Homeಮುಖಪುಟ12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಟಿಸಿಎಸ್: ವರದಿ

12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಟಿಸಿಎಸ್: ವರದಿ

- Advertisement -
- Advertisement -

ಭಾರತದ ಅತಿದೊಡ್ಡ ಐಟಿ ಸೇವಾ ಪೂರೈಕೆದಾರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಇದು ಕಂಪನಿಯ ಒಟ್ಟು ಉದ್ಯೋಗಿಗಳ ಪೈಕಿ ಶೇಕಡ 2ರಷ್ಟು. ಈ ಸಾಮೂಹಿಕ ವಜಾ ಪ್ರಾಥಮಿಕವಾಗಿ ಕಂಪನಿಯ ಮಧ್ಯಮ ಮತ್ತು ಹಿರಿಯ ಶ್ರೇಣಿಯಲ್ಲಿ ಕೆಲಸ ಮಾಡುತ್ತಿರುವವರ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಗಳು ಹೇಳಿವೆ.

ಮನಿ ಕಂಟ್ರೋಲ್ ಸುದ್ದಿ ಸಂಸ್ಥೆಯ ಜೊತೆಗಿನ ಸಂದರ್ಶನದಲ್ಲಿ ಟಿಸಿಎಸ್ ಸಿಇಒ ಕೃತಿವಾಸನ್ ಅವರು ಉದ್ಯೋಗ ಕಡಿತದ ಬಗ್ಗೆ ಘೋಷಣೆ ಮಾಡಿದ್ದಾರೆ. ಪ್ರಸ್ತಕ ಹಣಕಾಸು ವರ್ಷದಲ್ಲಿ (ಏಪ್ರಿಲ್ 2025 ರಿಂದ ಮಾರ್ಚ್ 2026) ಹಂತ ಹಂತವಾಗಿ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಕಂಪನಿಯು ಹೊಸ ಮಾರುಕಟ್ಟೆಗಳನ್ನು ಪ್ರವೇಶಿಸುತ್ತಿದೆ. ಹೊಸ ತಂತ್ರಜ್ಞಾನದಲ್ಲಿ ಹೂಡಿಕೆ ಮಾಡುತ್ತಿದೆ ಮತ್ತು ಕೃತಕ ಬುದ್ದಿಮತ್ತೆ (ಎಐ) ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಆದ್ದರಿಂದ ಸಿಬ್ಬಂದಿಗೆ ಮರು ತರಬೇತಿ ಮತ್ತು ಮರು ನಿಯೋಜನೆ ಮಾಡುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿ ಸುಮಾರು 12,200 ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಕೃತಿವಾಸನ್ ಹೇಳಿದ್ದಾರೆ.

“ಗ್ರಾಹಕ ಸೇವಾ ವಿತರಣೆಯ ಮೇಲೆ ಯಾವುದೇ ಪರಿಣಾಮ ಬೀರದಂತೆ ಈ ಪರಿವರ್ತನೆಯನ್ನು ಸರಿಯಾದ ಕಾಳಜಿಯೊಂದಿಗೆ ಯೋಜಿಸಲಾಗುತ್ತಿದೆ” ಎಂದಿದ್ದಾರೆ.

ತಂತ್ರಜ್ಞಾನ ಮತ್ತು ವ್ಯವಹಾರ ಕಾರ್ಯಾಚರಣೆಗಳಲ್ಲಿನ ಬದಲಾವಣೆಗಳು ಆಂತರಿಕ ಬದಲಾವಣೆಗಳಿಗೆ ಕಾರಣವಾಗುತ್ತಿವೆ ಎಂದು ಕೃತಿವಾಸನ್ ಒಪ್ಪಿಕೊಂಡಿದ್ದಾರೆ.

“ನಾವು ಹೊಸ ತಂತ್ರಜ್ಞಾನಗಳನ್ನು, ವಿಶೇಷವಾಗಿ ಎಐ ಕಾರ್ಯಾಚರಣಾ ಮಾದರಿಯನ್ನು ಅಳವಡಿಸಿಕೊಳ್ಳುತ್ತಿದ್ದೇವೆ. ಇದರಿಂದ ಕೆಲಸ ಮಾಡುವ ವಿಧಾನಗಳು ಬದಲಾಗುತ್ತಿವೆ. ನಾವು ಭವಿಷ್ಯಕ್ಕೆ ಸಿದ್ಧರಾಗಿರಬೇಕಿದೆ ಮತ್ತು ಚುರುಕಾಗಬೇಕಿದೆ. ಆದ್ದರಿಂದ ಎಐ ಅಳವಡಿಸಿಕೊಳ್ಳುತ್ತಿದ್ದೇವೆ. ಭವಿಷ್ಯದಲ್ಲಿ ನಮಗೆ ಅಗತ್ಯವಿರುವ ಕೌಶಲ್ಯಗಳನ್ನು ಮೌಲ್ಯಮಾಪನ ಮಾಡುತ್ತಿದ್ದೇವೆ” ಎಂದಿದ್ದಾರೆ.

ವರದಿಗಳ ಪ್ರಕಾರ, ಜೂನ್‌ ತ್ರೈಮಾಸಿಕದಲ್ಲಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಂಡಿತ್ತು.

ಅಕ್ರಮ ಸಾಮೂಹಿಕ ವಜಾ ನಿಲ್ಲಿಸಿ: ಕೆಐಟಿಯು

ಟಿಸಿಎಸ್‌ ಉದ್ಯೋಗ ಕಡಿತವನ್ನು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಖಂಡಿಸಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಕೆಐಟಿಯು “ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌)ನಲ್ಲಿ ಬೃಹತ್ ಪ್ರಮಾಣದ ಉದ್ಯೋಗ ಕಡಿತವಾಗಿದೆ. ಸಾವಿರಾರು ಉದ್ಯೋಗಿಗಳು ಕಂಪನಿ ಬಲವಂತವಾಗಿ ರಾಜೀನಾಮೆ ಕೊಡಿಸುತ್ತಿದೆ. ಟಿಸಿಎಸ್ ಆಡಳಿತ ಮಂಡಳಿಯ ಈ ಕಾನೂನುಬಾಹಿರ ಕ್ರಮವನ್ನು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಬಲವಾಗಿ ಖಂಡಿಸುತ್ತದೆ ಎಂದಿದೆ.

ಕೈಗಾರಿಕಾ ತಕರಾರು ಕಾಯ್ದೆಯ ಪ್ರಕಾರ, ಉದ್ಯೋಗದಾತ ಉದ್ಯೋಗಿಯನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸುವುದು ಅಪರಾಧವಾಗಿದೆ. ರಾಜೀನಾಮೆಗೆ ಸಹಿ ಹಾಕಲು ನಿರಾಕರಿಸುವ ಎಲ್ಲಾ ಕಾನೂನುಬದ್ಧ ಹಕ್ಕನ್ನು ಉದ್ಯೋಗಿ ಹೊಂದಿರುತ್ತಾನೆ ಎಂದು ಹೇಳಿದೆ.

ಟಿಸಿಎಸ್‌ ಉದ್ಯೋಗ ಕಡಿತದಿಂದ ಬಾಧಿತ ಉದ್ಯೋಗಿಗಳಿಗೆ ಕೆಐಟಿಯು ಎಲ್ಲಾ ಬೆಂಬಲವನ್ನು ನೀಡುತ್ತದೆ. ಟಿಸಿಎಸ್ ಆಡಳಿತ ಮಂಡಳಿಯು ನೆಲದ ಕಾನೂನನ್ನು ಗೌರವಿಸಬೇಕು ಮತ್ತು ವಜಾಗೊಳಿಸಲಾದ ಎಲ್ಲಾ ಉದ್ಯೋಗಿಗಳನ್ನು ತಕ್ಷಣ ಜಾರಿಗೆ ಬರುವಂತೆ ಮರು ನೇಮಿಸಬೇಕು. ಬಲವಂತದ ರಾಜೀನಾಮೆ ನೀಡುವ ಅಮಾನವೀಯ ಪದ್ಧತಿಯ ವಿರುದ್ಧ ಮತ್ತು ಟಿಸಿಎಸ್‌ನ ಉದ್ಯೋಗಿಗಳೊಂದಿಗೆ ಒಗ್ಗಟ್ಟು ಪ್ರದರ್ಶಿಸುವಂತೆ ಕೆಐಟಿಯು ಎಲ್ಲಾ ಐಟಿ/ಐಟಿಇಎಸ್ ಉದ್ಯೋಗಿಗಳಿಗೆ ಕರೆ ನೀಡುತ್ತದೆ ಎಂದು ಕೆಐಟಿಯು ಹೇಳಿದೆ. ಸಹಾಯವಾಣಿ ಸಂಖ್ಯೆಯನ್ನೂ ನೀಡಿದೆ.

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು 15 ಅಂಶಗಳ ಮಾರ್ಗಸೂಚಿ ರೂಪಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...