Homeಮುಖಪುಟಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

- Advertisement -
- Advertisement -

ಉತ್ತರಪ್ರದೇಶದಲ್ಲಿ ಶಿಕ್ಷಕಿಯೋರ್ವಳ ಸಾಹಸ, ಪರಿಶ್ರಮ 40 ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕನ್ನು ಚೆಲ್ಲಿದೆ. ಸರ್ಕಾರಿ ಶಾಲೆಯ ಶಿಕ್ಷಕಿ ಸೀತಾ ತ್ರಿವೇದಿ  40 ಅಲೆಮಾರಿ ಬುಡಕಟ್ಟು ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಿಸಿ ಶಾಲೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದು, ಶಿಕ್ಷಕಿಯ ಕಾರ್ಯಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ.

ಉತ್ತರಪ್ರದೇಶದ ಬಜೇರಾ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕಿ ಸೀತಾ ತ್ರಿವೇದಿ ಅವರು ಶಿಕ್ಷಣ ವಂಚಿತ ಕಲಬಾಜ್ ಸಮುದಾಯಕ್ಕೆ ಸೇರಿದ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಅವರ ಪೋಷಕರಿಗೆ ಮನವರಿಕೆ ಮಾಡಿ ಅವರ ವಾರ್ಡ್‌ಗಳಲ್ಲಿನ ಶಾಲೆಗೆ ಮಕ್ಕಳನ್ನು ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಜೇರಾ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ತ್ರಿವೇದಿ ಅವರಿಗೆ ಕೆಲವು ವರ್ಷಗಳ ಹಿಂದೆ ಮಕ್ಕಳ ಗಣತಿಯನ್ನು ನಡೆಸುವ ಕೆಲಸವನ್ನು ನೀಡಲಾಗಿತ್ತು. ಸಮೀಕ್ಷೆಗಾಗಿ ಸಮೀಪದ ಗ್ರಾಮಕ್ಕೆ ಭೇಟಿ ನೀಡಿದಾಗ ಸ್ಥಳೀಯರು ಶಿಕ್ಷಕಿಯನ್ನು ಕಲಬಾಜ್ ಸಮುದಾಯದವರ ಮನೆಗಳಿಗೆ ಹೋಗದಂತೆ ತಡೆದಿದ್ದಾರೆ. ಆದರೆ ಅವರು ತನ್ನ ಕಾರ್ಯವನ್ನು ಮುಂದುವರಿಸಿದ್ದರು. ಈ ವೇಳೆ ಅವರು ಕಲಬಾಜ್‌ ಸಮುದಾಯಕ್ಕೆ ಸೇರಿದ ಯಾವುದೇ ಮಕ್ಕಳು ಶಾಲೆಗೆ ಹೋಗುವುದಿಲ್ಲ ಮತ್ತು ಅವರು ಕಟುಂಬದ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುವ  ಕೆಲಸವನ್ನು ಮಾಡುತ್ತಾರೆ ಎಂದು ಕಂಡುಕೊಂಡಿದ್ದಾರೆ ಮತ್ತು ಮಕ್ಕಳನ್ನು ಶಾಲೆಗೆ ಸೇರಿಸುವ ಸಾಹಸಕ್ಕೆ ಮುಂದಾಗಿದ್ದಾರೆ. ತ್ರಿವೇದಿ ಮಕ್ಕಳನ್ನು ಶಾಲೆಗೆ ಸೇರಿಸಲು ಪ್ರಯತ್ನಿಸುತ್ತಿದ್ದಂತೆ ಕಲಬಾಜ್ ಸಮುದಾಯ ಹಿರಿಯರು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿಕ್ಷಕಿ ಸೀತಾ ತ್ರಿವೇದಿ, ನಾನು ಪ್ರತಿ ಮನೆಗೆ ಭೇಟಿ ನೀಡಿ ಹಿರಿಯರಿಗೆ ಶಿಕ್ಷಣದ ಮಹತ್ವದ ಬಗ್ಗೆ ಹೇಳಿದ್ದೇನೆ. ಬುಡಕಟ್ಟು ಸಮುದಾಯದ ಮಕ್ಕಳು ಶಿಕ್ಷಣ ಪಡೆದ ನಂತರ ಅಧಿಕಾರಿಗಳು ಮತ್ತು ಯಶಸ್ವಿ ಉದ್ಯಮಿಗಳಾಗಿರುವ ಕಥೆಗಳನ್ನು ನಾನು ಅವರಿಗೆ ಹೇಳಿದ್ದೇನೆ. ಇದು ಅವರ ಮೇಲೆ ಪರಿಣಾಮ ಬೀರಿತು ಮತ್ತು ಅವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಪ್ರಾರಂಭಿಸಿದರು ಎಂದು ನೆನಪಿಸಿಕೊಂಡಿದ್ದಾರೆ.

ಶಾಲೆಗೆ ಮಕ್ಕಳನ್ನು ಸೇರಿಸಿದಾಗ ಎದುರಾಗಿದ್ದ ಸಮಸ್ಯೆ!

ಕಲಬಾಜ್ ಸಮುದಾಯದ 40 ಮಕ್ಕಳನ್ನು ಮನವೊಲಿಕೆ ಮಾಡಿ ಸೀತಾ ತ್ರಿವೇದಿ ಶಾಲೆಗೆ ದಾಖಲು ಮಾಡಿದ್ದಾರೆ. ಮಕ್ಕಳನ್ನು ದಾಖಲಿಸಿಕೊಂಡರೂ, ಇತರ ಸಮುದಾಯದ ವಿದ್ಯಾರ್ಥಿಗಳು ಅವರನ್ನು ಸ್ವೀಕರಿಸಲು ಸಿದ್ಧರಿಲ್ಲದ ಕಾರಣ ತ್ರಿವೇದಿಗೆ ಮತ್ತೊಂದು ಸವಾಲು ಎದುರಾಗಿತ್ತು. ಕಲಾಬಾಜ್ ಸಮುದಾಯದ ಮಕ್ಕಳೊಂದಿಗೆ ಇತರ ಸಮುದಾಯದ ಮಕ್ಕಳು ಮಧ್ಯಾಹ್ನದ ಊಟಕ್ಕೆ ಕುಳಿತುಕೊಳ್ಳದಿರುವುದನ್ನು ನಾನು ಗಮನಿಸಿದ್ದೇನೆ. ನಾನು ಇತರ ಮಕ್ಕಳ ಪೋಷಕರನ್ನು ಕರೆದು ಕಲಬಾಜ್ ಸಮುದಾಯದ ಮಕ್ಕಳ ಬಗ್ಗೆ ತಾರತಮ್ಯ ಮಾಡದಂತೆ ಕೇಳಿಕೊಂಡಿದ್ದೇನೆ.  ಪೋಷಕರ ಸಹಕಾರದಿಂದ ಈ ಸಮಸ್ಯೆಗೆ ಪರಿಹಾರವಾಗಿತ್ತು. ಪೋಷಕರ ಬಳಿ ಸಾಕಷ್ಟು ಹಣವಿಲ್ಲದ ಕಾರಣ ಈ ಮಕ್ಕಳಿಗೆ ಬಟ್ಟೆ ಮತ್ತು ಪುಸ್ತಕಗಳನ್ನು ಆಗಾಗ್ಗೆ ಖರೀದಿಸಿ ನಾನು ಕೊಡುತ್ತಿದ್ದೇನೆ ಎಂದು ತ್ರಿವೇದಿ ಹೇಳಿದ್ದಾರೆ.

ಸೀತಾ ತ್ರಿವೇದಿ ಅವರ ಈ ಕೆಲಸಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದ್ದು, ತ್ರಿವೇದಿಯವರ ಪ್ರಯತ್ನ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಉಮೇಶ್ ಪ್ರತಾಪ್ ಸಿಂಗ್ ಶ್ಲಾಘಿಸಿದ್ದಾರೆ. ಈ ಮಕ್ಕಳು ಸಮಾಜದ ಹಿತದೃಷ್ಟಿಯಿಂದ ಮುಂದೆ ಸಾಗುತ್ತಾರೆ ಮತ್ತು ಶಿಕ್ಷಣ ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ರೀತಿಯ ಪ್ರಯತ್ನಗಳ ಮೂಲಕ ಜಾತಿ ಆಧಾರಿತ ತಾರತಮ್ಯ ಕೂಡ ಕೊನೆಗೊಳ್ಳುತ್ತವೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ  ಶಿಕ್ಷಾ ಅಧಿಕಾರಿ ರಣವೀರ್ ಸಿಂಗ್ ಅವರು, ಶಿಕ್ಷಕಿಯೋರ್ವರು ಮಾಡಿದ ಪ್ರಯತ್ನಗಳನ್ನು ಗಮನಿಸಿದ್ದೇವೆ. ಶಿಕ್ಷಕರ ಪ್ರಯತ್ನ ಶ್ಲಾಘನೀಯವಾಗಿದ್ದು, ಜಿಲ್ಲೆಯ ಒಂದೇ ಒಂದು ಮಗು ಶಾಲೆಯಿಂದ ದೂರ ಉಳಿಯದಂತೆ ಇತರೆ ಶಾಲೆಗಳಲ್ಲೂ ಇಂತಹ ಪ್ರಯತ್ನ ನಡೆಯಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.

ಕಲಬಾಜ್ ಸಮುದಾಯ

16ನೇ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ಅಡಳಿತದ ಸಮಯದಲ್ಲಿ ಉತ್ತರ ಪ್ರದೇಶಕ್ಕೆ ವಲಸೆ ಬಂದವರು ಕಲಾಬಾಜ್ ಜನರು. ಇವರು ಮೂಲತಃ ರಜಪೂತರು ಎಂದು ಹೇಳುತ್ತಾರೆ. ಈ ಸಮುದಾಯದ ಹೆಚ್ಚಿನ ಉತ್ತರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅವರು ಅಲೆಮಾರಿ ಸಮುದಾಯವಾಗಿದ್ದರು,  ಹಿಂದಿ ಮಾತನಾಡುತ್ತಾರೆ ಆದರೆ ತಮ್ಮದೇ ಆದ ನಿರ್ದಿಷ್ಟ ಉಪಭಾಷೆಯನ್ನು ಹೊಂದಿದ್ದಾರೆ.

ಇವರಲ್ಲಿ ಹೆಚ್ಚಿನವರು ಭೂರಹಿತರಾಗಿದ್ದಾರೆ. ಅದ್ಭುತವಾದ ಜಿಮ್ನಾಸ್ಟಿಕ್ ಸಾಹಸ, ಜಾನುವಾರುಗಳನ್ನು ನೋಡಿಕೊಳ್ಳುವುದು ಅಥವಾ ಬೈಸಿಕಲ್‌ಗಳನ್ನು ದುರಸ್ತಿ ಮಾಡುವುದು. ಕೆಲವರು ದಿನಗೂಲಿಗಳಾಗಿ ಕೂಡ ಕೆಲಸ ಮಾಡುತ್ತಾರೆ. ಹೆಚ್ಚಿನವರು ಬಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದಾರೆ.  2011ರ ಜನಗಣತಿಯು ಉತ್ತರಪ್ರದೇಶದಲ್ಲಿ ಕಲಾಬಾಜ್ ಸಮುದಾಯದ 11,199 ಜನರಿದ್ದಾರೆ ಎಂದು ಹೇಳಿದೆ. ಈ ಸಮುದಾಯವು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದೆ.

ಇದನ್ನು ಓದಿ:ಎಐಸಿಸಿ ಸೆಂಟ್ರಲ್‌ ವಾರ್‌ರೂಂ ಅಧ್ಯಕ್ಷರಾಗಿ ಶಶಿಕಾಂತ್‌ ಸೆಂಥಿಲ್‌ ನೇಮಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...