Homeಮುಖಪುಟಆಂಧ್ರದಲ್ಲಿ ಮುಸ್ಲಿಮರ 4% ಮೀಸಲಾತಿಗೆ ಪಕ್ಷವು ಬದ್ಧವಾಗಿದೆ: ಟಿಡಿಪಿ

ಆಂಧ್ರದಲ್ಲಿ ಮುಸ್ಲಿಮರ 4% ಮೀಸಲಾತಿಗೆ ಪಕ್ಷವು ಬದ್ಧವಾಗಿದೆ: ಟಿಡಿಪಿ

- Advertisement -
- Advertisement -

ಒಬಿಸಿ ಪಟ್ಟಿಯಡಿ ಮುಸ್ಲಿಮರಿಗೆ ನೀಡಿರುವ 4% ಮೀಸಲಾತಿಗೆ ತಮ್ಮ ಪಕ್ಷವು ಬದ್ಧವಾಗಿದೆ ಎಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ಮತ್ತು ಎನ್ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಶುಕ್ರವಾರ ಹೇಳಿದ್ದಾರೆ.

ಮಿತ್ರ ಪಕ್ಷವಾದ ಬಿಜೆಪಿಯಿಂದ ಭಿನ್ನವಾದ ನಿಲುವಿನಲ್ಲಿ, ಬಡ ಮುಸ್ಲಿಮರು ಬಡತನದಿಂದ ಹೊರಬರಲು ಸಹಾಯ ಮಾಡುವ ಉದ್ದೇಶದಿಂದ ಮೀಸಲಾತಿಯನ್ನು ಕಲ್ಯಾಣ ಕ್ರಮ ಎಂದು ಲೋಕೇಶ್ ಬಣ್ಣಿಸಿದ್ದು, ಟಿಡಿಪಿ ಇದನ್ನು ಅಲ್ಪಸಂಖ್ಯಾತರ ಓಲೈಕೆಯಾಗಿ ನೋಡುವುದಿಲ್ಲ ಎಂದು ಹೇಳಿದ್ದಾರೆ.

ಒಂದು ನಿರ್ದಿಷ್ಟ ವಿಭಾಗವು ಬಡತನದಲ್ಲಿ ವಾಸಿಸುತ್ತಿದ್ದರೆ ಒಂದು ರಾಷ್ಟ್ರ ಅಥವಾ ರಾಜ್ಯವು ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಲಾಗುವುದಿಲ್ಲ. ಕಡಿಮೆ ಪ್ರಾತಿನಿಧ್ಯ ಇರುವ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸುವಂತಹ ನೀತಿಗಳನ್ನು ಸರ್ಕಾರಗಳು ಜಾರಿಗೊಳಿಸಬೇಕು. ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ನೀಡುವ ನಿರ್ಧಾರವನ್ನು ಆ ದೃಷ್ಟಿಕೋನದಿಂದ ಕೈಗೊಳ್ಳಲಾಗಿದೆಯೇ ವಿನಃ ರಾಜಕೀಯ ಲಾಭಕ್ಕಾಗಿ ಅಥವಾ ಯಾರನ್ನೂ ಓಲೈಸುವ ಉದ್ದೇಶದಿಂದ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿರುವ ಮೀಸಲಾತಿಯನ್ನು ಟೀಕಿಸಿದ್ದರು. ಅಧಿಕಾರಕ್ಕೆ ಮರಳಿದ ನಂತರ ಮುಸ್ಲಿಮರ ಮೀಸಲಾತಿ ರದ್ದು ಪಡಿಸಿ ಎಸ್ಸಿ, ಎಸ್ಟಿಗಳು ಮತ್ತು ಒಬಿಸಿಗಳಿಗೆ ಆ ಮೀಸಲಾತಿಯನ್ನು ನೀಡುವುದಾಗಿ ಹೇಳಿದ್ದರು.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರವೂ ಟಿಡಿಪಿ ಮುಸ್ಲಿಂ ಮೀಸಲಾತಿಯನ್ನು ಬೆಂಬಲಿಸಿತ್ತು. ಮೈತ್ರಿಯಲ್ಲಿದ್ದಾಗ ಕೆಲವು ನಿರ್ದಿಷ್ಟ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವುದು ತಪ್ಪಲ್ಲ ಎಂದು ನಾಯ್ಡು ಆಂಧ್ರಪ್ರದೇಶದಲ್ಲಿ ಮತದಾನಕ್ಕೆ ದಿನಗಳ ಮೊದಲು ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಈ ವಿಚಾರದಲ್ಲಿ ಟಿಡಿಪಿ ಮತ್ತು ಬಿಜೆಪಿ ಭಿನ್ನ ನಿಲುವು ಹೊಂದಿದೆ ಎಂದು ಅವರು ಹೇಳಿದ್ದರು.

ವಿವಾದಿತ ವಿಷಯದ ಬಗ್ಗೆ ತನ್ನ ತಂದೆಯ ನಿಲುವನ್ನು ವಿವರಿಸಿದ ಲೋಕೇಶ್, ಟಿಡಿಪಿ ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುವುದಕ್ಕೆ ಬದ್ಧವಾಗಿದೆ ಮತ್ತು ಅದಕ್ಕೆ ಓಲೈಕೆ ಎಂದರ್ಥವಲ್ಲ. ಆಂಧ್ರಪ್ರದೇಶದಲ್ಲಿ ಮುಸ್ಲಿಮರು ಬಡತನದಲ್ಲಿ ನರಳುತ್ತಿರುವುದನ್ನು ಗಮನಿಸಿದ್ದೇವೆ. ನಾವು ನಿಮ್ಮನ್ನು ಬೆಂಬಲಿಸುತ್ತೇವೆ. ನಾವು ಯಾವಾಗಲೂ ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಪಾಲುದಾರರೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಲು ಬಯಸುತ್ತೇವೆ ಎಂದು ಹೇಳಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಯ ದೊಡ್ಡ ವಿಷಯಗಳಿಗೆ ಬಂದಾಗ ನಿರ್ದಿಷ್ಟ ಶಾಸನದ ಬಗ್ಗೆ ನಾವು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಪ್ರಯತ್ನಿಸುತ್ತೇವೆ ಅವರು ಹೇಳಿದ್ದಾರೆ.

ಅಮರಾವತಿಯು ಆಂಧ್ರಪ್ರದೇಶದ ಏಕೈಕ ರಾಜಧಾನಿಯಾಗಲಿದೆ ಎಂದು ಲೋಕೇಶ್ ಸ್ಪಷ್ಟಪಡಿಸಿದ್ದು, ಶೀಘ್ರದಲ್ಲೇ ರಚನೆಯಾಗಲಿರುವ ಟಿಡಿಪಿ ಸರ್ಕಾರವು ವಿಶಾಖಪಟ್ಟಣಂಗೆ ಭವ್ಯವಾದ ಯೋಜನೆಗಳನ್ನು ನೀಡಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್ ವಿವಿಪ್ಯಾಟ್‌ ಸುಧಾರಣೆ ನಿಲುವು ಹೊಂದಿದೆ ಹೊರತು ಇವಿಎಂಗಳನ್ನು ತಿರಸ್ಕರಿಸಿಲ್ಲ: ಪಿ ಚಿದಂಬರಂ ಸ್ಪಷ್ಟನೆ

 

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...