Homeಮುಖಪುಟಭಾರತಕ್ಕೆ ಚಹಾ ಬಂದಿದ್ದು... : ಅಂತರಾಷ್ಟ್ರೀಯ ಚಹಾ ದಿನಕ್ಕೊಂದು ಬರಹ.

ಭಾರತಕ್ಕೆ ಚಹಾ ಬಂದಿದ್ದು… : ಅಂತರಾಷ್ಟ್ರೀಯ ಚಹಾ ದಿನಕ್ಕೊಂದು ಬರಹ.

ಇವತ್ತು ಅಂತರಾಷ್ಟ್ರೀಯ ಚಹಾ ದಿನ. ಲೇಖಕ "ಎಸ್. ಕುಮಾರ್" ಬರೆದಿರುವ "ಬುಕ್ ಆಫ್ ಟೀ" ಪುಸ್ತಕದಿಂದ ಆಯ್ದ ಬರಹ. ಅಂತರಾಷ್ಟ್ರೀಯ ಚಹಾ ದಿನಕ್ಕಾಗಿ, ಚಹಾ ಹೀರುತ್ತಾ ಓದಿ..

- Advertisement -
- Advertisement -

ಭಾರತ ಚಹಾ ಉತ್ಪಾದಿಸುವ ರಾಷ್ಟ್ರಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಚೀನಾ ಮೊದಲ ಸ್ಥಾನದಲ್ಲಿದ್ದರೆ, ಆಫ್ರಿಕಾದ ಕೀನ್ಯಾ, ಶ್ರೀಲಂಕಾ ನಂತರದ ಸ್ಥಾನದಲ್ಲಿವೆ. ಈ ದೇಶಗಳ ಚಹಾ ಅಲ್ಲಿನ ಭೌಗೋಳಿಕ ಕಾರಣಗಳಿಂದಾಗಿಯೇ ವೈವಿಧ್ಯಮಯವಾಗಿವೆ.

ಭಾರತದಲ್ಲಿ ಚಹಾ ಮೊದಲು ಬೆಳೆದಿದ್ದು ಆಸ್ಸಾಮಿನ ಸದಿಯಾ ಕಣಿವೆಯಲ್ಲಿ. ಆದರೆ ಈ ಕಣಿವೆ ಬ್ರಹ್ಮಪುತ್ರ ನದಿಯ ಹರಿವಿನಲ್ಲಿ ಕಣ್ಮರೆಯಾಗಿ ಹೋಯಿತು.

ಇಲ್ಲಿಗೆ ಚಹಾ ಸಸಿಗಳನ್ನು ತಂದಿದ್ದು ಚಾಲ್ರ್ಸ್ ಬ್ರೂಸ್. ಸಿಂಗ್‍ಪೊ ಅನ್ನೋ ಬುಡಕಟ್ಟಿನವರಿಂದ ಟೀ ಗಿಡದ ಬೀಜಗಳನ್ನು ಸಂಗ್ರಹಿಸಿದ ಈತ ಕೋಲ್ಕತಾದಲ್ಲಿದ್ದ ಸಸ್ಯ ಉದ್ಯಾನಕ್ಕೆ ಪರೀಕ್ಷೆಗೆಂದು ಕಳಿಸಿದ. ಹೀಗೆ ಪರೀಕ್ಷೆಗೆ ಕಳಿಸುವ ಮುನ್ನವೇ ಚಾಲ್ರ್ಸ್‍ಗೆ ಇದು ಚೀನಾದಲ್ಲಿ ಬೆಳೆವ ಟೀ ಸಸ್ಯದ ಕುಟುಂಬಕ್ಕೆ ಸೇರಿದ್ದೇ ಇರಬೇಕೆಂಬ ಗುಮಾನಿ ಇತ್ತು.

ಕೊಲ್ಕತಾದ ಸಸ್ಯಶಾಸ್ತ್ರಜ್ಞರು ಆತನ ಗುಮಾನಿ ನಿಜವೆಂದು ಹೇಳಿದರು. ಆದರೆ ಕೆಲವು ಪ್ರಯೋಗಗಳ ನಂತರ ಈ ಬೀಜಗಳನ್ನು ಅಸ್ಸಾಮ್ ಮತ್ತು ಈಶಾನ್ಯ ಭಾರತದ ಹಲವು ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ಬಿತ್ತಲಾಯಿತು. ಆದರೆ ಯಶ ಸಿಗಲಿಲ್ಲ. ಆದರೆ ದಾರ್ಜಿಲಿಂಗ್‍ನಲ್ಲಿ ಟೀ ಸಸಿಗಳು ಚಿಗುರಿದವು.

ಡಾರ್ಜಲಿಂಗ್ ನ ಚಹಾ ಎಸ್ಟೇಟ್ ಒಂದರ ವಿಹಂಗಮ ನೋಟ

1834ರಲ್ಲಿ ಲಾರ್ಡ್ ವಿಲಿಯಂ ಬೆಂಟಿಂಕ್ (ಭಾರತದ ಗವರ್ನರ್ ಜನರಲ್ ಆಗಿದ್ದ ಈತ ಸತಿ ಪದ್ಧತಿಯನ್ನು ವಿರೋಧಿಸಿದ್ದ) ಭಾರತದಲ್ಲಿ ಟೀ ಬೆಳೆಯನ್ನು ಹೆಚ್ಚಿಸುವುದಕ್ಕಾಗಿ ಒಂದು ಸಮಿತಿಯನ್ನು ನೇಮಿಸಿದ. ಬ್ರಿಟಿಷ್ ಸರ್ಕಾರ ಕೂಡ ವಿಜ್ಞಾನಿಗಳ ತಂಡವೊಂದನ್ನು ಅಸ್ಸಾಮಿಗೆ ಅಧ್ಯಯನಕ್ಕೆಂದು ಕಳಿಸಿತು.

1837ರ ಹೊತ್ತಿಗೆ ಮೊದಲ ಟೀ ಫಸಲು ಕೈಗೆ ಸಿಕ್ಕಿತು. 8 ದೊಡ್ಡ ಚಹಾ ಎಲೆಗಳು ತುಂಬಿದ ಪೆಟ್ಟಿಗೆಗಳು ಇಂಗ್ಲೆಂಡಿಗೆ ರವಾನೆಯಾದವು. ಇದೇ ವೇಳೆ ಅಂದ್ರೆ 1839ರಲ್ಲಿ ಅಸ್ಸಾಮಿನ ಸಿಬ್‍ಸಾಗರ್ ಮತ್ತು ಲಾಖಿಮ್‍ಪುರದಲ್ಲಿ ಬ್ರಿಟಿಷ್ ಸರ್ಕಾರ ಟೀಯನ್ನು ಉದ್ಯಮವನ್ನಾಗಿ ರೂಪಿಸುವ ಕೆಲವು ಹೆಜ್ಜೆಗಳನ್ನಿರಿಸಿತು.

ಈ ಬಗ್ಗೆ ಕೇಳಿ ತಿಳಿದ ಲಂಡನ್ ಮತ್ತು ಕೋಲ್ಕತಾ ವ್ಯಾಪಾರಿಗಳೂ ಮುಂದೆ ಬಂದರು. ಬ್ರಿಟಿಷರೊಂದಿಗೆ ಸ್ಪರ್ಧೆಗಿಳಿದು ಒಂದು ಕಂಪನಿ ಹುಟ್ಟುಹಾಕುವಲ್ಲಿ ಭಾರತೀಯರೂ ಯಶ ಕಂಡರು. ಮಣಿರಾಮ್ ದೀವಾನ್ ಎಂಬುವರು ಭಾರತದಲ್ಲಿ ಮೊದಲ ಟೀ ಕಂಪನಿ ಆರಂಭಿಸುವಲ್ಲಿ ಯಶಸ್ವಿಯಾದರು. ಇದು ಜಗತ್ತಿನ ಮೊದಲ ಟೀ ಕಂಪನಿ ಎಂದೂ ಹೇಳಲಾಗುತ್ತದೆ. ಇದರಲ್ಲಿ ರವೀಂದ್ರನಾಥ ಠಾಗೂರ ಅಜ್ಜ ದ್ವಾರಕನಾಥ ಠಾಗೂರ ನಿರ್ದೇಶಕರಾಗಿದ್ದರು.

ಅದೇ ವರ್ಷ ಹಲವು ಕಂಪನಿಗಳು ಹುಟ್ಟಿಕೊಂಡವು. ನಂತರದ ದಿನಗಳಲ್ಲಿ ಅವೆಲ್ಲ ಕಂಪನಿಗಳನ್ನು ಅಸ್ಸಾಮ್ ಕಂಪನಿ ಹೆಸರಿನಲ್ಲಿ ಒಂದೇ ಸೂರಿನಡಿ ತರಲಾಯಿತು. 1856ರ ಹೊತ್ತಿಗೆ ದಾರ್ಜಿಲಿಂಗ್‍ನಲ್ಲಿ ಟೀ ತೋಟಗಳು ಹೆಚ್ಚಿದವು. ದಾರ್ಜಿಲಿಂಗ್ ಅಲ್ಲದೆ ಪಶ್ಚಿಮ ಬಂಗಾಳದಲ್ಲಿ ಕಚಾರ್, ದುವಾರ್ಸ್, ತೆರಾಯ್‍ಗಳಲ್ಲಿ ಟೀ ಉತ್ಪಾದನೆ ಶುರುವಾಯಿತು. ನಿಧಾನವಾಗಿ ದೆಹ್ರಾದೂನ್, ಕಾಂಗ್ರ, ಪಶ್ಚಿಮ ಹಿಮಾಲಯ ಪ್ರದೇಶಗಳ ಮೂಲಕ ದಕ್ಷಿಣಕ್ಕೂ ವ್ಯಾಪಿಸಿತು.

ನೀಲಗಿರಿ ಬೆಟ್ಟದಲ್ಲಿರುವ ಟೀ ಎಸ್ಟೇಟ್

ದಕ್ಷಿಣ ಭಾರತದಲ್ಲಿ ನೀಲಗಿರಿ ಪರ್ವತ ಶ್ರೇಣಿಯಲ್ಲಿ ಟೀ ಸಮೃದ್ಧವಾಗಿ ಬೆಳೆಯಿತು. ವೈನಾಡ್, ತಿರುವಾಂಕೂರುಗಳಲ್ಲಿ ಟೀ ತೋಟಗಳ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದವು. ಅಸ್ಸಾಮಿನ ಆ ಸಿಂಗ್‍ಪೊ ಬುಡಕಟ್ಟಿನವರಿಗೆ ಟೀ ಗಿಡ ಸಿಕ್ಕಾಗ ಬಹುಶಃ ಇದೊಂದು ಜಗತ್ತಿನ ಮಾರುಕಟ್ಟೆಯಲ್ಲಿ ಮಹತ್ವದ ಸ್ಥಾನ ಪಡೆದುಕೊಳ್ಳಬಹುದು, ಮನೆ ಮನೆಯಲ್ಲೂ ಸ್ಥಾನ ಪಡೆದುಕೊಳ್ಳಬಹುದು ಊಹೆ ಬಂದಿರಲಿಕ್ಕಿಲ್ಲ ಅನ್ನಿಸುತ್ತೆ.

ಪ್ರಸ್ತುತ ಭಾರತದಲ್ಲೇ 39 ಸಾವಿರಕ್ಕೂ ಹೆಚ್ಚು ಟೀ ಎಸ್ಟೇಟ್‍ಗಳಿವೆ. ಈ ಪೈಕಿ 30 ಸಾವಿರ ತೋಟಗಳು ದಕ್ಷಿಣ ಭಾರತದಲ್ಲೇ ಇವೆ.


ಓದಿ:  60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...