Homeಮುಖಪುಟಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಟಾಟಾ ಏ‌‌ರ್‌ಲೈನ್ಸ್‌ ಸಂಸ್ಥೆಯು ಕಾಲನಂತರದಲ್ಲಿ ಏರ್‌ ಇಂಡಿಯಾ ಸಂಸ್ಥೆಯಾಗಿ ಬದಲಾಗಿತ್ತು. ನಷ್ಟದಲ್ಲಿದ್ದ ಸಂಸ್ಥೆಯನ್ನು ಮೇಲೆತ್ತುವಲ್ಲಿ ಸೋತಿರುವ ಕೇಂದ್ರ ಸರ್ಕಾರ, ಟಾಟಾ ಅಂಡ್‌ ಸನ್ಸ್‌‌ಗೆ ಏರ್‌ ಇಂಡಿಯಾವನ್ನು ಒಪ್ಪಿಸಲು ಹೊರಟಿದೆ.

- Advertisement -
- Advertisement -

ಚೇತರಿಸಿಕೊಳ್ಳಲಾಗದೆ ಒದ್ದಾಡುತ್ತಿರುವ ಏರ್‌ ಇಂಡಿಯಾ ಸಂಸ್ಥೆಯನ್ನು ‘ಸಾಲ್ಟ್‌ ಟು ಸಾಫ್ಟ್‌ವೇರ್‌’ವರೆಗಿನ ವಿರಾಟ್‌ ಸಂಸ್ಥೆಯೆಂದೇ ಖ್ಯಾತವಾದ ಟಾಟಾ ಸಂಸ್ಥೆಗೆ ವಹಿಸಲಾಗುತ್ತಿದೆ ಎನ್ನಲಾಗಿದೆ. ವಿನ್ನಿಂಗ್‌ ಬಿಡ್ಡರ್‌ ಆಗಿ ಟಾಟಾ ಅಂಡ್‌ ಸನ್ಸ್‌ ಸಂಸ್ಥೆ ಆಯ್ಕೆಯಾಗಿದೆ ಎಂದು ವರದಿಯಾಗಿದೆ.

ಏರ್‌ ಇಂಡಿಯಾ ಸಂಸ್ಥೆ ಸ್ಥಾಪಿತವಾಗಿದ್ದು ಟಾಟಾ ಸಂಸ್ಥೆಯಿಂದ. ಟಾಟಾ ಏರ್‌‌ಲೈನ್ಸ್ ಎಂದು ಸ್ಥಾಪಿತವಾದದ್ದು, ಸರ್ಕಾರದ ಒಡೆತನಕ್ಕೆ ಬಂದ ಮೇಲೆ ಏ‌ರ್‌ ಇಂಡಿಯಾ ಆಗಿತ್ತು. ಅರ್ಧ ಶತಮಾನದ ಬಳಿಕ ಏರ್‌‌ಇಂಡಿಯಾ ಸಂಸ್ಥೆ ಮತ್ತೆ ಟಾಟಾ & ಸನ್ಸ್‌‌ ಸಂಸ್ಥೆಯ ತೆಕ್ಕೆಗೆ ಒಳಪಡುತ್ತಿದೆ ಎಂದು ಉತ್ನತ ಮೂಲಗಳು ಹೇಳಿವೆ.

ಇದನ್ನೂ ಓದಿ: ಸಾರ್ವಜನಿಕ ಉದ್ದಿಮೆಗಳ ಮಾರಾಟ : ಕೇಂದ್ರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಟಾಟಾ & ಸನ್ಸ್‌‌ನ ಉದ್ಯಮಿ ಅಜಯ್‌ ಸಿಂಗ್‌‌ ಅವರಿಂದ ಬಂದಿದ್ದ ಆಹ್ವಾನವನ್ನು ಅಧಿಕಾರಿಗಳು ಸಚಿವರ ಪ್ಯಾನಲ್‌ ಮುಂದೆ ಇಟ್ಟಿದ್ದು, ಸಚಿವರುಗಳು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ವಿಷಯವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಸಾಧ್ಯತೆ ಇದೆ ಎಂದು ‌ಮೂಲಗಳು ತಿಳಿಸಿವೆ.

“ನಾಗರಿಕ ವಿಮಾನಯಾನ ಸಚಿವಾಲಯದ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ. ಹಣಕಾಸು ಸಚಿವಾಲಯದ ವಕ್ತಾರರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಟಾಟಾ ಸನ್ಸ್‌ನ ಪ್ರತಿನಿಧಿಯು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

1932ರಲ್ಲಿ ಕೈಗಾರಿಕಾ ಕ್ಷೇತ್ರದ ದಂತಕತೆ ಜೆಆರ್‌ಡಿ ಟಾಟಾ ಅವರು ಟಾಟಾ ಏರ್‌ಲೈನ್ಸ್‌ ಆರಂಭಿಸಿದ್ದರು. ಮುಂದೆ ಅದು ಏರ್‌ ಇಂಡಿಯಾ ಆಯಿತು. ಭಾರತದ ಮೊದಲ ಪರವಾನಗಿ ಪಡೆದ ಪೈಲಟ್‌ ಜೆಆರ್‌ಡಿ ಟಾಟಾ ಅವರಾಗಿದ್ದರು. ವಾಣಿಜ್ಯೋದ್ಯಮವಾಗಿ ಏರ್‌ಲೈನ್ಸ್‌ ಮಾರ್ಪಟ್ಟಿತು. 1940ರ ಅವಧಿಯಲ್ಲಿ ಸಾರ್ವಜನಿಕ ಕ್ಷೇತ್ರವಾಗಿ ಬದಲಾಯಿತು. ಶ್ರೀಮಂತರನ್ನು ಸೆಳೆಯಿತು. ಬಾಲಿವುಡ್‌ ನಟಿಯರ ಮೂಲಕ ಜಾಹೀರಾತು ನೀಡಿ, ಪ್ರಯಾಣಿಕರನ್ನು ಸೆಳೆಯಲಾಗುತ್ತಿತ್ತು.

1990ರ ಬಳಿಕ ಖಾಸಗಿಯವರು ಏರ್‌ಲೈನ್‌ ಆರಂಭಿಸಿ ಕಡಿಮೆ ವೆಚ್ಚದಲ್ಲಿ ವಿಮಾನ ಹಾರಾಟ ಆರಂಭಿಸಿದರು. ಏ‌‌ರ್‌ ಇಂಡಿಯಾ ನಷ್ಟಕ್ಕೆ ಜಾರಿತು. ಏರ್ ಇಂಡಿಯಾ 2007ರಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಏರ್‌ಲೈನ್ಸ್ ಲಿಮಿಟೆಡ್‌ನೊಂದಿಗೆ ವಿಲೀನಗೊಂಡ ನಂತರ, ನಷ್ಟಗಳು ಇನ್ನೂ ಹೆಚ್ಚಾಗತೊಡಗಿದವು. ಸುಮಾರು 600 ಬಿಲಿಯನ್ ರೂಪಾಯಿ ಸಾಲವನ್ನು ಏರ್‌ ಇಂಡಿಯಾ ಹೊಂದಿದೆ ಎನ್ನಲಾಗಿದೆ.

2013ರ ಹೊತ್ತಿಗೆ, ದೇಶದ ಅಂದಿನ ನಾಗರಿಕ ವಿಮಾನಯಾನ ಸಚಿವರು ಖಾಸಗೀಕರಣವು ಅದರ ಉಳಿವಿಗೆ ಮುಖ್ಯ ಎಂದು ಹೇಳಿದ್ದರು. 2017ರಲ್ಲಿ ಸರ್ಕಾರವು ಆ ಮಾರ್ಗವನ್ನು ಅನುಮೋದಿಸಿತು ಮತ್ತು ಪ್ರಕ್ರಿಯೆಯನ್ನು ಆರಂಭಿಸಲು ಒಂದು ಸಮಿತಿಯನ್ನು ರಚಿಸಿತು. ಹೀಗೆ ಏರ್‌ ಇಂಡಿಯಾವನ್ನು ಖಾಸಗಿಯವರಿಗೆ ನೀಡುವ ಪ್ರಕ್ರಿಯೆ ಆರಂಭವಾದವು. ಏರ್‌ ಇಂಡಿಯಾ ಖಾಸಗಿಯವರ ತೆಕ್ಕೆಗೆ ಹೋಗುವ ಮೂಲಕ, ಮತ್ತೊಂದು ಸಾರ್ವಜನಿಕ ಸಂಸ್ಥೆಯನ್ನು ಸರ್ಕಾರ ಮಾರಿದಂತಾಗುತ್ತಿದೆ. ಆದರೆ, ಮಾಧ್ಯಮಗಳ ವರದಿಯನ್ನು ಸರ್ಕಾರ ನಿರಾಕರಿಸಿದ್ದು, ತಪ್ಪಾಗಿ ವರದಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...