Homeಮುಖಪುಟಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

ಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

- Advertisement -
- Advertisement -

ಜುಲೈ 1 ರಿಂದ ಆಧಾರ್-ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ರೈಲು ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜುಲೈ 15 ರಿಂದ ಆನ್‌ಲೈನ್‌ನಲ್ಲಿ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಆಧಾರ್ ಆಧಾರಿತ OTP ದೃಢೀಕರಣವು ಕಡ್ಡಾಯವಾಗಲಿದೆ. ಜುಲೈ 1 ರಿಂದ ಆಧಾರ್

ಪ್ರಯಾಣದ ದಿನಾಂಕಕ್ಕಿಂತ ಒಂದು ದಿನ ಮೊದಲು ರೈಲು ಟಿಕೆಟ್‌ಗಳನ್ನು ಬುಕ್ ಮಾಡುವ ವ್ಯವಸ್ಥೆಯಾಗಿದೆ ತತ್ಕಾಲ್. ಈ ವ್ಯವಸ್ಥೆಯು ಕೊನೆ ಕ್ಷಣದಲ್ಲಿ ಪ್ರಯಾಣವನ್ನು ಯೋಜಿಸುವವರಿಗೆ ಸಹಾಯ ಮಾಡುತ್ತದೆ.

“ಸಿಸ್ಟಮ್-ರಚಿತ OTP ಯ ದೃಢೀಕರಣದ ನಂತರವೇ ಭಾರತೀಯ ರೈಲ್ವೆಗಳು/ಅಧಿಕೃತ ಏಜೆಂಟ್‌ಗಳ ಗಣಕೀಕೃತ PRS (ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್) ಕೌಂಟರ್‌ಗಳ ಮೂಲಕ ಬುಕಿಂಗ್ ಮಾಡಲು ತತ್ಕಾಲ್ ಟಿಕೆಟ್‌ಗಳು ಲಭ್ಯವಿರುತ್ತವೆ. ಇದನ್ನು ಬಳಕೆದಾರರು ಬುಕಿಂಗ್ ಸಮಯದಲ್ಲಿ ಒದಗಿಸಿದ ಮೊಬೈಲ್ ಸಂಖ್ಯೆಯ ಮೂಲಕ ಕಳುಹಿಸಲಾಗುತ್ತದೆ.” ಎಂದು ರೈಲ್ವೆ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಹೇಳಿದೆ. ಈ ನಿಬಂಧನೆಯು ಜುಲೈ 15 ರಿಂದ ಜಾರಿಗೆ ಬರಲಿದೆ.

ಎಸಿ ಮತ್ತು ಎಸಿ ಅಲ್ಲದ ಎರಡೂ ಕ್ಲಾಸ್‌ಗಳಿಗೆ ತತ್ಕಾಲ್ ಬುಕಿಂಗ್ ಪ್ರಾಂಭವಾದ ಮೊದಲ 30 ನಿಮಿಷಗಳಲ್ಲಿ ಯಾವುದೇ ಏಜೆಂಟ್‌ಗೆ ಬುಕಿಂಗ್‌ಗಳನ್ನು ಅನುಮತಿಸಲಾಗುವುದಿಲ್ಲ ಎಂದು ರೈಲ್ವೆ ನಿರ್ಧರಿಸಿದೆ. ನಿರ್ಧಾರವನ್ನು ದೃಢೀಕರಿಸಿರುವ ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು, ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿನ ಮಾರ್ಪಾಡುಗಳು ಬಳಕೆದಾರರ ದೃಢೀಕರಣವನ್ನು ಹೆಚ್ಚಿಸುವ ಮತ್ತು ಮೋಸದ ಏಜೆಂಟ್‌ಗಳಿಂದ ದುರುಪಯೋಗವನ್ನು ತಡೆಯುವ ಗುರಿಯನ್ನು ಹೊಂದಿವೆ ಎಂದು ಹೇಳಿದ್ದಾರೆ.

ಸಚಿವಾಲಯವು ಹೊಸ ಕಾರ್ಯವಿಧಾನವನ್ನು ವಿವರಿಸುತ್ತಾ, “ಈ ವರ್ಷ ಜುಲೈ 15 ರಿಂದ ಆನ್‌ಲೈನ್‌ನಲ್ಲಿ ಮಾಡುವ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯವಾಗಲಿದೆ.” ಎಂದು ಹೇಳಿದೆ. ಹವಾನಿಯಂತ್ರಿತ ಕ್ಲಾಸ್‌ಗಳಿಗೆ ಬೆಳಿಗ್ಗೆ 10 ರಿಂದ ಬೆಳಿಗ್ಗೆ 10.30 ರವರೆಗೆ ಮತ್ತು ಹವಾನಿಯಂತ್ರಿತವಲ್ಲದ ಕ್ಲಾಸ್‌ಗಳಿಗೆ ಬೆಳಿಗ್ಗೆ 11 ರಿಂದ ಬೆಳಿಗ್ಗೆ 11.30 ರವರೆಗೆ ನಿರ್ಬಂಧಗಳು ಅನ್ವಯಿಸುತ್ತವೆ.

ಬುಕಿಂಗ್ ವಿಂಡೋ ತೆರೆದ ತಕ್ಷಣದ ಅವಧಿಯಲ್ಲಿ ಬೃಹತ್ ಬುಕಿಂಗ್‌ಗಳನ್ನು ತಡೆಯುವುದು ನಿರ್ಬಂಧಗಳ ಉದ್ದೇಶವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಅಪ್ರಬುದ್ಧ ನಡೆ ಎಂದು ಹೇಳಿದ್ದಾರೆ. “ತತ್ಕಾಲ್ ಟಿಕೆಟ್ ಪ್ರಾರಂಭವಾದ ಐದು ನಿಮಿಷಗಳಲ್ಲಿ ಮುಗಿದು ಹೋಗುತ್ತದೆ. ಅಂತದ್ದರಲ್ಲಿ ಒಟಿಪಿ ಬಂದು ಬುಕ್ ಮಾಡುವಷ್ಟರಲ್ಲಿ ಇದು ಇನ್ನಷ್ಟು ಅಧ್ವಾನ ಸೃಷ್ಟಿಯಾಗುತ್ತದೆ. ವಂಚನೆ ಮಾಡುವವರು ಎಲ್ಲದಕ್ಕೂ ಒಂದು ದಾರಿಯನ್ನು ಸೃಷ್ಟಿ ಮಾಡಿಕೊಂಡಿರುತ್ತಾರೆ. ಆದರೆ ಇದರಿಂದ ತೊಂದರೆಗೆ ಒಳಗಾಗುವುದು ಸಾಮಾನ್ಯ ಜನರು ಮಾತ್ರವೆ” ಎಂದು ಹೇಳಿದ್ದಾರೆ.

ಈಗಾಗಲೆ ಸರ್ಕಾರಿ ವ್ಯವಸ್ಥೆಯಲ್ಲಿ ಒಂದೊಂದು ಒಟಿಪಿ ಬರಲು ಕೆಲವೊಮ್ಮ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿಯಿದೆ. ಅಂತದ್ದರಲ್ಲಿ ಟಿಕೆಟ್ ಬುಕ್‌ ಮಾಡಲು ಕೂಡಾ ಒಟಿಪಿ ಕೇಳುವುದು ಅನ್ಯಾಯ. ಅಷ್ಟಕ್ಕೂ ಈ ದೇಶದ 93% ಜನರಿಗಷ್ಟೆ ಆಧಾರ್ ಇವೆ. ಇಲ್ಲದವರಿಗೆ ತತ್ಕಾಲ್ ಬುಕ್‌ ಮಾಡಲು ಅವಕಾಶ ನೀಡದಿರುವುದು ಅಸಮಾನತೆ ಅಲ್ಲವೆ? ಸರ್ಕಾರದ ಈ ಕ್ರಮವು ಜನಸಾಮಾನ್ಯರನ್ನು ರೈಲ್ವೆಯಿಂದ ದೂರ ಸರಿಸುವ ಅದರ ಅಜೆಂಡಾದ ಭಾಗ ಎಂದು ಸಾಮಾಜಿಕ ಮಾದ್ಯಮ ಬಳಕೆದಾರರೊಬ್ಬರು ಹೇಳಿದ್ದಾರೆ. ಜುಲೈ 1 ರಿಂದ ಆಧಾರ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...