Homeಮುಖಪುಟ12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಟಿಸಿಎಸ್: ವರದಿ

12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಟಿಸಿಎಸ್: ವರದಿ

- Advertisement -
- Advertisement -

ಭಾರತದ ಅತಿದೊಡ್ಡ ಐಟಿ ಸೇವಾ ಪೂರೈಕೆದಾರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಇದು ಕಂಪನಿಯ ಒಟ್ಟು ಉದ್ಯೋಗಿಗಳ ಪೈಕಿ ಶೇಕಡ 2ರಷ್ಟು. ಈ ಸಾಮೂಹಿಕ ವಜಾ ಪ್ರಾಥಮಿಕವಾಗಿ ಕಂಪನಿಯ ಮಧ್ಯಮ ಮತ್ತು ಹಿರಿಯ ಶ್ರೇಣಿಯಲ್ಲಿ ಕೆಲಸ ಮಾಡುತ್ತಿರುವವರ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಗಳು ಹೇಳಿವೆ.

ಮನಿ ಕಂಟ್ರೋಲ್ ಸುದ್ದಿ ಸಂಸ್ಥೆಯ ಜೊತೆಗಿನ ಸಂದರ್ಶನದಲ್ಲಿ ಟಿಸಿಎಸ್ ಸಿಇಒ ಕೃತಿವಾಸನ್ ಅವರು ಉದ್ಯೋಗ ಕಡಿತದ ಬಗ್ಗೆ ಘೋಷಣೆ ಮಾಡಿದ್ದಾರೆ. ಪ್ರಸ್ತಕ ಹಣಕಾಸು ವರ್ಷದಲ್ಲಿ (ಏಪ್ರಿಲ್ 2025 ರಿಂದ ಮಾರ್ಚ್ 2026) ಹಂತ ಹಂತವಾಗಿ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಕಂಪನಿಯು ಹೊಸ ಮಾರುಕಟ್ಟೆಗಳನ್ನು ಪ್ರವೇಶಿಸುತ್ತಿದೆ. ಹೊಸ ತಂತ್ರಜ್ಞಾನದಲ್ಲಿ ಹೂಡಿಕೆ ಮಾಡುತ್ತಿದೆ ಮತ್ತು ಕೃತಕ ಬುದ್ದಿಮತ್ತೆ (ಎಐ) ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಆದ್ದರಿಂದ ಸಿಬ್ಬಂದಿಗೆ ಮರು ತರಬೇತಿ ಮತ್ತು ಮರು ನಿಯೋಜನೆ ಮಾಡುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿ ಸುಮಾರು 12,200 ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಕೃತಿವಾಸನ್ ಹೇಳಿದ್ದಾರೆ.

“ಗ್ರಾಹಕ ಸೇವಾ ವಿತರಣೆಯ ಮೇಲೆ ಯಾವುದೇ ಪರಿಣಾಮ ಬೀರದಂತೆ ಈ ಪರಿವರ್ತನೆಯನ್ನು ಸರಿಯಾದ ಕಾಳಜಿಯೊಂದಿಗೆ ಯೋಜಿಸಲಾಗುತ್ತಿದೆ” ಎಂದಿದ್ದಾರೆ.

ತಂತ್ರಜ್ಞಾನ ಮತ್ತು ವ್ಯವಹಾರ ಕಾರ್ಯಾಚರಣೆಗಳಲ್ಲಿನ ಬದಲಾವಣೆಗಳು ಆಂತರಿಕ ಬದಲಾವಣೆಗಳಿಗೆ ಕಾರಣವಾಗುತ್ತಿವೆ ಎಂದು ಕೃತಿವಾಸನ್ ಒಪ್ಪಿಕೊಂಡಿದ್ದಾರೆ.

“ನಾವು ಹೊಸ ತಂತ್ರಜ್ಞಾನಗಳನ್ನು, ವಿಶೇಷವಾಗಿ ಎಐ ಕಾರ್ಯಾಚರಣಾ ಮಾದರಿಯನ್ನು ಅಳವಡಿಸಿಕೊಳ್ಳುತ್ತಿದ್ದೇವೆ. ಇದರಿಂದ ಕೆಲಸ ಮಾಡುವ ವಿಧಾನಗಳು ಬದಲಾಗುತ್ತಿವೆ. ನಾವು ಭವಿಷ್ಯಕ್ಕೆ ಸಿದ್ಧರಾಗಿರಬೇಕಿದೆ ಮತ್ತು ಚುರುಕಾಗಬೇಕಿದೆ. ಆದ್ದರಿಂದ ಎಐ ಅಳವಡಿಸಿಕೊಳ್ಳುತ್ತಿದ್ದೇವೆ. ಭವಿಷ್ಯದಲ್ಲಿ ನಮಗೆ ಅಗತ್ಯವಿರುವ ಕೌಶಲ್ಯಗಳನ್ನು ಮೌಲ್ಯಮಾಪನ ಮಾಡುತ್ತಿದ್ದೇವೆ” ಎಂದಿದ್ದಾರೆ.

ವರದಿಗಳ ಪ್ರಕಾರ, ಜೂನ್‌ ತ್ರೈಮಾಸಿಕದಲ್ಲಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಂಡಿತ್ತು.

ಅಕ್ರಮ ಸಾಮೂಹಿಕ ವಜಾ ನಿಲ್ಲಿಸಿ: ಕೆಐಟಿಯು

ಟಿಸಿಎಸ್‌ ಉದ್ಯೋಗ ಕಡಿತವನ್ನು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಖಂಡಿಸಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಕೆಐಟಿಯು “ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌)ನಲ್ಲಿ ಬೃಹತ್ ಪ್ರಮಾಣದ ಉದ್ಯೋಗ ಕಡಿತವಾಗಿದೆ. ಸಾವಿರಾರು ಉದ್ಯೋಗಿಗಳು ಕಂಪನಿ ಬಲವಂತವಾಗಿ ರಾಜೀನಾಮೆ ಕೊಡಿಸುತ್ತಿದೆ. ಟಿಸಿಎಸ್ ಆಡಳಿತ ಮಂಡಳಿಯ ಈ ಕಾನೂನುಬಾಹಿರ ಕ್ರಮವನ್ನು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಬಲವಾಗಿ ಖಂಡಿಸುತ್ತದೆ ಎಂದಿದೆ.

ಕೈಗಾರಿಕಾ ತಕರಾರು ಕಾಯ್ದೆಯ ಪ್ರಕಾರ, ಉದ್ಯೋಗದಾತ ಉದ್ಯೋಗಿಯನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸುವುದು ಅಪರಾಧವಾಗಿದೆ. ರಾಜೀನಾಮೆಗೆ ಸಹಿ ಹಾಕಲು ನಿರಾಕರಿಸುವ ಎಲ್ಲಾ ಕಾನೂನುಬದ್ಧ ಹಕ್ಕನ್ನು ಉದ್ಯೋಗಿ ಹೊಂದಿರುತ್ತಾನೆ ಎಂದು ಹೇಳಿದೆ.

ಟಿಸಿಎಸ್‌ ಉದ್ಯೋಗ ಕಡಿತದಿಂದ ಬಾಧಿತ ಉದ್ಯೋಗಿಗಳಿಗೆ ಕೆಐಟಿಯು ಎಲ್ಲಾ ಬೆಂಬಲವನ್ನು ನೀಡುತ್ತದೆ. ಟಿಸಿಎಸ್ ಆಡಳಿತ ಮಂಡಳಿಯು ನೆಲದ ಕಾನೂನನ್ನು ಗೌರವಿಸಬೇಕು ಮತ್ತು ವಜಾಗೊಳಿಸಲಾದ ಎಲ್ಲಾ ಉದ್ಯೋಗಿಗಳನ್ನು ತಕ್ಷಣ ಜಾರಿಗೆ ಬರುವಂತೆ ಮರು ನೇಮಿಸಬೇಕು. ಬಲವಂತದ ರಾಜೀನಾಮೆ ನೀಡುವ ಅಮಾನವೀಯ ಪದ್ಧತಿಯ ವಿರುದ್ಧ ಮತ್ತು ಟಿಸಿಎಸ್‌ನ ಉದ್ಯೋಗಿಗಳೊಂದಿಗೆ ಒಗ್ಗಟ್ಟು ಪ್ರದರ್ಶಿಸುವಂತೆ ಕೆಐಟಿಯು ಎಲ್ಲಾ ಐಟಿ/ಐಟಿಇಎಸ್ ಉದ್ಯೋಗಿಗಳಿಗೆ ಕರೆ ನೀಡುತ್ತದೆ ಎಂದು ಕೆಐಟಿಯು ಹೇಳಿದೆ. ಸಹಾಯವಾಣಿ ಸಂಖ್ಯೆಯನ್ನೂ ನೀಡಿದೆ.

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು 15 ಅಂಶಗಳ ಮಾರ್ಗಸೂಚಿ ರೂಪಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....