Homeಮುಖಪುಟಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

ಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

- Advertisement -
- Advertisement -

ಜುಲೈ 1 ರಿಂದ ಆಧಾರ್-ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ರೈಲು ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜುಲೈ 15 ರಿಂದ ಆನ್‌ಲೈನ್‌ನಲ್ಲಿ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಆಧಾರ್ ಆಧಾರಿತ OTP ದೃಢೀಕರಣವು ಕಡ್ಡಾಯವಾಗಲಿದೆ. ಜುಲೈ 1 ರಿಂದ ಆಧಾರ್

ಪ್ರಯಾಣದ ದಿನಾಂಕಕ್ಕಿಂತ ಒಂದು ದಿನ ಮೊದಲು ರೈಲು ಟಿಕೆಟ್‌ಗಳನ್ನು ಬುಕ್ ಮಾಡುವ ವ್ಯವಸ್ಥೆಯಾಗಿದೆ ತತ್ಕಾಲ್. ಈ ವ್ಯವಸ್ಥೆಯು ಕೊನೆ ಕ್ಷಣದಲ್ಲಿ ಪ್ರಯಾಣವನ್ನು ಯೋಜಿಸುವವರಿಗೆ ಸಹಾಯ ಮಾಡುತ್ತದೆ.

“ಸಿಸ್ಟಮ್-ರಚಿತ OTP ಯ ದೃಢೀಕರಣದ ನಂತರವೇ ಭಾರತೀಯ ರೈಲ್ವೆಗಳು/ಅಧಿಕೃತ ಏಜೆಂಟ್‌ಗಳ ಗಣಕೀಕೃತ PRS (ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್) ಕೌಂಟರ್‌ಗಳ ಮೂಲಕ ಬುಕಿಂಗ್ ಮಾಡಲು ತತ್ಕಾಲ್ ಟಿಕೆಟ್‌ಗಳು ಲಭ್ಯವಿರುತ್ತವೆ. ಇದನ್ನು ಬಳಕೆದಾರರು ಬುಕಿಂಗ್ ಸಮಯದಲ್ಲಿ ಒದಗಿಸಿದ ಮೊಬೈಲ್ ಸಂಖ್ಯೆಯ ಮೂಲಕ ಕಳುಹಿಸಲಾಗುತ್ತದೆ.” ಎಂದು ರೈಲ್ವೆ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಹೇಳಿದೆ. ಈ ನಿಬಂಧನೆಯು ಜುಲೈ 15 ರಿಂದ ಜಾರಿಗೆ ಬರಲಿದೆ.

ಎಸಿ ಮತ್ತು ಎಸಿ ಅಲ್ಲದ ಎರಡೂ ಕ್ಲಾಸ್‌ಗಳಿಗೆ ತತ್ಕಾಲ್ ಬುಕಿಂಗ್ ಪ್ರಾಂಭವಾದ ಮೊದಲ 30 ನಿಮಿಷಗಳಲ್ಲಿ ಯಾವುದೇ ಏಜೆಂಟ್‌ಗೆ ಬುಕಿಂಗ್‌ಗಳನ್ನು ಅನುಮತಿಸಲಾಗುವುದಿಲ್ಲ ಎಂದು ರೈಲ್ವೆ ನಿರ್ಧರಿಸಿದೆ. ನಿರ್ಧಾರವನ್ನು ದೃಢೀಕರಿಸಿರುವ ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು, ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿನ ಮಾರ್ಪಾಡುಗಳು ಬಳಕೆದಾರರ ದೃಢೀಕರಣವನ್ನು ಹೆಚ್ಚಿಸುವ ಮತ್ತು ಮೋಸದ ಏಜೆಂಟ್‌ಗಳಿಂದ ದುರುಪಯೋಗವನ್ನು ತಡೆಯುವ ಗುರಿಯನ್ನು ಹೊಂದಿವೆ ಎಂದು ಹೇಳಿದ್ದಾರೆ.

ಸಚಿವಾಲಯವು ಹೊಸ ಕಾರ್ಯವಿಧಾನವನ್ನು ವಿವರಿಸುತ್ತಾ, “ಈ ವರ್ಷ ಜುಲೈ 15 ರಿಂದ ಆನ್‌ಲೈನ್‌ನಲ್ಲಿ ಮಾಡುವ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯವಾಗಲಿದೆ.” ಎಂದು ಹೇಳಿದೆ. ಹವಾನಿಯಂತ್ರಿತ ಕ್ಲಾಸ್‌ಗಳಿಗೆ ಬೆಳಿಗ್ಗೆ 10 ರಿಂದ ಬೆಳಿಗ್ಗೆ 10.30 ರವರೆಗೆ ಮತ್ತು ಹವಾನಿಯಂತ್ರಿತವಲ್ಲದ ಕ್ಲಾಸ್‌ಗಳಿಗೆ ಬೆಳಿಗ್ಗೆ 11 ರಿಂದ ಬೆಳಿಗ್ಗೆ 11.30 ರವರೆಗೆ ನಿರ್ಬಂಧಗಳು ಅನ್ವಯಿಸುತ್ತವೆ.

ಬುಕಿಂಗ್ ವಿಂಡೋ ತೆರೆದ ತಕ್ಷಣದ ಅವಧಿಯಲ್ಲಿ ಬೃಹತ್ ಬುಕಿಂಗ್‌ಗಳನ್ನು ತಡೆಯುವುದು ನಿರ್ಬಂಧಗಳ ಉದ್ದೇಶವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಅಪ್ರಬುದ್ಧ ನಡೆ ಎಂದು ಹೇಳಿದ್ದಾರೆ. “ತತ್ಕಾಲ್ ಟಿಕೆಟ್ ಪ್ರಾರಂಭವಾದ ಐದು ನಿಮಿಷಗಳಲ್ಲಿ ಮುಗಿದು ಹೋಗುತ್ತದೆ. ಅಂತದ್ದರಲ್ಲಿ ಒಟಿಪಿ ಬಂದು ಬುಕ್ ಮಾಡುವಷ್ಟರಲ್ಲಿ ಇದು ಇನ್ನಷ್ಟು ಅಧ್ವಾನ ಸೃಷ್ಟಿಯಾಗುತ್ತದೆ. ವಂಚನೆ ಮಾಡುವವರು ಎಲ್ಲದಕ್ಕೂ ಒಂದು ದಾರಿಯನ್ನು ಸೃಷ್ಟಿ ಮಾಡಿಕೊಂಡಿರುತ್ತಾರೆ. ಆದರೆ ಇದರಿಂದ ತೊಂದರೆಗೆ ಒಳಗಾಗುವುದು ಸಾಮಾನ್ಯ ಜನರು ಮಾತ್ರವೆ” ಎಂದು ಹೇಳಿದ್ದಾರೆ.

ಈಗಾಗಲೆ ಸರ್ಕಾರಿ ವ್ಯವಸ್ಥೆಯಲ್ಲಿ ಒಂದೊಂದು ಒಟಿಪಿ ಬರಲು ಕೆಲವೊಮ್ಮ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿಯಿದೆ. ಅಂತದ್ದರಲ್ಲಿ ಟಿಕೆಟ್ ಬುಕ್‌ ಮಾಡಲು ಕೂಡಾ ಒಟಿಪಿ ಕೇಳುವುದು ಅನ್ಯಾಯ. ಅಷ್ಟಕ್ಕೂ ಈ ದೇಶದ 93% ಜನರಿಗಷ್ಟೆ ಆಧಾರ್ ಇವೆ. ಇಲ್ಲದವರಿಗೆ ತತ್ಕಾಲ್ ಬುಕ್‌ ಮಾಡಲು ಅವಕಾಶ ನೀಡದಿರುವುದು ಅಸಮಾನತೆ ಅಲ್ಲವೆ? ಸರ್ಕಾರದ ಈ ಕ್ರಮವು ಜನಸಾಮಾನ್ಯರನ್ನು ರೈಲ್ವೆಯಿಂದ ದೂರ ಸರಿಸುವ ಅದರ ಅಜೆಂಡಾದ ಭಾಗ ಎಂದು ಸಾಮಾಜಿಕ ಮಾದ್ಯಮ ಬಳಕೆದಾರರೊಬ್ಬರು ಹೇಳಿದ್ದಾರೆ. ಜುಲೈ 1 ರಿಂದ ಆಧಾರ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...