Homeಮುಖಪುಟಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

ಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

- Advertisement -
- Advertisement -

ಜುಲೈ 1 ರಿಂದ ಆಧಾರ್-ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ರೈಲು ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜುಲೈ 15 ರಿಂದ ಆನ್‌ಲೈನ್‌ನಲ್ಲಿ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಆಧಾರ್ ಆಧಾರಿತ OTP ದೃಢೀಕರಣವು ಕಡ್ಡಾಯವಾಗಲಿದೆ. ಜುಲೈ 1 ರಿಂದ ಆಧಾರ್

ಪ್ರಯಾಣದ ದಿನಾಂಕಕ್ಕಿಂತ ಒಂದು ದಿನ ಮೊದಲು ರೈಲು ಟಿಕೆಟ್‌ಗಳನ್ನು ಬುಕ್ ಮಾಡುವ ವ್ಯವಸ್ಥೆಯಾಗಿದೆ ತತ್ಕಾಲ್. ಈ ವ್ಯವಸ್ಥೆಯು ಕೊನೆ ಕ್ಷಣದಲ್ಲಿ ಪ್ರಯಾಣವನ್ನು ಯೋಜಿಸುವವರಿಗೆ ಸಹಾಯ ಮಾಡುತ್ತದೆ.

“ಸಿಸ್ಟಮ್-ರಚಿತ OTP ಯ ದೃಢೀಕರಣದ ನಂತರವೇ ಭಾರತೀಯ ರೈಲ್ವೆಗಳು/ಅಧಿಕೃತ ಏಜೆಂಟ್‌ಗಳ ಗಣಕೀಕೃತ PRS (ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್) ಕೌಂಟರ್‌ಗಳ ಮೂಲಕ ಬುಕಿಂಗ್ ಮಾಡಲು ತತ್ಕಾಲ್ ಟಿಕೆಟ್‌ಗಳು ಲಭ್ಯವಿರುತ್ತವೆ. ಇದನ್ನು ಬಳಕೆದಾರರು ಬುಕಿಂಗ್ ಸಮಯದಲ್ಲಿ ಒದಗಿಸಿದ ಮೊಬೈಲ್ ಸಂಖ್ಯೆಯ ಮೂಲಕ ಕಳುಹಿಸಲಾಗುತ್ತದೆ.” ಎಂದು ರೈಲ್ವೆ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಹೇಳಿದೆ. ಈ ನಿಬಂಧನೆಯು ಜುಲೈ 15 ರಿಂದ ಜಾರಿಗೆ ಬರಲಿದೆ.

ಎಸಿ ಮತ್ತು ಎಸಿ ಅಲ್ಲದ ಎರಡೂ ಕ್ಲಾಸ್‌ಗಳಿಗೆ ತತ್ಕಾಲ್ ಬುಕಿಂಗ್ ಪ್ರಾಂಭವಾದ ಮೊದಲ 30 ನಿಮಿಷಗಳಲ್ಲಿ ಯಾವುದೇ ಏಜೆಂಟ್‌ಗೆ ಬುಕಿಂಗ್‌ಗಳನ್ನು ಅನುಮತಿಸಲಾಗುವುದಿಲ್ಲ ಎಂದು ರೈಲ್ವೆ ನಿರ್ಧರಿಸಿದೆ. ನಿರ್ಧಾರವನ್ನು ದೃಢೀಕರಿಸಿರುವ ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು, ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿನ ಮಾರ್ಪಾಡುಗಳು ಬಳಕೆದಾರರ ದೃಢೀಕರಣವನ್ನು ಹೆಚ್ಚಿಸುವ ಮತ್ತು ಮೋಸದ ಏಜೆಂಟ್‌ಗಳಿಂದ ದುರುಪಯೋಗವನ್ನು ತಡೆಯುವ ಗುರಿಯನ್ನು ಹೊಂದಿವೆ ಎಂದು ಹೇಳಿದ್ದಾರೆ.

ಸಚಿವಾಲಯವು ಹೊಸ ಕಾರ್ಯವಿಧಾನವನ್ನು ವಿವರಿಸುತ್ತಾ, “ಈ ವರ್ಷ ಜುಲೈ 15 ರಿಂದ ಆನ್‌ಲೈನ್‌ನಲ್ಲಿ ಮಾಡುವ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯವಾಗಲಿದೆ.” ಎಂದು ಹೇಳಿದೆ. ಹವಾನಿಯಂತ್ರಿತ ಕ್ಲಾಸ್‌ಗಳಿಗೆ ಬೆಳಿಗ್ಗೆ 10 ರಿಂದ ಬೆಳಿಗ್ಗೆ 10.30 ರವರೆಗೆ ಮತ್ತು ಹವಾನಿಯಂತ್ರಿತವಲ್ಲದ ಕ್ಲಾಸ್‌ಗಳಿಗೆ ಬೆಳಿಗ್ಗೆ 11 ರಿಂದ ಬೆಳಿಗ್ಗೆ 11.30 ರವರೆಗೆ ನಿರ್ಬಂಧಗಳು ಅನ್ವಯಿಸುತ್ತವೆ.

ಬುಕಿಂಗ್ ವಿಂಡೋ ತೆರೆದ ತಕ್ಷಣದ ಅವಧಿಯಲ್ಲಿ ಬೃಹತ್ ಬುಕಿಂಗ್‌ಗಳನ್ನು ತಡೆಯುವುದು ನಿರ್ಬಂಧಗಳ ಉದ್ದೇಶವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಅಪ್ರಬುದ್ಧ ನಡೆ ಎಂದು ಹೇಳಿದ್ದಾರೆ. “ತತ್ಕಾಲ್ ಟಿಕೆಟ್ ಪ್ರಾರಂಭವಾದ ಐದು ನಿಮಿಷಗಳಲ್ಲಿ ಮುಗಿದು ಹೋಗುತ್ತದೆ. ಅಂತದ್ದರಲ್ಲಿ ಒಟಿಪಿ ಬಂದು ಬುಕ್ ಮಾಡುವಷ್ಟರಲ್ಲಿ ಇದು ಇನ್ನಷ್ಟು ಅಧ್ವಾನ ಸೃಷ್ಟಿಯಾಗುತ್ತದೆ. ವಂಚನೆ ಮಾಡುವವರು ಎಲ್ಲದಕ್ಕೂ ಒಂದು ದಾರಿಯನ್ನು ಸೃಷ್ಟಿ ಮಾಡಿಕೊಂಡಿರುತ್ತಾರೆ. ಆದರೆ ಇದರಿಂದ ತೊಂದರೆಗೆ ಒಳಗಾಗುವುದು ಸಾಮಾನ್ಯ ಜನರು ಮಾತ್ರವೆ” ಎಂದು ಹೇಳಿದ್ದಾರೆ.

ಈಗಾಗಲೆ ಸರ್ಕಾರಿ ವ್ಯವಸ್ಥೆಯಲ್ಲಿ ಒಂದೊಂದು ಒಟಿಪಿ ಬರಲು ಕೆಲವೊಮ್ಮ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿಯಿದೆ. ಅಂತದ್ದರಲ್ಲಿ ಟಿಕೆಟ್ ಬುಕ್‌ ಮಾಡಲು ಕೂಡಾ ಒಟಿಪಿ ಕೇಳುವುದು ಅನ್ಯಾಯ. ಅಷ್ಟಕ್ಕೂ ಈ ದೇಶದ 93% ಜನರಿಗಷ್ಟೆ ಆಧಾರ್ ಇವೆ. ಇಲ್ಲದವರಿಗೆ ತತ್ಕಾಲ್ ಬುಕ್‌ ಮಾಡಲು ಅವಕಾಶ ನೀಡದಿರುವುದು ಅಸಮಾನತೆ ಅಲ್ಲವೆ? ಸರ್ಕಾರದ ಈ ಕ್ರಮವು ಜನಸಾಮಾನ್ಯರನ್ನು ರೈಲ್ವೆಯಿಂದ ದೂರ ಸರಿಸುವ ಅದರ ಅಜೆಂಡಾದ ಭಾಗ ಎಂದು ಸಾಮಾಜಿಕ ಮಾದ್ಯಮ ಬಳಕೆದಾರರೊಬ್ಬರು ಹೇಳಿದ್ದಾರೆ. ಜುಲೈ 1 ರಿಂದ ಆಧಾರ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...