Homeಮುಖಪುಟಆಂಧ್ರದಲ್ಲಿ ಮುಸ್ಲಿಮರ 4% ಮೀಸಲಾತಿಗೆ ಪಕ್ಷವು ಬದ್ಧವಾಗಿದೆ: ಟಿಡಿಪಿ

ಆಂಧ್ರದಲ್ಲಿ ಮುಸ್ಲಿಮರ 4% ಮೀಸಲಾತಿಗೆ ಪಕ್ಷವು ಬದ್ಧವಾಗಿದೆ: ಟಿಡಿಪಿ

- Advertisement -
- Advertisement -

ಒಬಿಸಿ ಪಟ್ಟಿಯಡಿ ಮುಸ್ಲಿಮರಿಗೆ ನೀಡಿರುವ 4% ಮೀಸಲಾತಿಗೆ ತಮ್ಮ ಪಕ್ಷವು ಬದ್ಧವಾಗಿದೆ ಎಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ಮತ್ತು ಎನ್ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಶುಕ್ರವಾರ ಹೇಳಿದ್ದಾರೆ.

ಮಿತ್ರ ಪಕ್ಷವಾದ ಬಿಜೆಪಿಯಿಂದ ಭಿನ್ನವಾದ ನಿಲುವಿನಲ್ಲಿ, ಬಡ ಮುಸ್ಲಿಮರು ಬಡತನದಿಂದ ಹೊರಬರಲು ಸಹಾಯ ಮಾಡುವ ಉದ್ದೇಶದಿಂದ ಮೀಸಲಾತಿಯನ್ನು ಕಲ್ಯಾಣ ಕ್ರಮ ಎಂದು ಲೋಕೇಶ್ ಬಣ್ಣಿಸಿದ್ದು, ಟಿಡಿಪಿ ಇದನ್ನು ಅಲ್ಪಸಂಖ್ಯಾತರ ಓಲೈಕೆಯಾಗಿ ನೋಡುವುದಿಲ್ಲ ಎಂದು ಹೇಳಿದ್ದಾರೆ.

ಒಂದು ನಿರ್ದಿಷ್ಟ ವಿಭಾಗವು ಬಡತನದಲ್ಲಿ ವಾಸಿಸುತ್ತಿದ್ದರೆ ಒಂದು ರಾಷ್ಟ್ರ ಅಥವಾ ರಾಜ್ಯವು ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಲಾಗುವುದಿಲ್ಲ. ಕಡಿಮೆ ಪ್ರಾತಿನಿಧ್ಯ ಇರುವ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸುವಂತಹ ನೀತಿಗಳನ್ನು ಸರ್ಕಾರಗಳು ಜಾರಿಗೊಳಿಸಬೇಕು. ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ನೀಡುವ ನಿರ್ಧಾರವನ್ನು ಆ ದೃಷ್ಟಿಕೋನದಿಂದ ಕೈಗೊಳ್ಳಲಾಗಿದೆಯೇ ವಿನಃ ರಾಜಕೀಯ ಲಾಭಕ್ಕಾಗಿ ಅಥವಾ ಯಾರನ್ನೂ ಓಲೈಸುವ ಉದ್ದೇಶದಿಂದ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿರುವ ಮೀಸಲಾತಿಯನ್ನು ಟೀಕಿಸಿದ್ದರು. ಅಧಿಕಾರಕ್ಕೆ ಮರಳಿದ ನಂತರ ಮುಸ್ಲಿಮರ ಮೀಸಲಾತಿ ರದ್ದು ಪಡಿಸಿ ಎಸ್ಸಿ, ಎಸ್ಟಿಗಳು ಮತ್ತು ಒಬಿಸಿಗಳಿಗೆ ಆ ಮೀಸಲಾತಿಯನ್ನು ನೀಡುವುದಾಗಿ ಹೇಳಿದ್ದರು.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರವೂ ಟಿಡಿಪಿ ಮುಸ್ಲಿಂ ಮೀಸಲಾತಿಯನ್ನು ಬೆಂಬಲಿಸಿತ್ತು. ಮೈತ್ರಿಯಲ್ಲಿದ್ದಾಗ ಕೆಲವು ನಿರ್ದಿಷ್ಟ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವುದು ತಪ್ಪಲ್ಲ ಎಂದು ನಾಯ್ಡು ಆಂಧ್ರಪ್ರದೇಶದಲ್ಲಿ ಮತದಾನಕ್ಕೆ ದಿನಗಳ ಮೊದಲು ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಈ ವಿಚಾರದಲ್ಲಿ ಟಿಡಿಪಿ ಮತ್ತು ಬಿಜೆಪಿ ಭಿನ್ನ ನಿಲುವು ಹೊಂದಿದೆ ಎಂದು ಅವರು ಹೇಳಿದ್ದರು.

ವಿವಾದಿತ ವಿಷಯದ ಬಗ್ಗೆ ತನ್ನ ತಂದೆಯ ನಿಲುವನ್ನು ವಿವರಿಸಿದ ಲೋಕೇಶ್, ಟಿಡಿಪಿ ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುವುದಕ್ಕೆ ಬದ್ಧವಾಗಿದೆ ಮತ್ತು ಅದಕ್ಕೆ ಓಲೈಕೆ ಎಂದರ್ಥವಲ್ಲ. ಆಂಧ್ರಪ್ರದೇಶದಲ್ಲಿ ಮುಸ್ಲಿಮರು ಬಡತನದಲ್ಲಿ ನರಳುತ್ತಿರುವುದನ್ನು ಗಮನಿಸಿದ್ದೇವೆ. ನಾವು ನಿಮ್ಮನ್ನು ಬೆಂಬಲಿಸುತ್ತೇವೆ. ನಾವು ಯಾವಾಗಲೂ ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಪಾಲುದಾರರೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಲು ಬಯಸುತ್ತೇವೆ ಎಂದು ಹೇಳಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಯ ದೊಡ್ಡ ವಿಷಯಗಳಿಗೆ ಬಂದಾಗ ನಿರ್ದಿಷ್ಟ ಶಾಸನದ ಬಗ್ಗೆ ನಾವು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಪ್ರಯತ್ನಿಸುತ್ತೇವೆ ಅವರು ಹೇಳಿದ್ದಾರೆ.

ಅಮರಾವತಿಯು ಆಂಧ್ರಪ್ರದೇಶದ ಏಕೈಕ ರಾಜಧಾನಿಯಾಗಲಿದೆ ಎಂದು ಲೋಕೇಶ್ ಸ್ಪಷ್ಟಪಡಿಸಿದ್ದು, ಶೀಘ್ರದಲ್ಲೇ ರಚನೆಯಾಗಲಿರುವ ಟಿಡಿಪಿ ಸರ್ಕಾರವು ವಿಶಾಖಪಟ್ಟಣಂಗೆ ಭವ್ಯವಾದ ಯೋಜನೆಗಳನ್ನು ನೀಡಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್ ವಿವಿಪ್ಯಾಟ್‌ ಸುಧಾರಣೆ ನಿಲುವು ಹೊಂದಿದೆ ಹೊರತು ಇವಿಎಂಗಳನ್ನು ತಿರಸ್ಕರಿಸಿಲ್ಲ: ಪಿ ಚಿದಂಬರಂ ಸ್ಪಷ್ಟನೆ

 

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...