Homeಮುಖಪುಟ12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಟಿಸಿಎಸ್: ವರದಿ

12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಟಿಸಿಎಸ್: ವರದಿ

- Advertisement -
- Advertisement -

ಭಾರತದ ಅತಿದೊಡ್ಡ ಐಟಿ ಸೇವಾ ಪೂರೈಕೆದಾರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಇದು ಕಂಪನಿಯ ಒಟ್ಟು ಉದ್ಯೋಗಿಗಳ ಪೈಕಿ ಶೇಕಡ 2ರಷ್ಟು. ಈ ಸಾಮೂಹಿಕ ವಜಾ ಪ್ರಾಥಮಿಕವಾಗಿ ಕಂಪನಿಯ ಮಧ್ಯಮ ಮತ್ತು ಹಿರಿಯ ಶ್ರೇಣಿಯಲ್ಲಿ ಕೆಲಸ ಮಾಡುತ್ತಿರುವವರ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಗಳು ಹೇಳಿವೆ.

ಮನಿ ಕಂಟ್ರೋಲ್ ಸುದ್ದಿ ಸಂಸ್ಥೆಯ ಜೊತೆಗಿನ ಸಂದರ್ಶನದಲ್ಲಿ ಟಿಸಿಎಸ್ ಸಿಇಒ ಕೃತಿವಾಸನ್ ಅವರು ಉದ್ಯೋಗ ಕಡಿತದ ಬಗ್ಗೆ ಘೋಷಣೆ ಮಾಡಿದ್ದಾರೆ. ಪ್ರಸ್ತಕ ಹಣಕಾಸು ವರ್ಷದಲ್ಲಿ (ಏಪ್ರಿಲ್ 2025 ರಿಂದ ಮಾರ್ಚ್ 2026) ಹಂತ ಹಂತವಾಗಿ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಕಂಪನಿಯು ಹೊಸ ಮಾರುಕಟ್ಟೆಗಳನ್ನು ಪ್ರವೇಶಿಸುತ್ತಿದೆ. ಹೊಸ ತಂತ್ರಜ್ಞಾನದಲ್ಲಿ ಹೂಡಿಕೆ ಮಾಡುತ್ತಿದೆ ಮತ್ತು ಕೃತಕ ಬುದ್ದಿಮತ್ತೆ (ಎಐ) ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಆದ್ದರಿಂದ ಸಿಬ್ಬಂದಿಗೆ ಮರು ತರಬೇತಿ ಮತ್ತು ಮರು ನಿಯೋಜನೆ ಮಾಡುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿ ಸುಮಾರು 12,200 ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಕೃತಿವಾಸನ್ ಹೇಳಿದ್ದಾರೆ.

“ಗ್ರಾಹಕ ಸೇವಾ ವಿತರಣೆಯ ಮೇಲೆ ಯಾವುದೇ ಪರಿಣಾಮ ಬೀರದಂತೆ ಈ ಪರಿವರ್ತನೆಯನ್ನು ಸರಿಯಾದ ಕಾಳಜಿಯೊಂದಿಗೆ ಯೋಜಿಸಲಾಗುತ್ತಿದೆ” ಎಂದಿದ್ದಾರೆ.

ತಂತ್ರಜ್ಞಾನ ಮತ್ತು ವ್ಯವಹಾರ ಕಾರ್ಯಾಚರಣೆಗಳಲ್ಲಿನ ಬದಲಾವಣೆಗಳು ಆಂತರಿಕ ಬದಲಾವಣೆಗಳಿಗೆ ಕಾರಣವಾಗುತ್ತಿವೆ ಎಂದು ಕೃತಿವಾಸನ್ ಒಪ್ಪಿಕೊಂಡಿದ್ದಾರೆ.

“ನಾವು ಹೊಸ ತಂತ್ರಜ್ಞಾನಗಳನ್ನು, ವಿಶೇಷವಾಗಿ ಎಐ ಕಾರ್ಯಾಚರಣಾ ಮಾದರಿಯನ್ನು ಅಳವಡಿಸಿಕೊಳ್ಳುತ್ತಿದ್ದೇವೆ. ಇದರಿಂದ ಕೆಲಸ ಮಾಡುವ ವಿಧಾನಗಳು ಬದಲಾಗುತ್ತಿವೆ. ನಾವು ಭವಿಷ್ಯಕ್ಕೆ ಸಿದ್ಧರಾಗಿರಬೇಕಿದೆ ಮತ್ತು ಚುರುಕಾಗಬೇಕಿದೆ. ಆದ್ದರಿಂದ ಎಐ ಅಳವಡಿಸಿಕೊಳ್ಳುತ್ತಿದ್ದೇವೆ. ಭವಿಷ್ಯದಲ್ಲಿ ನಮಗೆ ಅಗತ್ಯವಿರುವ ಕೌಶಲ್ಯಗಳನ್ನು ಮೌಲ್ಯಮಾಪನ ಮಾಡುತ್ತಿದ್ದೇವೆ” ಎಂದಿದ್ದಾರೆ.

ವರದಿಗಳ ಪ್ರಕಾರ, ಜೂನ್‌ ತ್ರೈಮಾಸಿಕದಲ್ಲಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಂಡಿತ್ತು.

ಅಕ್ರಮ ಸಾಮೂಹಿಕ ವಜಾ ನಿಲ್ಲಿಸಿ: ಕೆಐಟಿಯು

ಟಿಸಿಎಸ್‌ ಉದ್ಯೋಗ ಕಡಿತವನ್ನು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಖಂಡಿಸಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಕೆಐಟಿಯು “ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌)ನಲ್ಲಿ ಬೃಹತ್ ಪ್ರಮಾಣದ ಉದ್ಯೋಗ ಕಡಿತವಾಗಿದೆ. ಸಾವಿರಾರು ಉದ್ಯೋಗಿಗಳು ಕಂಪನಿ ಬಲವಂತವಾಗಿ ರಾಜೀನಾಮೆ ಕೊಡಿಸುತ್ತಿದೆ. ಟಿಸಿಎಸ್ ಆಡಳಿತ ಮಂಡಳಿಯ ಈ ಕಾನೂನುಬಾಹಿರ ಕ್ರಮವನ್ನು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಬಲವಾಗಿ ಖಂಡಿಸುತ್ತದೆ ಎಂದಿದೆ.

ಕೈಗಾರಿಕಾ ತಕರಾರು ಕಾಯ್ದೆಯ ಪ್ರಕಾರ, ಉದ್ಯೋಗದಾತ ಉದ್ಯೋಗಿಯನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸುವುದು ಅಪರಾಧವಾಗಿದೆ. ರಾಜೀನಾಮೆಗೆ ಸಹಿ ಹಾಕಲು ನಿರಾಕರಿಸುವ ಎಲ್ಲಾ ಕಾನೂನುಬದ್ಧ ಹಕ್ಕನ್ನು ಉದ್ಯೋಗಿ ಹೊಂದಿರುತ್ತಾನೆ ಎಂದು ಹೇಳಿದೆ.

ಟಿಸಿಎಸ್‌ ಉದ್ಯೋಗ ಕಡಿತದಿಂದ ಬಾಧಿತ ಉದ್ಯೋಗಿಗಳಿಗೆ ಕೆಐಟಿಯು ಎಲ್ಲಾ ಬೆಂಬಲವನ್ನು ನೀಡುತ್ತದೆ. ಟಿಸಿಎಸ್ ಆಡಳಿತ ಮಂಡಳಿಯು ನೆಲದ ಕಾನೂನನ್ನು ಗೌರವಿಸಬೇಕು ಮತ್ತು ವಜಾಗೊಳಿಸಲಾದ ಎಲ್ಲಾ ಉದ್ಯೋಗಿಗಳನ್ನು ತಕ್ಷಣ ಜಾರಿಗೆ ಬರುವಂತೆ ಮರು ನೇಮಿಸಬೇಕು. ಬಲವಂತದ ರಾಜೀನಾಮೆ ನೀಡುವ ಅಮಾನವೀಯ ಪದ್ಧತಿಯ ವಿರುದ್ಧ ಮತ್ತು ಟಿಸಿಎಸ್‌ನ ಉದ್ಯೋಗಿಗಳೊಂದಿಗೆ ಒಗ್ಗಟ್ಟು ಪ್ರದರ್ಶಿಸುವಂತೆ ಕೆಐಟಿಯು ಎಲ್ಲಾ ಐಟಿ/ಐಟಿಇಎಸ್ ಉದ್ಯೋಗಿಗಳಿಗೆ ಕರೆ ನೀಡುತ್ತದೆ ಎಂದು ಕೆಐಟಿಯು ಹೇಳಿದೆ. ಸಹಾಯವಾಣಿ ಸಂಖ್ಯೆಯನ್ನೂ ನೀಡಿದೆ.

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು 15 ಅಂಶಗಳ ಮಾರ್ಗಸೂಚಿ ರೂಪಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...