Homeಮುಖಪುಟಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಟಾಟಾ ಏ‌‌ರ್‌ಲೈನ್ಸ್‌ ಸಂಸ್ಥೆಯು ಕಾಲನಂತರದಲ್ಲಿ ಏರ್‌ ಇಂಡಿಯಾ ಸಂಸ್ಥೆಯಾಗಿ ಬದಲಾಗಿತ್ತು. ನಷ್ಟದಲ್ಲಿದ್ದ ಸಂಸ್ಥೆಯನ್ನು ಮೇಲೆತ್ತುವಲ್ಲಿ ಸೋತಿರುವ ಕೇಂದ್ರ ಸರ್ಕಾರ, ಟಾಟಾ ಅಂಡ್‌ ಸನ್ಸ್‌‌ಗೆ ಏರ್‌ ಇಂಡಿಯಾವನ್ನು ಒಪ್ಪಿಸಲು ಹೊರಟಿದೆ.

- Advertisement -
- Advertisement -

ಚೇತರಿಸಿಕೊಳ್ಳಲಾಗದೆ ಒದ್ದಾಡುತ್ತಿರುವ ಏರ್‌ ಇಂಡಿಯಾ ಸಂಸ್ಥೆಯನ್ನು ‘ಸಾಲ್ಟ್‌ ಟು ಸಾಫ್ಟ್‌ವೇರ್‌’ವರೆಗಿನ ವಿರಾಟ್‌ ಸಂಸ್ಥೆಯೆಂದೇ ಖ್ಯಾತವಾದ ಟಾಟಾ ಸಂಸ್ಥೆಗೆ ವಹಿಸಲಾಗುತ್ತಿದೆ ಎನ್ನಲಾಗಿದೆ. ವಿನ್ನಿಂಗ್‌ ಬಿಡ್ಡರ್‌ ಆಗಿ ಟಾಟಾ ಅಂಡ್‌ ಸನ್ಸ್‌ ಸಂಸ್ಥೆ ಆಯ್ಕೆಯಾಗಿದೆ ಎಂದು ವರದಿಯಾಗಿದೆ.

ಏರ್‌ ಇಂಡಿಯಾ ಸಂಸ್ಥೆ ಸ್ಥಾಪಿತವಾಗಿದ್ದು ಟಾಟಾ ಸಂಸ್ಥೆಯಿಂದ. ಟಾಟಾ ಏರ್‌‌ಲೈನ್ಸ್ ಎಂದು ಸ್ಥಾಪಿತವಾದದ್ದು, ಸರ್ಕಾರದ ಒಡೆತನಕ್ಕೆ ಬಂದ ಮೇಲೆ ಏ‌ರ್‌ ಇಂಡಿಯಾ ಆಗಿತ್ತು. ಅರ್ಧ ಶತಮಾನದ ಬಳಿಕ ಏರ್‌‌ಇಂಡಿಯಾ ಸಂಸ್ಥೆ ಮತ್ತೆ ಟಾಟಾ & ಸನ್ಸ್‌‌ ಸಂಸ್ಥೆಯ ತೆಕ್ಕೆಗೆ ಒಳಪಡುತ್ತಿದೆ ಎಂದು ಉತ್ನತ ಮೂಲಗಳು ಹೇಳಿವೆ.

ಇದನ್ನೂ ಓದಿ: ಸಾರ್ವಜನಿಕ ಉದ್ದಿಮೆಗಳ ಮಾರಾಟ : ಕೇಂದ್ರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಟಾಟಾ & ಸನ್ಸ್‌‌ನ ಉದ್ಯಮಿ ಅಜಯ್‌ ಸಿಂಗ್‌‌ ಅವರಿಂದ ಬಂದಿದ್ದ ಆಹ್ವಾನವನ್ನು ಅಧಿಕಾರಿಗಳು ಸಚಿವರ ಪ್ಯಾನಲ್‌ ಮುಂದೆ ಇಟ್ಟಿದ್ದು, ಸಚಿವರುಗಳು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ವಿಷಯವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಸಾಧ್ಯತೆ ಇದೆ ಎಂದು ‌ಮೂಲಗಳು ತಿಳಿಸಿವೆ.

“ನಾಗರಿಕ ವಿಮಾನಯಾನ ಸಚಿವಾಲಯದ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ. ಹಣಕಾಸು ಸಚಿವಾಲಯದ ವಕ್ತಾರರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಟಾಟಾ ಸನ್ಸ್‌ನ ಪ್ರತಿನಿಧಿಯು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

1932ರಲ್ಲಿ ಕೈಗಾರಿಕಾ ಕ್ಷೇತ್ರದ ದಂತಕತೆ ಜೆಆರ್‌ಡಿ ಟಾಟಾ ಅವರು ಟಾಟಾ ಏರ್‌ಲೈನ್ಸ್‌ ಆರಂಭಿಸಿದ್ದರು. ಮುಂದೆ ಅದು ಏರ್‌ ಇಂಡಿಯಾ ಆಯಿತು. ಭಾರತದ ಮೊದಲ ಪರವಾನಗಿ ಪಡೆದ ಪೈಲಟ್‌ ಜೆಆರ್‌ಡಿ ಟಾಟಾ ಅವರಾಗಿದ್ದರು. ವಾಣಿಜ್ಯೋದ್ಯಮವಾಗಿ ಏರ್‌ಲೈನ್ಸ್‌ ಮಾರ್ಪಟ್ಟಿತು. 1940ರ ಅವಧಿಯಲ್ಲಿ ಸಾರ್ವಜನಿಕ ಕ್ಷೇತ್ರವಾಗಿ ಬದಲಾಯಿತು. ಶ್ರೀಮಂತರನ್ನು ಸೆಳೆಯಿತು. ಬಾಲಿವುಡ್‌ ನಟಿಯರ ಮೂಲಕ ಜಾಹೀರಾತು ನೀಡಿ, ಪ್ರಯಾಣಿಕರನ್ನು ಸೆಳೆಯಲಾಗುತ್ತಿತ್ತು.

1990ರ ಬಳಿಕ ಖಾಸಗಿಯವರು ಏರ್‌ಲೈನ್‌ ಆರಂಭಿಸಿ ಕಡಿಮೆ ವೆಚ್ಚದಲ್ಲಿ ವಿಮಾನ ಹಾರಾಟ ಆರಂಭಿಸಿದರು. ಏ‌‌ರ್‌ ಇಂಡಿಯಾ ನಷ್ಟಕ್ಕೆ ಜಾರಿತು. ಏರ್ ಇಂಡಿಯಾ 2007ರಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಏರ್‌ಲೈನ್ಸ್ ಲಿಮಿಟೆಡ್‌ನೊಂದಿಗೆ ವಿಲೀನಗೊಂಡ ನಂತರ, ನಷ್ಟಗಳು ಇನ್ನೂ ಹೆಚ್ಚಾಗತೊಡಗಿದವು. ಸುಮಾರು 600 ಬಿಲಿಯನ್ ರೂಪಾಯಿ ಸಾಲವನ್ನು ಏರ್‌ ಇಂಡಿಯಾ ಹೊಂದಿದೆ ಎನ್ನಲಾಗಿದೆ.

2013ರ ಹೊತ್ತಿಗೆ, ದೇಶದ ಅಂದಿನ ನಾಗರಿಕ ವಿಮಾನಯಾನ ಸಚಿವರು ಖಾಸಗೀಕರಣವು ಅದರ ಉಳಿವಿಗೆ ಮುಖ್ಯ ಎಂದು ಹೇಳಿದ್ದರು. 2017ರಲ್ಲಿ ಸರ್ಕಾರವು ಆ ಮಾರ್ಗವನ್ನು ಅನುಮೋದಿಸಿತು ಮತ್ತು ಪ್ರಕ್ರಿಯೆಯನ್ನು ಆರಂಭಿಸಲು ಒಂದು ಸಮಿತಿಯನ್ನು ರಚಿಸಿತು. ಹೀಗೆ ಏರ್‌ ಇಂಡಿಯಾವನ್ನು ಖಾಸಗಿಯವರಿಗೆ ನೀಡುವ ಪ್ರಕ್ರಿಯೆ ಆರಂಭವಾದವು. ಏರ್‌ ಇಂಡಿಯಾ ಖಾಸಗಿಯವರ ತೆಕ್ಕೆಗೆ ಹೋಗುವ ಮೂಲಕ, ಮತ್ತೊಂದು ಸಾರ್ವಜನಿಕ ಸಂಸ್ಥೆಯನ್ನು ಸರ್ಕಾರ ಮಾರಿದಂತಾಗುತ್ತಿದೆ. ಆದರೆ, ಮಾಧ್ಯಮಗಳ ವರದಿಯನ್ನು ಸರ್ಕಾರ ನಿರಾಕರಿಸಿದ್ದು, ತಪ್ಪಾಗಿ ವರದಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...