Homeಮುಖಪುಟ'ನಾವು ಎನ್‌ಡಿಎ ಜೊತೆಗಿದ್ದೇವೆ': ಚಂದ್ರಬಾಬು ನಾಯ್ಡು ಮಹತ್ವದ ಹೇಳಿಕೆ

‘ನಾವು ಎನ್‌ಡಿಎ ಜೊತೆಗಿದ್ದೇವೆ’: ಚಂದ್ರಬಾಬು ನಾಯ್ಡು ಮಹತ್ವದ ಹೇಳಿಕೆ

- Advertisement -
- Advertisement -

ಕೇಂದ್ರದಲ್ಲಿ ಸರಕಾರ ರಚನೆಗೆ ಬಿಜೆಪಿ ನೇತೃತ್ವದ ಎನ್‌ಡಿಎಗೆ ತಮ್ಮ ಬೆಂಬಲವನ್ನು ಟಿಡಿಪಿ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು ಪುನರುಚ್ಛರಿಸಿದ್ದಾರೆ.

ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಈ ಬಗೆಗಿನ ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ್ದು, ನಿಮಗೆ ಯಾವಾಗಲೂ ಸುದ್ದಿ ಬೇಕು. ನನಗೆ ಅನುಭವ ಇದೆ. ನಾನು ಈ ದೇಶದಲ್ಲಿ ಹಲವಾರು ರಾಜಕೀಯ ಬದಲಾವಣೆಗಳನ್ನು ನೋಡಿದ್ದೇನೆ. ನಾವು ಎನ್‌ಡಿಎಯಲ್ಲಿದ್ದೇವೆ, ನಾನು ಎನ್‌ಡಿಎ ಸಭೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನು ದೆಹಲಿಗೆ ಹೋಗುತ್ತಿದ್ದೇನೆ. ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳುಗಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷದ ಕಾರ್ಯಕರ್ತರ ಶ್ರಮವಿದೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಐದು ವರ್ಷಗಳ ಕಾಲ ಹೋರಾಟ ನಡಸಿದ್ದು, ಇದೀಗ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 293 ಸ್ಥಾನಗಳನ್ನು, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು 233 ಸ್ಥಾನಗಳನ್ನು ಮತ್ತು ಇತರರು 17 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಬಿಜೆಪಿಗೆ ಸಂಪೂರ್ಣ ಬಹುಮತ ಸಿಗದ ಕಾರಣ ಟಿಡಿಪಿ ಮತ್ತು ಜೆಡಿಯು ಕಿಂಗ್‌ ಮೇಕರ್‌ ಆಗಿದೆ. ಈ ಎರಡೂ ಪಕ್ಷಗಳು ಚುನಾವಣೆ ಪೂರ್ವದಲ್ಲೇ ಎನ್‌ಡಿಎ ಜೊತೆ ಮೈತ್ರಿಯನ್ನು ಮಾಡಿಕೊಂಡಿದ್ದವು. ಆದರೆ ಫಲಿತಾಂಶದ ಬಳಿಕ ಇಂಡಿಯಾ ಮೈತ್ರಿಕೂಟದ ನಾಯಕರು ನಾಯ್ಡು ಮತ್ತು ನಿತೀಶ್‌ ಅವರನ್ನು ತಮ್ಮತ್ತ ಸೆಳೆಯಲು ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಎಲ್ಲಾ ಬೆಳವಣಿಗೆಗಳನ್ನು ಚಂದ್ರಬಾಬು ನಾಯ್ಡು ನಿರಾಕರಿಸಿದ್ದು, ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲವನ್ನು ಪುನರುಚ್ಛರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ದೂರವಿಡಬೇಕು, ಆದ್ದರಿಂದ ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್‌ ಅವರಿಗೆ ಈ ಮೊದಲು ಮನವಿಯನ್ನು ಕೂಡ ಮಾಡಿಕೊಂಡಿರುವುದನ್ನು ನಾವು ಗಮನಿಸಬಹುದಾಗಿದೆ.

https://x.com/i/status/1798228771918807448

ಇದನ್ನು ಓದಿ: ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...