Homeಮುಖಪುಟಪ್ರಧಾನಿ ಮೋದಿಗೆ 100 ರೂ. ಕಳಿಸಿ ಗಡ್ಡ ಬೋಳಿಸಿಕೊಳ್ಳಿ ಎಂದ ಚಹಾ ಮಾರಾಟಗಾರ

ಪ್ರಧಾನಿ ಮೋದಿಗೆ 100 ರೂ. ಕಳಿಸಿ ಗಡ್ಡ ಬೋಳಿಸಿಕೊಳ್ಳಿ ಎಂದ ಚಹಾ ಮಾರಾಟಗಾರ

- Advertisement -
- Advertisement -

ಮಹಾರಾಷ್ಟ್ರದ ಬಾರಾಮತಿಯ ಚಹಾ ಮಾರಾಟಗಾರರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರಿಗೆ 100 ರೂಪಾಯಿಗಳನ್ನು ಮನಿ ಆರ್ಡರ್‌ ಮಾಡಿ ತಮ್ಮ ಗಡ್ಡ ತೆಗೆಸಿಕೊಳ್ಳುವಂತೆ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೊರೊನಾ-ಪ್ರೇರಿತ ಲಾಕ್‌ಡೌನ್‌ನಿಂದಾಗಿ ಕಳೆದ ಒಂದೂವರೆ ವರ್ಷಗಳಲ್ಲಿ ಅಸಂಘಟಿತ ವಲಯಕ್ಕೆ ತೀವ್ರ ಪೆಟ್ಟು ಬಿದ್ದಿದೆ. ಇದರಿಂದ ಅಸಮಾಧಾನಗೊಂಡಿರುವ ಬಾರಾಮತಿಯ ಇಂದಾಪುರ ರಸ್ತೆಯ ಖಾಸಗಿ ಆಸ್ಪತ್ರೆಯ ಎದುರಿನ ಸಣ್ಣ ಚಹಾ ಅಂಗಡಿಯೊಂದರ ಮಾಲೀಕ ಅನಿಲ್ ಮೋರೆ ಪ್ರಧಾನಿ ಮೋದಿಯವರಿಗೆ 100 ರೂಪಾಯಿಗಳನ್ನು ಮನಿ ಆರ್ಡರ್‌ ಮಾಡಿದ್ದಾರೆ.

“ಪ್ರಧಾನಿ ಮೋದಿ ತಮ್ಮ ಗಡ್ಡ ಬೆಳೆಸಿದ್ದಾರೆ. ಅವರು ಏನನ್ನಾದರೂ ಬೆಳೆಸಬೇಕಾದರೆ, ಅದು ಈ ದೇಶದ ಜನರಿಗೆ ಉದ್ಯೋಗಾವಕಾಶಗಳಾಗಿರಬೇಕು. ಜನಸಂಖ್ಯೆಗೆ ವ್ಯಾಕ್ಸಿನೇಷನ್ ವೇಗಗೊಳಿಸಲು ಪ್ರಯತ್ನಿಸಬೇಕು ಮತ್ತು ಅಸ್ತಿತ್ವದಲ್ಲಿರುವ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವ ಪ್ರಯತ್ನಗಳು ನಡೆಯಬೇಕು. ಕೊನೆಯ ಎರಡು ಲಾಕ್‌ಡೌನ್‌ಗಳಿಂದ ಉಂಟಾಗಿರುವ ಸಂಕಷ್ಟಗಳಿಂದ ಜನ ಹೊರ ಬಂದಿದ್ದಾರೆಯೇ ಎಂಬುದನ್ನು ಪ್ರಧಾನಿ ಖಚಿತಪಡಿಸಿಕೊಳ್ಳಬೇಕು” ಎಂದು ಅನಿಲ್ ಮೋರೆ ಹೇಳಿದ್ದಾರೆ.

ಇದನ್ನೂ ಓದಿ: ಆದಿವಾಸಿ ಯುವತಿ ಮೇಲೆ ಭದ್ರತಾ ಪಡೆಗಳಿಂದ ಅತ್ಯಾಚಾರ, ಕೊಲೆ ಆರೋಪ: ಮೃತಳಿಗೆ ಮಾವೋವಾದಿ ಪಟ್ಟ!

ಪ್ರಧಾನಮಂತ್ರಿಯ ಸ್ಥಾನವು ದೇಶದಲ್ಲಿ ಅತ್ಯುನ್ನತವಾಗಿದೆ ಎಂದಿರುವ ಅವರು, “ನಮ್ಮ ಪ್ರಧಾನ ಮಂತ್ರಿಯ ಬಗ್ಗೆ ನನಗೆ ಅತ್ಯಂತ ಗೌರವ ಮತ್ತು ಮೆಚ್ಚುಗೆ ಇದೆ. ನನ್ನ ಉಳಿತಾಯದಿಂದ ನಾನು 100 ರೂಪಾಯಿಗಳನ್ನು ಅವರಿಗೆ ಕಳುಹಿಸುತ್ತಿದ್ದೇನೆ. ಈ ಹಣದಿಂದ ಅವರು ತಮ್ಮ ಗಡ್ಡ ಕ್ಷೌರ ಮಾಡಿಸಿಕೊಳ್ಳಲಿ” ಎಂದಿದ್ದಾರೆ.

“ಪ್ರಧಾನಿ ಮೋದಿ ಸರ್ವೋಚ್ಚ ನಾಯಕರಾಗಿದ್ದಾರೆ. ನಾನು ಅವರನ್ನು ನೋಯಿಸುವ ಉದ್ದೇಶ ಹೊಂದಿಲ್ಲ. ಆದರೆ, ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ದಿನದಿಂದ ದಿನಕ್ಕೆ ಬಡವರ ಸಮಸ್ಯೆಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಈ ರೀತಿ ಅವರ ಗಮನ ಸೆಳೆಯಲು ಈ ಮಾರ್ಗ ಬಳಸಿದ್ದೇನೆ” ಎಂದು ಹೇಳಿದ್ದಾರೆ.

ಗಡ್ಡ ತೆಗೆಸಿಕೊಳ್ಳಲು 100 ರೂಪಾಯಿಗಳ ಮನಿ ಆರ್ಡರ್‌ ಜೊತೆಗೆ, ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಲಾಕ್‌ಡೌನ್‌ನಿಂದ ಹಾನಿಗೊಳಗಾದ ಕುಟುಂಬಗಳಿಗೆ 30,000 ರೂ.ಗಳ ಆರ್ಥಿಕ ನೆರವು ನೀಡುವಂತೆ ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ಅನಿಲ್ ಮೋರೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...