Homeಮುಖಪುಟದೇವಾಲಯಗಳ ಮೇಲೆ TDP, BJP ಕಾರ್ಯಕರ್ತರ ದಾಳಿ: ಆಂಧ್ರಪ್ರದೇಶದ DGP ಗೌತಮ್ ಸೇವಾಂಗ್ ಗಂಭೀರ ಆರೋಪ

ದೇವಾಲಯಗಳ ಮೇಲೆ TDP, BJP ಕಾರ್ಯಕರ್ತರ ದಾಳಿ: ಆಂಧ್ರಪ್ರದೇಶದ DGP ಗೌತಮ್ ಸೇವಾಂಗ್ ಗಂಭೀರ ಆರೋಪ

ದೇವಾಲಯ ದಾಳಿ ಪ್ರಕರಣಗಳಲ್ಲಿ 13 ಮಂದಿ ಟಿಡಿಪಿ ಕಾರ್ಯಕರ್ತರು ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ತೆಲುಗು ದೇಶಂ ಪಕ್ಷದ ಕಾರ್ಯಕರ್ತರು ದೇವಾಲಯಗಳ ಮೇಲೆ ದಾಳಿ ನಡೆಸಿ ಧಾರ್ಮಿಕ ಗುಂಪುಗಳ ನಡುವೆ ಸುಳ್ಳುಸುದ್ದಿ ಹರಡಿ ಕೋಮುಗಲಭೆ ಸೃಷ್ಟಿಸುವ ಸಂಚು ರೂಪಿಸಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಗೌರಮ್ ಸೇವಾಂಗ್ ನೀಡಿರುವ ಹೇಳಿಕೆ ಉಲ್ಲೇಖಿಸಿ ದಿವೈರ್.ಇನ್ ವರದಿ ಮಾಡಿದೆ. ಡಿಜಿಪಿ ಮಾಡಿರುವ ಆರೋಪ ಚರ್ಚೆಯ ಕಿಡಿ ಹೊತ್ತಿಸಿದೆ.

ಈ ಸಂಬಂಧ ಅಮರಾವತಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಗೌತಮ್ ಸೇವಾಂಗ್, ಟಿಡಿಪಿ ಮತ್ತು ಬಿಜೆಪಿ ಕಾರ್ಯಕರ್ತರು ದೇವಾಲಯ ದಾಳಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. 15 ಮಂದಿ ಟಿಡಿಪಿ ಮತ್ತು 4 ಮಂದಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ದೇವಾಲಯ ದಾಳಿ ಪ್ರಕರಣಗಳಲ್ಲಿ 13 ಮಂದಿ ಟಿಡಿಪಿ ಕಾರ್ಯಕರ್ತರು ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೈದರಾಬಾದ್ ಪಾಲಿಕೆ ಚುನಾವಣೆಯಲ್ಲಿ ಹಿಂದುತ್ವ ಶಕ್ತಿಗಳು ಮೇಲುಗೈ ಪಡೆದಿದ್ದು ಹೇಗೆ?

ಕಳೆದ ಕೆಲವು ತಿಂಗಳುಗಳ ಹಿಂದ ಆಂಧ್ರಪ್ರದೇಶಾದ್ಯಂತ ಹಿಂದೂ ದೇವಾಲಯಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆದಿತ್ತು. ದಾಳಿಕೋರರು ದೇವರಮೂರ್ತಿಗಳನ್ನು ಭಗ್ನಗೊಳಿಸಿ ಧಾರ್ಮಿಕ ಸ್ಥಳವನ್ನು ಧ್ವಂಸ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ಟಿಡಿಪಿ ಮತ್ತು ಬಿಜೆಪಿ ಮುಖಂಡರು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಕ್ರಿಶ್ಚಿಯನ್ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಆರೋಪ ಕೇಳಿಬಂದ ಕೆಲವೇ ದಿನಗಳ ನಂತರ ಡಿಜಿಪಿ ಗೌತಮ್ ಸೇವಾಂಗ್ ದೇವಾಲಯಗಳ ಮೇಲಿನ ದಾಳಿಗೆ ಟಿಡಿಪಿ ಮತ್ತು ಬಿಜೆಪಿ ಕಾರ್ಯಕರ್ತರು ಕಾರಣ ಎಂದು ಗಂಭೀರ ಆರೋಪ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಟಿಡಿಪಿ ಮತ್ತು ಬಿಜೆಪಿ ಕಾರ್ಯಕರ್ತರು ಮದ್ಯ ಸೇವಿಸಿ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತೆಗೆದುಕೊಳ್ಳುತ್ತಿರುವ ಸಾರ್ವಜನಿಕ ತೀರ್ಮಾನಗಳು ದಾಳಿಗೆ ಕಾರಣ. ಇದು ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಅಡ್ಡಿಪಡಿಸುವುದು ಮತ್ತು ಸರ್ಕಾರದ ವಿರುದ್ಧ ಪಿತೂರಿ ಮತ್ತು ರಾಜಕೀಯ ಗೆರಿಲ್ಲಾ ಯುದ್ದದ ಭಾಗವಾಗಿದೆ ಎಂಬುದು ಗೌತಮ್ ಅವರ ಅಭಿಪ್ರಾಯವಾಗಿದೆ ಎಂದು ವರದಿ ಮಾಡಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ರಾಜ್ಯದಲ್ಲಿ ಕೋಮು ಸೌಹಾರ್ದತೆಯನ್ನು ಹಾಳುಮಾಡಲು ಕೆಲ ರಾಜಕೀಯ ಪಕ್ಷಗಳು ಯತ್ನಿಸುತ್ತಿವೆ ಎಂದು ಗೌತಮ್ ಸೇವಾಂಗ್ ಶುಕ್ರವಾರ ಆರೋಪಿಸಿದ್ದರು. ಕೆಲವು ದುರುದ್ಧೇಶಪೂರಿತ ಗುಂಪುಗಳು ಕೃತ್ಯದಲ್ಲಿ ಭಾಗಿಯಾಗಿದ್ದು ತನಿಖೆ ಮುಂದುವರಿದಿದೆ. ಕೆಲ ರಾಜಕೀಯ ಪಕ್ಷಗಳು ಸುಳ್ಳು ಸುದ್ದಿಗಳನ್ನು ಹರಡಲು ಯತ್ನಿಸುತ್ತಿರುವುದು ಈ ದಾಳಿಯ ಹಿಂದಿದೆ. ರಾಜ್ಯದಲ್ಲಿ ವದಂತಿಗಳನ್ನು ಹರಡಿ ಕೋಮುಸೌಹಾರ್ದತೆಯನ್ನು ಹಾಳುಗೆಡವುತ್ತ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಯತ್ನಿಸುತ್ತಿವೆ. 9 ಪ್ರಕರಣಗಳಲ್ಲಿ ಟಿಡಿಪಿ ಮತ್ತು ಬಿಜೆಪಿ ಸದಸ್ಯತ್ವ ಪಡೆದಿರುವವರು ಭಾಗಿಯಾಗಿರುವುದನ್ನು ಅಂಕಿಅಂಶಗಳು ದೃಢಪಡಿಸಿವೆ.

ಬಿಜೆಪಿಯ ಇಬ್ಬರು ಮತ್ತು ಟಿಡಿಪಿಯ ಇಬ್ಬರು ಸದಸ್ಯರು ಸೆಪ್ಟೆಂಬರ್ 2020 ರಲ್ಲಿ ಬೊಮ್ಮೂರು ಗ್ರಾಮದಲ್ಲಿ ವಿನಾಯಕ ಮೂರ್ತಿಗೆ ಹಾನಿ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹರಡಿದ್ದರು. ಬಡವೆಲ್‌‌ನಲ್ಲಿ ಆಂಜನೇಯ ಮೂರ್ತಿಗೆ ಟಿಡಿಪಿ ಕಾರ್ಯಕರ್ತನೊಬ್ಬ ಚಪ್ಪಲಿ ಹಾರವನ್ನು ಹಾಕಿದ್ದ ಎಂಬ ಆರೋಪವೂ ಇದೆ. ಜನರಲ್ಲಿ ಗೊಂದಲ ಮೂಡಿಸಲು ಇಂತಹ ಸುದ್ಧಿಗಳನ್ನು ಹಬ್ಬಿಸುತ್ತಿದ್ದರು ಎಂದು ಆರೋಪಿಸಲಾಗಿದ್ದು, ಈ ಸಂಬಂಧ ನಾಲ್ವರು ಟಿಡಿಪಿ ಕಾರ್ಯಕರ್ತರು ಸೇರಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಅದಾನಿಗೆ 6 ವಿಮಾನ ನಿಲ್ದಾಣಗಳ ನಿರ್ವಹಣೆ ನೀಡುವುದರ ವಿರುದ್ಧ ದನಿಯೆತ್ತಿದ್ದ ಹಣಕಾಸು ಇಲಾಖೆ, ನೀತಿ ಆಯೋಗ! ಕಾರಣವೇನು?

ರಾಜ್ಯದ 180 ದೇವಾಲಯಗಳ ಧ್ವಂಸ ಅಪರಾಧ ಪ್ರಕರಣಗಳಲ್ಲಿ 337 ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾದ ಆರೋಪ ಇವರ ಮೇಲಿದೆ. 4643 ಆರೋಪಿಗಳು ಕೋಮುಗಲಭೆಯನ್ನು ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಡಿಜಿಪಿ ಗೌತಮ್ ಹೇಳಿದ್ದಾರೆಂದು ದಿವೈರ್.ಇನ್ ವರದಿ ಮಾಡಿದೆ.

ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇನೆ. ಧಾರ್ಮಿಕ ದ್ವೇಷವನ್ನು ಕೆರಳಿಸಬೇಡಿ. ಸಾಮಾಜಿಕ ಜಾಲತಾಣಗಳ ಮೂಲಕ ವದಂತಿಗಳನ್ನು ಹರಡಬೇಡಿ. ನೀವು ಇಂತಹ ಕೆಲಸ ಮಾಡಿದರೆ ನಾವು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಗೌತಮ್ ಎಚ್ಚರಿಕೆ ನೀಡಿದ್ದಾರೆ.

ಡಿಜಿಪಿ ಗೌತಮ್ ಆರೋಪದ ಬೆನ್ನಿಗೇ ಟಿಡಿಪಿ ಮತ್ತು ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದ್ದು ಡಿಜಿಪಿ ವೈ.ಎಸ್. ಜಗನ್ ಏಜೆಂಟ್ ಎಂದು ದೂರಿದ್ದಾರೆ. ಅವರು “ನೀವು ವೈಎಸ್ಆರ್‌ಸಿ ಪಕ್ಷದ ವಕ್ತಾರರಾಗಲು ಲಾಯಕ್ಕು’’ ಎಂದು ಟಿಡಿಪಿ ಪಕ್ಷದ ರಾಜ್ಯಾಧ್ಯಕ್ಷರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ ಸಿಎಂ ಜಗನ್ ‘ಸೈಕೋ’ನಂತೆ ವರ್ತಿಸುತ್ತಿದ್ದಾರೆ: ಸಿಎಂ ವಿರುದ್ಧ ಮಾಜಿ ಸಿಎಂ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...