Homeಮುಖಪುಟಆಂಧ್ರದಲ್ಲಿ ಮುಸ್ಲಿಮರ 4% ಮೀಸಲಾತಿಗೆ ಪಕ್ಷವು ಬದ್ಧವಾಗಿದೆ: ಟಿಡಿಪಿ

ಆಂಧ್ರದಲ್ಲಿ ಮುಸ್ಲಿಮರ 4% ಮೀಸಲಾತಿಗೆ ಪಕ್ಷವು ಬದ್ಧವಾಗಿದೆ: ಟಿಡಿಪಿ

- Advertisement -
- Advertisement -

ಒಬಿಸಿ ಪಟ್ಟಿಯಡಿ ಮುಸ್ಲಿಮರಿಗೆ ನೀಡಿರುವ 4% ಮೀಸಲಾತಿಗೆ ತಮ್ಮ ಪಕ್ಷವು ಬದ್ಧವಾಗಿದೆ ಎಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ಮತ್ತು ಎನ್ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಶುಕ್ರವಾರ ಹೇಳಿದ್ದಾರೆ.

ಮಿತ್ರ ಪಕ್ಷವಾದ ಬಿಜೆಪಿಯಿಂದ ಭಿನ್ನವಾದ ನಿಲುವಿನಲ್ಲಿ, ಬಡ ಮುಸ್ಲಿಮರು ಬಡತನದಿಂದ ಹೊರಬರಲು ಸಹಾಯ ಮಾಡುವ ಉದ್ದೇಶದಿಂದ ಮೀಸಲಾತಿಯನ್ನು ಕಲ್ಯಾಣ ಕ್ರಮ ಎಂದು ಲೋಕೇಶ್ ಬಣ್ಣಿಸಿದ್ದು, ಟಿಡಿಪಿ ಇದನ್ನು ಅಲ್ಪಸಂಖ್ಯಾತರ ಓಲೈಕೆಯಾಗಿ ನೋಡುವುದಿಲ್ಲ ಎಂದು ಹೇಳಿದ್ದಾರೆ.

ಒಂದು ನಿರ್ದಿಷ್ಟ ವಿಭಾಗವು ಬಡತನದಲ್ಲಿ ವಾಸಿಸುತ್ತಿದ್ದರೆ ಒಂದು ರಾಷ್ಟ್ರ ಅಥವಾ ರಾಜ್ಯವು ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಲಾಗುವುದಿಲ್ಲ. ಕಡಿಮೆ ಪ್ರಾತಿನಿಧ್ಯ ಇರುವ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸುವಂತಹ ನೀತಿಗಳನ್ನು ಸರ್ಕಾರಗಳು ಜಾರಿಗೊಳಿಸಬೇಕು. ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ನೀಡುವ ನಿರ್ಧಾರವನ್ನು ಆ ದೃಷ್ಟಿಕೋನದಿಂದ ಕೈಗೊಳ್ಳಲಾಗಿದೆಯೇ ವಿನಃ ರಾಜಕೀಯ ಲಾಭಕ್ಕಾಗಿ ಅಥವಾ ಯಾರನ್ನೂ ಓಲೈಸುವ ಉದ್ದೇಶದಿಂದ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿರುವ ಮೀಸಲಾತಿಯನ್ನು ಟೀಕಿಸಿದ್ದರು. ಅಧಿಕಾರಕ್ಕೆ ಮರಳಿದ ನಂತರ ಮುಸ್ಲಿಮರ ಮೀಸಲಾತಿ ರದ್ದು ಪಡಿಸಿ ಎಸ್ಸಿ, ಎಸ್ಟಿಗಳು ಮತ್ತು ಒಬಿಸಿಗಳಿಗೆ ಆ ಮೀಸಲಾತಿಯನ್ನು ನೀಡುವುದಾಗಿ ಹೇಳಿದ್ದರು.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರವೂ ಟಿಡಿಪಿ ಮುಸ್ಲಿಂ ಮೀಸಲಾತಿಯನ್ನು ಬೆಂಬಲಿಸಿತ್ತು. ಮೈತ್ರಿಯಲ್ಲಿದ್ದಾಗ ಕೆಲವು ನಿರ್ದಿಷ್ಟ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವುದು ತಪ್ಪಲ್ಲ ಎಂದು ನಾಯ್ಡು ಆಂಧ್ರಪ್ರದೇಶದಲ್ಲಿ ಮತದಾನಕ್ಕೆ ದಿನಗಳ ಮೊದಲು ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಈ ವಿಚಾರದಲ್ಲಿ ಟಿಡಿಪಿ ಮತ್ತು ಬಿಜೆಪಿ ಭಿನ್ನ ನಿಲುವು ಹೊಂದಿದೆ ಎಂದು ಅವರು ಹೇಳಿದ್ದರು.

ವಿವಾದಿತ ವಿಷಯದ ಬಗ್ಗೆ ತನ್ನ ತಂದೆಯ ನಿಲುವನ್ನು ವಿವರಿಸಿದ ಲೋಕೇಶ್, ಟಿಡಿಪಿ ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುವುದಕ್ಕೆ ಬದ್ಧವಾಗಿದೆ ಮತ್ತು ಅದಕ್ಕೆ ಓಲೈಕೆ ಎಂದರ್ಥವಲ್ಲ. ಆಂಧ್ರಪ್ರದೇಶದಲ್ಲಿ ಮುಸ್ಲಿಮರು ಬಡತನದಲ್ಲಿ ನರಳುತ್ತಿರುವುದನ್ನು ಗಮನಿಸಿದ್ದೇವೆ. ನಾವು ನಿಮ್ಮನ್ನು ಬೆಂಬಲಿಸುತ್ತೇವೆ. ನಾವು ಯಾವಾಗಲೂ ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಪಾಲುದಾರರೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಲು ಬಯಸುತ್ತೇವೆ ಎಂದು ಹೇಳಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಯ ದೊಡ್ಡ ವಿಷಯಗಳಿಗೆ ಬಂದಾಗ ನಿರ್ದಿಷ್ಟ ಶಾಸನದ ಬಗ್ಗೆ ನಾವು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಪ್ರಯತ್ನಿಸುತ್ತೇವೆ ಅವರು ಹೇಳಿದ್ದಾರೆ.

ಅಮರಾವತಿಯು ಆಂಧ್ರಪ್ರದೇಶದ ಏಕೈಕ ರಾಜಧಾನಿಯಾಗಲಿದೆ ಎಂದು ಲೋಕೇಶ್ ಸ್ಪಷ್ಟಪಡಿಸಿದ್ದು, ಶೀಘ್ರದಲ್ಲೇ ರಚನೆಯಾಗಲಿರುವ ಟಿಡಿಪಿ ಸರ್ಕಾರವು ವಿಶಾಖಪಟ್ಟಣಂಗೆ ಭವ್ಯವಾದ ಯೋಜನೆಗಳನ್ನು ನೀಡಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್ ವಿವಿಪ್ಯಾಟ್‌ ಸುಧಾರಣೆ ನಿಲುವು ಹೊಂದಿದೆ ಹೊರತು ಇವಿಎಂಗಳನ್ನು ತಿರಸ್ಕರಿಸಿಲ್ಲ: ಪಿ ಚಿದಂಬರಂ ಸ್ಪಷ್ಟನೆ

 

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...