Homeಮುಖಪುಟಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

ಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್‌!

- Advertisement -
- Advertisement -

ಜುಲೈ 1 ರಿಂದ ಆಧಾರ್-ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ರೈಲು ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜುಲೈ 15 ರಿಂದ ಆನ್‌ಲೈನ್‌ನಲ್ಲಿ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಆಧಾರ್ ಆಧಾರಿತ OTP ದೃಢೀಕರಣವು ಕಡ್ಡಾಯವಾಗಲಿದೆ. ಜುಲೈ 1 ರಿಂದ ಆಧಾರ್

ಪ್ರಯಾಣದ ದಿನಾಂಕಕ್ಕಿಂತ ಒಂದು ದಿನ ಮೊದಲು ರೈಲು ಟಿಕೆಟ್‌ಗಳನ್ನು ಬುಕ್ ಮಾಡುವ ವ್ಯವಸ್ಥೆಯಾಗಿದೆ ತತ್ಕಾಲ್. ಈ ವ್ಯವಸ್ಥೆಯು ಕೊನೆ ಕ್ಷಣದಲ್ಲಿ ಪ್ರಯಾಣವನ್ನು ಯೋಜಿಸುವವರಿಗೆ ಸಹಾಯ ಮಾಡುತ್ತದೆ.

“ಸಿಸ್ಟಮ್-ರಚಿತ OTP ಯ ದೃಢೀಕರಣದ ನಂತರವೇ ಭಾರತೀಯ ರೈಲ್ವೆಗಳು/ಅಧಿಕೃತ ಏಜೆಂಟ್‌ಗಳ ಗಣಕೀಕೃತ PRS (ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್) ಕೌಂಟರ್‌ಗಳ ಮೂಲಕ ಬುಕಿಂಗ್ ಮಾಡಲು ತತ್ಕಾಲ್ ಟಿಕೆಟ್‌ಗಳು ಲಭ್ಯವಿರುತ್ತವೆ. ಇದನ್ನು ಬಳಕೆದಾರರು ಬುಕಿಂಗ್ ಸಮಯದಲ್ಲಿ ಒದಗಿಸಿದ ಮೊಬೈಲ್ ಸಂಖ್ಯೆಯ ಮೂಲಕ ಕಳುಹಿಸಲಾಗುತ್ತದೆ.” ಎಂದು ರೈಲ್ವೆ ಸಚಿವಾಲಯದ ಪತ್ರಿಕಾ ಪ್ರಕಟಣೆಯು ಹೇಳಿದೆ. ಈ ನಿಬಂಧನೆಯು ಜುಲೈ 15 ರಿಂದ ಜಾರಿಗೆ ಬರಲಿದೆ.

ಎಸಿ ಮತ್ತು ಎಸಿ ಅಲ್ಲದ ಎರಡೂ ಕ್ಲಾಸ್‌ಗಳಿಗೆ ತತ್ಕಾಲ್ ಬುಕಿಂಗ್ ಪ್ರಾಂಭವಾದ ಮೊದಲ 30 ನಿಮಿಷಗಳಲ್ಲಿ ಯಾವುದೇ ಏಜೆಂಟ್‌ಗೆ ಬುಕಿಂಗ್‌ಗಳನ್ನು ಅನುಮತಿಸಲಾಗುವುದಿಲ್ಲ ಎಂದು ರೈಲ್ವೆ ನಿರ್ಧರಿಸಿದೆ. ನಿರ್ಧಾರವನ್ನು ದೃಢೀಕರಿಸಿರುವ ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು, ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿನ ಮಾರ್ಪಾಡುಗಳು ಬಳಕೆದಾರರ ದೃಢೀಕರಣವನ್ನು ಹೆಚ್ಚಿಸುವ ಮತ್ತು ಮೋಸದ ಏಜೆಂಟ್‌ಗಳಿಂದ ದುರುಪಯೋಗವನ್ನು ತಡೆಯುವ ಗುರಿಯನ್ನು ಹೊಂದಿವೆ ಎಂದು ಹೇಳಿದ್ದಾರೆ.

ಸಚಿವಾಲಯವು ಹೊಸ ಕಾರ್ಯವಿಧಾನವನ್ನು ವಿವರಿಸುತ್ತಾ, “ಈ ವರ್ಷ ಜುಲೈ 15 ರಿಂದ ಆನ್‌ಲೈನ್‌ನಲ್ಲಿ ಮಾಡುವ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯವಾಗಲಿದೆ.” ಎಂದು ಹೇಳಿದೆ. ಹವಾನಿಯಂತ್ರಿತ ಕ್ಲಾಸ್‌ಗಳಿಗೆ ಬೆಳಿಗ್ಗೆ 10 ರಿಂದ ಬೆಳಿಗ್ಗೆ 10.30 ರವರೆಗೆ ಮತ್ತು ಹವಾನಿಯಂತ್ರಿತವಲ್ಲದ ಕ್ಲಾಸ್‌ಗಳಿಗೆ ಬೆಳಿಗ್ಗೆ 11 ರಿಂದ ಬೆಳಿಗ್ಗೆ 11.30 ರವರೆಗೆ ನಿರ್ಬಂಧಗಳು ಅನ್ವಯಿಸುತ್ತವೆ.

ಬುಕಿಂಗ್ ವಿಂಡೋ ತೆರೆದ ತಕ್ಷಣದ ಅವಧಿಯಲ್ಲಿ ಬೃಹತ್ ಬುಕಿಂಗ್‌ಗಳನ್ನು ತಡೆಯುವುದು ನಿರ್ಬಂಧಗಳ ಉದ್ದೇಶವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಅಪ್ರಬುದ್ಧ ನಡೆ ಎಂದು ಹೇಳಿದ್ದಾರೆ. “ತತ್ಕಾಲ್ ಟಿಕೆಟ್ ಪ್ರಾರಂಭವಾದ ಐದು ನಿಮಿಷಗಳಲ್ಲಿ ಮುಗಿದು ಹೋಗುತ್ತದೆ. ಅಂತದ್ದರಲ್ಲಿ ಒಟಿಪಿ ಬಂದು ಬುಕ್ ಮಾಡುವಷ್ಟರಲ್ಲಿ ಇದು ಇನ್ನಷ್ಟು ಅಧ್ವಾನ ಸೃಷ್ಟಿಯಾಗುತ್ತದೆ. ವಂಚನೆ ಮಾಡುವವರು ಎಲ್ಲದಕ್ಕೂ ಒಂದು ದಾರಿಯನ್ನು ಸೃಷ್ಟಿ ಮಾಡಿಕೊಂಡಿರುತ್ತಾರೆ. ಆದರೆ ಇದರಿಂದ ತೊಂದರೆಗೆ ಒಳಗಾಗುವುದು ಸಾಮಾನ್ಯ ಜನರು ಮಾತ್ರವೆ” ಎಂದು ಹೇಳಿದ್ದಾರೆ.

ಈಗಾಗಲೆ ಸರ್ಕಾರಿ ವ್ಯವಸ್ಥೆಯಲ್ಲಿ ಒಂದೊಂದು ಒಟಿಪಿ ಬರಲು ಕೆಲವೊಮ್ಮ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿಯಿದೆ. ಅಂತದ್ದರಲ್ಲಿ ಟಿಕೆಟ್ ಬುಕ್‌ ಮಾಡಲು ಕೂಡಾ ಒಟಿಪಿ ಕೇಳುವುದು ಅನ್ಯಾಯ. ಅಷ್ಟಕ್ಕೂ ಈ ದೇಶದ 93% ಜನರಿಗಷ್ಟೆ ಆಧಾರ್ ಇವೆ. ಇಲ್ಲದವರಿಗೆ ತತ್ಕಾಲ್ ಬುಕ್‌ ಮಾಡಲು ಅವಕಾಶ ನೀಡದಿರುವುದು ಅಸಮಾನತೆ ಅಲ್ಲವೆ? ಸರ್ಕಾರದ ಈ ಕ್ರಮವು ಜನಸಾಮಾನ್ಯರನ್ನು ರೈಲ್ವೆಯಿಂದ ದೂರ ಸರಿಸುವ ಅದರ ಅಜೆಂಡಾದ ಭಾಗ ಎಂದು ಸಾಮಾಜಿಕ ಮಾದ್ಯಮ ಬಳಕೆದಾರರೊಬ್ಬರು ಹೇಳಿದ್ದಾರೆ. ಜುಲೈ 1 ರಿಂದ ಆಧಾರ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ಪಾಕಿಸ್ತಾನ ಪರ ಬೇಹುಗಾರಿಕೆ | ಬಂಧಿತ ಯೂಟ್ಯೂಬರ್‌ ಜ್ಯೋತಿ ಜಾಮೀನು ಅರ್ಜಿ ತಿರಸ್ಕೃತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...