Homeಮುಖಪುಟಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಟಾಟಾ ಏ‌‌ರ್‌ಲೈನ್ಸ್‌ ಸಂಸ್ಥೆಯು ಕಾಲನಂತರದಲ್ಲಿ ಏರ್‌ ಇಂಡಿಯಾ ಸಂಸ್ಥೆಯಾಗಿ ಬದಲಾಗಿತ್ತು. ನಷ್ಟದಲ್ಲಿದ್ದ ಸಂಸ್ಥೆಯನ್ನು ಮೇಲೆತ್ತುವಲ್ಲಿ ಸೋತಿರುವ ಕೇಂದ್ರ ಸರ್ಕಾರ, ಟಾಟಾ ಅಂಡ್‌ ಸನ್ಸ್‌‌ಗೆ ಏರ್‌ ಇಂಡಿಯಾವನ್ನು ಒಪ್ಪಿಸಲು ಹೊರಟಿದೆ.

- Advertisement -
- Advertisement -

ಚೇತರಿಸಿಕೊಳ್ಳಲಾಗದೆ ಒದ್ದಾಡುತ್ತಿರುವ ಏರ್‌ ಇಂಡಿಯಾ ಸಂಸ್ಥೆಯನ್ನು ‘ಸಾಲ್ಟ್‌ ಟು ಸಾಫ್ಟ್‌ವೇರ್‌’ವರೆಗಿನ ವಿರಾಟ್‌ ಸಂಸ್ಥೆಯೆಂದೇ ಖ್ಯಾತವಾದ ಟಾಟಾ ಸಂಸ್ಥೆಗೆ ವಹಿಸಲಾಗುತ್ತಿದೆ ಎನ್ನಲಾಗಿದೆ. ವಿನ್ನಿಂಗ್‌ ಬಿಡ್ಡರ್‌ ಆಗಿ ಟಾಟಾ ಅಂಡ್‌ ಸನ್ಸ್‌ ಸಂಸ್ಥೆ ಆಯ್ಕೆಯಾಗಿದೆ ಎಂದು ವರದಿಯಾಗಿದೆ.

ಏರ್‌ ಇಂಡಿಯಾ ಸಂಸ್ಥೆ ಸ್ಥಾಪಿತವಾಗಿದ್ದು ಟಾಟಾ ಸಂಸ್ಥೆಯಿಂದ. ಟಾಟಾ ಏರ್‌‌ಲೈನ್ಸ್ ಎಂದು ಸ್ಥಾಪಿತವಾದದ್ದು, ಸರ್ಕಾರದ ಒಡೆತನಕ್ಕೆ ಬಂದ ಮೇಲೆ ಏ‌ರ್‌ ಇಂಡಿಯಾ ಆಗಿತ್ತು. ಅರ್ಧ ಶತಮಾನದ ಬಳಿಕ ಏರ್‌‌ಇಂಡಿಯಾ ಸಂಸ್ಥೆ ಮತ್ತೆ ಟಾಟಾ & ಸನ್ಸ್‌‌ ಸಂಸ್ಥೆಯ ತೆಕ್ಕೆಗೆ ಒಳಪಡುತ್ತಿದೆ ಎಂದು ಉತ್ನತ ಮೂಲಗಳು ಹೇಳಿವೆ.

ಇದನ್ನೂ ಓದಿ: ಸಾರ್ವಜನಿಕ ಉದ್ದಿಮೆಗಳ ಮಾರಾಟ : ಕೇಂದ್ರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಟಾಟಾ & ಸನ್ಸ್‌‌ನ ಉದ್ಯಮಿ ಅಜಯ್‌ ಸಿಂಗ್‌‌ ಅವರಿಂದ ಬಂದಿದ್ದ ಆಹ್ವಾನವನ್ನು ಅಧಿಕಾರಿಗಳು ಸಚಿವರ ಪ್ಯಾನಲ್‌ ಮುಂದೆ ಇಟ್ಟಿದ್ದು, ಸಚಿವರುಗಳು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ವಿಷಯವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಸಾಧ್ಯತೆ ಇದೆ ಎಂದು ‌ಮೂಲಗಳು ತಿಳಿಸಿವೆ.

“ನಾಗರಿಕ ವಿಮಾನಯಾನ ಸಚಿವಾಲಯದ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ. ಹಣಕಾಸು ಸಚಿವಾಲಯದ ವಕ್ತಾರರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಟಾಟಾ ಸನ್ಸ್‌ನ ಪ್ರತಿನಿಧಿಯು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

1932ರಲ್ಲಿ ಕೈಗಾರಿಕಾ ಕ್ಷೇತ್ರದ ದಂತಕತೆ ಜೆಆರ್‌ಡಿ ಟಾಟಾ ಅವರು ಟಾಟಾ ಏರ್‌ಲೈನ್ಸ್‌ ಆರಂಭಿಸಿದ್ದರು. ಮುಂದೆ ಅದು ಏರ್‌ ಇಂಡಿಯಾ ಆಯಿತು. ಭಾರತದ ಮೊದಲ ಪರವಾನಗಿ ಪಡೆದ ಪೈಲಟ್‌ ಜೆಆರ್‌ಡಿ ಟಾಟಾ ಅವರಾಗಿದ್ದರು. ವಾಣಿಜ್ಯೋದ್ಯಮವಾಗಿ ಏರ್‌ಲೈನ್ಸ್‌ ಮಾರ್ಪಟ್ಟಿತು. 1940ರ ಅವಧಿಯಲ್ಲಿ ಸಾರ್ವಜನಿಕ ಕ್ಷೇತ್ರವಾಗಿ ಬದಲಾಯಿತು. ಶ್ರೀಮಂತರನ್ನು ಸೆಳೆಯಿತು. ಬಾಲಿವುಡ್‌ ನಟಿಯರ ಮೂಲಕ ಜಾಹೀರಾತು ನೀಡಿ, ಪ್ರಯಾಣಿಕರನ್ನು ಸೆಳೆಯಲಾಗುತ್ತಿತ್ತು.

1990ರ ಬಳಿಕ ಖಾಸಗಿಯವರು ಏರ್‌ಲೈನ್‌ ಆರಂಭಿಸಿ ಕಡಿಮೆ ವೆಚ್ಚದಲ್ಲಿ ವಿಮಾನ ಹಾರಾಟ ಆರಂಭಿಸಿದರು. ಏ‌‌ರ್‌ ಇಂಡಿಯಾ ನಷ್ಟಕ್ಕೆ ಜಾರಿತು. ಏರ್ ಇಂಡಿಯಾ 2007ರಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಏರ್‌ಲೈನ್ಸ್ ಲಿಮಿಟೆಡ್‌ನೊಂದಿಗೆ ವಿಲೀನಗೊಂಡ ನಂತರ, ನಷ್ಟಗಳು ಇನ್ನೂ ಹೆಚ್ಚಾಗತೊಡಗಿದವು. ಸುಮಾರು 600 ಬಿಲಿಯನ್ ರೂಪಾಯಿ ಸಾಲವನ್ನು ಏರ್‌ ಇಂಡಿಯಾ ಹೊಂದಿದೆ ಎನ್ನಲಾಗಿದೆ.

2013ರ ಹೊತ್ತಿಗೆ, ದೇಶದ ಅಂದಿನ ನಾಗರಿಕ ವಿಮಾನಯಾನ ಸಚಿವರು ಖಾಸಗೀಕರಣವು ಅದರ ಉಳಿವಿಗೆ ಮುಖ್ಯ ಎಂದು ಹೇಳಿದ್ದರು. 2017ರಲ್ಲಿ ಸರ್ಕಾರವು ಆ ಮಾರ್ಗವನ್ನು ಅನುಮೋದಿಸಿತು ಮತ್ತು ಪ್ರಕ್ರಿಯೆಯನ್ನು ಆರಂಭಿಸಲು ಒಂದು ಸಮಿತಿಯನ್ನು ರಚಿಸಿತು. ಹೀಗೆ ಏರ್‌ ಇಂಡಿಯಾವನ್ನು ಖಾಸಗಿಯವರಿಗೆ ನೀಡುವ ಪ್ರಕ್ರಿಯೆ ಆರಂಭವಾದವು. ಏರ್‌ ಇಂಡಿಯಾ ಖಾಸಗಿಯವರ ತೆಕ್ಕೆಗೆ ಹೋಗುವ ಮೂಲಕ, ಮತ್ತೊಂದು ಸಾರ್ವಜನಿಕ ಸಂಸ್ಥೆಯನ್ನು ಸರ್ಕಾರ ಮಾರಿದಂತಾಗುತ್ತಿದೆ. ಆದರೆ, ಮಾಧ್ಯಮಗಳ ವರದಿಯನ್ನು ಸರ್ಕಾರ ನಿರಾಕರಿಸಿದ್ದು, ತಪ್ಪಾಗಿ ವರದಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....