Homeಮುಖಪುಟಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

ಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

- Advertisement -
- Advertisement -

ಜುಲೈ 1 ರಿಂದ ಆಧಾರ್-ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ರೈಲು ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜುಲೈ 15 ರಿಂದ ಆನ್‌ಲೈನ್‌ನಲ್ಲಿ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಆಧಾರ್ ಆಧಾರಿತ OTP ದೃಢೀಕರಣವು ಕಡ್ಡಾಯವಾಗಲಿದೆ. ಜುಲೈ 1 ರಿಂದ ಆಧಾರ್

ಪ್ರಯಾಣದ ದಿನಾಂಕಕ್ಕಿಂತ ಒಂದು ದಿನ ಮೊದಲು ರೈಲು ಟಿಕೆಟ್‌ಗಳನ್ನು ಬುಕ್ ಮಾಡುವ ವ್ಯವಸ್ಥೆಯಾಗಿದೆ ತತ್ಕಾಲ್. ಈ ವ್ಯವಸ್ಥೆಯು ಕೊನೆ ಕ್ಷಣದಲ್ಲಿ ಪ್ರಯಾಣವನ್ನು ಯೋಜಿಸುವವರಿಗೆ ಸಹಾಯ ಮಾಡುತ್ತದೆ.

“ಸಿಸ್ಟಮ್-ರಚಿತ OTP ಯ ದೃಢೀಕರಣದ ನಂತರವೇ ಭಾರತೀಯ ರೈಲ್ವೆಗಳು/ಅಧಿಕೃತ ಏಜೆಂಟ್‌ಗಳ ಗಣಕೀಕೃತ PRS (ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್) ಕೌಂಟರ್‌ಗಳ ಮೂಲಕ ಬುಕಿಂಗ್ ಮಾಡಲು ತತ್ಕಾಲ್ ಟಿಕೆಟ್‌ಗಳು ಲಭ್ಯವಿರುತ್ತವೆ. ಇದನ್ನು ಬಳಕೆದಾರರು ಬುಕಿಂಗ್ ಸಮಯದಲ್ಲಿ ಒದಗಿಸಿದ ಮೊಬೈಲ್ ಸಂಖ್ಯೆಯ ಮೂಲಕ ಕಳುಹಿಸಲಾಗುತ್ತದೆ.” ಎಂದು ರೈಲ್ವೆ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಹೇಳಿದೆ. ಈ ನಿಬಂಧನೆಯು ಜುಲೈ 15 ರಿಂದ ಜಾರಿಗೆ ಬರಲಿದೆ.

ಎಸಿ ಮತ್ತು ಎಸಿ ಅಲ್ಲದ ಎರಡೂ ಕ್ಲಾಸ್‌ಗಳಿಗೆ ತತ್ಕಾಲ್ ಬುಕಿಂಗ್ ಪ್ರಾಂಭವಾದ ಮೊದಲ 30 ನಿಮಿಷಗಳಲ್ಲಿ ಯಾವುದೇ ಏಜೆಂಟ್‌ಗೆ ಬುಕಿಂಗ್‌ಗಳನ್ನು ಅನುಮತಿಸಲಾಗುವುದಿಲ್ಲ ಎಂದು ರೈಲ್ವೆ ನಿರ್ಧರಿಸಿದೆ. ನಿರ್ಧಾರವನ್ನು ದೃಢೀಕರಿಸಿರುವ ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು, ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿನ ಮಾರ್ಪಾಡುಗಳು ಬಳಕೆದಾರರ ದೃಢೀಕರಣವನ್ನು ಹೆಚ್ಚಿಸುವ ಮತ್ತು ಮೋಸದ ಏಜೆಂಟ್‌ಗಳಿಂದ ದುರುಪಯೋಗವನ್ನು ತಡೆಯುವ ಗುರಿಯನ್ನು ಹೊಂದಿವೆ ಎಂದು ಹೇಳಿದ್ದಾರೆ.

ಸಚಿವಾಲಯವು ಹೊಸ ಕಾರ್ಯವಿಧಾನವನ್ನು ವಿವರಿಸುತ್ತಾ, “ಈ ವರ್ಷ ಜುಲೈ 15 ರಿಂದ ಆನ್‌ಲೈನ್‌ನಲ್ಲಿ ಮಾಡುವ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯವಾಗಲಿದೆ.” ಎಂದು ಹೇಳಿದೆ. ಹವಾನಿಯಂತ್ರಿತ ಕ್ಲಾಸ್‌ಗಳಿಗೆ ಬೆಳಿಗ್ಗೆ 10 ರಿಂದ ಬೆಳಿಗ್ಗೆ 10.30 ರವರೆಗೆ ಮತ್ತು ಹವಾನಿಯಂತ್ರಿತವಲ್ಲದ ಕ್ಲಾಸ್‌ಗಳಿಗೆ ಬೆಳಿಗ್ಗೆ 11 ರಿಂದ ಬೆಳಿಗ್ಗೆ 11.30 ರವರೆಗೆ ನಿರ್ಬಂಧಗಳು ಅನ್ವಯಿಸುತ್ತವೆ.

ಬುಕಿಂಗ್ ವಿಂಡೋ ತೆರೆದ ತಕ್ಷಣದ ಅವಧಿಯಲ್ಲಿ ಬೃಹತ್ ಬುಕಿಂಗ್‌ಗಳನ್ನು ತಡೆಯುವುದು ನಿರ್ಬಂಧಗಳ ಉದ್ದೇಶವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಅಪ್ರಬುದ್ಧ ನಡೆ ಎಂದು ಹೇಳಿದ್ದಾರೆ. “ತತ್ಕಾಲ್ ಟಿಕೆಟ್ ಪ್ರಾರಂಭವಾದ ಐದು ನಿಮಿಷಗಳಲ್ಲಿ ಮುಗಿದು ಹೋಗುತ್ತದೆ. ಅಂತದ್ದರಲ್ಲಿ ಒಟಿಪಿ ಬಂದು ಬುಕ್ ಮಾಡುವಷ್ಟರಲ್ಲಿ ಇದು ಇನ್ನಷ್ಟು ಅಧ್ವಾನ ಸೃಷ್ಟಿಯಾಗುತ್ತದೆ. ವಂಚನೆ ಮಾಡುವವರು ಎಲ್ಲದಕ್ಕೂ ಒಂದು ದಾರಿಯನ್ನು ಸೃಷ್ಟಿ ಮಾಡಿಕೊಂಡಿರುತ್ತಾರೆ. ಆದರೆ ಇದರಿಂದ ತೊಂದರೆಗೆ ಒಳಗಾಗುವುದು ಸಾಮಾನ್ಯ ಜನರು ಮಾತ್ರವೆ” ಎಂದು ಹೇಳಿದ್ದಾರೆ.

ಈಗಾಗಲೆ ಸರ್ಕಾರಿ ವ್ಯವಸ್ಥೆಯಲ್ಲಿ ಒಂದೊಂದು ಒಟಿಪಿ ಬರಲು ಕೆಲವೊಮ್ಮ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿಯಿದೆ. ಅಂತದ್ದರಲ್ಲಿ ಟಿಕೆಟ್ ಬುಕ್‌ ಮಾಡಲು ಕೂಡಾ ಒಟಿಪಿ ಕೇಳುವುದು ಅನ್ಯಾಯ. ಅಷ್ಟಕ್ಕೂ ಈ ದೇಶದ 93% ಜನರಿಗಷ್ಟೆ ಆಧಾರ್ ಇವೆ. ಇಲ್ಲದವರಿಗೆ ತತ್ಕಾಲ್ ಬುಕ್‌ ಮಾಡಲು ಅವಕಾಶ ನೀಡದಿರುವುದು ಅಸಮಾನತೆ ಅಲ್ಲವೆ? ಸರ್ಕಾರದ ಈ ಕ್ರಮವು ಜನಸಾಮಾನ್ಯರನ್ನು ರೈಲ್ವೆಯಿಂದ ದೂರ ಸರಿಸುವ ಅದರ ಅಜೆಂಡಾದ ಭಾಗ ಎಂದು ಸಾಮಾಜಿಕ ಮಾದ್ಯಮ ಬಳಕೆದಾರರೊಬ್ಬರು ಹೇಳಿದ್ದಾರೆ. ಜುಲೈ 1 ರಿಂದ ಆಧಾರ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...