Homeಮುಖಪುಟಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಟಾಟಾ ಏ‌‌ರ್‌ಲೈನ್ಸ್‌ ಸಂಸ್ಥೆಯು ಕಾಲನಂತರದಲ್ಲಿ ಏರ್‌ ಇಂಡಿಯಾ ಸಂಸ್ಥೆಯಾಗಿ ಬದಲಾಗಿತ್ತು. ನಷ್ಟದಲ್ಲಿದ್ದ ಸಂಸ್ಥೆಯನ್ನು ಮೇಲೆತ್ತುವಲ್ಲಿ ಸೋತಿರುವ ಕೇಂದ್ರ ಸರ್ಕಾರ, ಟಾಟಾ ಅಂಡ್‌ ಸನ್ಸ್‌‌ಗೆ ಏರ್‌ ಇಂಡಿಯಾವನ್ನು ಒಪ್ಪಿಸಲು ಹೊರಟಿದೆ.

- Advertisement -
- Advertisement -

ಚೇತರಿಸಿಕೊಳ್ಳಲಾಗದೆ ಒದ್ದಾಡುತ್ತಿರುವ ಏರ್‌ ಇಂಡಿಯಾ ಸಂಸ್ಥೆಯನ್ನು ‘ಸಾಲ್ಟ್‌ ಟು ಸಾಫ್ಟ್‌ವೇರ್‌’ವರೆಗಿನ ವಿರಾಟ್‌ ಸಂಸ್ಥೆಯೆಂದೇ ಖ್ಯಾತವಾದ ಟಾಟಾ ಸಂಸ್ಥೆಗೆ ವಹಿಸಲಾಗುತ್ತಿದೆ ಎನ್ನಲಾಗಿದೆ. ವಿನ್ನಿಂಗ್‌ ಬಿಡ್ಡರ್‌ ಆಗಿ ಟಾಟಾ ಅಂಡ್‌ ಸನ್ಸ್‌ ಸಂಸ್ಥೆ ಆಯ್ಕೆಯಾಗಿದೆ ಎಂದು ವರದಿಯಾಗಿದೆ.

ಏರ್‌ ಇಂಡಿಯಾ ಸಂಸ್ಥೆ ಸ್ಥಾಪಿತವಾಗಿದ್ದು ಟಾಟಾ ಸಂಸ್ಥೆಯಿಂದ. ಟಾಟಾ ಏರ್‌‌ಲೈನ್ಸ್ ಎಂದು ಸ್ಥಾಪಿತವಾದದ್ದು, ಸರ್ಕಾರದ ಒಡೆತನಕ್ಕೆ ಬಂದ ಮೇಲೆ ಏ‌ರ್‌ ಇಂಡಿಯಾ ಆಗಿತ್ತು. ಅರ್ಧ ಶತಮಾನದ ಬಳಿಕ ಏರ್‌‌ಇಂಡಿಯಾ ಸಂಸ್ಥೆ ಮತ್ತೆ ಟಾಟಾ & ಸನ್ಸ್‌‌ ಸಂಸ್ಥೆಯ ತೆಕ್ಕೆಗೆ ಒಳಪಡುತ್ತಿದೆ ಎಂದು ಉತ್ನತ ಮೂಲಗಳು ಹೇಳಿವೆ.

ಇದನ್ನೂ ಓದಿ: ಸಾರ್ವಜನಿಕ ಉದ್ದಿಮೆಗಳ ಮಾರಾಟ : ಕೇಂದ್ರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಟಾಟಾ & ಸನ್ಸ್‌‌ನ ಉದ್ಯಮಿ ಅಜಯ್‌ ಸಿಂಗ್‌‌ ಅವರಿಂದ ಬಂದಿದ್ದ ಆಹ್ವಾನವನ್ನು ಅಧಿಕಾರಿಗಳು ಸಚಿವರ ಪ್ಯಾನಲ್‌ ಮುಂದೆ ಇಟ್ಟಿದ್ದು, ಸಚಿವರುಗಳು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ವಿಷಯವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಸಾಧ್ಯತೆ ಇದೆ ಎಂದು ‌ಮೂಲಗಳು ತಿಳಿಸಿವೆ.

“ನಾಗರಿಕ ವಿಮಾನಯಾನ ಸಚಿವಾಲಯದ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ. ಹಣಕಾಸು ಸಚಿವಾಲಯದ ವಕ್ತಾರರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಟಾಟಾ ಸನ್ಸ್‌ನ ಪ್ರತಿನಿಧಿಯು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

1932ರಲ್ಲಿ ಕೈಗಾರಿಕಾ ಕ್ಷೇತ್ರದ ದಂತಕತೆ ಜೆಆರ್‌ಡಿ ಟಾಟಾ ಅವರು ಟಾಟಾ ಏರ್‌ಲೈನ್ಸ್‌ ಆರಂಭಿಸಿದ್ದರು. ಮುಂದೆ ಅದು ಏರ್‌ ಇಂಡಿಯಾ ಆಯಿತು. ಭಾರತದ ಮೊದಲ ಪರವಾನಗಿ ಪಡೆದ ಪೈಲಟ್‌ ಜೆಆರ್‌ಡಿ ಟಾಟಾ ಅವರಾಗಿದ್ದರು. ವಾಣಿಜ್ಯೋದ್ಯಮವಾಗಿ ಏರ್‌ಲೈನ್ಸ್‌ ಮಾರ್ಪಟ್ಟಿತು. 1940ರ ಅವಧಿಯಲ್ಲಿ ಸಾರ್ವಜನಿಕ ಕ್ಷೇತ್ರವಾಗಿ ಬದಲಾಯಿತು. ಶ್ರೀಮಂತರನ್ನು ಸೆಳೆಯಿತು. ಬಾಲಿವುಡ್‌ ನಟಿಯರ ಮೂಲಕ ಜಾಹೀರಾತು ನೀಡಿ, ಪ್ರಯಾಣಿಕರನ್ನು ಸೆಳೆಯಲಾಗುತ್ತಿತ್ತು.

1990ರ ಬಳಿಕ ಖಾಸಗಿಯವರು ಏರ್‌ಲೈನ್‌ ಆರಂಭಿಸಿ ಕಡಿಮೆ ವೆಚ್ಚದಲ್ಲಿ ವಿಮಾನ ಹಾರಾಟ ಆರಂಭಿಸಿದರು. ಏ‌‌ರ್‌ ಇಂಡಿಯಾ ನಷ್ಟಕ್ಕೆ ಜಾರಿತು. ಏರ್ ಇಂಡಿಯಾ 2007ರಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಏರ್‌ಲೈನ್ಸ್ ಲಿಮಿಟೆಡ್‌ನೊಂದಿಗೆ ವಿಲೀನಗೊಂಡ ನಂತರ, ನಷ್ಟಗಳು ಇನ್ನೂ ಹೆಚ್ಚಾಗತೊಡಗಿದವು. ಸುಮಾರು 600 ಬಿಲಿಯನ್ ರೂಪಾಯಿ ಸಾಲವನ್ನು ಏರ್‌ ಇಂಡಿಯಾ ಹೊಂದಿದೆ ಎನ್ನಲಾಗಿದೆ.

2013ರ ಹೊತ್ತಿಗೆ, ದೇಶದ ಅಂದಿನ ನಾಗರಿಕ ವಿಮಾನಯಾನ ಸಚಿವರು ಖಾಸಗೀಕರಣವು ಅದರ ಉಳಿವಿಗೆ ಮುಖ್ಯ ಎಂದು ಹೇಳಿದ್ದರು. 2017ರಲ್ಲಿ ಸರ್ಕಾರವು ಆ ಮಾರ್ಗವನ್ನು ಅನುಮೋದಿಸಿತು ಮತ್ತು ಪ್ರಕ್ರಿಯೆಯನ್ನು ಆರಂಭಿಸಲು ಒಂದು ಸಮಿತಿಯನ್ನು ರಚಿಸಿತು. ಹೀಗೆ ಏರ್‌ ಇಂಡಿಯಾವನ್ನು ಖಾಸಗಿಯವರಿಗೆ ನೀಡುವ ಪ್ರಕ್ರಿಯೆ ಆರಂಭವಾದವು. ಏರ್‌ ಇಂಡಿಯಾ ಖಾಸಗಿಯವರ ತೆಕ್ಕೆಗೆ ಹೋಗುವ ಮೂಲಕ, ಮತ್ತೊಂದು ಸಾರ್ವಜನಿಕ ಸಂಸ್ಥೆಯನ್ನು ಸರ್ಕಾರ ಮಾರಿದಂತಾಗುತ್ತಿದೆ. ಆದರೆ, ಮಾಧ್ಯಮಗಳ ವರದಿಯನ್ನು ಸರ್ಕಾರ ನಿರಾಕರಿಸಿದ್ದು, ತಪ್ಪಾಗಿ ವರದಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...