Homeಮುಖಪುಟಬೆದರಿಕೆಗೆ ಒಳಗಾಗಿ ಶಿಕ್ಷಕ ಆತ್ಮಹತ್ಯೆ | ಆರ್‌ಟಿಐ ಕಾರ್ಯಕರ್ತನ ಬಂಧನ

ಬೆದರಿಕೆಗೆ ಒಳಗಾಗಿ ಶಿಕ್ಷಕ ಆತ್ಮಹತ್ಯೆ | ಆರ್‌ಟಿಐ ಕಾರ್ಯಕರ್ತನ ಬಂಧನ

- Advertisement -
- Advertisement -

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಆರ್‌ಟಿಐ ಕಾರ್ಯಕರ್ತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬೆದರಿಕೆಗೆ ಒಳಗಾಗಿ ಶಿಕ್ಷಕ

ಮೇ 15 ರಂದು ದಾಮೋಹ್ ಜಿಲ್ಲೆಯ ಹಟ್ಟಾ ಪಟ್ಟಣದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕ ರಾಜೇಶ್ ತ್ರಿಪಾಠಿ ಅವರನ್ನು ಮಾನಸಿಕ ಕಿರುಕುಳ ನೀಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಮಧ್ಯವಯಸ್ಕ ಆರ್‌ಟಿಐ ಕಾರ್ಯಕರ್ತ ಜಿತೇಂದ್ರ ಭಟ್‌ ಅವರನ್ನು ಮೇ 26 ರಂದು ಬಂಧಿಸಲಾಗಿದೆ.

ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೆದರಿ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಹಲವು ಪ್ರಾಥಮಿಕ ಶಾಲಾ ಶಿಕ್ಷಕರು ಅದೇ ಆರ್‌ಟಿಐ ಕಾರ್ಯಕರ್ತನ ವಿರುದ್ಧ ದಾಮೋಹ್ ಜಿಲ್ಲಾ ಪೊಲೀಸರನ್ನು ಸಂಪರ್ಕಿಸಿದ್ದರು ಎಂದು ವರದಿಯಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕ ತ್ರಿಪಾಠಿ ನಕಲಿ ಅವರು ಬಿಇಡಿ ಪದವಿ ಬಳಸಿ ಸರ್ಕಾರಿ ಕೆಲಸ ಪಡೆದಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ಮೂಲಗಳು ಉಲ್ಲೇಖಿಸಿವೆ.

ಆರ್‌ಟಿಐ ಕಾರ್ಯಕರ್ತ ತ್ರಿಪಾಠಿ ಅವರಿಂದ ನಿಯಮಿತವಾಗಿ ಹಣ ಪಡೆಯಲು ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ ಎಂದು ವರದಿ ಉಲ್ಲೇಕಿಸಿದೆ.

“ತ್ರಿಪಾಠಿ ಅವರಿಗೆ ಸುಮಾರು 7 ಲಕ್ಷದಿಂದ 10 ಲಕ್ಷ ರೂ.ಗಳವರೆಗೆ ಹಣ ನೀಡುವಂತೆ ಒತ್ತಾಯಿಸಿದ್ದ ಆರ್‌ಟಿಐ ಕಾರ್ಯಕರ್ತ, ಸಂಬಳದ ಅರ್ಧದಷ್ಟು ಹಣವನ್ನು ಪ್ರತಿ ತಿಂಗಳು ಪಾವತಿಸಬೇಕೆಂದು ಆಗ್ರಹಿಸಿದ್ದನು” ಎಂದು ದಾಮೋಹ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರುತಕೀರ್ತಿ ಸೋಮವಂಶಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮನೆ ಕಟ್ಟಲು ಬೇಕಾಗಿ ಬ್ಯಾಂಕ್ ಮತ್ತು ಖಾಸಗಿ ಸಾಲಗಾರರಿಂದ ಪಡೆದಿದ್ದ 50 ಲಕ್ಷ ರೂ.ಗಳಿಗೂ ಹೆಚ್ಚು ಸಾಲದ ಹೊರೆಯಿಂದ ಬಳಲುತ್ತಿದ್ದ ಅವರು, ನಕಲಿ ಪದವಿಯ ಕಾರಣಕ್ಕಾಗಿ ಕೆಲಸ ಕಳೆದುಕೊಳ್ಳುತ್ತೀರಿ ಎಂದು ಆರ್‌ಟಿಐ ಕಾರ್ಯಕರ್ತನಿಂದ ನಿರಂತರ ಬೆದರಿಕೆ ಹಾಕುತ್ತಿದ್ದನು ಎಂದು ಆರೋಪಿಸಲಾಗಿದೆ.

ಜೊತೆಗೆ ನಿಯಮಿತವಾಗಿ ಹಣ ಪಾವತಿಸಬೇಕಾಗಿ ಬಂದಿದ್ದರಿಂದ, ಮೇ 25 ರಂದು ತಮ್ಮ ಹಳ್ಳಿಯಾದ ಹಟ್ಟಾ ಪಟ್ಟಣದಿಂದ ಹಿಂತಿರುಗುವಾಗ ತ್ರಿಪಾಠಿ ಅವರು ಬೆಂಕಿ ಹಚ್ಚಿಕೊಂಡಿದ್ದಾರೆ. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದರು ಎಂದು ದಾಮೋಹ್‌ನ ಎಸ್‌ಪಿ ಹೇಳಿದ್ದಾರೆ.

ತ್ರಿಪಾಠಿ ಅವರನ್ನು ಮಾನಸಿಕವಾಗಿ ಕಿರುಕುಳ ನೀಡಿದ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆರ್‌ಟಿಐ ಕಾರ್ಯಕರ್ತ ಭಟ್ ವಿರುದ್ಧ ಬಿಎನ್‌ಎಸ್ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆದರಿಕೆಗೆ ಒಳಗಾಗಿ ಶಿಕ್ಷಕ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...