Homeಮುಖಪುಟಅತ್ಯಾಚಾರ ಪ್ರಕರಣದ ಎಲ್ಲಾ ಆರೋಪಗಳಿಂದ ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ಖುಲಾಸೆ

ಅತ್ಯಾಚಾರ ಪ್ರಕರಣದ ಎಲ್ಲಾ ಆರೋಪಗಳಿಂದ ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ಖುಲಾಸೆ

- Advertisement -
- Advertisement -

ತೆಹಲ್ಕಾ ನಿಯತಕಾಲಿಕದ ಸಂಸ್ಥಾಪಕ ಸಂಪಾದಕ ತರುಣ್ ತೇಜ್‌ಪಾಲ್ ಅವರನ್ನು ಗೋವಾ ನ್ಯಾಯಾಲಯವು ಅತ್ಯಾಚಾರ ಆರೋಪದಿಂದ ಖುಲಾಸೆಗೊಳಿಸಿದೆ. ಗೋವಾದ ರೆಸಾರ್ಟ್ ಒಂದರಲ್ಲಿ 2013ರಲ್ಲಿ ನಡೆದ ಸಮಾವೇಶದ ಸಂದರ್ಭದಲ್ಲಿ ಕಿರಿಯ ಸಹೋದ್ಯೋಗಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವಿತ್ತು.

ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದ ತರುಣ್ ತೇಜ್‌ಪಾಲ್, 2014 ರಿಂದ ಜಾಮೀನಿನ ಮೇಲೆ ಹೊರಗಿದ್ದರು. 8 ವರ್ಷಗಳ ಬಳಿಕ ತೀರ್ಪು ಹೊರಬಿದ್ದಿದೆ.

2017 ರಲ್ಲಿ ವಿಚಾರಣಾ ನ್ಯಾಯಾಲಯ ತರುಣ್ ತೇಜ್‌ಪಾಲ್ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕಾನೂನುಬಾಹಿರ ಬಂಧನ ಆರೋಪಗಳನ್ನು ದಾಖಲಿಸಿತ್ತು. ಈ ಆರೋಪಗಳ ವಿರುದ್ಧ ತರುಣ್ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಗೋವಾ ನ್ಯಾಯಾಲಯದಲ್ಲಿಯೇ ವಿಚಾರಣೆ ಮುಂದುವರಿಯಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿತ್ತು.

ಇದನ್ನೂ ಓದಿ: ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

ತರುಣ್ ತೇಜ್‌ಪಾಲ್ ಅವರ ಪರವಾಗಿ ನ್ಯಾಯಾಲಯದ ತೀರ್ಪನ್ನು ವಿವರಿಸಿರುವ ಪುತ್ರಿ ಕ್ಯಾರಾ ತೇಜ್‌ಪಾಲ್, ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ ನ್ಯಾಯಾಲಯಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

’ಈ ನ್ಯಾಯಾಲಯವು ಕಠಿಣ, ನಿಷ್ಪಕ್ಷಪಾತ ಮತ್ತು ನ್ಯಾಯಯುತ ವಿಚಾರಣೆಗೆ ಮತ್ತು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ಪ್ರಾಯೋಗಿಕ ವಸ್ತುಗಳನ್ನು ದಾಖಲೆಯಲ್ಲಿ ಪರಿಶೀಲಿಸಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ” ಎಂದು ತರುಣ್ ತೇಜ್‌ಪಾಲ್ ಹೇಳಿದ್ದಾರೆ. ಜೊತೆಗೆ ಕೋವಿಡ್‌ನಿಂದ ನಿಧನರಾದ ತಮ್ಮ ವಕೀಲ ರಾಜೀವ್ ಗೋಮ್ಸ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಕಳೆದ ಏಳೂವರೆ ವರ್ಷಗಳಿಂದ ಈ ಸುಳ್ಳು ಆರೋಪದ ಪರಿಣಾಮವನ್ನು ನಮ್ಮ ವೈಯಕ್ತಿಕ, ವೃತ್ತಿಪರ ಮತ್ತು ಸಾರ್ವಜನಿಕ ಜೀವನದ ಪ್ರತಿಯೊಂದು ಹಂತಗಳಲ್ಲೂ ಅನುಭವಿಸಿದ್ದೇವೆ. ಈ ದಿನಗಳು ನಮ್ಮ ಕುಟುಂಬಕ್ಕೆ ಅಘಾತಕಾರಿ ದಿನಗಳು ಎಂದಿದ್ದಾರೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

ಗೋವಾದಲ್ಲಿನ ಸೆಷನ್ಸ್ ನ್ಯಾಯಾಲಯವು ಬುಧವಾರ ತನ್ನ ತೀರ್ಪನ್ನು ಘೋಷಿಸಬೇಕಾಗಿತ್ತು ಆದರೆ ತೌತೆ ಚಂಡಮಾರುತದಿಂದಾಗಿ ವಿದ್ಯುತ್ ವೈಫಲ್ಯವನ್ನು ಉಲ್ಲೇಖಿಸಿ ತೀರ್ಪನ್ನು ಮುಂದೂಡಲಾಗಿತ್ತು. ಈ ಹಿಂದೆಯೂ ಕೊರೊನಾ ವೈರಸ್ ಬಿಕ್ಕಟ್ಟು ಸೇರಿದಂತೆ ವಿವಿಧ ಕಾರಣಗಳಿಗಾಗಿ ತೀರ್ಪು ವಿಳಂಬವಾಗಿತ್ತು.

ಅತ್ಯಾಚಾರ ಆರೋಪ ದಾಖಲಾದ ಕೂಡಲೇ ತೆಹಲ್ಕಾ ಸಂಪಾದಕ ಸ್ಥಾನದಿಂದ ತೇಜ್‌ಪಾಲ್ ಹೊರಬಂದಿದ್ದರು. ಆರು ತಿಂಗಳಲ್ಲಿಯೇ ಮತ್ತೆ ಆ ಸ್ಥಾನಕ್ಕೆ ಮರಳಿದ್ದರು. 2013ರ ನವೆಂಬರ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ಅವರು, 2014ರ ಮೇ ತಿಂಗಳಿನಿಂದ ಜಾಮೀನಿನ ಮೇಲೆ ತರುಣ್ ಹೊರ ಬಂದಿದ್ದರು.

ಗೋವಾ ತ್ವರಿತ ವಿಚಾರಣಾ ನ್ಯಾಯಾಲಯದಲ್ಲಿ 2,684 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದ ಪೊಲೀಸರು, ಅವರ ವಿರುದ್ಧ ಸಾಕಷ್ಟು ಪುರಾವೆಗಳಿವೆ ಎಂದು ತಿಳಿಸಿದ್ದರು. 2017 ರಲ್ಲಿ ಬಾಂಬೆ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸುವ ಮನವಿಯನ್ನು ತಳ್ಳಿಹಾಕಿತ್ತು.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...