Homeಮುಖಪುಟಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಟಾಟಾ ಏ‌‌ರ್‌ಲೈನ್ಸ್‌ ಸಂಸ್ಥೆಯು ಕಾಲನಂತರದಲ್ಲಿ ಏರ್‌ ಇಂಡಿಯಾ ಸಂಸ್ಥೆಯಾಗಿ ಬದಲಾಗಿತ್ತು. ನಷ್ಟದಲ್ಲಿದ್ದ ಸಂಸ್ಥೆಯನ್ನು ಮೇಲೆತ್ತುವಲ್ಲಿ ಸೋತಿರುವ ಕೇಂದ್ರ ಸರ್ಕಾರ, ಟಾಟಾ ಅಂಡ್‌ ಸನ್ಸ್‌‌ಗೆ ಏರ್‌ ಇಂಡಿಯಾವನ್ನು ಒಪ್ಪಿಸಲು ಹೊರಟಿದೆ.

- Advertisement -
- Advertisement -

ಚೇತರಿಸಿಕೊಳ್ಳಲಾಗದೆ ಒದ್ದಾಡುತ್ತಿರುವ ಏರ್‌ ಇಂಡಿಯಾ ಸಂಸ್ಥೆಯನ್ನು ‘ಸಾಲ್ಟ್‌ ಟು ಸಾಫ್ಟ್‌ವೇರ್‌’ವರೆಗಿನ ವಿರಾಟ್‌ ಸಂಸ್ಥೆಯೆಂದೇ ಖ್ಯಾತವಾದ ಟಾಟಾ ಸಂಸ್ಥೆಗೆ ವಹಿಸಲಾಗುತ್ತಿದೆ ಎನ್ನಲಾಗಿದೆ. ವಿನ್ನಿಂಗ್‌ ಬಿಡ್ಡರ್‌ ಆಗಿ ಟಾಟಾ ಅಂಡ್‌ ಸನ್ಸ್‌ ಸಂಸ್ಥೆ ಆಯ್ಕೆಯಾಗಿದೆ ಎಂದು ವರದಿಯಾಗಿದೆ.

ಏರ್‌ ಇಂಡಿಯಾ ಸಂಸ್ಥೆ ಸ್ಥಾಪಿತವಾಗಿದ್ದು ಟಾಟಾ ಸಂಸ್ಥೆಯಿಂದ. ಟಾಟಾ ಏರ್‌‌ಲೈನ್ಸ್ ಎಂದು ಸ್ಥಾಪಿತವಾದದ್ದು, ಸರ್ಕಾರದ ಒಡೆತನಕ್ಕೆ ಬಂದ ಮೇಲೆ ಏ‌ರ್‌ ಇಂಡಿಯಾ ಆಗಿತ್ತು. ಅರ್ಧ ಶತಮಾನದ ಬಳಿಕ ಏರ್‌‌ಇಂಡಿಯಾ ಸಂಸ್ಥೆ ಮತ್ತೆ ಟಾಟಾ & ಸನ್ಸ್‌‌ ಸಂಸ್ಥೆಯ ತೆಕ್ಕೆಗೆ ಒಳಪಡುತ್ತಿದೆ ಎಂದು ಉತ್ನತ ಮೂಲಗಳು ಹೇಳಿವೆ.

ಇದನ್ನೂ ಓದಿ: ಸಾರ್ವಜನಿಕ ಉದ್ದಿಮೆಗಳ ಮಾರಾಟ : ಕೇಂದ್ರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಟಾಟಾ & ಸನ್ಸ್‌‌ನ ಉದ್ಯಮಿ ಅಜಯ್‌ ಸಿಂಗ್‌‌ ಅವರಿಂದ ಬಂದಿದ್ದ ಆಹ್ವಾನವನ್ನು ಅಧಿಕಾರಿಗಳು ಸಚಿವರ ಪ್ಯಾನಲ್‌ ಮುಂದೆ ಇಟ್ಟಿದ್ದು, ಸಚಿವರುಗಳು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ವಿಷಯವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಸಾಧ್ಯತೆ ಇದೆ ಎಂದು ‌ಮೂಲಗಳು ತಿಳಿಸಿವೆ.

“ನಾಗರಿಕ ವಿಮಾನಯಾನ ಸಚಿವಾಲಯದ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ. ಹಣಕಾಸು ಸಚಿವಾಲಯದ ವಕ್ತಾರರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಟಾಟಾ ಸನ್ಸ್‌ನ ಪ್ರತಿನಿಧಿಯು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

1932ರಲ್ಲಿ ಕೈಗಾರಿಕಾ ಕ್ಷೇತ್ರದ ದಂತಕತೆ ಜೆಆರ್‌ಡಿ ಟಾಟಾ ಅವರು ಟಾಟಾ ಏರ್‌ಲೈನ್ಸ್‌ ಆರಂಭಿಸಿದ್ದರು. ಮುಂದೆ ಅದು ಏರ್‌ ಇಂಡಿಯಾ ಆಯಿತು. ಭಾರತದ ಮೊದಲ ಪರವಾನಗಿ ಪಡೆದ ಪೈಲಟ್‌ ಜೆಆರ್‌ಡಿ ಟಾಟಾ ಅವರಾಗಿದ್ದರು. ವಾಣಿಜ್ಯೋದ್ಯಮವಾಗಿ ಏರ್‌ಲೈನ್ಸ್‌ ಮಾರ್ಪಟ್ಟಿತು. 1940ರ ಅವಧಿಯಲ್ಲಿ ಸಾರ್ವಜನಿಕ ಕ್ಷೇತ್ರವಾಗಿ ಬದಲಾಯಿತು. ಶ್ರೀಮಂತರನ್ನು ಸೆಳೆಯಿತು. ಬಾಲಿವುಡ್‌ ನಟಿಯರ ಮೂಲಕ ಜಾಹೀರಾತು ನೀಡಿ, ಪ್ರಯಾಣಿಕರನ್ನು ಸೆಳೆಯಲಾಗುತ್ತಿತ್ತು.

1990ರ ಬಳಿಕ ಖಾಸಗಿಯವರು ಏರ್‌ಲೈನ್‌ ಆರಂಭಿಸಿ ಕಡಿಮೆ ವೆಚ್ಚದಲ್ಲಿ ವಿಮಾನ ಹಾರಾಟ ಆರಂಭಿಸಿದರು. ಏ‌‌ರ್‌ ಇಂಡಿಯಾ ನಷ್ಟಕ್ಕೆ ಜಾರಿತು. ಏರ್ ಇಂಡಿಯಾ 2007ರಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಏರ್‌ಲೈನ್ಸ್ ಲಿಮಿಟೆಡ್‌ನೊಂದಿಗೆ ವಿಲೀನಗೊಂಡ ನಂತರ, ನಷ್ಟಗಳು ಇನ್ನೂ ಹೆಚ್ಚಾಗತೊಡಗಿದವು. ಸುಮಾರು 600 ಬಿಲಿಯನ್ ರೂಪಾಯಿ ಸಾಲವನ್ನು ಏರ್‌ ಇಂಡಿಯಾ ಹೊಂದಿದೆ ಎನ್ನಲಾಗಿದೆ.

2013ರ ಹೊತ್ತಿಗೆ, ದೇಶದ ಅಂದಿನ ನಾಗರಿಕ ವಿಮಾನಯಾನ ಸಚಿವರು ಖಾಸಗೀಕರಣವು ಅದರ ಉಳಿವಿಗೆ ಮುಖ್ಯ ಎಂದು ಹೇಳಿದ್ದರು. 2017ರಲ್ಲಿ ಸರ್ಕಾರವು ಆ ಮಾರ್ಗವನ್ನು ಅನುಮೋದಿಸಿತು ಮತ್ತು ಪ್ರಕ್ರಿಯೆಯನ್ನು ಆರಂಭಿಸಲು ಒಂದು ಸಮಿತಿಯನ್ನು ರಚಿಸಿತು. ಹೀಗೆ ಏರ್‌ ಇಂಡಿಯಾವನ್ನು ಖಾಸಗಿಯವರಿಗೆ ನೀಡುವ ಪ್ರಕ್ರಿಯೆ ಆರಂಭವಾದವು. ಏರ್‌ ಇಂಡಿಯಾ ಖಾಸಗಿಯವರ ತೆಕ್ಕೆಗೆ ಹೋಗುವ ಮೂಲಕ, ಮತ್ತೊಂದು ಸಾರ್ವಜನಿಕ ಸಂಸ್ಥೆಯನ್ನು ಸರ್ಕಾರ ಮಾರಿದಂತಾಗುತ್ತಿದೆ. ಆದರೆ, ಮಾಧ್ಯಮಗಳ ವರದಿಯನ್ನು ಸರ್ಕಾರ ನಿರಾಕರಿಸಿದ್ದು, ತಪ್ಪಾಗಿ ವರದಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...