Homeಮುಖಪುಟಭಾರತಕ್ಕೆ ಚಹಾ ಬಂದಿದ್ದು... : ಅಂತರಾಷ್ಟ್ರೀಯ ಚಹಾ ದಿನಕ್ಕೊಂದು ಬರಹ.

ಭಾರತಕ್ಕೆ ಚಹಾ ಬಂದಿದ್ದು… : ಅಂತರಾಷ್ಟ್ರೀಯ ಚಹಾ ದಿನಕ್ಕೊಂದು ಬರಹ.

ಇವತ್ತು ಅಂತರಾಷ್ಟ್ರೀಯ ಚಹಾ ದಿನ. ಲೇಖಕ "ಎಸ್. ಕುಮಾರ್" ಬರೆದಿರುವ "ಬುಕ್ ಆಫ್ ಟೀ" ಪುಸ್ತಕದಿಂದ ಆಯ್ದ ಬರಹ. ಅಂತರಾಷ್ಟ್ರೀಯ ಚಹಾ ದಿನಕ್ಕಾಗಿ, ಚಹಾ ಹೀರುತ್ತಾ ಓದಿ..

- Advertisement -
- Advertisement -

ಭಾರತ ಚಹಾ ಉತ್ಪಾದಿಸುವ ರಾಷ್ಟ್ರಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಚೀನಾ ಮೊದಲ ಸ್ಥಾನದಲ್ಲಿದ್ದರೆ, ಆಫ್ರಿಕಾದ ಕೀನ್ಯಾ, ಶ್ರೀಲಂಕಾ ನಂತರದ ಸ್ಥಾನದಲ್ಲಿವೆ. ಈ ದೇಶಗಳ ಚಹಾ ಅಲ್ಲಿನ ಭೌಗೋಳಿಕ ಕಾರಣಗಳಿಂದಾಗಿಯೇ ವೈವಿಧ್ಯಮಯವಾಗಿವೆ.

ಭಾರತದಲ್ಲಿ ಚಹಾ ಮೊದಲು ಬೆಳೆದಿದ್ದು ಆಸ್ಸಾಮಿನ ಸದಿಯಾ ಕಣಿವೆಯಲ್ಲಿ. ಆದರೆ ಈ ಕಣಿವೆ ಬ್ರಹ್ಮಪುತ್ರ ನದಿಯ ಹರಿವಿನಲ್ಲಿ ಕಣ್ಮರೆಯಾಗಿ ಹೋಯಿತು.

ಇಲ್ಲಿಗೆ ಚಹಾ ಸಸಿಗಳನ್ನು ತಂದಿದ್ದು ಚಾಲ್ರ್ಸ್ ಬ್ರೂಸ್. ಸಿಂಗ್‍ಪೊ ಅನ್ನೋ ಬುಡಕಟ್ಟಿನವರಿಂದ ಟೀ ಗಿಡದ ಬೀಜಗಳನ್ನು ಸಂಗ್ರಹಿಸಿದ ಈತ ಕೋಲ್ಕತಾದಲ್ಲಿದ್ದ ಸಸ್ಯ ಉದ್ಯಾನಕ್ಕೆ ಪರೀಕ್ಷೆಗೆಂದು ಕಳಿಸಿದ. ಹೀಗೆ ಪರೀಕ್ಷೆಗೆ ಕಳಿಸುವ ಮುನ್ನವೇ ಚಾಲ್ರ್ಸ್‍ಗೆ ಇದು ಚೀನಾದಲ್ಲಿ ಬೆಳೆವ ಟೀ ಸಸ್ಯದ ಕುಟುಂಬಕ್ಕೆ ಸೇರಿದ್ದೇ ಇರಬೇಕೆಂಬ ಗುಮಾನಿ ಇತ್ತು.

ಕೊಲ್ಕತಾದ ಸಸ್ಯಶಾಸ್ತ್ರಜ್ಞರು ಆತನ ಗುಮಾನಿ ನಿಜವೆಂದು ಹೇಳಿದರು. ಆದರೆ ಕೆಲವು ಪ್ರಯೋಗಗಳ ನಂತರ ಈ ಬೀಜಗಳನ್ನು ಅಸ್ಸಾಮ್ ಮತ್ತು ಈಶಾನ್ಯ ಭಾರತದ ಹಲವು ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ಬಿತ್ತಲಾಯಿತು. ಆದರೆ ಯಶ ಸಿಗಲಿಲ್ಲ. ಆದರೆ ದಾರ್ಜಿಲಿಂಗ್‍ನಲ್ಲಿ ಟೀ ಸಸಿಗಳು ಚಿಗುರಿದವು.

ಡಾರ್ಜಲಿಂಗ್ ನ ಚಹಾ ಎಸ್ಟೇಟ್ ಒಂದರ ವಿಹಂಗಮ ನೋಟ

1834ರಲ್ಲಿ ಲಾರ್ಡ್ ವಿಲಿಯಂ ಬೆಂಟಿಂಕ್ (ಭಾರತದ ಗವರ್ನರ್ ಜನರಲ್ ಆಗಿದ್ದ ಈತ ಸತಿ ಪದ್ಧತಿಯನ್ನು ವಿರೋಧಿಸಿದ್ದ) ಭಾರತದಲ್ಲಿ ಟೀ ಬೆಳೆಯನ್ನು ಹೆಚ್ಚಿಸುವುದಕ್ಕಾಗಿ ಒಂದು ಸಮಿತಿಯನ್ನು ನೇಮಿಸಿದ. ಬ್ರಿಟಿಷ್ ಸರ್ಕಾರ ಕೂಡ ವಿಜ್ಞಾನಿಗಳ ತಂಡವೊಂದನ್ನು ಅಸ್ಸಾಮಿಗೆ ಅಧ್ಯಯನಕ್ಕೆಂದು ಕಳಿಸಿತು.

1837ರ ಹೊತ್ತಿಗೆ ಮೊದಲ ಟೀ ಫಸಲು ಕೈಗೆ ಸಿಕ್ಕಿತು. 8 ದೊಡ್ಡ ಚಹಾ ಎಲೆಗಳು ತುಂಬಿದ ಪೆಟ್ಟಿಗೆಗಳು ಇಂಗ್ಲೆಂಡಿಗೆ ರವಾನೆಯಾದವು. ಇದೇ ವೇಳೆ ಅಂದ್ರೆ 1839ರಲ್ಲಿ ಅಸ್ಸಾಮಿನ ಸಿಬ್‍ಸಾಗರ್ ಮತ್ತು ಲಾಖಿಮ್‍ಪುರದಲ್ಲಿ ಬ್ರಿಟಿಷ್ ಸರ್ಕಾರ ಟೀಯನ್ನು ಉದ್ಯಮವನ್ನಾಗಿ ರೂಪಿಸುವ ಕೆಲವು ಹೆಜ್ಜೆಗಳನ್ನಿರಿಸಿತು.

ಈ ಬಗ್ಗೆ ಕೇಳಿ ತಿಳಿದ ಲಂಡನ್ ಮತ್ತು ಕೋಲ್ಕತಾ ವ್ಯಾಪಾರಿಗಳೂ ಮುಂದೆ ಬಂದರು. ಬ್ರಿಟಿಷರೊಂದಿಗೆ ಸ್ಪರ್ಧೆಗಿಳಿದು ಒಂದು ಕಂಪನಿ ಹುಟ್ಟುಹಾಕುವಲ್ಲಿ ಭಾರತೀಯರೂ ಯಶ ಕಂಡರು. ಮಣಿರಾಮ್ ದೀವಾನ್ ಎಂಬುವರು ಭಾರತದಲ್ಲಿ ಮೊದಲ ಟೀ ಕಂಪನಿ ಆರಂಭಿಸುವಲ್ಲಿ ಯಶಸ್ವಿಯಾದರು. ಇದು ಜಗತ್ತಿನ ಮೊದಲ ಟೀ ಕಂಪನಿ ಎಂದೂ ಹೇಳಲಾಗುತ್ತದೆ. ಇದರಲ್ಲಿ ರವೀಂದ್ರನಾಥ ಠಾಗೂರ ಅಜ್ಜ ದ್ವಾರಕನಾಥ ಠಾಗೂರ ನಿರ್ದೇಶಕರಾಗಿದ್ದರು.

ಅದೇ ವರ್ಷ ಹಲವು ಕಂಪನಿಗಳು ಹುಟ್ಟಿಕೊಂಡವು. ನಂತರದ ದಿನಗಳಲ್ಲಿ ಅವೆಲ್ಲ ಕಂಪನಿಗಳನ್ನು ಅಸ್ಸಾಮ್ ಕಂಪನಿ ಹೆಸರಿನಲ್ಲಿ ಒಂದೇ ಸೂರಿನಡಿ ತರಲಾಯಿತು. 1856ರ ಹೊತ್ತಿಗೆ ದಾರ್ಜಿಲಿಂಗ್‍ನಲ್ಲಿ ಟೀ ತೋಟಗಳು ಹೆಚ್ಚಿದವು. ದಾರ್ಜಿಲಿಂಗ್ ಅಲ್ಲದೆ ಪಶ್ಚಿಮ ಬಂಗಾಳದಲ್ಲಿ ಕಚಾರ್, ದುವಾರ್ಸ್, ತೆರಾಯ್‍ಗಳಲ್ಲಿ ಟೀ ಉತ್ಪಾದನೆ ಶುರುವಾಯಿತು. ನಿಧಾನವಾಗಿ ದೆಹ್ರಾದೂನ್, ಕಾಂಗ್ರ, ಪಶ್ಚಿಮ ಹಿಮಾಲಯ ಪ್ರದೇಶಗಳ ಮೂಲಕ ದಕ್ಷಿಣಕ್ಕೂ ವ್ಯಾಪಿಸಿತು.

ನೀಲಗಿರಿ ಬೆಟ್ಟದಲ್ಲಿರುವ ಟೀ ಎಸ್ಟೇಟ್

ದಕ್ಷಿಣ ಭಾರತದಲ್ಲಿ ನೀಲಗಿರಿ ಪರ್ವತ ಶ್ರೇಣಿಯಲ್ಲಿ ಟೀ ಸಮೃದ್ಧವಾಗಿ ಬೆಳೆಯಿತು. ವೈನಾಡ್, ತಿರುವಾಂಕೂರುಗಳಲ್ಲಿ ಟೀ ತೋಟಗಳ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದವು. ಅಸ್ಸಾಮಿನ ಆ ಸಿಂಗ್‍ಪೊ ಬುಡಕಟ್ಟಿನವರಿಗೆ ಟೀ ಗಿಡ ಸಿಕ್ಕಾಗ ಬಹುಶಃ ಇದೊಂದು ಜಗತ್ತಿನ ಮಾರುಕಟ್ಟೆಯಲ್ಲಿ ಮಹತ್ವದ ಸ್ಥಾನ ಪಡೆದುಕೊಳ್ಳಬಹುದು, ಮನೆ ಮನೆಯಲ್ಲೂ ಸ್ಥಾನ ಪಡೆದುಕೊಳ್ಳಬಹುದು ಊಹೆ ಬಂದಿರಲಿಕ್ಕಿಲ್ಲ ಅನ್ನಿಸುತ್ತೆ.

ಪ್ರಸ್ತುತ ಭಾರತದಲ್ಲೇ 39 ಸಾವಿರಕ್ಕೂ ಹೆಚ್ಚು ಟೀ ಎಸ್ಟೇಟ್‍ಗಳಿವೆ. ಈ ಪೈಕಿ 30 ಸಾವಿರ ತೋಟಗಳು ದಕ್ಷಿಣ ಭಾರತದಲ್ಲೇ ಇವೆ.


ಓದಿ:  60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...