Homeಕರ್ನಾಟಕತೆರಿಗೆ ಎಫೆಕ್ಟ್‌; ಪರದೆ ಮುಚ್ಚಲಿದೆ ಮೈಸೂರಿನ ‘ಸರಸ್ವತಿ’ ಚಿತ್ರಮಂದಿರ?

ತೆರಿಗೆ ಎಫೆಕ್ಟ್‌; ಪರದೆ ಮುಚ್ಚಲಿದೆ ಮೈಸೂರಿನ ‘ಸರಸ್ವತಿ’ ಚಿತ್ರಮಂದಿರ?

ಕೋವಿಡ್‌ ಬಿಕ್ಕಟ್ಟಿನ ಬಳಿಕ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಚಿತ್ರಮಂದಿರ ನೇಪಥ್ಯಕ್ಕೆ ಸರಿಯುತ್ತಿದೆ. ಕಳೆದ ಒಂದೂವರೆ ವರ್ಷಗಳಲ್ಲಿ ಬಾಗಿಲು ಮುಚ್ಚಿರುವ ಚಿತ್ರಮಂದಿರಗಳ ಸಂಖ್ಯೆ ಮೂರಕ್ಕೇರಿದೆ.

- Advertisement -
- Advertisement -

ಕೋವಿಡ್‌ ಬಿಕ್ಕಟ್ಟಿನ ಬಳಿಕ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಚಿತ್ರಮಂದಿರ ನೇಪಥ್ಯಕ್ಕೆ ಸರಿಯುತ್ತಿದೆ. ಕಳೆದ ಒಂದೂವರೆ ವರ್ಷಗಳಲ್ಲಿ ಬಾಗಿಲು ಮುಚ್ಚಿರುವ ಚಿತ್ರಮಂದಿರಗಳ ಸಂಖ್ಯೆ ಮೂರಕ್ಕೇರಿದೆ.

ಡಾ.ರಾಜ್‌‌ಕುಮಾರ್‌ ಕುಟುಂಬಕ್ಕೆ ಆಪ್ತವಾದ ಚಿತ್ರಮಂದಿರವೆಂದೇ ಖ್ಯಾತವಾಗಿದ್ದ, ಮೈಸೂರು ಅತಿದೊಡ್ಡ ಚಿತ್ರಮಂದಿರವೆಂದೂ ಕರೆಸಿಕೊಂಡಿರುವ ಸರಸ್ವತಿ ಚಿತ್ರಮಂದಿರವನ್ನು ಮುಚ್ಚುವುದಾಗಿ ಚಿತ್ರಮಂದಿರದ ಮಾಲೀಕ ನಾರಾಯಣ್‌ ಹೇಳಿದ್ದಾರೆ.

ಒಂದೂವರೆ ವರ್ಷಗಳಲ್ಲಿ ನೇಪಥ್ಯಕ್ಕೆ ಸರಿದ ಚಿತ್ರಮಂದಿರಗಳಲ್ಲಿ ಸರಸ್ವತಿ ಚಿತ್ರಮಂದಿರ ಮೂರನೇಯದಾಗಿದ್ದು, ಈ ಮೊದಲು ಶಾಂತಲಾ ಹಾಗೂ ಲಕ್ಷ್ಮಿ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ.

ಸ್ಥಳೀಯ ಸುದ್ದಿ ವಾಹಿನಿಗಳೊಂದಿಗೆ ಮಾತನಾಡಿರುವ ನಾರಾಯಣ್‌, “ಕೊರೊನಾ ಆರಂಭವಾದಾಗಿನಿಂದ ಚಿತ್ರಮಂದಿರದಿಂದ ಯಾವುದೇ ಆದಾಯವಿಲ್ಲ. ಕಾರ್ಪೋರೇಷನ್‌ ತೆರಿಗೆ ಹೆಚ್ಚಾಗಿದೆ. ಸೂಪರ್‌ ಕಮರ್ಷಿಯಲ್‌ ಎಂದು ತೆರಿಗೆ ವಿಧಿಸುತ್ತಿದ್ದಾರೆ. ವರ್ಷಕ್ಕೆ ನಾಲ್ಕೂವರೆ ಲಕ್ಷ ರೂ. ತೆರಿಗೆ ಕಟ್ಟಬೇಕು ಎಂದರೆ ಹುಡುಗಾಟವೇ” ಎಂದು ಕೇಳಿದ್ದಾರೆ.

“ನಾವು ಪಾಲುದಾರರೇ  ಅಷ್ಟೊಂದು ಹಣವನ್ನು ತೆಗೆದುಕೊಂಡು ಹೋಗುವುದಿಲ್ಲ. ಜಿಎಸ್‌‌ಟಿ ಟ್ಯಾಕ್ಸ್‌‌ ಕೋಟಿಗಟ್ಟಲೆ ಕಟ್ಟಿದ್ದೇವೆ. ಮನರಂಜನಾ ಟ್ಯಾಕ್ಸ್‌ ಇದ್ದಾಗ ಕೋಟಿಗಟ್ಟಲೆ ಕಟ್ಟಿದ್ದೇವೆ.  ಅಷ್ಟು ದೊಡ್ಡ ಸಂಸ್ಥೆಯನ್ನು ಮುಚ್ಚುವುದು ನಮಗೂ ಬೇಸರ ತಂದಿದೆ” ಎಂದಿದ್ದಾರೆ.

ಚಿತ್ರಮಂದಿರದ ಪಾಲುದಾರರಾಗಿರುವ ಮತ್ತೊಬ್ಬರು ನಾರಾಯಣ್ ಅವರ ನಿರ್ಧಾರವನ್ನು ವಿರೋಧಿಸಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ಸಾಲು ಸಾಲು ಚಿತ್ರಮಂದಿರಗಳು ಮುಚ್ಚುತ್ತಿರುವುದನ್ನು ನೋಡಿದರೆ, ಚಿತ್ರಮಂದಿರಗಳನ್ನೇ ನಂಬಿಕೊಂಡಿದ್ದ ಜನರ ಪಾಡು ಏನಾಗಬೇಕು ಎಂಬುದನ್ನು ಸರ್ಕಾರ ಯೋಚಿಸಬೇಕು ಎನ್ನುತ್ತಾರೆ ಚಿತ್ರಮಂದಿರಗಳ ಮಾಲೀಕರು.

‘ನಾನು ಗೌರಿ’ ಮೀಡಿಯಾದೊಂದಿಗೆ ಮಾತನಾಡಿದ ನಾರಾಯಣ್‌, “ಒಂದೂವರೆ ವರ್ಷ ಯಾವುದೇ ಆದಾಯವಿಲ್ಲದಿದ್ದರೂ ಇಲ್ಲಿನ ಸಿಬ್ಬಂದಿಗೆ ಸಂಬಳ ನೀಡಿದ್ದೇವೆ. ನಾವು ಎಷ್ಟೇ ಬೇಡಿಕೆ ಇಟ್ಟರೂ ಸರ್ಕಾರ ಸ್ಪಂದಿಸುತ್ತಿಲ್ಲ” ಎಂದರು.


ಇದನ್ನೂ ಓದಿ: ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...