Homeಕ್ರೀಡೆಒಲಂಪಿಕ್‘ಪದಕದ ರುಚಿ ಉಪ್ಪುಪ್ಪಿದೆ’ - ಹಾಕಿ ಗೋಲ್‌‌ ಕೀಪರ್‌‌‌ ಶ್ರೀಜೇಶ್‌‌ ಹೀಗೇಕೆ ಹೇಳಿದರು?

‘ಪದಕದ ರುಚಿ ಉಪ್ಪುಪ್ಪಿದೆ’ – ಹಾಕಿ ಗೋಲ್‌‌ ಕೀಪರ್‌‌‌ ಶ್ರೀಜೇಶ್‌‌ ಹೀಗೇಕೆ ಹೇಳಿದರು?

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿಗಾಗಿ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತೀಯ ತಂಡವು ಜರ್ಮನಿ ವಿರುದ್ದ 5-4 ಅಂತರದಲ್ಲಿ ಗೆದ್ದು ಕೊಂಡಿತ್ತು. ಈ ಮೂಲಕ ಭಾರತೀಯ ತಂಡವು ಕಳೆದ 41 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದುಕೊಂಡಿದೆ. 1980 ರ ಮಾಸ್ಕೋ ಕ್ರೀಡಾಕೂಟದಲ್ಲಿ ಭಾರತವು ಕೊನೆಯ ಬಾರಿಗೆ ಹಾಕಿಯಲ್ಲಿ ಪದಕ ಗೆದ್ದಿತ್ತು.

ಮಹಿಳೆಯರ ಹಾಕಿಯಲ್ಲೂ ಭಾರತೀಯ ತಂಡ ಉತ್ತಮ ಪ್ರದರ್ಶನ ನೀಡಿದೆ. ಒಲಿಂಪಿಕ್ ಇತಿಹಾಸದಲ್ಲೇ ಭಾರತದ ಮಹಿಳಾ ತಂಡ ಇದೇ ಮೊದಲ ಬಾರಿಗೆ ಸೆಮಿಫೈನಲ್‌ಗೆ ತಲುಪಿ ಇತಿಹಾಸ ನಿರ್ಮಿಸಿದೆ. ಆದರೆ ಪದಕ ಗೆಲ್ಲಲು ವಿಫಲವಾಗಿ ತಂಡವು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಕೊಂಡಿದೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ಭಾರತದ ಮಹಿಳೆ ಮತ್ತು ಪುರುಷರ ಹಾಕಿ ತಂಡಗಳು ಈ ಬಾರಿ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಕ್ಕೆ, ಹಾಕಿಯಲ್ಲಿ ಭಾರತವು ಮತ್ತೆ ಪುಟಿದೆದ್ದು ಬಂದಿದ್ದಕ್ಕೆ ಭಾರಿ ಹರ್ಷ ವ್ಯಕ್ತವಾಗುತ್ತಿದೆ. ಅದರಲ್ಲೂ ವನಿತಾ ತಂಡಕ್ಕೆ ಭಾರತದಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ ಸುರಿಮಳೆ ಸುರಿದಿದೆ.

ಈ ಮಧ್ಯೆ ಭಾರತದ ಪುರುಷರ ತಂಡದ ಗೋಲ್‌ ಕೀಪರ್‌ ಶ್ರೀಜೇಶ್‌ ಪಿಆ‌ರ್‌ ಅವರು ಟ್ವಿಟರ್‌ನಲ್ಲಿ ಒಂದು ಚಿತ್ರವನ್ನು ಫೋಸ್ಟ್‌ ಮಾಡಿದ್ದು, ಈ ಪದಕ ಉಪ್ಪುಪ್ಪಾಗಿದೆ, ಯಾಕೆಂದರೆ ಇದು ನನ್ನ 21 ವರ್ಷಗಳ ಬೆವರಿನ ಫಲ ಎಂದು ಅವರು ಹೇಳಿದ್ದಾರೆ, ಈ ಮೂಲಕ ಅವರು ನೆಟ್ಟಿಗರ ಮನಗೆದ್ದಿದ್ದಾರೆ.

ಅವರು ತನ್ನ ಟ್ವೀಟ್‌‌ನಲ್ಲಿ ಒಲಿಂಪಿಕ್‌ ಪದಕವನ್ನು ಕಚ್ಚುತ್ತಿರುವ ಚಿತ್ರವನ್ನು ಪೋಸ್ಟ್‌ ಮಾಡಿದ್ದು, “ಹೌದು, ಇದು ಉಪ್ಪಿನ ರುಚಿಯಿದೆ. ಹೌದು… ನನಗೆ ನೆನಪಿದೆ, ಇದು ಕಳೆದ 21 ವರ್ಷಗಳ ನನ್ನ ಬೆವರು” ಎಂದು ಬರೆದಿದ್ದಾರೆ.

ಕಂಚಿನ ಪದಕಕ್ಕಾಗಿ ಆಡಿದ ಪಂದ್ಯದಲ್ಲಿ, ಪಂದ್ಯವು ಮುಗಿಯಲು ಆರು ಸೆಕೆಂಡುಗಳು ಬಾಕಿ ಇರುವಾಗ, ಜರ್ಮನಿ ತಂಡವು ಪೆನಾಲ್ಟಿ ಕಾರ್ನರ್‌ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಆದರೆ ಪಿಆರ್ ಶ್ರೀಜೇಶ್ ಅದನ್ನು ತಡೆದು ಭಾರತವನ್ನು ಗೆಲುವಿನ ದಡಕ್ಕೆ ತಲುಪಿಸಿದ್ದರು.

ಕೇರಳ ಮೂಲದವರಾದ ಶ್ರೀಜೇಶ್‌‌ ಈ ಪಂದ್ಯದಲ್ಲಿ ಒಟ್ಟು ಒಂಬತ್ತು ಗೋಲ್‌ಗಳನ್ನು ತಡೆದು ಭಾರತದ ಗೆಲುವಿಗೆ ನೆರವಾಗಿದ್ದಾರೆ.

ಇದನ್ನೂ ಓದಿ: 41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

ಗೋಲ್‌ ಪೋಸ್ಟೇ ನನ್ನ ದೇಗುಲ ಎಂದಿದ್ದ ಶ್ರೀಜೇಶ್‌, ಪದಕವನ್ನು ತನ್ನ ತಂದೆಗೆ ಅರ್ಪಿಸಿದ್ದಾರೆ. ಟ್ವಿಟರ್‌ನಲ್ಲಿ ಅವರ ತಂದೆ ತಂಡದ ಗೆಲುವನ್ನು ಸಂಭ್ರಮಿಸುತ್ತಿರುವ ವಿಡಿಯೊವನ್ನು ಅಪ್‌ಲೋಡ್ ಮಾಡಿರುವ ಶ್ರೀಜೇಶ್‌‌, “ಈ ಪದಕ ನನ್ನ ತಂದೆಗೆ. ನಾನೀಗ ಇಲ್ಲಿ ಇರಲು ಅವರೇ ಕಾರಣ, ಅವರು ನನ್ನ ಹೀರೋ” ಎಂದು ಬರೆದಿದ್ದಾರೆ

ಇದನ್ನೂ ಓದಿ: ಹಾಕಿ ಮಹಿಳಾ ತಂಡದ 9 ಆಟಗಾರರಿಗೆ ತಲಾ 50 ಲಕ್ಷ ನೀಡುವುದಾಗಿ ಹರಿಯಾಣ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...