Homeಮುಖಪುಟಶಿಕ್ಷಕ; ಅರಿವು ಮತ್ತು ಆಚರಣೆ - ಡಾ. ಸಿ.ಬಿ. ಐನಳ್ಳಿ

ಶಿಕ್ಷಕ; ಅರಿವು ಮತ್ತು ಆಚರಣೆ – ಡಾ. ಸಿ.ಬಿ. ಐನಳ್ಳಿ

ಶಿಕ್ಷಕರನ್ನ ದೈವತ್ವಕ್ಕೇರಿಸುವ ಸಂದೇಶಗಳಿಗೂ ಮತ್ತು ಶಿಕ್ಷಕರ ಉಪನ್ಯಾಸವನ್ನು ಬಹಳಷ್ಟು ವಿದ್ಯಾರ್ಥಿಗಳು ಎಳ್ಳಷ್ಟೂ ಪ್ರಶ್ನಿಸದೆ ಒಪ್ಪಿಕೊಳ್ಳುತ್ತಿರುವುದಕ್ಕೂ ಸಂಬಂಧವಿದೆ

- Advertisement -
- Advertisement -

ಶಿಕ್ಷಕರ ದಿನಾಚರಣೆಯ ದಿನ ಹರಿದಾಡುವ ವಾಟ್ಸಪ್ ಸಂದೇಶಗಳು ಮತ್ತು ಪ್ರೊಫೈಲ್ ಫೋಟೋಗಳು ಶಿಕ್ಷಕರನ್ನ ದೈವತ್ವಕ್ಕೇರಿಸಿ ಏಕಮುಖಿಯಾಗಿ ವೈಭವೀಕರಿಸುತ್ತಿರುತ್ತವೆ. ಗೌರವಿಸುವುದು ಅಪೇಕ್ಷಣೀಯ. ಆದರೆ ಇಂಥ ವೈಭವೀಕೃತ ಸಂದೇಶಗಳಿಗೂ ಮತ್ತು ನಮ್ಮ ತರಗತಿಗಳಲ್ಲಿ ಶಿಕ್ಷಕರ ಉಪನ್ಯಾಸವನ್ನು ಬಹಳಷ್ಟು ವಿದ್ಯಾರ್ಥಿಗಳು ಎಳ್ಳಷ್ಟೂ ಪ್ರಶ್ನಿಸದೆ ಒಪ್ಪಿಕೊಳ್ಳುತ್ತಿರುವುದಕ್ಕೂ ಸಂಬಂಧವಿದೆ ಎನಿಸುತ್ತದೆ. ಜ್ಞಾನವೆಂದರೆ ಅಕ್ಷರದ ತಿಳುವಳಿಕೆಯ ಮೂಲಕ ಗಳಿಸುವ ಮಾಹಿತಿ ಮತ್ತು ಶಿಕ್ಷಕರೆಂದರೆ ಅಕ್ಷರದ ತಿಳುವಳಿಕೆ ನೀಡಿ ಸಿದ್ಧಜ್ಞಾನವನ್ನು ನಮಗೆ ಪೂರೈಸುವವರು ಎಂಬ ದೃಷ್ಟಿಕೋನದಿಂದ ಉಂಟಾಗಿರುವ ಪರಿಣಾಮವಿದು.     ಅನಾರೋಗ್ಯಕರ ಸ್ಪರ್ಧೆಯಿಂದ ನರಳುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಈ ಕಾಲಘಟ್ಟದಲ್ಲಂತೂ, ಸುಲಭೋಪಾಯಗಳ ಮೂಲಕ ಅತಿ ಹೆಚ್ಚು ಅಂಕಗಳಿಸುವ ಕಲೆಯನ್ನ ಕಲಿಸುವವರು ಶ್ರೇಷ್ಠ ಶಿಕ್ಷಕರು ಎಂಬಂತಾಗಿದೆ; ಪರಿಣಾಮವಾಗಿ ಶಿಕ್ಷಕರಿಗೆ ಇರಬೇಕಿದ್ದ ಅರಿವಿನ ಪ್ರಚೋದಕ ಮತ್ತು ಅರಿವಿನ ಉತ್ಪಾದಕರ ಪಾತ್ರ ಅಲಕ್ಷ್ಯಕ್ಕೊಳಗಾದಂತಿದೆ.

ಮಾನವಿಕಗಳಂತಹ ಜ್ಞಾನಶಿಸ್ತುಗಳಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿಯ ನಡುವಿನ ಅರಿವಿನ ಕೊಡು-ಕೊಳ್ಳುವಿಕೆಯಲ್ಲಿ ಕೆಲವೊಮ್ಮೆ ವಿದ್ಯಾರ್ಥಿಗಿರುವ ನೈಜ ಬದುಕಿನ ತಿಳುವಳಿಕೆ ಶಿಕ್ಷಕರ ಅಕಾಡೆಮಿಕ್ ಜ್ಞಾನವನ್ನು ಗೊಂದಲಕ್ಕೀಡುಮಾಡಿರುವುದು ಕೂಡಾ ಸೂಕ್ಷ್ಮ  ಸಂವೇದನೆಯುಳ್ಳ ಶಿಕ್ಷಕರ ಅನುಭವಕ್ಕೆ ಬಂದಿರುತ್ತದೆ. ಆದರೆ ನಿಗದಿಪಡಿಸಿದ ಪಠ್ಯದಲ್ಲಿರುವ ಸಂಗತಿಯೇ ಆತ್ಯಂತಿಕ ಸತ್ಯವೆಂಬ ಹುಸಿನಂಬಿಕೆಯಲ್ಲಿರುವವರಿಗೆ ಇದು ಗಮನಿಸಬೇಕಾದ ಸಂಗತಿಯೆನಿಸುವುದಿಲ್ಲ. ಬಹಳಷ್ಟು ಸಲ, ನಮ್ಮ ಸಾಂಪ್ರದಾಯಿಕ ಬೋಧನೆ-ಕಲಿಕೆಯ ಸಂದರ್ಭಗಳಲ್ಲಿ ಶಿಕ್ಷಕ-ವಿದ್ಯಾರ್ಥಿ ಸಂಬಂಧವನ್ನ ಒಂದು ಅಧಿಕಾರದ  ಶ್ರೇಣಿಕೃತ  ಸಂಬಂಧದಂತೆ ಗ್ರಹಿಸಿರುವುದು ವಿದ್ಯಾರ್ಥಿಗಳ ಅರಿವಿನ ಸ್ವಚ್ಛಂದ ಮತ್ತು ಸ್ವತಂತ್ರ  ಅರಳುವಿಕೆಯನ್ನು ಸ್ವಲ್ಪಮಟ್ಟಿಗೆ ತಡೆದಂತೆ  ಕಾಣುತ್ತದೆ.

ಇಂತಹ ಗ್ರಹಿಕೆಗೆ ಕಾರಣವಾಗಿರುವ ನಮ್ಮ ಒಟ್ಟಾರೆ ಶಿಕ್ಷಣದ ಕ್ರಮವನ್ನು ನಿಕಷಕ್ಕೊಡ್ಡಬೇಕಿದೆ.  ಕಂಠಪಾಠ, ನೆನಪಿನ ಶಕ್ತಿ, ಸಾಮಾಜಿಕವಾಗಿ ವಿನಯಶೀಲ ನಡೆ-ನುಡಿ, ಸಮಾಜದ ಮುಖ್ಯಧಾರೆಯ ಮೌಲ್ಯವ್ಯವಸ್ಥೆ – ಇವುಗಳನ್ನು ಮಕ್ಕಳಲ್ಲಿ ರೂಢಿಸುವುದಕ್ಕೆ ಮಾತ್ರ  ಶಿಕ್ಷಣದ ವ್ಯವಸ್ಥೆ ಸೀಮಿತವಾದಂತಿದೆ.  ಪದವಿ ಹಂತದ ಸಮಾಜವಿಜ್ಞಾನಗಳು ಮತ್ತು ಮಾನವಿಕಗಳ ಪಠ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಚಿಂತನಶೀಲರನ್ನಾಗಿ ಮಾಡುವ ಪಾಠಗಳ ಪ್ರಮಾಣ ಎಷ್ಟಿದೆ? ಚಿಂತನಶೀಲತೆಯನ್ನು ಹುಟ್ಟಿಸದ ಶಿಕ್ಷಣ ಸ್ಥಾಪಿತವ್ಯವಸ್ಥೆ ಮತ್ತು ಯಥಾಸ್ಥಿತಿಯನ್ನು  ರಕ್ಷಿಸುತ್ತದೆ. ಆದ್ದರಿಂದ ನಮ್ಮ ಒಟ್ಟಾರೆ ಶಿಕ್ಷಣ ವ್ಯವಸ್ಥೆ ಯಾರ ದೃಷ್ಟಿಕೋನದಿಂದ ರೂಪಿಸಲ್ಪಟ್ಟಿದೆ ಎಂಬುದನ್ನು ಪುನರ್ ವಿಮರ್ಶಿಸಿಕೊಳ್ಳಬೇಕಿದೆ.

ಯಾವ ಸೈದ್ಧಾಂತಿಕತೆಯೂ ವೈಚಾರಿಕತೆಯೂ ಮತ್ತು ಜ್ಞಾನ ವ್ಯವಸ್ಥೆಯೂ ಆತ್ಯಂತಿಕವಲ್ಲ.   ಮನುಷ್ಯನ ನಾಗರಿಕತೆಯ ವಿಕಸನ ಪರಿಪೂರ್ಣವಾಗಿಲ್ಲ ; ಅದೊಂದು ಪ್ರಕ್ರಿಯೆಯಾದ್ದರಿಂದ  ಪರಿಪೂರ್ಣತೆ ಎಂಬುದು ಇರುವುದೂ ಇಲ್ಲ. ಸದ್ಯ, ನಾಗರೀಕತೆಯ ವಿಕಸನದ ಯಾವುದೋ ಒಂದು ಬಿಂದುವಿನಲ್ಲಿರುವ ನಾವು, ಸ್ಥಾಪಿತ ಸಂಪ್ರದಾಯಗಳು ಸಾಮಾಜಿಕ ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಯನ್ನ ನಿರಂತರ ನಿಕಷಕ್ಕೊಡ್ಡುತ್ತಾ ವಿಕಸನದ ಪರಿಪೂರ್ಣತೆ ಎಂಬ ಮುಗಿಯದ ಹಾದಿಯಲ್ಲಿ ನಾಲ್ಕು ಹೊಸ ಹೆಜ್ಜೆ ಮುಂದಿಡಬೇಕಿದೆ. ಈ ಹಾದಿಯಲ್ಲಿ  ಮುನ್ನಡೆಸಲು, ಸಮಾಜದ ನಾನಾ ಸಮಸ್ಯೆಗಳಿಗೆ ತಾತ್ವಿಕ ಕಾರಣಗಳನ್ನು ತಿಳಿದು, ಅವುಗಳಿಗೆ  ಮದ್ದು ಅರೆಯುವಂತಹ ಚಿಂತನಶೀಲತೆಯನ್ನು ಹುಟ್ಟಿಸುವ ಶಿಕ್ಷಣಕ್ರಮ ಇಂದಿನ ಅಗತ್ಯ.  ಜಿಡ್ಡು ಕೃಷ್ಣಮೂರ್ತಿ ಮುಕ್ತವಾಗಿ ಮತ್ತು ನಿರ್ಭಯವಾಗಿ ಆಲೋಚಿಸುವಂತೆ ಕಲಿಸುವುದೇ ಶಿಕ್ಷಣದ ಬಹುಮುಖ್ಯವಾದ ಕಾರ್ಯ ಎನ್ನುತ್ತಾರೆ. ಈ  ದಿಸೆಯಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಿದ್ದಾರೆಯೇ? ಇದಕ್ಕೆ  ಅನುವು ಮಾಡಿಕೊಡುವಂತಹ ಶೈಕ್ಷಣಿಕ ನೀತಿ ರೂಪಿಸುವ ರಾಜಕೀಯ ವ್ಯವಸ್ಥೆ ನಮ್ಮಲ್ಲಿದೆಯೇ? ಇಂಥ ಮುಕ್ತ ಮತ್ತು ನಿರ್ಭಯ ಆಲೋಚನಾಕ್ರಮವನ್ನು ಪ್ರೋತ್ಸಾಹಿಸುವ ಕೆಲವೇ ಕೆಲವು ಉನ್ನತ ಶಿಕ್ಷಣದ ಸಂಸ್ಥೆಗಳು ಇಂದು ಕೇಡಿನ ಕೇಂದ್ರಗಳಂತೆ ಕೀಳೀಕರಿಸಲ್ಪಟ್ಟಿರುವುದು ಈ ಬಗ್ಗೆ ನಮ್ಮನ್ನು ನಿರಾಶರನ್ನಾಗಿಸುತ್ತದೆ.

ಜ್ಞಾನವೆಂಬುದು ಕೂಡ ಒಂದು ನಿರ್ಮಿತಿ. ಹಾಗಾಗಿ ಶಿಕ್ಷಣವೆಂದರೆ ಲೋಕವನ್ನು ಮತ್ತು ಅದು ಜ್ಞಾನವೆಂದು ಮುಂದಿಡುವ ಸಂಗತಿಯನ್ನು ವ್ಯಾಖ್ಯಾನಿಸುವ ವಿಶ್ಲೇಷಿಸುವ ತಾತ್ವಿಕರಿಸುವ ಸಾಮರ್ಥ್ಯವನ್ನು ಕೊಡುವುದು; ಆ ಮೂಲಕ ಲೋಕದ ಬಗೆಗಿನ ಜ್ಞಾನವನ್ನು ತಾವೇ ಕಟ್ಟಿಕೊಳ್ಳುವಂತೆ ಮಾಡುವುದು. ಬಸವಣ್ಣ, ಅಂಬೇಡ್ಕರ್, ಗಾಂಧಿ ತಮ್ಮ ಲೋಕಜ್ಞಾನವನ್ನು  ಸೃಜಿಸಿಕೊಂಡದ್ದು ಹೀಗೆಯೇ ಅಲ್ಲವೇ? ಬದುಕಿನ ಬಗೆಗಿನ ಸಹಜ ಕುತೂಹಲ, ಗುಮಾನಿ,  ಪ್ರಶ್ನಿಸುವಿಕೆ ಮತ್ತು ಪರ್ಯಾಯ ಆಲೋಚನಾ ಕ್ರಮಗಳು ಸಂಶೋಧನಾ ಹಂತದಲ್ಲಿ ಮಾತ್ರ  ಹುಟ್ಟಬೇಕಾದ ಮತ್ತು ಚರ್ಚಿಸಬೇಕಾದ ಸಂಗತಿಗಳೆಂದುಕೊಳ್ಳದೆ, ಇದಕ್ಕೆ ಪೂರಕವಾದ ಪಠ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪದವಿ ಹಂತದಲ್ಲಿ ವಿದ್ಯಾರ್ಥಿಗಳಿಗೆ ಪರಿಚಯಿಸಬೇಕಿದೆ.  ಯಾಕೆಂದರೆ, ಇಂದು ಮಾಹಿತಿ ಮತ್ತು ಜ್ಞಾನದ ನಡುವಿನ ವ್ಯತ್ಯಾಸವನ್ನು ಕೂಡ ಗುರುತಿಸದಂತಹ ಸ್ಥಿತಿಯಲ್ಲಿ ಯುವಜನಾಂಗವಿದೆ.

‘ಅರಿವಿಂಗೆ ಬಂಧವುಂಟಲ್ಲದೆ ಅರುಹಿಸಿಕೊಂಬವಂಗುಂಟೆ ಬಂಧ? ಅರಿದಿಹೆನೆಂಬ ಭ್ರಮೆ, ಅರುಹಿಸಿಕೊಂಡಿಹೆನೆಂಬ ಕುರುಹು, ಉಭಯನಾಸ್ತಿಯಾಗಿಯಲ್ಲದೆ ಭಾವಶುದ್ಧವಿಲ್ಲ’. ವಚನಕಾರ ಮಾದಾರ ದೂಳಯ್ಯನ ಈ  ಮಾತುಗಳಲ್ಲಿರುವ ಎಚ್ಚರ ನಮಗಿಂದು ಅಗತ್ಯವೆನಿಸುತ್ತದೆ. ನೀಡಿದ ಜ್ಞಾನದ ಬಗ್ಗೆ ಶಿಕ್ಷಕ ಮತ್ತು  ಗಳಿಸಿದ ಜ್ಞಾನದ ಬಗ್ಗೆ ವಿದ್ಯಾರ್ಥಿ ಇಬ್ಬರೂ ಅದು ಆತ್ಯಂತಿಕವೆಂದು ಭಾವಿಸದೆ, ಜ್ಞಾನವೆಂಬುದು ಒಂದು ಮುಕ್ತ ಅಂತ್ಯವುಳ್ಳ ಅರಿವಿನ ಪ್ರವಾಹವೆಂಬುದನ್ನು ಅರಿತು, ನಿರಂತರವಾಗಿ ಕ್ರಿಯಾಶೀಲರಾಗಿದ್ದಾಗ ಹೊಸ ಸಂಶೋಧಕರು, ಚಿಂತಕರು, ತತ್ವಜ್ಞಾನಿಗಳು, ವಿಜ್ಞಾನಿಗಳು  ಹುಟ್ಟಬಲ್ಲರು.

  • ಡಾ. ಸಿ.ಬಿ. ಐನಳ್ಳಿ
ಡಾ. ಸಿ. ಬಿ. ಐನಳ್ಳಿ

(ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯಲ್ಲಿ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲತಃ ಬಳ್ಳಾರಿ ಜಿಲ್ಲೆಯವರು. ಇಂಡಿಯನ್-ಅಮೇರಿಕನ್ ಲೇಖಕಿ ‘ಜುಂಪಾ ಲಾಹಿರಿಯ ಕೃತಿಗಳಲ್ಲಿ ವಸ್ತು ಮತ್ತು ತಂತ್ರಗಳ ಅಧ್ಯಯನ’ಕ್ಕಾಗಿ ಕರ್ನಾಟಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.)


ಇದನ್ನೂ ಓದಿ: ವೈಚಾರಿಕತೆಯನ್ನು ಕಡೆಗಣಿಸಿ ಅಬ್ಬರಿಸುವ ಜನಪ್ರಿಯ ನಟರ ಸಿನಿಮಾದಾಚೆಗಿನ ವಿಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...