Homeಮುಖಪುಟಸಿಎಂ ಸಿದ್ದರಾಮಯ್ಯನವರ ಕುರಿತು ಫೇಕ್ ನ್ಯೂಸ್ ಹಂಚಿ ಅಮಾನತ್ತಾದ ಶಿಕ್ಷಕ: ಈ ಕ್ರಮ ಸರಿಯೇ?

ಸಿಎಂ ಸಿದ್ದರಾಮಯ್ಯನವರ ಕುರಿತು ಫೇಕ್ ನ್ಯೂಸ್ ಹಂಚಿ ಅಮಾನತ್ತಾದ ಶಿಕ್ಷಕ: ಈ ಕ್ರಮ ಸರಿಯೇ?

- Advertisement -
- Advertisement -

ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಅತಿ ಹೆಚ್ಚು ಸಾಲ ಮಾಡಿ ‘ಬಿಟ್ಟಿ ಭಾಗ್ಯಗಳನ್ನು’ ನೀಡಿದ್ದಾರೆ ಎಂಬ ಫೇಕ್‌ ನ್ಯೂಸ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಹೊಸದುರ್ಗ ತಾಲೂಕಿನ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಎಂಬ ಬರಹವನ್ನು ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿಯ ಶಿಕ್ಷಕ ಎಂ ಜಿ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌ ಜಯಪ್ಪ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ಸಿದ್ದರಾಮಯ್ಯ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ “ಎಸ್ ಎಂ ಕೃಷ್ಣ ಅವಧಿಯಲ್ಲಿ ₹3,590 ಕೋಟಿ, ಧರ್ಮಸಿಂಗ್ ₹15,635 ಕೋಟಿ, ಎಚ್ ಡಿ ಕುಮಾರಸ್ವಾಮಿ ₹3,545 ಕೋಟಿ, ಬಿ ಎಸ್‌ ಯಡಿಯೂರಪ್ಪ ₹25,653 ಕೋಟಿ, ಸದಾನಂದಗೌಡ ₹9,464 ಕೋಟಿ, ಜಗದೀಶ್‌ ಶೆಟ್ಟರ್ ₹13,464 ಕೋಟಿ, ಸಿದ್ದರಾಮಯ್ಯ ₹2,42,000 ಕೋಟಿ ಸಾಲ ಮಾಡಿದ್ದರು. ಎಸ್ಎಂ ಕೃಷ್ಣ ಅವಧಿಯಿಂದ ಶೆಟ್ಟರ್‌ವರೆಗೆ ಮಾಡಿದ ಒಟ್ಟು ಸಾಲ ₹71,331 ಕೋಟಿ, ಸಿದ್ದರಾಮಯ್ಯ ಅವರು ಮಾಡಿದ ‌ಸಾಲ ₹2,42,000 ಕೋಟಿ. ಹೀಗಿರುವಾಗ ‘ಬಿಟ್ಟಿ ಭಾಗ್ಯ’ ಕೊಡದೆ ಇನ್ನೇನು” ಎಂಬ ಬರಹವನ್ನು ಫೇಸ್‌ಬುಕ್‌ನಲ್ಲಿ ಶಿಕ್ಷಕ ಶಾಂತಮೂರ್ತಿ ಹಂಚಿಕೊಂಡಿದ್ದರು. ಈ ಮಾಹಿತಿಯನ್ನು ವಾಟ್ಸಾಪ್‌ ಗ್ರೂಪ್‌ಗಳಿಗೂ ಶೇರ್‌ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮ 1996 ಮತ್ತು 2021ರ ಉಲ್ಲಂಘನೆ ಆರೋಪದಲ್ಲಿ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು ಮಾಡಿದ್ದಾರೆ.

ಶಿಕ್ಷಕ ಹಂಚಿಕೊಂಡಿರುವ ಪೋಸ್ಟ್ ಫೇಕ್ ನ್ಯೂಸ್ ಆಗಿದ್ದು, ಈ ಹಿಂದೆ ಸಾಕಷ್ಟು ಜನ ಅದನ್ನು ಹಂಚಿಕೊಂಡಿದ್ದರು. ಅದು ಸಂಪೂರ್ಣ ಸುಳ್ಳು ಸುದ್ದಿಯೆಂದು ನಾನುಗೌರಿ.ಕಾಂ ಸೇರಿದಂತೆ ಹಲವು ಮಾಧ್ಯಮಗಳು ಫ್ಯಾಕ್ಟ್‌ಚೆಕ್ ಮಾಡಿವೆ. ಸಿದ್ದರಾಮಯ್ಯನವರು ಅಧಿಕಾರ ವಹಿಸಿಕೊಂಡಾಗ 2013 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ  1,12,666.6 ಕೋಟಿ ರೂಪಾಯಿ ಇತ್ತು. ಹಾಗೆಯೇ  ಸಿದ್ದರಾಮಯ್ಯನವರ ಅಧಿಕಾರಾವಧಿ ಪೂರ್ಣಗೊಂಡಾಗ, ಅಂದರೆ 2018ನೇ ಇಸವಿಯ ಮಾರ್ಚ್ ಕೊನೆ ವೇಳೆಗೆ 2,45,950.6 ಕೋಟಿ ರೂಪಾಯಿ. ಅಂದರೆ 2018 ರಲ್ಲಿ ಇದ್ದ ಸಾಲದ ಮೊತ್ತವನ್ನು 2013ರಲ್ಲಿ ಇದ್ದ ಒಟ್ಟು ಸಾಲದೊಂದಿದೆ ಕಳೆದಾಗ ಸಿದ್ದರಾಮಯ್ಯನವರ ಅಧಿಕಾರಾವಧಿಯಲ್ಲಿ ರಾಜ್ಯಕ್ಕಾಗಿ ಮಾಡಿದ ಸಾಲ 1,33,284 ಕೋಟಿ ರೂಪಾಯಿಯಷ್ಟು ಆಗುತ್ತದೆ.

ಹಾಗೆ ನೋಡಿದರೆ ಸಿದ್ದರಾಮಯ್ಯನವರಿಗಿಂತ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರ ಮಾಡಿದ ಸಾಲವೇ ಅಧಿಕವಾಗಿದೆ. 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಒಟ್ಟು ಸಾಲ 2,86,328.7 ಕೋಟಿ ರೂಪಾಯಿ ಇತ್ತು. ಈಗ 2023ರಲ್ಲಿ 5,35,156.7 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಲ್ಲಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಹೊಸದಾಗಿ 2,48, 828 ಕೋಟಿ ರೂಗಳ ಸಾಲ ಮಾಡಿದೆ. ಅದು ಸಿದ್ದರಾಮಯ್ಯನವರು 5 ವರ್ಷದ ಆಡಳಿತದಲ್ಲಿ ಮಾಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚಿದೆ. ಈ ಸರಳ ತಿಳಿವಳಿಕೆ ಅಥವಾ ಕನಿಷ್ಟ ಓದು ಸಂಶೋಧನೆ ಇಲ್ಲದೆ ಆ ಶಿಕ್ಷಕ ಪೋಸ್ಟ್ ಮಾಡಿ ಶಿಕ್ಷೆಗೆ ಗುರಿಯಾಗಿದ್ದಾರೆ.

ಈ ರೀತಿಯ ಕ್ರಮಗಳಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವುದಿಲ್ಲವೇ? ಅಮಾನತಿನಂತಹ ಕಠಿಣ ಕ್ರಮ ಬೇಕಿತ್ತೆ ಎಂಬ ಪ್ರಶ್ನೆಗಳು ಸಹ ಎದ್ದಿವೆ.

ಈ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ತಜ್ಞ ನಿರಂಜನಾರಾಧ್ಯರವರು, “ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ. ಅದನ್ನು ನಾವೆಲ್ಲರೂ ಗೌರವಿಸಬೇಕು. ಆದರೆ ಮಾತನಾಡುವವರಿಗೆ ಕನಿಷ್ಟ ತಿಳಿವಳಿಕೆಯಿರಬೇಕು. ಅವರು ಹೇಳುವ ವಿಚಾರಗಳಿಗೆ ತಾರ್ಕಿಕತೆ ಇದ್ದಲ್ಲಿ, ಕಾರಣಗಳಿದ್ದರೆ ಒಪ್ಪೋಣ. ಆದರೆ ಈ ಶಿಕ್ಷಕ ಪೂರ್ವಾಗ್ರಹ ಪ್ರೇರಿತವಾಗಿ ಸುಳ್ಳು ಸುದ್ದಿ ಹರಡಿದ್ದಾರೆ. ಬಿಟ್ಟಿ ಭಾಗ್ಯಗಳು ಎಂದು ಕರೆಯುವುದೇ ತಪ್ಪು. ಜನರ ದುಡ್ಡನ್ನು ಜನರಿಗೆ ಖರ್ಚು ಮಾಡಬೇಕಿರುವುದು ಸರ್ಕಾರದ ಕರ್ತವ್ಯ. ಪ್ರತಿಯೊಬ್ಬರು ತೆರಿಗೆ ಕಟ್ಟುತ್ತಾರೆ ಎನ್ನುವುದನ್ನು ಮರೆಯಬಾರದು. ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ಟೀಕಿಸುವವರು ದೊಡ್ಡ ಬಂಡವಾಳಿಗರ ಲಕ್ಷಾಂತರ ಕೋಟಿ ತೆರಿಗೆ ಮನ್ನಾದ ಬಗ್ಗೆ ಏಕೆ ಮಾತನಾಡುವುದಿಲ್ಲ? ಬೇರೆಯವರು ಹೋಗಲಿ, ಶಿಕ್ಷಕರಿಗೆ ಈ ಕನಿಷ್ಟ ತಿಳುವಳಿಕೆ ಇರಬಾರದೇ” ಎಂದರು.

ಈ ಹಿಂದೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಶಿಕ್ಷಕ ವೀರಣ್ಣ ಮಡಿವಾಳರು ಸರ್ಕಾರಿ ಶಾಲೆ ಮುಚ್ಚುವುದರ ವಿರುದ್ಧ ಪೋಸ್ಟ್ ಹಾಕಿದ್ದಕ್ಕೆ ಅವರ ಮೇಲೆಯೂ ಇದೇ ರೀತಿಯ ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿತ್ತು. ಆಗ ನಾವು ಅವರ ಬೆಂಬಲಕ್ಕೆ ನಿಂತಿದ್ದೆವು. ಶಾಲೆಗಳ ಬಗ್ಗೆ ಶಿಕ್ಷಕರು ಮಾತನಾಡದೇ ಇನ್ಯಾರು ಮಾತನಾಡಬೇಕು ಎಂದಿದ್ದೇವೆ. ಆದರೆ ಈ ಪ್ರಕರಣದಲ್ಲಿ ಶಿಕ್ಷಕ ಶಾಂತಮೂರ್ತಿ ಸರ್ಕಾರದ ಮೇಲಿನ ದ್ವೇಷಕ್ಕೆ ಪರಿಶೀಲಿಸದೆ ಸುಳ್ಳು ಸುದ್ದಿ ಹರಡಿದ್ದಾರೆ. ಶಿಕ್ಷಕರಾದವರೆ ಹೀಗೆ ಮಾಡಿದರೆ ಬೇರೆಯವರ ಕಥೆಯೇನು? ವೈಜ್ಞಾನಿಕತೆ, ವೈಚಾರಿಕತೆ ಬಿತ್ತಬೇಕಾದವರು ಹೀಗೆ ಮಾಡುವುದು ಸರಿಯಲ್ಲ. ಈ ಕುರಿತು ಆ ಶಿಕ್ಷಕರಿಂದ ಸ್ಪಷ್ಟೀಕರಣ ಪಡೆಯಬೇಕು. ಉಳಿದವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮುನ್ನ ಪರೀಶಿಲಿಸಬೇಕು ಎಂದರು.

ಇದನ್ನೂ ಓದಿ; ಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....