Homeಮುಖಪುಟಭಾರತಕ್ಕೆ ಚಹಾ ಬಂದಿದ್ದು... : ಅಂತರಾಷ್ಟ್ರೀಯ ಚಹಾ ದಿನಕ್ಕೊಂದು ಬರಹ.

ಭಾರತಕ್ಕೆ ಚಹಾ ಬಂದಿದ್ದು… : ಅಂತರಾಷ್ಟ್ರೀಯ ಚಹಾ ದಿನಕ್ಕೊಂದು ಬರಹ.

ಇವತ್ತು ಅಂತರಾಷ್ಟ್ರೀಯ ಚಹಾ ದಿನ. ಲೇಖಕ "ಎಸ್. ಕುಮಾರ್" ಬರೆದಿರುವ "ಬುಕ್ ಆಫ್ ಟೀ" ಪುಸ್ತಕದಿಂದ ಆಯ್ದ ಬರಹ. ಅಂತರಾಷ್ಟ್ರೀಯ ಚಹಾ ದಿನಕ್ಕಾಗಿ, ಚಹಾ ಹೀರುತ್ತಾ ಓದಿ..

- Advertisement -
- Advertisement -

ಭಾರತ ಚಹಾ ಉತ್ಪಾದಿಸುವ ರಾಷ್ಟ್ರಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಚೀನಾ ಮೊದಲ ಸ್ಥಾನದಲ್ಲಿದ್ದರೆ, ಆಫ್ರಿಕಾದ ಕೀನ್ಯಾ, ಶ್ರೀಲಂಕಾ ನಂತರದ ಸ್ಥಾನದಲ್ಲಿವೆ. ಈ ದೇಶಗಳ ಚಹಾ ಅಲ್ಲಿನ ಭೌಗೋಳಿಕ ಕಾರಣಗಳಿಂದಾಗಿಯೇ ವೈವಿಧ್ಯಮಯವಾಗಿವೆ.

ಭಾರತದಲ್ಲಿ ಚಹಾ ಮೊದಲು ಬೆಳೆದಿದ್ದು ಆಸ್ಸಾಮಿನ ಸದಿಯಾ ಕಣಿವೆಯಲ್ಲಿ. ಆದರೆ ಈ ಕಣಿವೆ ಬ್ರಹ್ಮಪುತ್ರ ನದಿಯ ಹರಿವಿನಲ್ಲಿ ಕಣ್ಮರೆಯಾಗಿ ಹೋಯಿತು.

ಇಲ್ಲಿಗೆ ಚಹಾ ಸಸಿಗಳನ್ನು ತಂದಿದ್ದು ಚಾಲ್ರ್ಸ್ ಬ್ರೂಸ್. ಸಿಂಗ್‍ಪೊ ಅನ್ನೋ ಬುಡಕಟ್ಟಿನವರಿಂದ ಟೀ ಗಿಡದ ಬೀಜಗಳನ್ನು ಸಂಗ್ರಹಿಸಿದ ಈತ ಕೋಲ್ಕತಾದಲ್ಲಿದ್ದ ಸಸ್ಯ ಉದ್ಯಾನಕ್ಕೆ ಪರೀಕ್ಷೆಗೆಂದು ಕಳಿಸಿದ. ಹೀಗೆ ಪರೀಕ್ಷೆಗೆ ಕಳಿಸುವ ಮುನ್ನವೇ ಚಾಲ್ರ್ಸ್‍ಗೆ ಇದು ಚೀನಾದಲ್ಲಿ ಬೆಳೆವ ಟೀ ಸಸ್ಯದ ಕುಟುಂಬಕ್ಕೆ ಸೇರಿದ್ದೇ ಇರಬೇಕೆಂಬ ಗುಮಾನಿ ಇತ್ತು.

ಕೊಲ್ಕತಾದ ಸಸ್ಯಶಾಸ್ತ್ರಜ್ಞರು ಆತನ ಗುಮಾನಿ ನಿಜವೆಂದು ಹೇಳಿದರು. ಆದರೆ ಕೆಲವು ಪ್ರಯೋಗಗಳ ನಂತರ ಈ ಬೀಜಗಳನ್ನು ಅಸ್ಸಾಮ್ ಮತ್ತು ಈಶಾನ್ಯ ಭಾರತದ ಹಲವು ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ಬಿತ್ತಲಾಯಿತು. ಆದರೆ ಯಶ ಸಿಗಲಿಲ್ಲ. ಆದರೆ ದಾರ್ಜಿಲಿಂಗ್‍ನಲ್ಲಿ ಟೀ ಸಸಿಗಳು ಚಿಗುರಿದವು.

ಡಾರ್ಜಲಿಂಗ್ ನ ಚಹಾ ಎಸ್ಟೇಟ್ ಒಂದರ ವಿಹಂಗಮ ನೋಟ

1834ರಲ್ಲಿ ಲಾರ್ಡ್ ವಿಲಿಯಂ ಬೆಂಟಿಂಕ್ (ಭಾರತದ ಗವರ್ನರ್ ಜನರಲ್ ಆಗಿದ್ದ ಈತ ಸತಿ ಪದ್ಧತಿಯನ್ನು ವಿರೋಧಿಸಿದ್ದ) ಭಾರತದಲ್ಲಿ ಟೀ ಬೆಳೆಯನ್ನು ಹೆಚ್ಚಿಸುವುದಕ್ಕಾಗಿ ಒಂದು ಸಮಿತಿಯನ್ನು ನೇಮಿಸಿದ. ಬ್ರಿಟಿಷ್ ಸರ್ಕಾರ ಕೂಡ ವಿಜ್ಞಾನಿಗಳ ತಂಡವೊಂದನ್ನು ಅಸ್ಸಾಮಿಗೆ ಅಧ್ಯಯನಕ್ಕೆಂದು ಕಳಿಸಿತು.

1837ರ ಹೊತ್ತಿಗೆ ಮೊದಲ ಟೀ ಫಸಲು ಕೈಗೆ ಸಿಕ್ಕಿತು. 8 ದೊಡ್ಡ ಚಹಾ ಎಲೆಗಳು ತುಂಬಿದ ಪೆಟ್ಟಿಗೆಗಳು ಇಂಗ್ಲೆಂಡಿಗೆ ರವಾನೆಯಾದವು. ಇದೇ ವೇಳೆ ಅಂದ್ರೆ 1839ರಲ್ಲಿ ಅಸ್ಸಾಮಿನ ಸಿಬ್‍ಸಾಗರ್ ಮತ್ತು ಲಾಖಿಮ್‍ಪುರದಲ್ಲಿ ಬ್ರಿಟಿಷ್ ಸರ್ಕಾರ ಟೀಯನ್ನು ಉದ್ಯಮವನ್ನಾಗಿ ರೂಪಿಸುವ ಕೆಲವು ಹೆಜ್ಜೆಗಳನ್ನಿರಿಸಿತು.

ಈ ಬಗ್ಗೆ ಕೇಳಿ ತಿಳಿದ ಲಂಡನ್ ಮತ್ತು ಕೋಲ್ಕತಾ ವ್ಯಾಪಾರಿಗಳೂ ಮುಂದೆ ಬಂದರು. ಬ್ರಿಟಿಷರೊಂದಿಗೆ ಸ್ಪರ್ಧೆಗಿಳಿದು ಒಂದು ಕಂಪನಿ ಹುಟ್ಟುಹಾಕುವಲ್ಲಿ ಭಾರತೀಯರೂ ಯಶ ಕಂಡರು. ಮಣಿರಾಮ್ ದೀವಾನ್ ಎಂಬುವರು ಭಾರತದಲ್ಲಿ ಮೊದಲ ಟೀ ಕಂಪನಿ ಆರಂಭಿಸುವಲ್ಲಿ ಯಶಸ್ವಿಯಾದರು. ಇದು ಜಗತ್ತಿನ ಮೊದಲ ಟೀ ಕಂಪನಿ ಎಂದೂ ಹೇಳಲಾಗುತ್ತದೆ. ಇದರಲ್ಲಿ ರವೀಂದ್ರನಾಥ ಠಾಗೂರ ಅಜ್ಜ ದ್ವಾರಕನಾಥ ಠಾಗೂರ ನಿರ್ದೇಶಕರಾಗಿದ್ದರು.

ಅದೇ ವರ್ಷ ಹಲವು ಕಂಪನಿಗಳು ಹುಟ್ಟಿಕೊಂಡವು. ನಂತರದ ದಿನಗಳಲ್ಲಿ ಅವೆಲ್ಲ ಕಂಪನಿಗಳನ್ನು ಅಸ್ಸಾಮ್ ಕಂಪನಿ ಹೆಸರಿನಲ್ಲಿ ಒಂದೇ ಸೂರಿನಡಿ ತರಲಾಯಿತು. 1856ರ ಹೊತ್ತಿಗೆ ದಾರ್ಜಿಲಿಂಗ್‍ನಲ್ಲಿ ಟೀ ತೋಟಗಳು ಹೆಚ್ಚಿದವು. ದಾರ್ಜಿಲಿಂಗ್ ಅಲ್ಲದೆ ಪಶ್ಚಿಮ ಬಂಗಾಳದಲ್ಲಿ ಕಚಾರ್, ದುವಾರ್ಸ್, ತೆರಾಯ್‍ಗಳಲ್ಲಿ ಟೀ ಉತ್ಪಾದನೆ ಶುರುವಾಯಿತು. ನಿಧಾನವಾಗಿ ದೆಹ್ರಾದೂನ್, ಕಾಂಗ್ರ, ಪಶ್ಚಿಮ ಹಿಮಾಲಯ ಪ್ರದೇಶಗಳ ಮೂಲಕ ದಕ್ಷಿಣಕ್ಕೂ ವ್ಯಾಪಿಸಿತು.

ನೀಲಗಿರಿ ಬೆಟ್ಟದಲ್ಲಿರುವ ಟೀ ಎಸ್ಟೇಟ್

ದಕ್ಷಿಣ ಭಾರತದಲ್ಲಿ ನೀಲಗಿರಿ ಪರ್ವತ ಶ್ರೇಣಿಯಲ್ಲಿ ಟೀ ಸಮೃದ್ಧವಾಗಿ ಬೆಳೆಯಿತು. ವೈನಾಡ್, ತಿರುವಾಂಕೂರುಗಳಲ್ಲಿ ಟೀ ತೋಟಗಳ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದವು. ಅಸ್ಸಾಮಿನ ಆ ಸಿಂಗ್‍ಪೊ ಬುಡಕಟ್ಟಿನವರಿಗೆ ಟೀ ಗಿಡ ಸಿಕ್ಕಾಗ ಬಹುಶಃ ಇದೊಂದು ಜಗತ್ತಿನ ಮಾರುಕಟ್ಟೆಯಲ್ಲಿ ಮಹತ್ವದ ಸ್ಥಾನ ಪಡೆದುಕೊಳ್ಳಬಹುದು, ಮನೆ ಮನೆಯಲ್ಲೂ ಸ್ಥಾನ ಪಡೆದುಕೊಳ್ಳಬಹುದು ಊಹೆ ಬಂದಿರಲಿಕ್ಕಿಲ್ಲ ಅನ್ನಿಸುತ್ತೆ.

ಪ್ರಸ್ತುತ ಭಾರತದಲ್ಲೇ 39 ಸಾವಿರಕ್ಕೂ ಹೆಚ್ಚು ಟೀ ಎಸ್ಟೇಟ್‍ಗಳಿವೆ. ಈ ಪೈಕಿ 30 ಸಾವಿರ ತೋಟಗಳು ದಕ್ಷಿಣ ಭಾರತದಲ್ಲೇ ಇವೆ.


ಓದಿ:  60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...