Homeಮುಖಪುಟಬೆದರಿಕೆಗೆ ಒಳಗಾಗಿ ಶಿಕ್ಷಕ ಆತ್ಮಹತ್ಯೆ | ಆರ್‌ಟಿಐ ಕಾರ್ಯಕರ್ತನ ಬಂಧನ

ಬೆದರಿಕೆಗೆ ಒಳಗಾಗಿ ಶಿಕ್ಷಕ ಆತ್ಮಹತ್ಯೆ | ಆರ್‌ಟಿಐ ಕಾರ್ಯಕರ್ತನ ಬಂಧನ

- Advertisement -
- Advertisement -

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಆರ್‌ಟಿಐ ಕಾರ್ಯಕರ್ತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬೆದರಿಕೆಗೆ ಒಳಗಾಗಿ ಶಿಕ್ಷಕ

ಮೇ 15 ರಂದು ದಾಮೋಹ್ ಜಿಲ್ಲೆಯ ಹಟ್ಟಾ ಪಟ್ಟಣದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕ ರಾಜೇಶ್ ತ್ರಿಪಾಠಿ ಅವರನ್ನು ಮಾನಸಿಕ ಕಿರುಕುಳ ನೀಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಮಧ್ಯವಯಸ್ಕ ಆರ್‌ಟಿಐ ಕಾರ್ಯಕರ್ತ ಜಿತೇಂದ್ರ ಭಟ್‌ ಅವರನ್ನು ಮೇ 26 ರಂದು ಬಂಧಿಸಲಾಗಿದೆ.

ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೆದರಿ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಹಲವು ಪ್ರಾಥಮಿಕ ಶಾಲಾ ಶಿಕ್ಷಕರು ಅದೇ ಆರ್‌ಟಿಐ ಕಾರ್ಯಕರ್ತನ ವಿರುದ್ಧ ದಾಮೋಹ್ ಜಿಲ್ಲಾ ಪೊಲೀಸರನ್ನು ಸಂಪರ್ಕಿಸಿದ್ದರು ಎಂದು ವರದಿಯಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕ ತ್ರಿಪಾಠಿ ನಕಲಿ ಅವರು ಬಿಇಡಿ ಪದವಿ ಬಳಸಿ ಸರ್ಕಾರಿ ಕೆಲಸ ಪಡೆದಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ಮೂಲಗಳು ಉಲ್ಲೇಖಿಸಿವೆ.

ಆರ್‌ಟಿಐ ಕಾರ್ಯಕರ್ತ ತ್ರಿಪಾಠಿ ಅವರಿಂದ ನಿಯಮಿತವಾಗಿ ಹಣ ಪಡೆಯಲು ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ ಎಂದು ವರದಿ ಉಲ್ಲೇಕಿಸಿದೆ.

“ತ್ರಿಪಾಠಿ ಅವರಿಗೆ ಸುಮಾರು 7 ಲಕ್ಷದಿಂದ 10 ಲಕ್ಷ ರೂ.ಗಳವರೆಗೆ ಹಣ ನೀಡುವಂತೆ ಒತ್ತಾಯಿಸಿದ್ದ ಆರ್‌ಟಿಐ ಕಾರ್ಯಕರ್ತ, ಸಂಬಳದ ಅರ್ಧದಷ್ಟು ಹಣವನ್ನು ಪ್ರತಿ ತಿಂಗಳು ಪಾವತಿಸಬೇಕೆಂದು ಆಗ್ರಹಿಸಿದ್ದನು” ಎಂದು ದಾಮೋಹ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರುತಕೀರ್ತಿ ಸೋಮವಂಶಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮನೆ ಕಟ್ಟಲು ಬೇಕಾಗಿ ಬ್ಯಾಂಕ್ ಮತ್ತು ಖಾಸಗಿ ಸಾಲಗಾರರಿಂದ ಪಡೆದಿದ್ದ 50 ಲಕ್ಷ ರೂ.ಗಳಿಗೂ ಹೆಚ್ಚು ಸಾಲದ ಹೊರೆಯಿಂದ ಬಳಲುತ್ತಿದ್ದ ಅವರು, ನಕಲಿ ಪದವಿಯ ಕಾರಣಕ್ಕಾಗಿ ಕೆಲಸ ಕಳೆದುಕೊಳ್ಳುತ್ತೀರಿ ಎಂದು ಆರ್‌ಟಿಐ ಕಾರ್ಯಕರ್ತನಿಂದ ನಿರಂತರ ಬೆದರಿಕೆ ಹಾಕುತ್ತಿದ್ದನು ಎಂದು ಆರೋಪಿಸಲಾಗಿದೆ.

ಜೊತೆಗೆ ನಿಯಮಿತವಾಗಿ ಹಣ ಪಾವತಿಸಬೇಕಾಗಿ ಬಂದಿದ್ದರಿಂದ, ಮೇ 25 ರಂದು ತಮ್ಮ ಹಳ್ಳಿಯಾದ ಹಟ್ಟಾ ಪಟ್ಟಣದಿಂದ ಹಿಂತಿರುಗುವಾಗ ತ್ರಿಪಾಠಿ ಅವರು ಬೆಂಕಿ ಹಚ್ಚಿಕೊಂಡಿದ್ದಾರೆ. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದರು ಎಂದು ದಾಮೋಹ್‌ನ ಎಸ್‌ಪಿ ಹೇಳಿದ್ದಾರೆ.

ತ್ರಿಪಾಠಿ ಅವರನ್ನು ಮಾನಸಿಕವಾಗಿ ಕಿರುಕುಳ ನೀಡಿದ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆರ್‌ಟಿಐ ಕಾರ್ಯಕರ್ತ ಭಟ್ ವಿರುದ್ಧ ಬಿಎನ್‌ಎಸ್ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆದರಿಕೆಗೆ ಒಳಗಾಗಿ ಶಿಕ್ಷಕ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...