Homeಮುಖಪುಟಭಾರತಕ್ಕೆ ಚಹಾ ಬಂದಿದ್ದು... : ಅಂತರಾಷ್ಟ್ರೀಯ ಚಹಾ ದಿನಕ್ಕೊಂದು ಬರಹ.

ಭಾರತಕ್ಕೆ ಚಹಾ ಬಂದಿದ್ದು… : ಅಂತರಾಷ್ಟ್ರೀಯ ಚಹಾ ದಿನಕ್ಕೊಂದು ಬರಹ.

ಇವತ್ತು ಅಂತರಾಷ್ಟ್ರೀಯ ಚಹಾ ದಿನ. ಲೇಖಕ "ಎಸ್. ಕುಮಾರ್" ಬರೆದಿರುವ "ಬುಕ್ ಆಫ್ ಟೀ" ಪುಸ್ತಕದಿಂದ ಆಯ್ದ ಬರಹ. ಅಂತರಾಷ್ಟ್ರೀಯ ಚಹಾ ದಿನಕ್ಕಾಗಿ, ಚಹಾ ಹೀರುತ್ತಾ ಓದಿ..

- Advertisement -
- Advertisement -

ಭಾರತ ಚಹಾ ಉತ್ಪಾದಿಸುವ ರಾಷ್ಟ್ರಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಚೀನಾ ಮೊದಲ ಸ್ಥಾನದಲ್ಲಿದ್ದರೆ, ಆಫ್ರಿಕಾದ ಕೀನ್ಯಾ, ಶ್ರೀಲಂಕಾ ನಂತರದ ಸ್ಥಾನದಲ್ಲಿವೆ. ಈ ದೇಶಗಳ ಚಹಾ ಅಲ್ಲಿನ ಭೌಗೋಳಿಕ ಕಾರಣಗಳಿಂದಾಗಿಯೇ ವೈವಿಧ್ಯಮಯವಾಗಿವೆ.

ಭಾರತದಲ್ಲಿ ಚಹಾ ಮೊದಲು ಬೆಳೆದಿದ್ದು ಆಸ್ಸಾಮಿನ ಸದಿಯಾ ಕಣಿವೆಯಲ್ಲಿ. ಆದರೆ ಈ ಕಣಿವೆ ಬ್ರಹ್ಮಪುತ್ರ ನದಿಯ ಹರಿವಿನಲ್ಲಿ ಕಣ್ಮರೆಯಾಗಿ ಹೋಯಿತು.

ಇಲ್ಲಿಗೆ ಚಹಾ ಸಸಿಗಳನ್ನು ತಂದಿದ್ದು ಚಾಲ್ರ್ಸ್ ಬ್ರೂಸ್. ಸಿಂಗ್‍ಪೊ ಅನ್ನೋ ಬುಡಕಟ್ಟಿನವರಿಂದ ಟೀ ಗಿಡದ ಬೀಜಗಳನ್ನು ಸಂಗ್ರಹಿಸಿದ ಈತ ಕೋಲ್ಕತಾದಲ್ಲಿದ್ದ ಸಸ್ಯ ಉದ್ಯಾನಕ್ಕೆ ಪರೀಕ್ಷೆಗೆಂದು ಕಳಿಸಿದ. ಹೀಗೆ ಪರೀಕ್ಷೆಗೆ ಕಳಿಸುವ ಮುನ್ನವೇ ಚಾಲ್ರ್ಸ್‍ಗೆ ಇದು ಚೀನಾದಲ್ಲಿ ಬೆಳೆವ ಟೀ ಸಸ್ಯದ ಕುಟುಂಬಕ್ಕೆ ಸೇರಿದ್ದೇ ಇರಬೇಕೆಂಬ ಗುಮಾನಿ ಇತ್ತು.

ಕೊಲ್ಕತಾದ ಸಸ್ಯಶಾಸ್ತ್ರಜ್ಞರು ಆತನ ಗುಮಾನಿ ನಿಜವೆಂದು ಹೇಳಿದರು. ಆದರೆ ಕೆಲವು ಪ್ರಯೋಗಗಳ ನಂತರ ಈ ಬೀಜಗಳನ್ನು ಅಸ್ಸಾಮ್ ಮತ್ತು ಈಶಾನ್ಯ ಭಾರತದ ಹಲವು ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ಬಿತ್ತಲಾಯಿತು. ಆದರೆ ಯಶ ಸಿಗಲಿಲ್ಲ. ಆದರೆ ದಾರ್ಜಿಲಿಂಗ್‍ನಲ್ಲಿ ಟೀ ಸಸಿಗಳು ಚಿಗುರಿದವು.

ಡಾರ್ಜಲಿಂಗ್ ನ ಚಹಾ ಎಸ್ಟೇಟ್ ಒಂದರ ವಿಹಂಗಮ ನೋಟ

1834ರಲ್ಲಿ ಲಾರ್ಡ್ ವಿಲಿಯಂ ಬೆಂಟಿಂಕ್ (ಭಾರತದ ಗವರ್ನರ್ ಜನರಲ್ ಆಗಿದ್ದ ಈತ ಸತಿ ಪದ್ಧತಿಯನ್ನು ವಿರೋಧಿಸಿದ್ದ) ಭಾರತದಲ್ಲಿ ಟೀ ಬೆಳೆಯನ್ನು ಹೆಚ್ಚಿಸುವುದಕ್ಕಾಗಿ ಒಂದು ಸಮಿತಿಯನ್ನು ನೇಮಿಸಿದ. ಬ್ರಿಟಿಷ್ ಸರ್ಕಾರ ಕೂಡ ವಿಜ್ಞಾನಿಗಳ ತಂಡವೊಂದನ್ನು ಅಸ್ಸಾಮಿಗೆ ಅಧ್ಯಯನಕ್ಕೆಂದು ಕಳಿಸಿತು.

1837ರ ಹೊತ್ತಿಗೆ ಮೊದಲ ಟೀ ಫಸಲು ಕೈಗೆ ಸಿಕ್ಕಿತು. 8 ದೊಡ್ಡ ಚಹಾ ಎಲೆಗಳು ತುಂಬಿದ ಪೆಟ್ಟಿಗೆಗಳು ಇಂಗ್ಲೆಂಡಿಗೆ ರವಾನೆಯಾದವು. ಇದೇ ವೇಳೆ ಅಂದ್ರೆ 1839ರಲ್ಲಿ ಅಸ್ಸಾಮಿನ ಸಿಬ್‍ಸಾಗರ್ ಮತ್ತು ಲಾಖಿಮ್‍ಪುರದಲ್ಲಿ ಬ್ರಿಟಿಷ್ ಸರ್ಕಾರ ಟೀಯನ್ನು ಉದ್ಯಮವನ್ನಾಗಿ ರೂಪಿಸುವ ಕೆಲವು ಹೆಜ್ಜೆಗಳನ್ನಿರಿಸಿತು.

ಈ ಬಗ್ಗೆ ಕೇಳಿ ತಿಳಿದ ಲಂಡನ್ ಮತ್ತು ಕೋಲ್ಕತಾ ವ್ಯಾಪಾರಿಗಳೂ ಮುಂದೆ ಬಂದರು. ಬ್ರಿಟಿಷರೊಂದಿಗೆ ಸ್ಪರ್ಧೆಗಿಳಿದು ಒಂದು ಕಂಪನಿ ಹುಟ್ಟುಹಾಕುವಲ್ಲಿ ಭಾರತೀಯರೂ ಯಶ ಕಂಡರು. ಮಣಿರಾಮ್ ದೀವಾನ್ ಎಂಬುವರು ಭಾರತದಲ್ಲಿ ಮೊದಲ ಟೀ ಕಂಪನಿ ಆರಂಭಿಸುವಲ್ಲಿ ಯಶಸ್ವಿಯಾದರು. ಇದು ಜಗತ್ತಿನ ಮೊದಲ ಟೀ ಕಂಪನಿ ಎಂದೂ ಹೇಳಲಾಗುತ್ತದೆ. ಇದರಲ್ಲಿ ರವೀಂದ್ರನಾಥ ಠಾಗೂರ ಅಜ್ಜ ದ್ವಾರಕನಾಥ ಠಾಗೂರ ನಿರ್ದೇಶಕರಾಗಿದ್ದರು.

ಅದೇ ವರ್ಷ ಹಲವು ಕಂಪನಿಗಳು ಹುಟ್ಟಿಕೊಂಡವು. ನಂತರದ ದಿನಗಳಲ್ಲಿ ಅವೆಲ್ಲ ಕಂಪನಿಗಳನ್ನು ಅಸ್ಸಾಮ್ ಕಂಪನಿ ಹೆಸರಿನಲ್ಲಿ ಒಂದೇ ಸೂರಿನಡಿ ತರಲಾಯಿತು. 1856ರ ಹೊತ್ತಿಗೆ ದಾರ್ಜಿಲಿಂಗ್‍ನಲ್ಲಿ ಟೀ ತೋಟಗಳು ಹೆಚ್ಚಿದವು. ದಾರ್ಜಿಲಿಂಗ್ ಅಲ್ಲದೆ ಪಶ್ಚಿಮ ಬಂಗಾಳದಲ್ಲಿ ಕಚಾರ್, ದುವಾರ್ಸ್, ತೆರಾಯ್‍ಗಳಲ್ಲಿ ಟೀ ಉತ್ಪಾದನೆ ಶುರುವಾಯಿತು. ನಿಧಾನವಾಗಿ ದೆಹ್ರಾದೂನ್, ಕಾಂಗ್ರ, ಪಶ್ಚಿಮ ಹಿಮಾಲಯ ಪ್ರದೇಶಗಳ ಮೂಲಕ ದಕ್ಷಿಣಕ್ಕೂ ವ್ಯಾಪಿಸಿತು.

ನೀಲಗಿರಿ ಬೆಟ್ಟದಲ್ಲಿರುವ ಟೀ ಎಸ್ಟೇಟ್

ದಕ್ಷಿಣ ಭಾರತದಲ್ಲಿ ನೀಲಗಿರಿ ಪರ್ವತ ಶ್ರೇಣಿಯಲ್ಲಿ ಟೀ ಸಮೃದ್ಧವಾಗಿ ಬೆಳೆಯಿತು. ವೈನಾಡ್, ತಿರುವಾಂಕೂರುಗಳಲ್ಲಿ ಟೀ ತೋಟಗಳ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದವು. ಅಸ್ಸಾಮಿನ ಆ ಸಿಂಗ್‍ಪೊ ಬುಡಕಟ್ಟಿನವರಿಗೆ ಟೀ ಗಿಡ ಸಿಕ್ಕಾಗ ಬಹುಶಃ ಇದೊಂದು ಜಗತ್ತಿನ ಮಾರುಕಟ್ಟೆಯಲ್ಲಿ ಮಹತ್ವದ ಸ್ಥಾನ ಪಡೆದುಕೊಳ್ಳಬಹುದು, ಮನೆ ಮನೆಯಲ್ಲೂ ಸ್ಥಾನ ಪಡೆದುಕೊಳ್ಳಬಹುದು ಊಹೆ ಬಂದಿರಲಿಕ್ಕಿಲ್ಲ ಅನ್ನಿಸುತ್ತೆ.

ಪ್ರಸ್ತುತ ಭಾರತದಲ್ಲೇ 39 ಸಾವಿರಕ್ಕೂ ಹೆಚ್ಚು ಟೀ ಎಸ್ಟೇಟ್‍ಗಳಿವೆ. ಈ ಪೈಕಿ 30 ಸಾವಿರ ತೋಟಗಳು ದಕ್ಷಿಣ ಭಾರತದಲ್ಲೇ ಇವೆ.


ಓದಿ:  60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...