Homeಮುಖಪುಟ12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಟಿಸಿಎಸ್: ವರದಿ

12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಟಿಸಿಎಸ್: ವರದಿ

- Advertisement -
- Advertisement -

ಭಾರತದ ಅತಿದೊಡ್ಡ ಐಟಿ ಸೇವಾ ಪೂರೈಕೆದಾರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಇದು ಕಂಪನಿಯ ಒಟ್ಟು ಉದ್ಯೋಗಿಗಳ ಪೈಕಿ ಶೇಕಡ 2ರಷ್ಟು. ಈ ಸಾಮೂಹಿಕ ವಜಾ ಪ್ರಾಥಮಿಕವಾಗಿ ಕಂಪನಿಯ ಮಧ್ಯಮ ಮತ್ತು ಹಿರಿಯ ಶ್ರೇಣಿಯಲ್ಲಿ ಕೆಲಸ ಮಾಡುತ್ತಿರುವವರ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಗಳು ಹೇಳಿವೆ.

ಮನಿ ಕಂಟ್ರೋಲ್ ಸುದ್ದಿ ಸಂಸ್ಥೆಯ ಜೊತೆಗಿನ ಸಂದರ್ಶನದಲ್ಲಿ ಟಿಸಿಎಸ್ ಸಿಇಒ ಕೃತಿವಾಸನ್ ಅವರು ಉದ್ಯೋಗ ಕಡಿತದ ಬಗ್ಗೆ ಘೋಷಣೆ ಮಾಡಿದ್ದಾರೆ. ಪ್ರಸ್ತಕ ಹಣಕಾಸು ವರ್ಷದಲ್ಲಿ (ಏಪ್ರಿಲ್ 2025 ರಿಂದ ಮಾರ್ಚ್ 2026) ಹಂತ ಹಂತವಾಗಿ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಕಂಪನಿಯು ಹೊಸ ಮಾರುಕಟ್ಟೆಗಳನ್ನು ಪ್ರವೇಶಿಸುತ್ತಿದೆ. ಹೊಸ ತಂತ್ರಜ್ಞಾನದಲ್ಲಿ ಹೂಡಿಕೆ ಮಾಡುತ್ತಿದೆ ಮತ್ತು ಕೃತಕ ಬುದ್ದಿಮತ್ತೆ (ಎಐ) ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಆದ್ದರಿಂದ ಸಿಬ್ಬಂದಿಗೆ ಮರು ತರಬೇತಿ ಮತ್ತು ಮರು ನಿಯೋಜನೆ ಮಾಡುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿ ಸುಮಾರು 12,200 ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಕೃತಿವಾಸನ್ ಹೇಳಿದ್ದಾರೆ.

“ಗ್ರಾಹಕ ಸೇವಾ ವಿತರಣೆಯ ಮೇಲೆ ಯಾವುದೇ ಪರಿಣಾಮ ಬೀರದಂತೆ ಈ ಪರಿವರ್ತನೆಯನ್ನು ಸರಿಯಾದ ಕಾಳಜಿಯೊಂದಿಗೆ ಯೋಜಿಸಲಾಗುತ್ತಿದೆ” ಎಂದಿದ್ದಾರೆ.

ತಂತ್ರಜ್ಞಾನ ಮತ್ತು ವ್ಯವಹಾರ ಕಾರ್ಯಾಚರಣೆಗಳಲ್ಲಿನ ಬದಲಾವಣೆಗಳು ಆಂತರಿಕ ಬದಲಾವಣೆಗಳಿಗೆ ಕಾರಣವಾಗುತ್ತಿವೆ ಎಂದು ಕೃತಿವಾಸನ್ ಒಪ್ಪಿಕೊಂಡಿದ್ದಾರೆ.

“ನಾವು ಹೊಸ ತಂತ್ರಜ್ಞಾನಗಳನ್ನು, ವಿಶೇಷವಾಗಿ ಎಐ ಕಾರ್ಯಾಚರಣಾ ಮಾದರಿಯನ್ನು ಅಳವಡಿಸಿಕೊಳ್ಳುತ್ತಿದ್ದೇವೆ. ಇದರಿಂದ ಕೆಲಸ ಮಾಡುವ ವಿಧಾನಗಳು ಬದಲಾಗುತ್ತಿವೆ. ನಾವು ಭವಿಷ್ಯಕ್ಕೆ ಸಿದ್ಧರಾಗಿರಬೇಕಿದೆ ಮತ್ತು ಚುರುಕಾಗಬೇಕಿದೆ. ಆದ್ದರಿಂದ ಎಐ ಅಳವಡಿಸಿಕೊಳ್ಳುತ್ತಿದ್ದೇವೆ. ಭವಿಷ್ಯದಲ್ಲಿ ನಮಗೆ ಅಗತ್ಯವಿರುವ ಕೌಶಲ್ಯಗಳನ್ನು ಮೌಲ್ಯಮಾಪನ ಮಾಡುತ್ತಿದ್ದೇವೆ” ಎಂದಿದ್ದಾರೆ.

ವರದಿಗಳ ಪ್ರಕಾರ, ಜೂನ್‌ ತ್ರೈಮಾಸಿಕದಲ್ಲಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಂಡಿತ್ತು.

ಅಕ್ರಮ ಸಾಮೂಹಿಕ ವಜಾ ನಿಲ್ಲಿಸಿ: ಕೆಐಟಿಯು

ಟಿಸಿಎಸ್‌ ಉದ್ಯೋಗ ಕಡಿತವನ್ನು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಖಂಡಿಸಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಕೆಐಟಿಯು “ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌)ನಲ್ಲಿ ಬೃಹತ್ ಪ್ರಮಾಣದ ಉದ್ಯೋಗ ಕಡಿತವಾಗಿದೆ. ಸಾವಿರಾರು ಉದ್ಯೋಗಿಗಳು ಕಂಪನಿ ಬಲವಂತವಾಗಿ ರಾಜೀನಾಮೆ ಕೊಡಿಸುತ್ತಿದೆ. ಟಿಸಿಎಸ್ ಆಡಳಿತ ಮಂಡಳಿಯ ಈ ಕಾನೂನುಬಾಹಿರ ಕ್ರಮವನ್ನು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಬಲವಾಗಿ ಖಂಡಿಸುತ್ತದೆ ಎಂದಿದೆ.

ಕೈಗಾರಿಕಾ ತಕರಾರು ಕಾಯ್ದೆಯ ಪ್ರಕಾರ, ಉದ್ಯೋಗದಾತ ಉದ್ಯೋಗಿಯನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸುವುದು ಅಪರಾಧವಾಗಿದೆ. ರಾಜೀನಾಮೆಗೆ ಸಹಿ ಹಾಕಲು ನಿರಾಕರಿಸುವ ಎಲ್ಲಾ ಕಾನೂನುಬದ್ಧ ಹಕ್ಕನ್ನು ಉದ್ಯೋಗಿ ಹೊಂದಿರುತ್ತಾನೆ ಎಂದು ಹೇಳಿದೆ.

ಟಿಸಿಎಸ್‌ ಉದ್ಯೋಗ ಕಡಿತದಿಂದ ಬಾಧಿತ ಉದ್ಯೋಗಿಗಳಿಗೆ ಕೆಐಟಿಯು ಎಲ್ಲಾ ಬೆಂಬಲವನ್ನು ನೀಡುತ್ತದೆ. ಟಿಸಿಎಸ್ ಆಡಳಿತ ಮಂಡಳಿಯು ನೆಲದ ಕಾನೂನನ್ನು ಗೌರವಿಸಬೇಕು ಮತ್ತು ವಜಾಗೊಳಿಸಲಾದ ಎಲ್ಲಾ ಉದ್ಯೋಗಿಗಳನ್ನು ತಕ್ಷಣ ಜಾರಿಗೆ ಬರುವಂತೆ ಮರು ನೇಮಿಸಬೇಕು. ಬಲವಂತದ ರಾಜೀನಾಮೆ ನೀಡುವ ಅಮಾನವೀಯ ಪದ್ಧತಿಯ ವಿರುದ್ಧ ಮತ್ತು ಟಿಸಿಎಸ್‌ನ ಉದ್ಯೋಗಿಗಳೊಂದಿಗೆ ಒಗ್ಗಟ್ಟು ಪ್ರದರ್ಶಿಸುವಂತೆ ಕೆಐಟಿಯು ಎಲ್ಲಾ ಐಟಿ/ಐಟಿಇಎಸ್ ಉದ್ಯೋಗಿಗಳಿಗೆ ಕರೆ ನೀಡುತ್ತದೆ ಎಂದು ಕೆಐಟಿಯು ಹೇಳಿದೆ. ಸಹಾಯವಾಣಿ ಸಂಖ್ಯೆಯನ್ನೂ ನೀಡಿದೆ.

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು 15 ಅಂಶಗಳ ಮಾರ್ಗಸೂಚಿ ರೂಪಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...