Homeಮುಖಪುಟಪ್ರಧಾನಿ ಮೋದಿಗೆ 100 ರೂ. ಕಳಿಸಿ ಗಡ್ಡ ಬೋಳಿಸಿಕೊಳ್ಳಿ ಎಂದ ಚಹಾ ಮಾರಾಟಗಾರ

ಪ್ರಧಾನಿ ಮೋದಿಗೆ 100 ರೂ. ಕಳಿಸಿ ಗಡ್ಡ ಬೋಳಿಸಿಕೊಳ್ಳಿ ಎಂದ ಚಹಾ ಮಾರಾಟಗಾರ

- Advertisement -
- Advertisement -

ಮಹಾರಾಷ್ಟ್ರದ ಬಾರಾಮತಿಯ ಚಹಾ ಮಾರಾಟಗಾರರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರಿಗೆ 100 ರೂಪಾಯಿಗಳನ್ನು ಮನಿ ಆರ್ಡರ್‌ ಮಾಡಿ ತಮ್ಮ ಗಡ್ಡ ತೆಗೆಸಿಕೊಳ್ಳುವಂತೆ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೊರೊನಾ-ಪ್ರೇರಿತ ಲಾಕ್‌ಡೌನ್‌ನಿಂದಾಗಿ ಕಳೆದ ಒಂದೂವರೆ ವರ್ಷಗಳಲ್ಲಿ ಅಸಂಘಟಿತ ವಲಯಕ್ಕೆ ತೀವ್ರ ಪೆಟ್ಟು ಬಿದ್ದಿದೆ. ಇದರಿಂದ ಅಸಮಾಧಾನಗೊಂಡಿರುವ ಬಾರಾಮತಿಯ ಇಂದಾಪುರ ರಸ್ತೆಯ ಖಾಸಗಿ ಆಸ್ಪತ್ರೆಯ ಎದುರಿನ ಸಣ್ಣ ಚಹಾ ಅಂಗಡಿಯೊಂದರ ಮಾಲೀಕ ಅನಿಲ್ ಮೋರೆ ಪ್ರಧಾನಿ ಮೋದಿಯವರಿಗೆ 100 ರೂಪಾಯಿಗಳನ್ನು ಮನಿ ಆರ್ಡರ್‌ ಮಾಡಿದ್ದಾರೆ.

“ಪ್ರಧಾನಿ ಮೋದಿ ತಮ್ಮ ಗಡ್ಡ ಬೆಳೆಸಿದ್ದಾರೆ. ಅವರು ಏನನ್ನಾದರೂ ಬೆಳೆಸಬೇಕಾದರೆ, ಅದು ಈ ದೇಶದ ಜನರಿಗೆ ಉದ್ಯೋಗಾವಕಾಶಗಳಾಗಿರಬೇಕು. ಜನಸಂಖ್ಯೆಗೆ ವ್ಯಾಕ್ಸಿನೇಷನ್ ವೇಗಗೊಳಿಸಲು ಪ್ರಯತ್ನಿಸಬೇಕು ಮತ್ತು ಅಸ್ತಿತ್ವದಲ್ಲಿರುವ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವ ಪ್ರಯತ್ನಗಳು ನಡೆಯಬೇಕು. ಕೊನೆಯ ಎರಡು ಲಾಕ್‌ಡೌನ್‌ಗಳಿಂದ ಉಂಟಾಗಿರುವ ಸಂಕಷ್ಟಗಳಿಂದ ಜನ ಹೊರ ಬಂದಿದ್ದಾರೆಯೇ ಎಂಬುದನ್ನು ಪ್ರಧಾನಿ ಖಚಿತಪಡಿಸಿಕೊಳ್ಳಬೇಕು” ಎಂದು ಅನಿಲ್ ಮೋರೆ ಹೇಳಿದ್ದಾರೆ.

ಇದನ್ನೂ ಓದಿ: ಆದಿವಾಸಿ ಯುವತಿ ಮೇಲೆ ಭದ್ರತಾ ಪಡೆಗಳಿಂದ ಅತ್ಯಾಚಾರ, ಕೊಲೆ ಆರೋಪ: ಮೃತಳಿಗೆ ಮಾವೋವಾದಿ ಪಟ್ಟ!

ಪ್ರಧಾನಮಂತ್ರಿಯ ಸ್ಥಾನವು ದೇಶದಲ್ಲಿ ಅತ್ಯುನ್ನತವಾಗಿದೆ ಎಂದಿರುವ ಅವರು, “ನಮ್ಮ ಪ್ರಧಾನ ಮಂತ್ರಿಯ ಬಗ್ಗೆ ನನಗೆ ಅತ್ಯಂತ ಗೌರವ ಮತ್ತು ಮೆಚ್ಚುಗೆ ಇದೆ. ನನ್ನ ಉಳಿತಾಯದಿಂದ ನಾನು 100 ರೂಪಾಯಿಗಳನ್ನು ಅವರಿಗೆ ಕಳುಹಿಸುತ್ತಿದ್ದೇನೆ. ಈ ಹಣದಿಂದ ಅವರು ತಮ್ಮ ಗಡ್ಡ ಕ್ಷೌರ ಮಾಡಿಸಿಕೊಳ್ಳಲಿ” ಎಂದಿದ್ದಾರೆ.

“ಪ್ರಧಾನಿ ಮೋದಿ ಸರ್ವೋಚ್ಚ ನಾಯಕರಾಗಿದ್ದಾರೆ. ನಾನು ಅವರನ್ನು ನೋಯಿಸುವ ಉದ್ದೇಶ ಹೊಂದಿಲ್ಲ. ಆದರೆ, ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ದಿನದಿಂದ ದಿನಕ್ಕೆ ಬಡವರ ಸಮಸ್ಯೆಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಈ ರೀತಿ ಅವರ ಗಮನ ಸೆಳೆಯಲು ಈ ಮಾರ್ಗ ಬಳಸಿದ್ದೇನೆ” ಎಂದು ಹೇಳಿದ್ದಾರೆ.

ಗಡ್ಡ ತೆಗೆಸಿಕೊಳ್ಳಲು 100 ರೂಪಾಯಿಗಳ ಮನಿ ಆರ್ಡರ್‌ ಜೊತೆಗೆ, ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಲಾಕ್‌ಡೌನ್‌ನಿಂದ ಹಾನಿಗೊಳಗಾದ ಕುಟುಂಬಗಳಿಗೆ 30,000 ರೂ.ಗಳ ಆರ್ಥಿಕ ನೆರವು ನೀಡುವಂತೆ ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ಅನಿಲ್ ಮೋರೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...