Homeಮುಖಪುಟಪ್ರಧಾನಿ ಮೋದಿಗೆ 100 ರೂ. ಕಳಿಸಿ ಗಡ್ಡ ಬೋಳಿಸಿಕೊಳ್ಳಿ ಎಂದ ಚಹಾ ಮಾರಾಟಗಾರ

ಪ್ರಧಾನಿ ಮೋದಿಗೆ 100 ರೂ. ಕಳಿಸಿ ಗಡ್ಡ ಬೋಳಿಸಿಕೊಳ್ಳಿ ಎಂದ ಚಹಾ ಮಾರಾಟಗಾರ

- Advertisement -
- Advertisement -

ಮಹಾರಾಷ್ಟ್ರದ ಬಾರಾಮತಿಯ ಚಹಾ ಮಾರಾಟಗಾರರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರಿಗೆ 100 ರೂಪಾಯಿಗಳನ್ನು ಮನಿ ಆರ್ಡರ್‌ ಮಾಡಿ ತಮ್ಮ ಗಡ್ಡ ತೆಗೆಸಿಕೊಳ್ಳುವಂತೆ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೊರೊನಾ-ಪ್ರೇರಿತ ಲಾಕ್‌ಡೌನ್‌ನಿಂದಾಗಿ ಕಳೆದ ಒಂದೂವರೆ ವರ್ಷಗಳಲ್ಲಿ ಅಸಂಘಟಿತ ವಲಯಕ್ಕೆ ತೀವ್ರ ಪೆಟ್ಟು ಬಿದ್ದಿದೆ. ಇದರಿಂದ ಅಸಮಾಧಾನಗೊಂಡಿರುವ ಬಾರಾಮತಿಯ ಇಂದಾಪುರ ರಸ್ತೆಯ ಖಾಸಗಿ ಆಸ್ಪತ್ರೆಯ ಎದುರಿನ ಸಣ್ಣ ಚಹಾ ಅಂಗಡಿಯೊಂದರ ಮಾಲೀಕ ಅನಿಲ್ ಮೋರೆ ಪ್ರಧಾನಿ ಮೋದಿಯವರಿಗೆ 100 ರೂಪಾಯಿಗಳನ್ನು ಮನಿ ಆರ್ಡರ್‌ ಮಾಡಿದ್ದಾರೆ.

“ಪ್ರಧಾನಿ ಮೋದಿ ತಮ್ಮ ಗಡ್ಡ ಬೆಳೆಸಿದ್ದಾರೆ. ಅವರು ಏನನ್ನಾದರೂ ಬೆಳೆಸಬೇಕಾದರೆ, ಅದು ಈ ದೇಶದ ಜನರಿಗೆ ಉದ್ಯೋಗಾವಕಾಶಗಳಾಗಿರಬೇಕು. ಜನಸಂಖ್ಯೆಗೆ ವ್ಯಾಕ್ಸಿನೇಷನ್ ವೇಗಗೊಳಿಸಲು ಪ್ರಯತ್ನಿಸಬೇಕು ಮತ್ತು ಅಸ್ತಿತ್ವದಲ್ಲಿರುವ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವ ಪ್ರಯತ್ನಗಳು ನಡೆಯಬೇಕು. ಕೊನೆಯ ಎರಡು ಲಾಕ್‌ಡೌನ್‌ಗಳಿಂದ ಉಂಟಾಗಿರುವ ಸಂಕಷ್ಟಗಳಿಂದ ಜನ ಹೊರ ಬಂದಿದ್ದಾರೆಯೇ ಎಂಬುದನ್ನು ಪ್ರಧಾನಿ ಖಚಿತಪಡಿಸಿಕೊಳ್ಳಬೇಕು” ಎಂದು ಅನಿಲ್ ಮೋರೆ ಹೇಳಿದ್ದಾರೆ.

ಇದನ್ನೂ ಓದಿ: ಆದಿವಾಸಿ ಯುವತಿ ಮೇಲೆ ಭದ್ರತಾ ಪಡೆಗಳಿಂದ ಅತ್ಯಾಚಾರ, ಕೊಲೆ ಆರೋಪ: ಮೃತಳಿಗೆ ಮಾವೋವಾದಿ ಪಟ್ಟ!

ಪ್ರಧಾನಮಂತ್ರಿಯ ಸ್ಥಾನವು ದೇಶದಲ್ಲಿ ಅತ್ಯುನ್ನತವಾಗಿದೆ ಎಂದಿರುವ ಅವರು, “ನಮ್ಮ ಪ್ರಧಾನ ಮಂತ್ರಿಯ ಬಗ್ಗೆ ನನಗೆ ಅತ್ಯಂತ ಗೌರವ ಮತ್ತು ಮೆಚ್ಚುಗೆ ಇದೆ. ನನ್ನ ಉಳಿತಾಯದಿಂದ ನಾನು 100 ರೂಪಾಯಿಗಳನ್ನು ಅವರಿಗೆ ಕಳುಹಿಸುತ್ತಿದ್ದೇನೆ. ಈ ಹಣದಿಂದ ಅವರು ತಮ್ಮ ಗಡ್ಡ ಕ್ಷೌರ ಮಾಡಿಸಿಕೊಳ್ಳಲಿ” ಎಂದಿದ್ದಾರೆ.

“ಪ್ರಧಾನಿ ಮೋದಿ ಸರ್ವೋಚ್ಚ ನಾಯಕರಾಗಿದ್ದಾರೆ. ನಾನು ಅವರನ್ನು ನೋಯಿಸುವ ಉದ್ದೇಶ ಹೊಂದಿಲ್ಲ. ಆದರೆ, ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ದಿನದಿಂದ ದಿನಕ್ಕೆ ಬಡವರ ಸಮಸ್ಯೆಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಈ ರೀತಿ ಅವರ ಗಮನ ಸೆಳೆಯಲು ಈ ಮಾರ್ಗ ಬಳಸಿದ್ದೇನೆ” ಎಂದು ಹೇಳಿದ್ದಾರೆ.

ಗಡ್ಡ ತೆಗೆಸಿಕೊಳ್ಳಲು 100 ರೂಪಾಯಿಗಳ ಮನಿ ಆರ್ಡರ್‌ ಜೊತೆಗೆ, ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಲಾಕ್‌ಡೌನ್‌ನಿಂದ ಹಾನಿಗೊಳಗಾದ ಕುಟುಂಬಗಳಿಗೆ 30,000 ರೂ.ಗಳ ಆರ್ಥಿಕ ನೆರವು ನೀಡುವಂತೆ ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ಅನಿಲ್ ಮೋರೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...