Homeಕ್ರೀಡೆಒಲಂಪಿಕ್‘ಪದಕದ ರುಚಿ ಉಪ್ಪುಪ್ಪಿದೆ’ - ಹಾಕಿ ಗೋಲ್‌‌ ಕೀಪರ್‌‌‌ ಶ್ರೀಜೇಶ್‌‌ ಹೀಗೇಕೆ ಹೇಳಿದರು?

‘ಪದಕದ ರುಚಿ ಉಪ್ಪುಪ್ಪಿದೆ’ – ಹಾಕಿ ಗೋಲ್‌‌ ಕೀಪರ್‌‌‌ ಶ್ರೀಜೇಶ್‌‌ ಹೀಗೇಕೆ ಹೇಳಿದರು?

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿಗಾಗಿ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತೀಯ ತಂಡವು ಜರ್ಮನಿ ವಿರುದ್ದ 5-4 ಅಂತರದಲ್ಲಿ ಗೆದ್ದು ಕೊಂಡಿತ್ತು. ಈ ಮೂಲಕ ಭಾರತೀಯ ತಂಡವು ಕಳೆದ 41 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದುಕೊಂಡಿದೆ. 1980 ರ ಮಾಸ್ಕೋ ಕ್ರೀಡಾಕೂಟದಲ್ಲಿ ಭಾರತವು ಕೊನೆಯ ಬಾರಿಗೆ ಹಾಕಿಯಲ್ಲಿ ಪದಕ ಗೆದ್ದಿತ್ತು.

ಮಹಿಳೆಯರ ಹಾಕಿಯಲ್ಲೂ ಭಾರತೀಯ ತಂಡ ಉತ್ತಮ ಪ್ರದರ್ಶನ ನೀಡಿದೆ. ಒಲಿಂಪಿಕ್ ಇತಿಹಾಸದಲ್ಲೇ ಭಾರತದ ಮಹಿಳಾ ತಂಡ ಇದೇ ಮೊದಲ ಬಾರಿಗೆ ಸೆಮಿಫೈನಲ್‌ಗೆ ತಲುಪಿ ಇತಿಹಾಸ ನಿರ್ಮಿಸಿದೆ. ಆದರೆ ಪದಕ ಗೆಲ್ಲಲು ವಿಫಲವಾಗಿ ತಂಡವು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಕೊಂಡಿದೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ಭಾರತದ ಮಹಿಳೆ ಮತ್ತು ಪುರುಷರ ಹಾಕಿ ತಂಡಗಳು ಈ ಬಾರಿ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಕ್ಕೆ, ಹಾಕಿಯಲ್ಲಿ ಭಾರತವು ಮತ್ತೆ ಪುಟಿದೆದ್ದು ಬಂದಿದ್ದಕ್ಕೆ ಭಾರಿ ಹರ್ಷ ವ್ಯಕ್ತವಾಗುತ್ತಿದೆ. ಅದರಲ್ಲೂ ವನಿತಾ ತಂಡಕ್ಕೆ ಭಾರತದಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ ಸುರಿಮಳೆ ಸುರಿದಿದೆ.

ಈ ಮಧ್ಯೆ ಭಾರತದ ಪುರುಷರ ತಂಡದ ಗೋಲ್‌ ಕೀಪರ್‌ ಶ್ರೀಜೇಶ್‌ ಪಿಆ‌ರ್‌ ಅವರು ಟ್ವಿಟರ್‌ನಲ್ಲಿ ಒಂದು ಚಿತ್ರವನ್ನು ಫೋಸ್ಟ್‌ ಮಾಡಿದ್ದು, ಈ ಪದಕ ಉಪ್ಪುಪ್ಪಾಗಿದೆ, ಯಾಕೆಂದರೆ ಇದು ನನ್ನ 21 ವರ್ಷಗಳ ಬೆವರಿನ ಫಲ ಎಂದು ಅವರು ಹೇಳಿದ್ದಾರೆ, ಈ ಮೂಲಕ ಅವರು ನೆಟ್ಟಿಗರ ಮನಗೆದ್ದಿದ್ದಾರೆ.

ಅವರು ತನ್ನ ಟ್ವೀಟ್‌‌ನಲ್ಲಿ ಒಲಿಂಪಿಕ್‌ ಪದಕವನ್ನು ಕಚ್ಚುತ್ತಿರುವ ಚಿತ್ರವನ್ನು ಪೋಸ್ಟ್‌ ಮಾಡಿದ್ದು, “ಹೌದು, ಇದು ಉಪ್ಪಿನ ರುಚಿಯಿದೆ. ಹೌದು… ನನಗೆ ನೆನಪಿದೆ, ಇದು ಕಳೆದ 21 ವರ್ಷಗಳ ನನ್ನ ಬೆವರು” ಎಂದು ಬರೆದಿದ್ದಾರೆ.

ಕಂಚಿನ ಪದಕಕ್ಕಾಗಿ ಆಡಿದ ಪಂದ್ಯದಲ್ಲಿ, ಪಂದ್ಯವು ಮುಗಿಯಲು ಆರು ಸೆಕೆಂಡುಗಳು ಬಾಕಿ ಇರುವಾಗ, ಜರ್ಮನಿ ತಂಡವು ಪೆನಾಲ್ಟಿ ಕಾರ್ನರ್‌ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಆದರೆ ಪಿಆರ್ ಶ್ರೀಜೇಶ್ ಅದನ್ನು ತಡೆದು ಭಾರತವನ್ನು ಗೆಲುವಿನ ದಡಕ್ಕೆ ತಲುಪಿಸಿದ್ದರು.

ಕೇರಳ ಮೂಲದವರಾದ ಶ್ರೀಜೇಶ್‌‌ ಈ ಪಂದ್ಯದಲ್ಲಿ ಒಟ್ಟು ಒಂಬತ್ತು ಗೋಲ್‌ಗಳನ್ನು ತಡೆದು ಭಾರತದ ಗೆಲುವಿಗೆ ನೆರವಾಗಿದ್ದಾರೆ.

ಇದನ್ನೂ ಓದಿ: 41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

ಗೋಲ್‌ ಪೋಸ್ಟೇ ನನ್ನ ದೇಗುಲ ಎಂದಿದ್ದ ಶ್ರೀಜೇಶ್‌, ಪದಕವನ್ನು ತನ್ನ ತಂದೆಗೆ ಅರ್ಪಿಸಿದ್ದಾರೆ. ಟ್ವಿಟರ್‌ನಲ್ಲಿ ಅವರ ತಂದೆ ತಂಡದ ಗೆಲುವನ್ನು ಸಂಭ್ರಮಿಸುತ್ತಿರುವ ವಿಡಿಯೊವನ್ನು ಅಪ್‌ಲೋಡ್ ಮಾಡಿರುವ ಶ್ರೀಜೇಶ್‌‌, “ಈ ಪದಕ ನನ್ನ ತಂದೆಗೆ. ನಾನೀಗ ಇಲ್ಲಿ ಇರಲು ಅವರೇ ಕಾರಣ, ಅವರು ನನ್ನ ಹೀರೋ” ಎಂದು ಬರೆದಿದ್ದಾರೆ

ಇದನ್ನೂ ಓದಿ: ಹಾಕಿ ಮಹಿಳಾ ತಂಡದ 9 ಆಟಗಾರರಿಗೆ ತಲಾ 50 ಲಕ್ಷ ನೀಡುವುದಾಗಿ ಹರಿಯಾಣ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...