Homeಕರ್ನಾಟಕಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ: ಖಾಸಗಿ ಕಂಪನಿಗಳಿಗೆ ಕಡಿವಾಣ ಹಾಕಲು ಎಚ್.ಡಿ.ಕೆ ಆಗ್ರಹ

ಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ: ಖಾಸಗಿ ಕಂಪನಿಗಳಿಗೆ ಕಡಿವಾಣ ಹಾಕಲು ಎಚ್.ಡಿ.ಕೆ ಆಗ್ರಹ

’ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು’

- Advertisement -
- Advertisement -

ಬಾಡಿಗೆ ದೊರೆಯದೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕಾರಣಕ್ಕೆ ಕೆಎಸ್‌ಟಿಡಿಸಿ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್‌ಪೋರ್ಟ್ ಆವರಣದಲ್ಲಿ ಮಂಗಳವಾರ ಕಾರಿನೊಳಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಟ್ಯಾಕ್ಸಿ ಚಾಲಕ ಪ್ರತಾಪ್ ಕಳೆದ 10 ವರ್ಷಗಳಿಂದ ಕರ್ನಾಟಕ ರಾಜ್ಯ ಪ್ರವಾಸೋಧ್ಯಮ ಅಭಿವೃದ್ಧಿ ಪ್ರಾಧಿಕಾರದ(KSTDC) ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರಾಗಿದ್ದರು ಎನ್ನಲಾಗಿದೆ. ಬಾಡಿಗೆ ಸಿಗದೇ ಆರ್ಥಿಕ ಸಂಕಷ್ಟಕ್ಕೆ ಈಡಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಘಟನೆ ಕುರಿತು ಟ್ವೀಟ್ ಮಾಡಿ ಅಸಮಾಧಾನ ಹೊರ ಹಾಕಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು. ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಪ್ರತಾಪ್

’ಬಾಡಿಗೆ ದೊರೆಯದೇ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕೆಎಸ್‌ಟಿಡಿಸಿ ಕ್ಯಾಬ್‌ ಚಾಲಕ ಪ್ರತಾಪ್‌ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಾಪ್‌ ಅವರ ಸಾವಿನೊಂದಿಗೆ ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳು ತೆರೆದುಕೊಂಡಿವೆ” ಎಂದಿದ್ದಾರೆ.

’ಕ್ಯಾಬ್‌ ಉದ್ಯಮದ ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಪ್ರತಾಪ್‌ ಜೀವ ಬಲಿಯಾಗಿದೆ. ಟ್ಯಾಕ್ಸಿ, ಕ್ಯಾಬ್‌ಗಳಿಗೆ ಸರ್ಕಾರ 1 ಕಿ.ಮೀಗೆ 24 ರೂಪಾಯಿ ದರ ನಿಗದಿ ಮಾಡಿದೆ. ಕೆಎಸ್‌ಟಿಡಿಸಿ ಚಾಲಕರು ಇದನ್ನು ಪಾಲಿಸುತ್ತಿದ್ದರೆ, ಖಾಸಗಿ ಕಂಪನಿಗಳು ನಿಯಮ ಗಾಳಿಗೆ ತೂರಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಕೆಎಸ್‌ಟಿಡಿಸಿ ಚಾಲಕರು ಸೊರಗುತ್ತಿದ್ದಾರೆ’ ಎಂದು ಖಾಸಗಿ ಮತ್ತು ಕೆಎಸ್‌ಟಿಡಿಸಿ ನಡುವಿನ ವ್ಯತ್ಯಾಸವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ನೌಕರರ ಮುಷ್ಕರ ನೆಪವೊಡ್ಡಿ ಬಿಎಂಟಿಸಿ ಖಾಸಗೀಕರಣಗೊಳಿಸುವ ಹುನ್ನಾರ-ಆಪ್ ಆರೋಪ

’ಕೆಎಸ್‌ಟಿಡಿಸಿ ಕ್ಯಾಬ್‌ಗಳು ದರ ನಿಯಮ ಪಾಲಿಸುತ್ತಿದ್ದರೆ, ಖಾಸಗಿ ಕ್ಯಾಬ್‌ಗಳು 9 ರೂಪಾಯಿಗೆ ಗ್ರಾಹಕರನ್ನು ಸೆಳೆಯುತ್ತಿವೆ. ಹೀಗಾಗಿ ಕೆಎಸ್‌ಟಿಡಿಸಿ ಕ್ಯಾಬ್‌ಗಳಿಗೆ ಗ್ರಾಹಕರೇ ಇಲ್ಲದಂತಾಗಿದೆ. ಚಾಲಕರು ಸಮಸ್ಯೆಗೆ ಸಿಲುಕಿದ್ದಾರೆ. ಇದರ ಜೊತೆಗೆ ವಿಮಾನ ನಿಲ್ದಾಣದ ಪಾರ್ಕಿಂಗ್‌ನಲ್ಲೂ ನಡೆಯುತ್ತಿರುವ ರಾಜಕೀಯ ಚಾಲಕರ ಕೊರಳು ಹಿಂಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ದರ ಸಮರದತ್ತ ಕೂಡಲೇ ಗಮನಹರಿಸಬೇಕು. ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು. ಅದರ ಮೂಲಕ ಅಮಾಯಕ, ಶ್ರಮಜೀವಿ ಕ್ಯಾಬ್‌ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಾನು ಆಗ್ರಹಿಸುತ್ತೇನೆ” ಎಂದಿದ್ದಾರೆ.

ಇತ್ತ, ಚಾಲಕ ಪ್ರತಾಪ್ ಸಾವಿನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆಗಳಿಗೆ ತೊಂದರೆಯಾಗಿದೆ. ಪ್ರಯಾಣಿಕರಿಗೆ ಬಿಎಂಟಿಸಿ ಬಸ್ ಸೇವೆಯನ್ನು ಬಳಸಲು ಅಥವಾ ತಮ್ಮದೇ ಆದ ಪ್ರಯಾಣದ ವ್ಯವಸ್ಥೆಗಳನ್ನು ಮಾಡಲು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...