Homeಚಳವಳಿಅತಿ ಶ್ರೀಮಂತರ ಮೇಲೆ ತೆರಿಗೆ ವಿಧಿಸಿ, ಬಡಜನರಿಗೆ ಪರಿಹಾರ ಒದಗಿಸಿ: ರಾಜ್ಯಾದ್ಯಂತ ಜನಾಗ್ರಹ ಪ್ರತಿಭಟನೆ

ಅತಿ ಶ್ರೀಮಂತರ ಮೇಲೆ ತೆರಿಗೆ ವಿಧಿಸಿ, ಬಡಜನರಿಗೆ ಪರಿಹಾರ ಒದಗಿಸಿ: ರಾಜ್ಯಾದ್ಯಂತ ಜನಾಗ್ರಹ ಪ್ರತಿಭಟನೆ

- Advertisement -
- Advertisement -

ಕೊರೊನಾ ಎರಡನೇ ಅಲೆ ಇಳಿಯುತ್ತಿದೆ. ಆದರೆ ಜನರ ಮೇಲಿನ ಹೊರೆಗಳು ಹೆಚ್ಚಾಗುತ್ತಿವೆ. ಸತತ ಎರಡು ತಿಂಗಳ ಕರ್ಫ್ಯೂ, ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅರೆಬರೆ ಪ್ಯಾಕೇಜ್ ಘೋಷಿಸಿ ಕೈತೊಳೆದುಕೊಂಡಿದೆ. ಇಂತಹ ಅಸಾಮಾನ್ಯ ಪರಿಸ್ಥಿತಿಯಲ್ಲಿ ಸರ್ಕಾರ ಅಸಾಮಾನ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಕೂಡಲೇ ಸಮಗ್ರ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಿ ಜನಾಗ್ರಹ ಆಂದೋಲನ ವೇದಿಕೆಯು ರಾಜ್ಯಾದ್ಯಂತ ಶಾಸಕರು, ಸಚಿವರ ಮನೆ ಎದುರು ಪ್ರತಿಭಟನೆ ನಡೆಸಿದೆ.

ಬಡಜನರಿಗೆ ಸಮಗ್ರ ಪ್ಯಾಕೇಜ್‌ಗಾಗಿ ಕಳೆದ ಮೂರು ತಿಂಗಳಿನಿಂದ ಇದುವರೆಗೂ ನಾಲ್ಕು ಪ್ರತಿಭಟನೆಗಳನ್ನು ನಡೆಸಿದ್ದು, ಮುಖ್ಯಮಂತ್ರಿಗಳಿಗೆ ಮೂರು ಪತ್ರಗಳನ್ನು ಬರೆದಿದೆ. ಈಗಲಾದರೂ ಸರ್ಕಾರ ಎಚ್ಚೆತ್ತು ಜನರ ನೆರವಿಗೆ ಧಾವಿಸಬೇಕೆಂದು ಜನಾಗ್ರಹ ಆಂದೋಲನದ ಬಿ.ಟಿ ಲಲಿತಾ ನಾಯಕ್ ಒತ್ತಾಯಿಸಿದರು.

ಬೆಂಗಳೂರಿನ ವಿಜಯನಗರದಲ್ಲಿರುವ ವಸತಿ ಸಚಿವ ವಿ.ಸೋಮಣ್ಣನವರ ಮನೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಸರ್ಕಾರ ಕೇವಲ ಕಣ್ಣೋರೆಸುವ ಕೆಲಸ ಮಾಡುತ್ತಿದೆ. ಒಂದು ಸಾವಿರ ಜನರಿದ್ದರೆ ಕೇವಲ 20 ಜನರಿಗೆ ಸೌಲಭ್ಯ ಕೊಟ್ಟರೆ ಸಾಲದು. ನ್ಯಾಯಯುತವಾಗಿ ನೊಂದವರಿಗೆ ಪರಿಹಾರ ನೀಡಬೇಕು. ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು. ಇದನ್ನು ಈಡೇರಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸುತ್ತೇವೆ” ಎಂದರು.

ಕೊರೊನಾದಿಂದಾಗಿ ಎಷ್ಟೋ ಕುಟುಂಬಗಳು ಬೀದಿಪಾಲಾಗಿವೆ. ಎಷ್ಟೋ ಕುಟುಂಬಗಳು ನಾಶವಾಗಿವೆ. ಸರ್ಕಾರ ಸರಿಯಾದ ಕ್ರಮ ಕೈಗೊಂಡಿದ್ದರೆ ನಾವು ಇಂದು ಬೀದಿಗಿಳಿದು ಪ್ರತಿಭಟಿಸುವ ಅಗತ್ಯ ಬರುತ್ತಿರಲಿಲ್ಲ. ಇಂತಹ ಕಷ್ಟಕಾಲದಲ್ಲಿ ಶಾಸಕರು ಮತ್ತು ಸಚಿವರು ಏನು ಮಾಡುತ್ತಿದ್ದಾರೆ? ತನ್ನ ಕ್ಷೇತ್ರದ ಜನರಿಗಾಗಿ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಈ ಕಷ್ಟಕಾಲದಲ್ಲಿಯೂ ಪೆಟ್ರೋಲ್, ಎಣ್ಣೆ ಮತ್ತು ದವಸಧಾನ್ಯಗಳ ಬೆಲೆ ಏರಿಸಲಾಗುತ್ತಿದೆ. ಈ ಸರ್ಕಾರಕ್ಕೆ ಕನಿಷ್ಠ ಮಾನವೀಯತೆ ಇಲ್ಲವೇ? ಲಸಿಕೆ ವಿಷಯದಲ್ಲಿಯೂ ಭ್ರಷ್ಟಾಚಾರ ಮಾಡುತ್ತಿವೆ. ಇದನ್ನು ಕೂಡಲೇ ನಿಲ್ಲಿಸಿ ಜನಪರವಾಗಿ ನಿಲ್ಲಬೇಕೆಂದು ಒತ್ತಾಯಿಸಿದರು.

ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್‌ರವರು ಮಾತನಾಡಿ, “ನಾವು ಇದುವರೆಗೆ ಮೂರು ಸುತ್ತಿನಲ್ಲಿ ಹೋರಾಟ ನಡೆಸಿದ್ದೇವೆ. ಇಂದು ನಾಲ್ಕನೇ ಬಾರೀ ಹೋರಾಟಕ್ಕಿಳಿದ್ದಿದ್ದೇವೆ. ಏಕೆಂದರೆ ಸರ್ಕಾರ ಕೋವಿಡ್‌ ಅನ್ನು ಇಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ. ತಜ್ಞರು ಎರಡನೇ ಅಲೆ ಬಗ್ಗೆ ಎಚ್ಚರಿಸಿದ್ದರೂ ಸಹ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ ಎಂಬುದಕ್ಕೆ ನೆಲಮಂಗಲದಲ್ಲಿದ್ದ 10000 ಬೆಡ್‌ಗಳ ಕೋವಿಡ್‌ ಕೇರ್ ಸೆಂಟರ್ ಅನ್ನು ಮುಚ್ಚಿದ್ದೆ ಸಾಕ್ಷಿ” ಎಂದು ಕಿಡಿಕಾರಿದರು.

ಜನ ಉಸಿರಿಗಾಗಿ ಒದ್ದಾಡುತ್ತಿದ್ದರೂ ಸರ್ಕಾರ ತಲೆಕೆಡಿಸಿಕೊಳ್ಳಲಿಲ್ಲ. ಲಾಕ್‌ಡೌನ್ ಎಂಬುದು ಅನಿವಾರ್ಯ ಕ್ರಮವೇ ಹೊರತು ಅಗತ್ಯ ಕ್ರಮವಲ್ಲ. ಹಾಗಾಗಿ ಲಾಕ್‌ಡೌನ್ ಅವಧಿಯನ್ನು ಕಡಿಮೆ ಮಾಡಬೇಕು. ಹಾಗೆ ಮಾಡಬೇಕಾದರೆ ನಮ್ಮ ವೈದ್ಯಕೀಯ ವ್ಯವಸ್ಥೆಯನ್ನು ಸಜ್ಜುಗೊಳಿಸಬೇಕು. ಅದನ್ನು ಮಾಡಲು ಸರ್ಕಾರ ಮುಂದಾಗಲಿಲ್ಲ. ಬಡಜನರಿಗೆ ಕನಿಷ್ಟ 5 ಸಾವಿರ ಕೊಡಿ ಎಂದು ನಾವು ಒತ್ತಾಯಿಸಿದ್ದರು ಸರ್ಕಾರ ಮುಂದಾಗಿರದಿರುವುದು ದುರಾದೃಷ್ಟಕರ ಎಂದರು.

ನಮ್ಮೆಲ್ಲರ ಒತ್ತಾಯದಿಂದ ಅಸಂಘಟಿತ ಕಾರ್ಮಿಕರಿಗೆ 2 ಸಾವಿರ ಕೊಡುವುದು, ಒಂದಷ್ಟು ರೇಷನ್ ಕಿಟ್ ಕೊಡುವ ಅರೆ ಬರೆ ಕೆಲಸಗಳನ್ನು ಸರ್ಕಾರ ಮಾಡುತ್ತಿದೆ. ಆದರೆ ಈಗ ಮೂರನೇ ಅಲೆ ಬರುವ ಅಪಾಯವಿದೆ. ಅದು ಮಕ್ಕಳನ್ನು ಬಾಧಿಸುವ ಸಾಧ್ಯತೆಯಿದೆ. ಈಗ ಏನು ಮಾಡೋಣ? ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಜನರು ಏನು ಮಾಡಬೇಕು? ಇಂತ ಸಮಯದಲ್ಲಿ ಏಕೆ ಕಾರ್ಪೋರೇಟ್ ಶ್ರೀಮಂತರ ಮೇಲೆ ತೆರಿಗೆ ಹಾಕುತ್ತಿಲ್ಲ? ಏಕೆ ಕೇಂದ್ರ ಸರ್ಕಾರ ನಮ್ಮ ಪಾಲಿನ ಹಣ ಕೊಡುತ್ತಿಲ್ಲ ಎಂದು ಕೇಳುತ್ತಿಲ್ಲ ಎಂದು ಕಿಡಿಕಾರಿದರು. ನಂತರ ಹೋರಾಟಗಾರರ ನಿಯೋಗವು ವಿ.ಸೋಮಣ್ಣನವರನ್ನು ಭೇಟಿ ಮಾಡಿ ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು.

ರಾಜ್ಯಾದ್ಯಂತ ಹಲವಾರು ಶಾಸಕರ ಮನೆ ಮುಂದೆ ಖಾಲಿ ಚೀಲಗಳನ್ನು ಸುಟ್ಟು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಶಾಸಕರ ಕಛೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಸುಮಾರು 100 ಜನರು ಭಾಗವಹಿಸಿದ್ದರು. ಕಾರ್ಕಳ ಶಾಸಕರ ಕಛೇರಿ ಬಳಿ ಪ್ರತಿಭಟನೆಗಾಗಿ ಪ್ರತಿಭಟನಾಕಾರರು ಸಾಗುತ್ತಿದ್ದಾಗ, ಪೋಲೀಸರು ತಡೆದ ಕಾರಣ ಶಾಸಕರ ಕಛೇರಿಗೆ ಸಮೀಪದಲ್ಲೇ ದಾರಿಮಧ್ಯೆ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರ ಮದ್ಯೆ ಮಾತಿನ ಚಕಮಕಿ ನಡೆಯಿತು.

ಬೆಳಗಾವಿ ಜಿಲ್ಲೆಯಲ್ಲಿ ಜನಾಗ್ರಹ ಆಂದೋಲನ ವತಿಯಿಂದ ಖಾಲಿ ಚೀಲವನ್ನು ಸುಟ್ಟು ಪ್ರತಿಭಟನೆ ನಡೆಸಲಾಯಿತು ಮತ್ತು ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಕೃಷಿಯ ಸಮಾಜದ ರಾಜ್ಯಾಧ್ಯಕ್ಷರಾದ ಸಿದ್ದಗೌಡ ಮೋದಗಿ, ಕರ್ನಾಟಕ ಜನಶಕ್ತಿಯ ರವಿ ಪಾಟೀಲ್, ರಮೇಶ್ ವಾಲಿ, ವಿಠ್ಠಲ್ ಬಂಗೂಡಿ, ಶಂಕರ್ ಮುಗುಳಿ, ಪ್ರಕಾಶ್ ಕಾಗಿ, ಯಾಸಿನ್ ಮಕಂದರ್ ಮತ್ತಿತರರಿದ್ದರು.

ತುಮಕೂರು ನಗರ ಶಾಸಕರ ಜ್ಯೋತಿ ಗಣೇಶ್ ರವರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಲಾಯಿತು. ಇದೇ ರೀತಿಯಲ್ಲಿ ಶಿವಮೊಗ್ಗ, ವಿಜಯಪುರ, ವಿಜಯನಗರ, ಮಂಡ್ಯ, ಚಿತ್ರದುರ್ಗ ಸೇರಿದಂತೆ ರಾಜ್ಯದ ನೂರಾರು ಕಡೆ ಸಚಿವರು, ಶಾಸಕರ ಮನೆ ಮುಂದೆ ಪ್ರತಿಭಟನೆಗಳು ನಡೆದಿವೆ. ಅದರ ಕೆಲವು ಚಿತ್ರಗಳು ಕೆಳಗಿನಂತಿವೆ.


ಇದನ್ನೂ ಓದಿ: ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....