Homeಮುಖಪುಟಅತ್ಯಾಚಾರ ಪ್ರಕರಣದ ಎಲ್ಲಾ ಆರೋಪಗಳಿಂದ ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ಖುಲಾಸೆ

ಅತ್ಯಾಚಾರ ಪ್ರಕರಣದ ಎಲ್ಲಾ ಆರೋಪಗಳಿಂದ ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ಖುಲಾಸೆ

- Advertisement -
- Advertisement -

ತೆಹಲ್ಕಾ ನಿಯತಕಾಲಿಕದ ಸಂಸ್ಥಾಪಕ ಸಂಪಾದಕ ತರುಣ್ ತೇಜ್‌ಪಾಲ್ ಅವರನ್ನು ಗೋವಾ ನ್ಯಾಯಾಲಯವು ಅತ್ಯಾಚಾರ ಆರೋಪದಿಂದ ಖುಲಾಸೆಗೊಳಿಸಿದೆ. ಗೋವಾದ ರೆಸಾರ್ಟ್ ಒಂದರಲ್ಲಿ 2013ರಲ್ಲಿ ನಡೆದ ಸಮಾವೇಶದ ಸಂದರ್ಭದಲ್ಲಿ ಕಿರಿಯ ಸಹೋದ್ಯೋಗಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವಿತ್ತು.

ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದ ತರುಣ್ ತೇಜ್‌ಪಾಲ್, 2014 ರಿಂದ ಜಾಮೀನಿನ ಮೇಲೆ ಹೊರಗಿದ್ದರು. 8 ವರ್ಷಗಳ ಬಳಿಕ ತೀರ್ಪು ಹೊರಬಿದ್ದಿದೆ.

2017 ರಲ್ಲಿ ವಿಚಾರಣಾ ನ್ಯಾಯಾಲಯ ತರುಣ್ ತೇಜ್‌ಪಾಲ್ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕಾನೂನುಬಾಹಿರ ಬಂಧನ ಆರೋಪಗಳನ್ನು ದಾಖಲಿಸಿತ್ತು. ಈ ಆರೋಪಗಳ ವಿರುದ್ಧ ತರುಣ್ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಗೋವಾ ನ್ಯಾಯಾಲಯದಲ್ಲಿಯೇ ವಿಚಾರಣೆ ಮುಂದುವರಿಯಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿತ್ತು.

ಇದನ್ನೂ ಓದಿ: ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

ತರುಣ್ ತೇಜ್‌ಪಾಲ್ ಅವರ ಪರವಾಗಿ ನ್ಯಾಯಾಲಯದ ತೀರ್ಪನ್ನು ವಿವರಿಸಿರುವ ಪುತ್ರಿ ಕ್ಯಾರಾ ತೇಜ್‌ಪಾಲ್, ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ ನ್ಯಾಯಾಲಯಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

’ಈ ನ್ಯಾಯಾಲಯವು ಕಠಿಣ, ನಿಷ್ಪಕ್ಷಪಾತ ಮತ್ತು ನ್ಯಾಯಯುತ ವಿಚಾರಣೆಗೆ ಮತ್ತು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ಪ್ರಾಯೋಗಿಕ ವಸ್ತುಗಳನ್ನು ದಾಖಲೆಯಲ್ಲಿ ಪರಿಶೀಲಿಸಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ” ಎಂದು ತರುಣ್ ತೇಜ್‌ಪಾಲ್ ಹೇಳಿದ್ದಾರೆ. ಜೊತೆಗೆ ಕೋವಿಡ್‌ನಿಂದ ನಿಧನರಾದ ತಮ್ಮ ವಕೀಲ ರಾಜೀವ್ ಗೋಮ್ಸ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಕಳೆದ ಏಳೂವರೆ ವರ್ಷಗಳಿಂದ ಈ ಸುಳ್ಳು ಆರೋಪದ ಪರಿಣಾಮವನ್ನು ನಮ್ಮ ವೈಯಕ್ತಿಕ, ವೃತ್ತಿಪರ ಮತ್ತು ಸಾರ್ವಜನಿಕ ಜೀವನದ ಪ್ರತಿಯೊಂದು ಹಂತಗಳಲ್ಲೂ ಅನುಭವಿಸಿದ್ದೇವೆ. ಈ ದಿನಗಳು ನಮ್ಮ ಕುಟುಂಬಕ್ಕೆ ಅಘಾತಕಾರಿ ದಿನಗಳು ಎಂದಿದ್ದಾರೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

ಗೋವಾದಲ್ಲಿನ ಸೆಷನ್ಸ್ ನ್ಯಾಯಾಲಯವು ಬುಧವಾರ ತನ್ನ ತೀರ್ಪನ್ನು ಘೋಷಿಸಬೇಕಾಗಿತ್ತು ಆದರೆ ತೌತೆ ಚಂಡಮಾರುತದಿಂದಾಗಿ ವಿದ್ಯುತ್ ವೈಫಲ್ಯವನ್ನು ಉಲ್ಲೇಖಿಸಿ ತೀರ್ಪನ್ನು ಮುಂದೂಡಲಾಗಿತ್ತು. ಈ ಹಿಂದೆಯೂ ಕೊರೊನಾ ವೈರಸ್ ಬಿಕ್ಕಟ್ಟು ಸೇರಿದಂತೆ ವಿವಿಧ ಕಾರಣಗಳಿಗಾಗಿ ತೀರ್ಪು ವಿಳಂಬವಾಗಿತ್ತು.

ಅತ್ಯಾಚಾರ ಆರೋಪ ದಾಖಲಾದ ಕೂಡಲೇ ತೆಹಲ್ಕಾ ಸಂಪಾದಕ ಸ್ಥಾನದಿಂದ ತೇಜ್‌ಪಾಲ್ ಹೊರಬಂದಿದ್ದರು. ಆರು ತಿಂಗಳಲ್ಲಿಯೇ ಮತ್ತೆ ಆ ಸ್ಥಾನಕ್ಕೆ ಮರಳಿದ್ದರು. 2013ರ ನವೆಂಬರ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ಅವರು, 2014ರ ಮೇ ತಿಂಗಳಿನಿಂದ ಜಾಮೀನಿನ ಮೇಲೆ ತರುಣ್ ಹೊರ ಬಂದಿದ್ದರು.

ಗೋವಾ ತ್ವರಿತ ವಿಚಾರಣಾ ನ್ಯಾಯಾಲಯದಲ್ಲಿ 2,684 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದ ಪೊಲೀಸರು, ಅವರ ವಿರುದ್ಧ ಸಾಕಷ್ಟು ಪುರಾವೆಗಳಿವೆ ಎಂದು ತಿಳಿಸಿದ್ದರು. 2017 ರಲ್ಲಿ ಬಾಂಬೆ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸುವ ಮನವಿಯನ್ನು ತಳ್ಳಿಹಾಕಿತ್ತು.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...