಿಯಾ, ಟರ್ಕಿ, ಯುಎಇ, ಕತಾರ್, ಮಲೇಷ್ಯಾ ಮತ್ತು ಬ್ರೂನೈ ದೇಶಗಳ ಹಿರಿಯ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...