Homeಮುಖಪುಟಭಾರತಕ್ಕೆ ಚಹಾ ಬಂದಿದ್ದು... : ಅಂತರಾಷ್ಟ್ರೀಯ ಚಹಾ ದಿನಕ್ಕೊಂದು ಬರಹ.

ಭಾರತಕ್ಕೆ ಚಹಾ ಬಂದಿದ್ದು… : ಅಂತರಾಷ್ಟ್ರೀಯ ಚಹಾ ದಿನಕ್ಕೊಂದು ಬರಹ.

ಇವತ್ತು ಅಂತರಾಷ್ಟ್ರೀಯ ಚಹಾ ದಿನ. ಲೇಖಕ "ಎಸ್. ಕುಮಾರ್" ಬರೆದಿರುವ "ಬುಕ್ ಆಫ್ ಟೀ" ಪುಸ್ತಕದಿಂದ ಆಯ್ದ ಬರಹ. ಅಂತರಾಷ್ಟ್ರೀಯ ಚಹಾ ದಿನಕ್ಕಾಗಿ, ಚಹಾ ಹೀರುತ್ತಾ ಓದಿ..

- Advertisement -
- Advertisement -

ಭಾರತ ಚಹಾ ಉತ್ಪಾದಿಸುವ ರಾಷ್ಟ್ರಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಚೀನಾ ಮೊದಲ ಸ್ಥಾನದಲ್ಲಿದ್ದರೆ, ಆಫ್ರಿಕಾದ ಕೀನ್ಯಾ, ಶ್ರೀಲಂಕಾ ನಂತರದ ಸ್ಥಾನದಲ್ಲಿವೆ. ಈ ದೇಶಗಳ ಚಹಾ ಅಲ್ಲಿನ ಭೌಗೋಳಿಕ ಕಾರಣಗಳಿಂದಾಗಿಯೇ ವೈವಿಧ್ಯಮಯವಾಗಿವೆ.

ಭಾರತದಲ್ಲಿ ಚಹಾ ಮೊದಲು ಬೆಳೆದಿದ್ದು ಆಸ್ಸಾಮಿನ ಸದಿಯಾ ಕಣಿವೆಯಲ್ಲಿ. ಆದರೆ ಈ ಕಣಿವೆ ಬ್ರಹ್ಮಪುತ್ರ ನದಿಯ ಹರಿವಿನಲ್ಲಿ ಕಣ್ಮರೆಯಾಗಿ ಹೋಯಿತು.

ಇಲ್ಲಿಗೆ ಚಹಾ ಸಸಿಗಳನ್ನು ತಂದಿದ್ದು ಚಾಲ್ರ್ಸ್ ಬ್ರೂಸ್. ಸಿಂಗ್‍ಪೊ ಅನ್ನೋ ಬುಡಕಟ್ಟಿನವರಿಂದ ಟೀ ಗಿಡದ ಬೀಜಗಳನ್ನು ಸಂಗ್ರಹಿಸಿದ ಈತ ಕೋಲ್ಕತಾದಲ್ಲಿದ್ದ ಸಸ್ಯ ಉದ್ಯಾನಕ್ಕೆ ಪರೀಕ್ಷೆಗೆಂದು ಕಳಿಸಿದ. ಹೀಗೆ ಪರೀಕ್ಷೆಗೆ ಕಳಿಸುವ ಮುನ್ನವೇ ಚಾಲ್ರ್ಸ್‍ಗೆ ಇದು ಚೀನಾದಲ್ಲಿ ಬೆಳೆವ ಟೀ ಸಸ್ಯದ ಕುಟುಂಬಕ್ಕೆ ಸೇರಿದ್ದೇ ಇರಬೇಕೆಂಬ ಗುಮಾನಿ ಇತ್ತು.

ಕೊಲ್ಕತಾದ ಸಸ್ಯಶಾಸ್ತ್ರಜ್ಞರು ಆತನ ಗುಮಾನಿ ನಿಜವೆಂದು ಹೇಳಿದರು. ಆದರೆ ಕೆಲವು ಪ್ರಯೋಗಗಳ ನಂತರ ಈ ಬೀಜಗಳನ್ನು ಅಸ್ಸಾಮ್ ಮತ್ತು ಈಶಾನ್ಯ ಭಾರತದ ಹಲವು ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ಬಿತ್ತಲಾಯಿತು. ಆದರೆ ಯಶ ಸಿಗಲಿಲ್ಲ. ಆದರೆ ದಾರ್ಜಿಲಿಂಗ್‍ನಲ್ಲಿ ಟೀ ಸಸಿಗಳು ಚಿಗುರಿದವು.

ಡಾರ್ಜಲಿಂಗ್ ನ ಚಹಾ ಎಸ್ಟೇಟ್ ಒಂದರ ವಿಹಂಗಮ ನೋಟ

1834ರಲ್ಲಿ ಲಾರ್ಡ್ ವಿಲಿಯಂ ಬೆಂಟಿಂಕ್ (ಭಾರತದ ಗವರ್ನರ್ ಜನರಲ್ ಆಗಿದ್ದ ಈತ ಸತಿ ಪದ್ಧತಿಯನ್ನು ವಿರೋಧಿಸಿದ್ದ) ಭಾರತದಲ್ಲಿ ಟೀ ಬೆಳೆಯನ್ನು ಹೆಚ್ಚಿಸುವುದಕ್ಕಾಗಿ ಒಂದು ಸಮಿತಿಯನ್ನು ನೇಮಿಸಿದ. ಬ್ರಿಟಿಷ್ ಸರ್ಕಾರ ಕೂಡ ವಿಜ್ಞಾನಿಗಳ ತಂಡವೊಂದನ್ನು ಅಸ್ಸಾಮಿಗೆ ಅಧ್ಯಯನಕ್ಕೆಂದು ಕಳಿಸಿತು.

1837ರ ಹೊತ್ತಿಗೆ ಮೊದಲ ಟೀ ಫಸಲು ಕೈಗೆ ಸಿಕ್ಕಿತು. 8 ದೊಡ್ಡ ಚಹಾ ಎಲೆಗಳು ತುಂಬಿದ ಪೆಟ್ಟಿಗೆಗಳು ಇಂಗ್ಲೆಂಡಿಗೆ ರವಾನೆಯಾದವು. ಇದೇ ವೇಳೆ ಅಂದ್ರೆ 1839ರಲ್ಲಿ ಅಸ್ಸಾಮಿನ ಸಿಬ್‍ಸಾಗರ್ ಮತ್ತು ಲಾಖಿಮ್‍ಪುರದಲ್ಲಿ ಬ್ರಿಟಿಷ್ ಸರ್ಕಾರ ಟೀಯನ್ನು ಉದ್ಯಮವನ್ನಾಗಿ ರೂಪಿಸುವ ಕೆಲವು ಹೆಜ್ಜೆಗಳನ್ನಿರಿಸಿತು.

ಈ ಬಗ್ಗೆ ಕೇಳಿ ತಿಳಿದ ಲಂಡನ್ ಮತ್ತು ಕೋಲ್ಕತಾ ವ್ಯಾಪಾರಿಗಳೂ ಮುಂದೆ ಬಂದರು. ಬ್ರಿಟಿಷರೊಂದಿಗೆ ಸ್ಪರ್ಧೆಗಿಳಿದು ಒಂದು ಕಂಪನಿ ಹುಟ್ಟುಹಾಕುವಲ್ಲಿ ಭಾರತೀಯರೂ ಯಶ ಕಂಡರು. ಮಣಿರಾಮ್ ದೀವಾನ್ ಎಂಬುವರು ಭಾರತದಲ್ಲಿ ಮೊದಲ ಟೀ ಕಂಪನಿ ಆರಂಭಿಸುವಲ್ಲಿ ಯಶಸ್ವಿಯಾದರು. ಇದು ಜಗತ್ತಿನ ಮೊದಲ ಟೀ ಕಂಪನಿ ಎಂದೂ ಹೇಳಲಾಗುತ್ತದೆ. ಇದರಲ್ಲಿ ರವೀಂದ್ರನಾಥ ಠಾಗೂರ ಅಜ್ಜ ದ್ವಾರಕನಾಥ ಠಾಗೂರ ನಿರ್ದೇಶಕರಾಗಿದ್ದರು.

ಅದೇ ವರ್ಷ ಹಲವು ಕಂಪನಿಗಳು ಹುಟ್ಟಿಕೊಂಡವು. ನಂತರದ ದಿನಗಳಲ್ಲಿ ಅವೆಲ್ಲ ಕಂಪನಿಗಳನ್ನು ಅಸ್ಸಾಮ್ ಕಂಪನಿ ಹೆಸರಿನಲ್ಲಿ ಒಂದೇ ಸೂರಿನಡಿ ತರಲಾಯಿತು. 1856ರ ಹೊತ್ತಿಗೆ ದಾರ್ಜಿಲಿಂಗ್‍ನಲ್ಲಿ ಟೀ ತೋಟಗಳು ಹೆಚ್ಚಿದವು. ದಾರ್ಜಿಲಿಂಗ್ ಅಲ್ಲದೆ ಪಶ್ಚಿಮ ಬಂಗಾಳದಲ್ಲಿ ಕಚಾರ್, ದುವಾರ್ಸ್, ತೆರಾಯ್‍ಗಳಲ್ಲಿ ಟೀ ಉತ್ಪಾದನೆ ಶುರುವಾಯಿತು. ನಿಧಾನವಾಗಿ ದೆಹ್ರಾದೂನ್, ಕಾಂಗ್ರ, ಪಶ್ಚಿಮ ಹಿಮಾಲಯ ಪ್ರದೇಶಗಳ ಮೂಲಕ ದಕ್ಷಿಣಕ್ಕೂ ವ್ಯಾಪಿಸಿತು.

ನೀಲಗಿರಿ ಬೆಟ್ಟದಲ್ಲಿರುವ ಟೀ ಎಸ್ಟೇಟ್

ದಕ್ಷಿಣ ಭಾರತದಲ್ಲಿ ನೀಲಗಿರಿ ಪರ್ವತ ಶ್ರೇಣಿಯಲ್ಲಿ ಟೀ ಸಮೃದ್ಧವಾಗಿ ಬೆಳೆಯಿತು. ವೈನಾಡ್, ತಿರುವಾಂಕೂರುಗಳಲ್ಲಿ ಟೀ ತೋಟಗಳ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದವು. ಅಸ್ಸಾಮಿನ ಆ ಸಿಂಗ್‍ಪೊ ಬುಡಕಟ್ಟಿನವರಿಗೆ ಟೀ ಗಿಡ ಸಿಕ್ಕಾಗ ಬಹುಶಃ ಇದೊಂದು ಜಗತ್ತಿನ ಮಾರುಕಟ್ಟೆಯಲ್ಲಿ ಮಹತ್ವದ ಸ್ಥಾನ ಪಡೆದುಕೊಳ್ಳಬಹುದು, ಮನೆ ಮನೆಯಲ್ಲೂ ಸ್ಥಾನ ಪಡೆದುಕೊಳ್ಳಬಹುದು ಊಹೆ ಬಂದಿರಲಿಕ್ಕಿಲ್ಲ ಅನ್ನಿಸುತ್ತೆ.

ಪ್ರಸ್ತುತ ಭಾರತದಲ್ಲೇ 39 ಸಾವಿರಕ್ಕೂ ಹೆಚ್ಚು ಟೀ ಎಸ್ಟೇಟ್‍ಗಳಿವೆ. ಈ ಪೈಕಿ 30 ಸಾವಿರ ತೋಟಗಳು ದಕ್ಷಿಣ ಭಾರತದಲ್ಲೇ ಇವೆ.


ಓದಿ:  60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...