Homeಮುಖಪುಟಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

ಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

- Advertisement -
- Advertisement -

ಜುಲೈ 1 ರಿಂದ ಆಧಾರ್-ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ರೈಲು ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜುಲೈ 15 ರಿಂದ ಆನ್‌ಲೈನ್‌ನಲ್ಲಿ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಆಧಾರ್ ಆಧಾರಿತ OTP ದೃಢೀಕರಣವು ಕಡ್ಡಾಯವಾಗಲಿದೆ. ಜುಲೈ 1 ರಿಂದ ಆಧಾರ್

ಪ್ರಯಾಣದ ದಿನಾಂಕಕ್ಕಿಂತ ಒಂದು ದಿನ ಮೊದಲು ರೈಲು ಟಿಕೆಟ್‌ಗಳನ್ನು ಬುಕ್ ಮಾಡುವ ವ್ಯವಸ್ಥೆಯಾಗಿದೆ ತತ್ಕಾಲ್. ಈ ವ್ಯವಸ್ಥೆಯು ಕೊನೆ ಕ್ಷಣದಲ್ಲಿ ಪ್ರಯಾಣವನ್ನು ಯೋಜಿಸುವವರಿಗೆ ಸಹಾಯ ಮಾಡುತ್ತದೆ.

“ಸಿಸ್ಟಮ್-ರಚಿತ OTP ಯ ದೃಢೀಕರಣದ ನಂತರವೇ ಭಾರತೀಯ ರೈಲ್ವೆಗಳು/ಅಧಿಕೃತ ಏಜೆಂಟ್‌ಗಳ ಗಣಕೀಕೃತ PRS (ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್) ಕೌಂಟರ್‌ಗಳ ಮೂಲಕ ಬುಕಿಂಗ್ ಮಾಡಲು ತತ್ಕಾಲ್ ಟಿಕೆಟ್‌ಗಳು ಲಭ್ಯವಿರುತ್ತವೆ. ಇದನ್ನು ಬಳಕೆದಾರರು ಬುಕಿಂಗ್ ಸಮಯದಲ್ಲಿ ಒದಗಿಸಿದ ಮೊಬೈಲ್ ಸಂಖ್ಯೆಯ ಮೂಲಕ ಕಳುಹಿಸಲಾಗುತ್ತದೆ.” ಎಂದು ರೈಲ್ವೆ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಹೇಳಿದೆ. ಈ ನಿಬಂಧನೆಯು ಜುಲೈ 15 ರಿಂದ ಜಾರಿಗೆ ಬರಲಿದೆ.

ಎಸಿ ಮತ್ತು ಎಸಿ ಅಲ್ಲದ ಎರಡೂ ಕ್ಲಾಸ್‌ಗಳಿಗೆ ತತ್ಕಾಲ್ ಬುಕಿಂಗ್ ಪ್ರಾಂಭವಾದ ಮೊದಲ 30 ನಿಮಿಷಗಳಲ್ಲಿ ಯಾವುದೇ ಏಜೆಂಟ್‌ಗೆ ಬುಕಿಂಗ್‌ಗಳನ್ನು ಅನುಮತಿಸಲಾಗುವುದಿಲ್ಲ ಎಂದು ರೈಲ್ವೆ ನಿರ್ಧರಿಸಿದೆ. ನಿರ್ಧಾರವನ್ನು ದೃಢೀಕರಿಸಿರುವ ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು, ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿನ ಮಾರ್ಪಾಡುಗಳು ಬಳಕೆದಾರರ ದೃಢೀಕರಣವನ್ನು ಹೆಚ್ಚಿಸುವ ಮತ್ತು ಮೋಸದ ಏಜೆಂಟ್‌ಗಳಿಂದ ದುರುಪಯೋಗವನ್ನು ತಡೆಯುವ ಗುರಿಯನ್ನು ಹೊಂದಿವೆ ಎಂದು ಹೇಳಿದ್ದಾರೆ.

ಸಚಿವಾಲಯವು ಹೊಸ ಕಾರ್ಯವಿಧಾನವನ್ನು ವಿವರಿಸುತ್ತಾ, “ಈ ವರ್ಷ ಜುಲೈ 15 ರಿಂದ ಆನ್‌ಲೈನ್‌ನಲ್ಲಿ ಮಾಡುವ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯವಾಗಲಿದೆ.” ಎಂದು ಹೇಳಿದೆ. ಹವಾನಿಯಂತ್ರಿತ ಕ್ಲಾಸ್‌ಗಳಿಗೆ ಬೆಳಿಗ್ಗೆ 10 ರಿಂದ ಬೆಳಿಗ್ಗೆ 10.30 ರವರೆಗೆ ಮತ್ತು ಹವಾನಿಯಂತ್ರಿತವಲ್ಲದ ಕ್ಲಾಸ್‌ಗಳಿಗೆ ಬೆಳಿಗ್ಗೆ 11 ರಿಂದ ಬೆಳಿಗ್ಗೆ 11.30 ರವರೆಗೆ ನಿರ್ಬಂಧಗಳು ಅನ್ವಯಿಸುತ್ತವೆ.

ಬುಕಿಂಗ್ ವಿಂಡೋ ತೆರೆದ ತಕ್ಷಣದ ಅವಧಿಯಲ್ಲಿ ಬೃಹತ್ ಬುಕಿಂಗ್‌ಗಳನ್ನು ತಡೆಯುವುದು ನಿರ್ಬಂಧಗಳ ಉದ್ದೇಶವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಅಪ್ರಬುದ್ಧ ನಡೆ ಎಂದು ಹೇಳಿದ್ದಾರೆ. “ತತ್ಕಾಲ್ ಟಿಕೆಟ್ ಪ್ರಾರಂಭವಾದ ಐದು ನಿಮಿಷಗಳಲ್ಲಿ ಮುಗಿದು ಹೋಗುತ್ತದೆ. ಅಂತದ್ದರಲ್ಲಿ ಒಟಿಪಿ ಬಂದು ಬುಕ್ ಮಾಡುವಷ್ಟರಲ್ಲಿ ಇದು ಇನ್ನಷ್ಟು ಅಧ್ವಾನ ಸೃಷ್ಟಿಯಾಗುತ್ತದೆ. ವಂಚನೆ ಮಾಡುವವರು ಎಲ್ಲದಕ್ಕೂ ಒಂದು ದಾರಿಯನ್ನು ಸೃಷ್ಟಿ ಮಾಡಿಕೊಂಡಿರುತ್ತಾರೆ. ಆದರೆ ಇದರಿಂದ ತೊಂದರೆಗೆ ಒಳಗಾಗುವುದು ಸಾಮಾನ್ಯ ಜನರು ಮಾತ್ರವೆ” ಎಂದು ಹೇಳಿದ್ದಾರೆ.

ಈಗಾಗಲೆ ಸರ್ಕಾರಿ ವ್ಯವಸ್ಥೆಯಲ್ಲಿ ಒಂದೊಂದು ಒಟಿಪಿ ಬರಲು ಕೆಲವೊಮ್ಮ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿಯಿದೆ. ಅಂತದ್ದರಲ್ಲಿ ಟಿಕೆಟ್ ಬುಕ್‌ ಮಾಡಲು ಕೂಡಾ ಒಟಿಪಿ ಕೇಳುವುದು ಅನ್ಯಾಯ. ಅಷ್ಟಕ್ಕೂ ಈ ದೇಶದ 93% ಜನರಿಗಷ್ಟೆ ಆಧಾರ್ ಇವೆ. ಇಲ್ಲದವರಿಗೆ ತತ್ಕಾಲ್ ಬುಕ್‌ ಮಾಡಲು ಅವಕಾಶ ನೀಡದಿರುವುದು ಅಸಮಾನತೆ ಅಲ್ಲವೆ? ಸರ್ಕಾರದ ಈ ಕ್ರಮವು ಜನಸಾಮಾನ್ಯರನ್ನು ರೈಲ್ವೆಯಿಂದ ದೂರ ಸರಿಸುವ ಅದರ ಅಜೆಂಡಾದ ಭಾಗ ಎಂದು ಸಾಮಾಜಿಕ ಮಾದ್ಯಮ ಬಳಕೆದಾರರೊಬ್ಬರು ಹೇಳಿದ್ದಾರೆ. ಜುಲೈ 1 ರಿಂದ ಆಧಾರ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...