Homeಮುಖಪುಟಪ್ರಧಾನಿ ಮೋದಿಗೆ 100 ರೂ. ಕಳಿಸಿ ಗಡ್ಡ ಬೋಳಿಸಿಕೊಳ್ಳಿ ಎಂದ ಚಹಾ ಮಾರಾಟಗಾರ

ಪ್ರಧಾನಿ ಮೋದಿಗೆ 100 ರೂ. ಕಳಿಸಿ ಗಡ್ಡ ಬೋಳಿಸಿಕೊಳ್ಳಿ ಎಂದ ಚಹಾ ಮಾರಾಟಗಾರ

- Advertisement -
- Advertisement -

ಮಹಾರಾಷ್ಟ್ರದ ಬಾರಾಮತಿಯ ಚಹಾ ಮಾರಾಟಗಾರರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರಿಗೆ 100 ರೂಪಾಯಿಗಳನ್ನು ಮನಿ ಆರ್ಡರ್‌ ಮಾಡಿ ತಮ್ಮ ಗಡ್ಡ ತೆಗೆಸಿಕೊಳ್ಳುವಂತೆ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೊರೊನಾ-ಪ್ರೇರಿತ ಲಾಕ್‌ಡೌನ್‌ನಿಂದಾಗಿ ಕಳೆದ ಒಂದೂವರೆ ವರ್ಷಗಳಲ್ಲಿ ಅಸಂಘಟಿತ ವಲಯಕ್ಕೆ ತೀವ್ರ ಪೆಟ್ಟು ಬಿದ್ದಿದೆ. ಇದರಿಂದ ಅಸಮಾಧಾನಗೊಂಡಿರುವ ಬಾರಾಮತಿಯ ಇಂದಾಪುರ ರಸ್ತೆಯ ಖಾಸಗಿ ಆಸ್ಪತ್ರೆಯ ಎದುರಿನ ಸಣ್ಣ ಚಹಾ ಅಂಗಡಿಯೊಂದರ ಮಾಲೀಕ ಅನಿಲ್ ಮೋರೆ ಪ್ರಧಾನಿ ಮೋದಿಯವರಿಗೆ 100 ರೂಪಾಯಿಗಳನ್ನು ಮನಿ ಆರ್ಡರ್‌ ಮಾಡಿದ್ದಾರೆ.

“ಪ್ರಧಾನಿ ಮೋದಿ ತಮ್ಮ ಗಡ್ಡ ಬೆಳೆಸಿದ್ದಾರೆ. ಅವರು ಏನನ್ನಾದರೂ ಬೆಳೆಸಬೇಕಾದರೆ, ಅದು ಈ ದೇಶದ ಜನರಿಗೆ ಉದ್ಯೋಗಾವಕಾಶಗಳಾಗಿರಬೇಕು. ಜನಸಂಖ್ಯೆಗೆ ವ್ಯಾಕ್ಸಿನೇಷನ್ ವೇಗಗೊಳಿಸಲು ಪ್ರಯತ್ನಿಸಬೇಕು ಮತ್ತು ಅಸ್ತಿತ್ವದಲ್ಲಿರುವ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವ ಪ್ರಯತ್ನಗಳು ನಡೆಯಬೇಕು. ಕೊನೆಯ ಎರಡು ಲಾಕ್‌ಡೌನ್‌ಗಳಿಂದ ಉಂಟಾಗಿರುವ ಸಂಕಷ್ಟಗಳಿಂದ ಜನ ಹೊರ ಬಂದಿದ್ದಾರೆಯೇ ಎಂಬುದನ್ನು ಪ್ರಧಾನಿ ಖಚಿತಪಡಿಸಿಕೊಳ್ಳಬೇಕು” ಎಂದು ಅನಿಲ್ ಮೋರೆ ಹೇಳಿದ್ದಾರೆ.

ಇದನ್ನೂ ಓದಿ: ಆದಿವಾಸಿ ಯುವತಿ ಮೇಲೆ ಭದ್ರತಾ ಪಡೆಗಳಿಂದ ಅತ್ಯಾಚಾರ, ಕೊಲೆ ಆರೋಪ: ಮೃತಳಿಗೆ ಮಾವೋವಾದಿ ಪಟ್ಟ!

ಪ್ರಧಾನಮಂತ್ರಿಯ ಸ್ಥಾನವು ದೇಶದಲ್ಲಿ ಅತ್ಯುನ್ನತವಾಗಿದೆ ಎಂದಿರುವ ಅವರು, “ನಮ್ಮ ಪ್ರಧಾನ ಮಂತ್ರಿಯ ಬಗ್ಗೆ ನನಗೆ ಅತ್ಯಂತ ಗೌರವ ಮತ್ತು ಮೆಚ್ಚುಗೆ ಇದೆ. ನನ್ನ ಉಳಿತಾಯದಿಂದ ನಾನು 100 ರೂಪಾಯಿಗಳನ್ನು ಅವರಿಗೆ ಕಳುಹಿಸುತ್ತಿದ್ದೇನೆ. ಈ ಹಣದಿಂದ ಅವರು ತಮ್ಮ ಗಡ್ಡ ಕ್ಷೌರ ಮಾಡಿಸಿಕೊಳ್ಳಲಿ” ಎಂದಿದ್ದಾರೆ.

“ಪ್ರಧಾನಿ ಮೋದಿ ಸರ್ವೋಚ್ಚ ನಾಯಕರಾಗಿದ್ದಾರೆ. ನಾನು ಅವರನ್ನು ನೋಯಿಸುವ ಉದ್ದೇಶ ಹೊಂದಿಲ್ಲ. ಆದರೆ, ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ದಿನದಿಂದ ದಿನಕ್ಕೆ ಬಡವರ ಸಮಸ್ಯೆಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಈ ರೀತಿ ಅವರ ಗಮನ ಸೆಳೆಯಲು ಈ ಮಾರ್ಗ ಬಳಸಿದ್ದೇನೆ” ಎಂದು ಹೇಳಿದ್ದಾರೆ.

ಗಡ್ಡ ತೆಗೆಸಿಕೊಳ್ಳಲು 100 ರೂಪಾಯಿಗಳ ಮನಿ ಆರ್ಡರ್‌ ಜೊತೆಗೆ, ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಲಾಕ್‌ಡೌನ್‌ನಿಂದ ಹಾನಿಗೊಳಗಾದ ಕುಟುಂಬಗಳಿಗೆ 30,000 ರೂ.ಗಳ ಆರ್ಥಿಕ ನೆರವು ನೀಡುವಂತೆ ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ಅನಿಲ್ ಮೋರೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...