Homeಮುಖಪುಟಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಟಾಟಾ ಏ‌‌ರ್‌ಲೈನ್ಸ್‌ ಸಂಸ್ಥೆಯು ಕಾಲನಂತರದಲ್ಲಿ ಏರ್‌ ಇಂಡಿಯಾ ಸಂಸ್ಥೆಯಾಗಿ ಬದಲಾಗಿತ್ತು. ನಷ್ಟದಲ್ಲಿದ್ದ ಸಂಸ್ಥೆಯನ್ನು ಮೇಲೆತ್ತುವಲ್ಲಿ ಸೋತಿರುವ ಕೇಂದ್ರ ಸರ್ಕಾರ, ಟಾಟಾ ಅಂಡ್‌ ಸನ್ಸ್‌‌ಗೆ ಏರ್‌ ಇಂಡಿಯಾವನ್ನು ಒಪ್ಪಿಸಲು ಹೊರಟಿದೆ.

- Advertisement -
- Advertisement -

ಚೇತರಿಸಿಕೊಳ್ಳಲಾಗದೆ ಒದ್ದಾಡುತ್ತಿರುವ ಏರ್‌ ಇಂಡಿಯಾ ಸಂಸ್ಥೆಯನ್ನು ‘ಸಾಲ್ಟ್‌ ಟು ಸಾಫ್ಟ್‌ವೇರ್‌’ವರೆಗಿನ ವಿರಾಟ್‌ ಸಂಸ್ಥೆಯೆಂದೇ ಖ್ಯಾತವಾದ ಟಾಟಾ ಸಂಸ್ಥೆಗೆ ವಹಿಸಲಾಗುತ್ತಿದೆ ಎನ್ನಲಾಗಿದೆ. ವಿನ್ನಿಂಗ್‌ ಬಿಡ್ಡರ್‌ ಆಗಿ ಟಾಟಾ ಅಂಡ್‌ ಸನ್ಸ್‌ ಸಂಸ್ಥೆ ಆಯ್ಕೆಯಾಗಿದೆ ಎಂದು ವರದಿಯಾಗಿದೆ.

ಏರ್‌ ಇಂಡಿಯಾ ಸಂಸ್ಥೆ ಸ್ಥಾಪಿತವಾಗಿದ್ದು ಟಾಟಾ ಸಂಸ್ಥೆಯಿಂದ. ಟಾಟಾ ಏರ್‌‌ಲೈನ್ಸ್ ಎಂದು ಸ್ಥಾಪಿತವಾದದ್ದು, ಸರ್ಕಾರದ ಒಡೆತನಕ್ಕೆ ಬಂದ ಮೇಲೆ ಏ‌ರ್‌ ಇಂಡಿಯಾ ಆಗಿತ್ತು. ಅರ್ಧ ಶತಮಾನದ ಬಳಿಕ ಏರ್‌‌ಇಂಡಿಯಾ ಸಂಸ್ಥೆ ಮತ್ತೆ ಟಾಟಾ & ಸನ್ಸ್‌‌ ಸಂಸ್ಥೆಯ ತೆಕ್ಕೆಗೆ ಒಳಪಡುತ್ತಿದೆ ಎಂದು ಉತ್ನತ ಮೂಲಗಳು ಹೇಳಿವೆ.

ಇದನ್ನೂ ಓದಿ: ಸಾರ್ವಜನಿಕ ಉದ್ದಿಮೆಗಳ ಮಾರಾಟ : ಕೇಂದ್ರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಟಾಟಾ & ಸನ್ಸ್‌‌ನ ಉದ್ಯಮಿ ಅಜಯ್‌ ಸಿಂಗ್‌‌ ಅವರಿಂದ ಬಂದಿದ್ದ ಆಹ್ವಾನವನ್ನು ಅಧಿಕಾರಿಗಳು ಸಚಿವರ ಪ್ಯಾನಲ್‌ ಮುಂದೆ ಇಟ್ಟಿದ್ದು, ಸಚಿವರುಗಳು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ವಿಷಯವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಸಾಧ್ಯತೆ ಇದೆ ಎಂದು ‌ಮೂಲಗಳು ತಿಳಿಸಿವೆ.

“ನಾಗರಿಕ ವಿಮಾನಯಾನ ಸಚಿವಾಲಯದ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ. ಹಣಕಾಸು ಸಚಿವಾಲಯದ ವಕ್ತಾರರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಟಾಟಾ ಸನ್ಸ್‌ನ ಪ್ರತಿನಿಧಿಯು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

1932ರಲ್ಲಿ ಕೈಗಾರಿಕಾ ಕ್ಷೇತ್ರದ ದಂತಕತೆ ಜೆಆರ್‌ಡಿ ಟಾಟಾ ಅವರು ಟಾಟಾ ಏರ್‌ಲೈನ್ಸ್‌ ಆರಂಭಿಸಿದ್ದರು. ಮುಂದೆ ಅದು ಏರ್‌ ಇಂಡಿಯಾ ಆಯಿತು. ಭಾರತದ ಮೊದಲ ಪರವಾನಗಿ ಪಡೆದ ಪೈಲಟ್‌ ಜೆಆರ್‌ಡಿ ಟಾಟಾ ಅವರಾಗಿದ್ದರು. ವಾಣಿಜ್ಯೋದ್ಯಮವಾಗಿ ಏರ್‌ಲೈನ್ಸ್‌ ಮಾರ್ಪಟ್ಟಿತು. 1940ರ ಅವಧಿಯಲ್ಲಿ ಸಾರ್ವಜನಿಕ ಕ್ಷೇತ್ರವಾಗಿ ಬದಲಾಯಿತು. ಶ್ರೀಮಂತರನ್ನು ಸೆಳೆಯಿತು. ಬಾಲಿವುಡ್‌ ನಟಿಯರ ಮೂಲಕ ಜಾಹೀರಾತು ನೀಡಿ, ಪ್ರಯಾಣಿಕರನ್ನು ಸೆಳೆಯಲಾಗುತ್ತಿತ್ತು.

1990ರ ಬಳಿಕ ಖಾಸಗಿಯವರು ಏರ್‌ಲೈನ್‌ ಆರಂಭಿಸಿ ಕಡಿಮೆ ವೆಚ್ಚದಲ್ಲಿ ವಿಮಾನ ಹಾರಾಟ ಆರಂಭಿಸಿದರು. ಏ‌‌ರ್‌ ಇಂಡಿಯಾ ನಷ್ಟಕ್ಕೆ ಜಾರಿತು. ಏರ್ ಇಂಡಿಯಾ 2007ರಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಏರ್‌ಲೈನ್ಸ್ ಲಿಮಿಟೆಡ್‌ನೊಂದಿಗೆ ವಿಲೀನಗೊಂಡ ನಂತರ, ನಷ್ಟಗಳು ಇನ್ನೂ ಹೆಚ್ಚಾಗತೊಡಗಿದವು. ಸುಮಾರು 600 ಬಿಲಿಯನ್ ರೂಪಾಯಿ ಸಾಲವನ್ನು ಏರ್‌ ಇಂಡಿಯಾ ಹೊಂದಿದೆ ಎನ್ನಲಾಗಿದೆ.

2013ರ ಹೊತ್ತಿಗೆ, ದೇಶದ ಅಂದಿನ ನಾಗರಿಕ ವಿಮಾನಯಾನ ಸಚಿವರು ಖಾಸಗೀಕರಣವು ಅದರ ಉಳಿವಿಗೆ ಮುಖ್ಯ ಎಂದು ಹೇಳಿದ್ದರು. 2017ರಲ್ಲಿ ಸರ್ಕಾರವು ಆ ಮಾರ್ಗವನ್ನು ಅನುಮೋದಿಸಿತು ಮತ್ತು ಪ್ರಕ್ರಿಯೆಯನ್ನು ಆರಂಭಿಸಲು ಒಂದು ಸಮಿತಿಯನ್ನು ರಚಿಸಿತು. ಹೀಗೆ ಏರ್‌ ಇಂಡಿಯಾವನ್ನು ಖಾಸಗಿಯವರಿಗೆ ನೀಡುವ ಪ್ರಕ್ರಿಯೆ ಆರಂಭವಾದವು. ಏರ್‌ ಇಂಡಿಯಾ ಖಾಸಗಿಯವರ ತೆಕ್ಕೆಗೆ ಹೋಗುವ ಮೂಲಕ, ಮತ್ತೊಂದು ಸಾರ್ವಜನಿಕ ಸಂಸ್ಥೆಯನ್ನು ಸರ್ಕಾರ ಮಾರಿದಂತಾಗುತ್ತಿದೆ. ಆದರೆ, ಮಾಧ್ಯಮಗಳ ವರದಿಯನ್ನು ಸರ್ಕಾರ ನಿರಾಕರಿಸಿದ್ದು, ತಪ್ಪಾಗಿ ವರದಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...