Homeಮುಖಪುಟಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಟಾಟಾ ಏ‌‌ರ್‌ಲೈನ್ಸ್‌ ಸಂಸ್ಥೆಯು ಕಾಲನಂತರದಲ್ಲಿ ಏರ್‌ ಇಂಡಿಯಾ ಸಂಸ್ಥೆಯಾಗಿ ಬದಲಾಗಿತ್ತು. ನಷ್ಟದಲ್ಲಿದ್ದ ಸಂಸ್ಥೆಯನ್ನು ಮೇಲೆತ್ತುವಲ್ಲಿ ಸೋತಿರುವ ಕೇಂದ್ರ ಸರ್ಕಾರ, ಟಾಟಾ ಅಂಡ್‌ ಸನ್ಸ್‌‌ಗೆ ಏರ್‌ ಇಂಡಿಯಾವನ್ನು ಒಪ್ಪಿಸಲು ಹೊರಟಿದೆ.

- Advertisement -
- Advertisement -

ಚೇತರಿಸಿಕೊಳ್ಳಲಾಗದೆ ಒದ್ದಾಡುತ್ತಿರುವ ಏರ್‌ ಇಂಡಿಯಾ ಸಂಸ್ಥೆಯನ್ನು ‘ಸಾಲ್ಟ್‌ ಟು ಸಾಫ್ಟ್‌ವೇರ್‌’ವರೆಗಿನ ವಿರಾಟ್‌ ಸಂಸ್ಥೆಯೆಂದೇ ಖ್ಯಾತವಾದ ಟಾಟಾ ಸಂಸ್ಥೆಗೆ ವಹಿಸಲಾಗುತ್ತಿದೆ ಎನ್ನಲಾಗಿದೆ. ವಿನ್ನಿಂಗ್‌ ಬಿಡ್ಡರ್‌ ಆಗಿ ಟಾಟಾ ಅಂಡ್‌ ಸನ್ಸ್‌ ಸಂಸ್ಥೆ ಆಯ್ಕೆಯಾಗಿದೆ ಎಂದು ವರದಿಯಾಗಿದೆ.

ಏರ್‌ ಇಂಡಿಯಾ ಸಂಸ್ಥೆ ಸ್ಥಾಪಿತವಾಗಿದ್ದು ಟಾಟಾ ಸಂಸ್ಥೆಯಿಂದ. ಟಾಟಾ ಏರ್‌‌ಲೈನ್ಸ್ ಎಂದು ಸ್ಥಾಪಿತವಾದದ್ದು, ಸರ್ಕಾರದ ಒಡೆತನಕ್ಕೆ ಬಂದ ಮೇಲೆ ಏ‌ರ್‌ ಇಂಡಿಯಾ ಆಗಿತ್ತು. ಅರ್ಧ ಶತಮಾನದ ಬಳಿಕ ಏರ್‌‌ಇಂಡಿಯಾ ಸಂಸ್ಥೆ ಮತ್ತೆ ಟಾಟಾ & ಸನ್ಸ್‌‌ ಸಂಸ್ಥೆಯ ತೆಕ್ಕೆಗೆ ಒಳಪಡುತ್ತಿದೆ ಎಂದು ಉತ್ನತ ಮೂಲಗಳು ಹೇಳಿವೆ.

ಇದನ್ನೂ ಓದಿ: ಸಾರ್ವಜನಿಕ ಉದ್ದಿಮೆಗಳ ಮಾರಾಟ : ಕೇಂದ್ರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಟಾಟಾ & ಸನ್ಸ್‌‌ನ ಉದ್ಯಮಿ ಅಜಯ್‌ ಸಿಂಗ್‌‌ ಅವರಿಂದ ಬಂದಿದ್ದ ಆಹ್ವಾನವನ್ನು ಅಧಿಕಾರಿಗಳು ಸಚಿವರ ಪ್ಯಾನಲ್‌ ಮುಂದೆ ಇಟ್ಟಿದ್ದು, ಸಚಿವರುಗಳು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ವಿಷಯವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಸಾಧ್ಯತೆ ಇದೆ ಎಂದು ‌ಮೂಲಗಳು ತಿಳಿಸಿವೆ.

“ನಾಗರಿಕ ವಿಮಾನಯಾನ ಸಚಿವಾಲಯದ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ. ಹಣಕಾಸು ಸಚಿವಾಲಯದ ವಕ್ತಾರರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಟಾಟಾ ಸನ್ಸ್‌ನ ಪ್ರತಿನಿಧಿಯು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

1932ರಲ್ಲಿ ಕೈಗಾರಿಕಾ ಕ್ಷೇತ್ರದ ದಂತಕತೆ ಜೆಆರ್‌ಡಿ ಟಾಟಾ ಅವರು ಟಾಟಾ ಏರ್‌ಲೈನ್ಸ್‌ ಆರಂಭಿಸಿದ್ದರು. ಮುಂದೆ ಅದು ಏರ್‌ ಇಂಡಿಯಾ ಆಯಿತು. ಭಾರತದ ಮೊದಲ ಪರವಾನಗಿ ಪಡೆದ ಪೈಲಟ್‌ ಜೆಆರ್‌ಡಿ ಟಾಟಾ ಅವರಾಗಿದ್ದರು. ವಾಣಿಜ್ಯೋದ್ಯಮವಾಗಿ ಏರ್‌ಲೈನ್ಸ್‌ ಮಾರ್ಪಟ್ಟಿತು. 1940ರ ಅವಧಿಯಲ್ಲಿ ಸಾರ್ವಜನಿಕ ಕ್ಷೇತ್ರವಾಗಿ ಬದಲಾಯಿತು. ಶ್ರೀಮಂತರನ್ನು ಸೆಳೆಯಿತು. ಬಾಲಿವುಡ್‌ ನಟಿಯರ ಮೂಲಕ ಜಾಹೀರಾತು ನೀಡಿ, ಪ್ರಯಾಣಿಕರನ್ನು ಸೆಳೆಯಲಾಗುತ್ತಿತ್ತು.

1990ರ ಬಳಿಕ ಖಾಸಗಿಯವರು ಏರ್‌ಲೈನ್‌ ಆರಂಭಿಸಿ ಕಡಿಮೆ ವೆಚ್ಚದಲ್ಲಿ ವಿಮಾನ ಹಾರಾಟ ಆರಂಭಿಸಿದರು. ಏ‌‌ರ್‌ ಇಂಡಿಯಾ ನಷ್ಟಕ್ಕೆ ಜಾರಿತು. ಏರ್ ಇಂಡಿಯಾ 2007ರಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಏರ್‌ಲೈನ್ಸ್ ಲಿಮಿಟೆಡ್‌ನೊಂದಿಗೆ ವಿಲೀನಗೊಂಡ ನಂತರ, ನಷ್ಟಗಳು ಇನ್ನೂ ಹೆಚ್ಚಾಗತೊಡಗಿದವು. ಸುಮಾರು 600 ಬಿಲಿಯನ್ ರೂಪಾಯಿ ಸಾಲವನ್ನು ಏರ್‌ ಇಂಡಿಯಾ ಹೊಂದಿದೆ ಎನ್ನಲಾಗಿದೆ.

2013ರ ಹೊತ್ತಿಗೆ, ದೇಶದ ಅಂದಿನ ನಾಗರಿಕ ವಿಮಾನಯಾನ ಸಚಿವರು ಖಾಸಗೀಕರಣವು ಅದರ ಉಳಿವಿಗೆ ಮುಖ್ಯ ಎಂದು ಹೇಳಿದ್ದರು. 2017ರಲ್ಲಿ ಸರ್ಕಾರವು ಆ ಮಾರ್ಗವನ್ನು ಅನುಮೋದಿಸಿತು ಮತ್ತು ಪ್ರಕ್ರಿಯೆಯನ್ನು ಆರಂಭಿಸಲು ಒಂದು ಸಮಿತಿಯನ್ನು ರಚಿಸಿತು. ಹೀಗೆ ಏರ್‌ ಇಂಡಿಯಾವನ್ನು ಖಾಸಗಿಯವರಿಗೆ ನೀಡುವ ಪ್ರಕ್ರಿಯೆ ಆರಂಭವಾದವು. ಏರ್‌ ಇಂಡಿಯಾ ಖಾಸಗಿಯವರ ತೆಕ್ಕೆಗೆ ಹೋಗುವ ಮೂಲಕ, ಮತ್ತೊಂದು ಸಾರ್ವಜನಿಕ ಸಂಸ್ಥೆಯನ್ನು ಸರ್ಕಾರ ಮಾರಿದಂತಾಗುತ್ತಿದೆ. ಆದರೆ, ಮಾಧ್ಯಮಗಳ ವರದಿಯನ್ನು ಸರ್ಕಾರ ನಿರಾಕರಿಸಿದ್ದು, ತಪ್ಪಾಗಿ ವರದಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...