Homeಮುಖಪುಟಪ್ರಧಾನಿ ಮೋದಿಗೆ 100 ರೂ. ಕಳಿಸಿ ಗಡ್ಡ ಬೋಳಿಸಿಕೊಳ್ಳಿ ಎಂದ ಚಹಾ ಮಾರಾಟಗಾರ

ಪ್ರಧಾನಿ ಮೋದಿಗೆ 100 ರೂ. ಕಳಿಸಿ ಗಡ್ಡ ಬೋಳಿಸಿಕೊಳ್ಳಿ ಎಂದ ಚಹಾ ಮಾರಾಟಗಾರ

- Advertisement -
- Advertisement -

ಮಹಾರಾಷ್ಟ್ರದ ಬಾರಾಮತಿಯ ಚಹಾ ಮಾರಾಟಗಾರರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರಿಗೆ 100 ರೂಪಾಯಿಗಳನ್ನು ಮನಿ ಆರ್ಡರ್‌ ಮಾಡಿ ತಮ್ಮ ಗಡ್ಡ ತೆಗೆಸಿಕೊಳ್ಳುವಂತೆ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೊರೊನಾ-ಪ್ರೇರಿತ ಲಾಕ್‌ಡೌನ್‌ನಿಂದಾಗಿ ಕಳೆದ ಒಂದೂವರೆ ವರ್ಷಗಳಲ್ಲಿ ಅಸಂಘಟಿತ ವಲಯಕ್ಕೆ ತೀವ್ರ ಪೆಟ್ಟು ಬಿದ್ದಿದೆ. ಇದರಿಂದ ಅಸಮಾಧಾನಗೊಂಡಿರುವ ಬಾರಾಮತಿಯ ಇಂದಾಪುರ ರಸ್ತೆಯ ಖಾಸಗಿ ಆಸ್ಪತ್ರೆಯ ಎದುರಿನ ಸಣ್ಣ ಚಹಾ ಅಂಗಡಿಯೊಂದರ ಮಾಲೀಕ ಅನಿಲ್ ಮೋರೆ ಪ್ರಧಾನಿ ಮೋದಿಯವರಿಗೆ 100 ರೂಪಾಯಿಗಳನ್ನು ಮನಿ ಆರ್ಡರ್‌ ಮಾಡಿದ್ದಾರೆ.

“ಪ್ರಧಾನಿ ಮೋದಿ ತಮ್ಮ ಗಡ್ಡ ಬೆಳೆಸಿದ್ದಾರೆ. ಅವರು ಏನನ್ನಾದರೂ ಬೆಳೆಸಬೇಕಾದರೆ, ಅದು ಈ ದೇಶದ ಜನರಿಗೆ ಉದ್ಯೋಗಾವಕಾಶಗಳಾಗಿರಬೇಕು. ಜನಸಂಖ್ಯೆಗೆ ವ್ಯಾಕ್ಸಿನೇಷನ್ ವೇಗಗೊಳಿಸಲು ಪ್ರಯತ್ನಿಸಬೇಕು ಮತ್ತು ಅಸ್ತಿತ್ವದಲ್ಲಿರುವ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವ ಪ್ರಯತ್ನಗಳು ನಡೆಯಬೇಕು. ಕೊನೆಯ ಎರಡು ಲಾಕ್‌ಡೌನ್‌ಗಳಿಂದ ಉಂಟಾಗಿರುವ ಸಂಕಷ್ಟಗಳಿಂದ ಜನ ಹೊರ ಬಂದಿದ್ದಾರೆಯೇ ಎಂಬುದನ್ನು ಪ್ರಧಾನಿ ಖಚಿತಪಡಿಸಿಕೊಳ್ಳಬೇಕು” ಎಂದು ಅನಿಲ್ ಮೋರೆ ಹೇಳಿದ್ದಾರೆ.

ಇದನ್ನೂ ಓದಿ: ಆದಿವಾಸಿ ಯುವತಿ ಮೇಲೆ ಭದ್ರತಾ ಪಡೆಗಳಿಂದ ಅತ್ಯಾಚಾರ, ಕೊಲೆ ಆರೋಪ: ಮೃತಳಿಗೆ ಮಾವೋವಾದಿ ಪಟ್ಟ!

ಪ್ರಧಾನಮಂತ್ರಿಯ ಸ್ಥಾನವು ದೇಶದಲ್ಲಿ ಅತ್ಯುನ್ನತವಾಗಿದೆ ಎಂದಿರುವ ಅವರು, “ನಮ್ಮ ಪ್ರಧಾನ ಮಂತ್ರಿಯ ಬಗ್ಗೆ ನನಗೆ ಅತ್ಯಂತ ಗೌರವ ಮತ್ತು ಮೆಚ್ಚುಗೆ ಇದೆ. ನನ್ನ ಉಳಿತಾಯದಿಂದ ನಾನು 100 ರೂಪಾಯಿಗಳನ್ನು ಅವರಿಗೆ ಕಳುಹಿಸುತ್ತಿದ್ದೇನೆ. ಈ ಹಣದಿಂದ ಅವರು ತಮ್ಮ ಗಡ್ಡ ಕ್ಷೌರ ಮಾಡಿಸಿಕೊಳ್ಳಲಿ” ಎಂದಿದ್ದಾರೆ.

“ಪ್ರಧಾನಿ ಮೋದಿ ಸರ್ವೋಚ್ಚ ನಾಯಕರಾಗಿದ್ದಾರೆ. ನಾನು ಅವರನ್ನು ನೋಯಿಸುವ ಉದ್ದೇಶ ಹೊಂದಿಲ್ಲ. ಆದರೆ, ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ದಿನದಿಂದ ದಿನಕ್ಕೆ ಬಡವರ ಸಮಸ್ಯೆಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಈ ರೀತಿ ಅವರ ಗಮನ ಸೆಳೆಯಲು ಈ ಮಾರ್ಗ ಬಳಸಿದ್ದೇನೆ” ಎಂದು ಹೇಳಿದ್ದಾರೆ.

ಗಡ್ಡ ತೆಗೆಸಿಕೊಳ್ಳಲು 100 ರೂಪಾಯಿಗಳ ಮನಿ ಆರ್ಡರ್‌ ಜೊತೆಗೆ, ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಲಾಕ್‌ಡೌನ್‌ನಿಂದ ಹಾನಿಗೊಳಗಾದ ಕುಟುಂಬಗಳಿಗೆ 30,000 ರೂ.ಗಳ ಆರ್ಥಿಕ ನೆರವು ನೀಡುವಂತೆ ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ಅನಿಲ್ ಮೋರೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...