Homeಚಳವಳಿಅತಿ ಶ್ರೀಮಂತರ ಮೇಲೆ ತೆರಿಗೆ ವಿಧಿಸಿ, ಬಡಜನರಿಗೆ ಪರಿಹಾರ ಒದಗಿಸಿ: ರಾಜ್ಯಾದ್ಯಂತ ಜನಾಗ್ರಹ ಪ್ರತಿಭಟನೆ

ಅತಿ ಶ್ರೀಮಂತರ ಮೇಲೆ ತೆರಿಗೆ ವಿಧಿಸಿ, ಬಡಜನರಿಗೆ ಪರಿಹಾರ ಒದಗಿಸಿ: ರಾಜ್ಯಾದ್ಯಂತ ಜನಾಗ್ರಹ ಪ್ರತಿಭಟನೆ

- Advertisement -
- Advertisement -

ಕೊರೊನಾ ಎರಡನೇ ಅಲೆ ಇಳಿಯುತ್ತಿದೆ. ಆದರೆ ಜನರ ಮೇಲಿನ ಹೊರೆಗಳು ಹೆಚ್ಚಾಗುತ್ತಿವೆ. ಸತತ ಎರಡು ತಿಂಗಳ ಕರ್ಫ್ಯೂ, ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅರೆಬರೆ ಪ್ಯಾಕೇಜ್ ಘೋಷಿಸಿ ಕೈತೊಳೆದುಕೊಂಡಿದೆ. ಇಂತಹ ಅಸಾಮಾನ್ಯ ಪರಿಸ್ಥಿತಿಯಲ್ಲಿ ಸರ್ಕಾರ ಅಸಾಮಾನ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಕೂಡಲೇ ಸಮಗ್ರ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಿ ಜನಾಗ್ರಹ ಆಂದೋಲನ ವೇದಿಕೆಯು ರಾಜ್ಯಾದ್ಯಂತ ಶಾಸಕರು, ಸಚಿವರ ಮನೆ ಎದುರು ಪ್ರತಿಭಟನೆ ನಡೆಸಿದೆ.

ಬಡಜನರಿಗೆ ಸಮಗ್ರ ಪ್ಯಾಕೇಜ್‌ಗಾಗಿ ಕಳೆದ ಮೂರು ತಿಂಗಳಿನಿಂದ ಇದುವರೆಗೂ ನಾಲ್ಕು ಪ್ರತಿಭಟನೆಗಳನ್ನು ನಡೆಸಿದ್ದು, ಮುಖ್ಯಮಂತ್ರಿಗಳಿಗೆ ಮೂರು ಪತ್ರಗಳನ್ನು ಬರೆದಿದೆ. ಈಗಲಾದರೂ ಸರ್ಕಾರ ಎಚ್ಚೆತ್ತು ಜನರ ನೆರವಿಗೆ ಧಾವಿಸಬೇಕೆಂದು ಜನಾಗ್ರಹ ಆಂದೋಲನದ ಬಿ.ಟಿ ಲಲಿತಾ ನಾಯಕ್ ಒತ್ತಾಯಿಸಿದರು.

ಬೆಂಗಳೂರಿನ ವಿಜಯನಗರದಲ್ಲಿರುವ ವಸತಿ ಸಚಿವ ವಿ.ಸೋಮಣ್ಣನವರ ಮನೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಸರ್ಕಾರ ಕೇವಲ ಕಣ್ಣೋರೆಸುವ ಕೆಲಸ ಮಾಡುತ್ತಿದೆ. ಒಂದು ಸಾವಿರ ಜನರಿದ್ದರೆ ಕೇವಲ 20 ಜನರಿಗೆ ಸೌಲಭ್ಯ ಕೊಟ್ಟರೆ ಸಾಲದು. ನ್ಯಾಯಯುತವಾಗಿ ನೊಂದವರಿಗೆ ಪರಿಹಾರ ನೀಡಬೇಕು. ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು. ಇದನ್ನು ಈಡೇರಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸುತ್ತೇವೆ” ಎಂದರು.

ಕೊರೊನಾದಿಂದಾಗಿ ಎಷ್ಟೋ ಕುಟುಂಬಗಳು ಬೀದಿಪಾಲಾಗಿವೆ. ಎಷ್ಟೋ ಕುಟುಂಬಗಳು ನಾಶವಾಗಿವೆ. ಸರ್ಕಾರ ಸರಿಯಾದ ಕ್ರಮ ಕೈಗೊಂಡಿದ್ದರೆ ನಾವು ಇಂದು ಬೀದಿಗಿಳಿದು ಪ್ರತಿಭಟಿಸುವ ಅಗತ್ಯ ಬರುತ್ತಿರಲಿಲ್ಲ. ಇಂತಹ ಕಷ್ಟಕಾಲದಲ್ಲಿ ಶಾಸಕರು ಮತ್ತು ಸಚಿವರು ಏನು ಮಾಡುತ್ತಿದ್ದಾರೆ? ತನ್ನ ಕ್ಷೇತ್ರದ ಜನರಿಗಾಗಿ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಈ ಕಷ್ಟಕಾಲದಲ್ಲಿಯೂ ಪೆಟ್ರೋಲ್, ಎಣ್ಣೆ ಮತ್ತು ದವಸಧಾನ್ಯಗಳ ಬೆಲೆ ಏರಿಸಲಾಗುತ್ತಿದೆ. ಈ ಸರ್ಕಾರಕ್ಕೆ ಕನಿಷ್ಠ ಮಾನವೀಯತೆ ಇಲ್ಲವೇ? ಲಸಿಕೆ ವಿಷಯದಲ್ಲಿಯೂ ಭ್ರಷ್ಟಾಚಾರ ಮಾಡುತ್ತಿವೆ. ಇದನ್ನು ಕೂಡಲೇ ನಿಲ್ಲಿಸಿ ಜನಪರವಾಗಿ ನಿಲ್ಲಬೇಕೆಂದು ಒತ್ತಾಯಿಸಿದರು.

ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್‌ರವರು ಮಾತನಾಡಿ, “ನಾವು ಇದುವರೆಗೆ ಮೂರು ಸುತ್ತಿನಲ್ಲಿ ಹೋರಾಟ ನಡೆಸಿದ್ದೇವೆ. ಇಂದು ನಾಲ್ಕನೇ ಬಾರೀ ಹೋರಾಟಕ್ಕಿಳಿದ್ದಿದ್ದೇವೆ. ಏಕೆಂದರೆ ಸರ್ಕಾರ ಕೋವಿಡ್‌ ಅನ್ನು ಇಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ. ತಜ್ಞರು ಎರಡನೇ ಅಲೆ ಬಗ್ಗೆ ಎಚ್ಚರಿಸಿದ್ದರೂ ಸಹ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ ಎಂಬುದಕ್ಕೆ ನೆಲಮಂಗಲದಲ್ಲಿದ್ದ 10000 ಬೆಡ್‌ಗಳ ಕೋವಿಡ್‌ ಕೇರ್ ಸೆಂಟರ್ ಅನ್ನು ಮುಚ್ಚಿದ್ದೆ ಸಾಕ್ಷಿ” ಎಂದು ಕಿಡಿಕಾರಿದರು.

ಜನ ಉಸಿರಿಗಾಗಿ ಒದ್ದಾಡುತ್ತಿದ್ದರೂ ಸರ್ಕಾರ ತಲೆಕೆಡಿಸಿಕೊಳ್ಳಲಿಲ್ಲ. ಲಾಕ್‌ಡೌನ್ ಎಂಬುದು ಅನಿವಾರ್ಯ ಕ್ರಮವೇ ಹೊರತು ಅಗತ್ಯ ಕ್ರಮವಲ್ಲ. ಹಾಗಾಗಿ ಲಾಕ್‌ಡೌನ್ ಅವಧಿಯನ್ನು ಕಡಿಮೆ ಮಾಡಬೇಕು. ಹಾಗೆ ಮಾಡಬೇಕಾದರೆ ನಮ್ಮ ವೈದ್ಯಕೀಯ ವ್ಯವಸ್ಥೆಯನ್ನು ಸಜ್ಜುಗೊಳಿಸಬೇಕು. ಅದನ್ನು ಮಾಡಲು ಸರ್ಕಾರ ಮುಂದಾಗಲಿಲ್ಲ. ಬಡಜನರಿಗೆ ಕನಿಷ್ಟ 5 ಸಾವಿರ ಕೊಡಿ ಎಂದು ನಾವು ಒತ್ತಾಯಿಸಿದ್ದರು ಸರ್ಕಾರ ಮುಂದಾಗಿರದಿರುವುದು ದುರಾದೃಷ್ಟಕರ ಎಂದರು.

ನಮ್ಮೆಲ್ಲರ ಒತ್ತಾಯದಿಂದ ಅಸಂಘಟಿತ ಕಾರ್ಮಿಕರಿಗೆ 2 ಸಾವಿರ ಕೊಡುವುದು, ಒಂದಷ್ಟು ರೇಷನ್ ಕಿಟ್ ಕೊಡುವ ಅರೆ ಬರೆ ಕೆಲಸಗಳನ್ನು ಸರ್ಕಾರ ಮಾಡುತ್ತಿದೆ. ಆದರೆ ಈಗ ಮೂರನೇ ಅಲೆ ಬರುವ ಅಪಾಯವಿದೆ. ಅದು ಮಕ್ಕಳನ್ನು ಬಾಧಿಸುವ ಸಾಧ್ಯತೆಯಿದೆ. ಈಗ ಏನು ಮಾಡೋಣ? ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಜನರು ಏನು ಮಾಡಬೇಕು? ಇಂತ ಸಮಯದಲ್ಲಿ ಏಕೆ ಕಾರ್ಪೋರೇಟ್ ಶ್ರೀಮಂತರ ಮೇಲೆ ತೆರಿಗೆ ಹಾಕುತ್ತಿಲ್ಲ? ಏಕೆ ಕೇಂದ್ರ ಸರ್ಕಾರ ನಮ್ಮ ಪಾಲಿನ ಹಣ ಕೊಡುತ್ತಿಲ್ಲ ಎಂದು ಕೇಳುತ್ತಿಲ್ಲ ಎಂದು ಕಿಡಿಕಾರಿದರು. ನಂತರ ಹೋರಾಟಗಾರರ ನಿಯೋಗವು ವಿ.ಸೋಮಣ್ಣನವರನ್ನು ಭೇಟಿ ಮಾಡಿ ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು.

ರಾಜ್ಯಾದ್ಯಂತ ಹಲವಾರು ಶಾಸಕರ ಮನೆ ಮುಂದೆ ಖಾಲಿ ಚೀಲಗಳನ್ನು ಸುಟ್ಟು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಶಾಸಕರ ಕಛೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಸುಮಾರು 100 ಜನರು ಭಾಗವಹಿಸಿದ್ದರು. ಕಾರ್ಕಳ ಶಾಸಕರ ಕಛೇರಿ ಬಳಿ ಪ್ರತಿಭಟನೆಗಾಗಿ ಪ್ರತಿಭಟನಾಕಾರರು ಸಾಗುತ್ತಿದ್ದಾಗ, ಪೋಲೀಸರು ತಡೆದ ಕಾರಣ ಶಾಸಕರ ಕಛೇರಿಗೆ ಸಮೀಪದಲ್ಲೇ ದಾರಿಮಧ್ಯೆ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರ ಮದ್ಯೆ ಮಾತಿನ ಚಕಮಕಿ ನಡೆಯಿತು.

ಬೆಳಗಾವಿ ಜಿಲ್ಲೆಯಲ್ಲಿ ಜನಾಗ್ರಹ ಆಂದೋಲನ ವತಿಯಿಂದ ಖಾಲಿ ಚೀಲವನ್ನು ಸುಟ್ಟು ಪ್ರತಿಭಟನೆ ನಡೆಸಲಾಯಿತು ಮತ್ತು ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಕೃಷಿಯ ಸಮಾಜದ ರಾಜ್ಯಾಧ್ಯಕ್ಷರಾದ ಸಿದ್ದಗೌಡ ಮೋದಗಿ, ಕರ್ನಾಟಕ ಜನಶಕ್ತಿಯ ರವಿ ಪಾಟೀಲ್, ರಮೇಶ್ ವಾಲಿ, ವಿಠ್ಠಲ್ ಬಂಗೂಡಿ, ಶಂಕರ್ ಮುಗುಳಿ, ಪ್ರಕಾಶ್ ಕಾಗಿ, ಯಾಸಿನ್ ಮಕಂದರ್ ಮತ್ತಿತರರಿದ್ದರು.

ತುಮಕೂರು ನಗರ ಶಾಸಕರ ಜ್ಯೋತಿ ಗಣೇಶ್ ರವರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಲಾಯಿತು. ಇದೇ ರೀತಿಯಲ್ಲಿ ಶಿವಮೊಗ್ಗ, ವಿಜಯಪುರ, ವಿಜಯನಗರ, ಮಂಡ್ಯ, ಚಿತ್ರದುರ್ಗ ಸೇರಿದಂತೆ ರಾಜ್ಯದ ನೂರಾರು ಕಡೆ ಸಚಿವರು, ಶಾಸಕರ ಮನೆ ಮುಂದೆ ಪ್ರತಿಭಟನೆಗಳು ನಡೆದಿವೆ. ಅದರ ಕೆಲವು ಚಿತ್ರಗಳು ಕೆಳಗಿನಂತಿವೆ.


ಇದನ್ನೂ ಓದಿ: ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...