Homeಮುಖಪುಟಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

- Advertisement -
- Advertisement -

ಉತ್ತರಪ್ರದೇಶದಲ್ಲಿ ಶಿಕ್ಷಕಿಯೋರ್ವಳ ಸಾಹಸ, ಪರಿಶ್ರಮ 40 ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕನ್ನು ಚೆಲ್ಲಿದೆ. ಸರ್ಕಾರಿ ಶಾಲೆಯ ಶಿಕ್ಷಕಿ ಸೀತಾ ತ್ರಿವೇದಿ  40 ಅಲೆಮಾರಿ ಬುಡಕಟ್ಟು ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಿಸಿ ಶಾಲೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದು, ಶಿಕ್ಷಕಿಯ ಕಾರ್ಯಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ.

ಉತ್ತರಪ್ರದೇಶದ ಬಜೇರಾ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕಿ ಸೀತಾ ತ್ರಿವೇದಿ ಅವರು ಶಿಕ್ಷಣ ವಂಚಿತ ಕಲಬಾಜ್ ಸಮುದಾಯಕ್ಕೆ ಸೇರಿದ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಅವರ ಪೋಷಕರಿಗೆ ಮನವರಿಕೆ ಮಾಡಿ ಅವರ ವಾರ್ಡ್‌ಗಳಲ್ಲಿನ ಶಾಲೆಗೆ ಮಕ್ಕಳನ್ನು ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಜೇರಾ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ತ್ರಿವೇದಿ ಅವರಿಗೆ ಕೆಲವು ವರ್ಷಗಳ ಹಿಂದೆ ಮಕ್ಕಳ ಗಣತಿಯನ್ನು ನಡೆಸುವ ಕೆಲಸವನ್ನು ನೀಡಲಾಗಿತ್ತು. ಸಮೀಕ್ಷೆಗಾಗಿ ಸಮೀಪದ ಗ್ರಾಮಕ್ಕೆ ಭೇಟಿ ನೀಡಿದಾಗ ಸ್ಥಳೀಯರು ಶಿಕ್ಷಕಿಯನ್ನು ಕಲಬಾಜ್ ಸಮುದಾಯದವರ ಮನೆಗಳಿಗೆ ಹೋಗದಂತೆ ತಡೆದಿದ್ದಾರೆ. ಆದರೆ ಅವರು ತನ್ನ ಕಾರ್ಯವನ್ನು ಮುಂದುವರಿಸಿದ್ದರು. ಈ ವೇಳೆ ಅವರು ಕಲಬಾಜ್‌ ಸಮುದಾಯಕ್ಕೆ ಸೇರಿದ ಯಾವುದೇ ಮಕ್ಕಳು ಶಾಲೆಗೆ ಹೋಗುವುದಿಲ್ಲ ಮತ್ತು ಅವರು ಕಟುಂಬದ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುವ  ಕೆಲಸವನ್ನು ಮಾಡುತ್ತಾರೆ ಎಂದು ಕಂಡುಕೊಂಡಿದ್ದಾರೆ ಮತ್ತು ಮಕ್ಕಳನ್ನು ಶಾಲೆಗೆ ಸೇರಿಸುವ ಸಾಹಸಕ್ಕೆ ಮುಂದಾಗಿದ್ದಾರೆ. ತ್ರಿವೇದಿ ಮಕ್ಕಳನ್ನು ಶಾಲೆಗೆ ಸೇರಿಸಲು ಪ್ರಯತ್ನಿಸುತ್ತಿದ್ದಂತೆ ಕಲಬಾಜ್ ಸಮುದಾಯ ಹಿರಿಯರು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿಕ್ಷಕಿ ಸೀತಾ ತ್ರಿವೇದಿ, ನಾನು ಪ್ರತಿ ಮನೆಗೆ ಭೇಟಿ ನೀಡಿ ಹಿರಿಯರಿಗೆ ಶಿಕ್ಷಣದ ಮಹತ್ವದ ಬಗ್ಗೆ ಹೇಳಿದ್ದೇನೆ. ಬುಡಕಟ್ಟು ಸಮುದಾಯದ ಮಕ್ಕಳು ಶಿಕ್ಷಣ ಪಡೆದ ನಂತರ ಅಧಿಕಾರಿಗಳು ಮತ್ತು ಯಶಸ್ವಿ ಉದ್ಯಮಿಗಳಾಗಿರುವ ಕಥೆಗಳನ್ನು ನಾನು ಅವರಿಗೆ ಹೇಳಿದ್ದೇನೆ. ಇದು ಅವರ ಮೇಲೆ ಪರಿಣಾಮ ಬೀರಿತು ಮತ್ತು ಅವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಪ್ರಾರಂಭಿಸಿದರು ಎಂದು ನೆನಪಿಸಿಕೊಂಡಿದ್ದಾರೆ.

ಶಾಲೆಗೆ ಮಕ್ಕಳನ್ನು ಸೇರಿಸಿದಾಗ ಎದುರಾಗಿದ್ದ ಸಮಸ್ಯೆ!

ಕಲಬಾಜ್ ಸಮುದಾಯದ 40 ಮಕ್ಕಳನ್ನು ಮನವೊಲಿಕೆ ಮಾಡಿ ಸೀತಾ ತ್ರಿವೇದಿ ಶಾಲೆಗೆ ದಾಖಲು ಮಾಡಿದ್ದಾರೆ. ಮಕ್ಕಳನ್ನು ದಾಖಲಿಸಿಕೊಂಡರೂ, ಇತರ ಸಮುದಾಯದ ವಿದ್ಯಾರ್ಥಿಗಳು ಅವರನ್ನು ಸ್ವೀಕರಿಸಲು ಸಿದ್ಧರಿಲ್ಲದ ಕಾರಣ ತ್ರಿವೇದಿಗೆ ಮತ್ತೊಂದು ಸವಾಲು ಎದುರಾಗಿತ್ತು. ಕಲಾಬಾಜ್ ಸಮುದಾಯದ ಮಕ್ಕಳೊಂದಿಗೆ ಇತರ ಸಮುದಾಯದ ಮಕ್ಕಳು ಮಧ್ಯಾಹ್ನದ ಊಟಕ್ಕೆ ಕುಳಿತುಕೊಳ್ಳದಿರುವುದನ್ನು ನಾನು ಗಮನಿಸಿದ್ದೇನೆ. ನಾನು ಇತರ ಮಕ್ಕಳ ಪೋಷಕರನ್ನು ಕರೆದು ಕಲಬಾಜ್ ಸಮುದಾಯದ ಮಕ್ಕಳ ಬಗ್ಗೆ ತಾರತಮ್ಯ ಮಾಡದಂತೆ ಕೇಳಿಕೊಂಡಿದ್ದೇನೆ.  ಪೋಷಕರ ಸಹಕಾರದಿಂದ ಈ ಸಮಸ್ಯೆಗೆ ಪರಿಹಾರವಾಗಿತ್ತು. ಪೋಷಕರ ಬಳಿ ಸಾಕಷ್ಟು ಹಣವಿಲ್ಲದ ಕಾರಣ ಈ ಮಕ್ಕಳಿಗೆ ಬಟ್ಟೆ ಮತ್ತು ಪುಸ್ತಕಗಳನ್ನು ಆಗಾಗ್ಗೆ ಖರೀದಿಸಿ ನಾನು ಕೊಡುತ್ತಿದ್ದೇನೆ ಎಂದು ತ್ರಿವೇದಿ ಹೇಳಿದ್ದಾರೆ.

ಸೀತಾ ತ್ರಿವೇದಿ ಅವರ ಈ ಕೆಲಸಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದ್ದು, ತ್ರಿವೇದಿಯವರ ಪ್ರಯತ್ನ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಉಮೇಶ್ ಪ್ರತಾಪ್ ಸಿಂಗ್ ಶ್ಲಾಘಿಸಿದ್ದಾರೆ. ಈ ಮಕ್ಕಳು ಸಮಾಜದ ಹಿತದೃಷ್ಟಿಯಿಂದ ಮುಂದೆ ಸಾಗುತ್ತಾರೆ ಮತ್ತು ಶಿಕ್ಷಣ ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ರೀತಿಯ ಪ್ರಯತ್ನಗಳ ಮೂಲಕ ಜಾತಿ ಆಧಾರಿತ ತಾರತಮ್ಯ ಕೂಡ ಕೊನೆಗೊಳ್ಳುತ್ತವೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ  ಶಿಕ್ಷಾ ಅಧಿಕಾರಿ ರಣವೀರ್ ಸಿಂಗ್ ಅವರು, ಶಿಕ್ಷಕಿಯೋರ್ವರು ಮಾಡಿದ ಪ್ರಯತ್ನಗಳನ್ನು ಗಮನಿಸಿದ್ದೇವೆ. ಶಿಕ್ಷಕರ ಪ್ರಯತ್ನ ಶ್ಲಾಘನೀಯವಾಗಿದ್ದು, ಜಿಲ್ಲೆಯ ಒಂದೇ ಒಂದು ಮಗು ಶಾಲೆಯಿಂದ ದೂರ ಉಳಿಯದಂತೆ ಇತರೆ ಶಾಲೆಗಳಲ್ಲೂ ಇಂತಹ ಪ್ರಯತ್ನ ನಡೆಯಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.

ಕಲಬಾಜ್ ಸಮುದಾಯ

16ನೇ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ಅಡಳಿತದ ಸಮಯದಲ್ಲಿ ಉತ್ತರ ಪ್ರದೇಶಕ್ಕೆ ವಲಸೆ ಬಂದವರು ಕಲಾಬಾಜ್ ಜನರು. ಇವರು ಮೂಲತಃ ರಜಪೂತರು ಎಂದು ಹೇಳುತ್ತಾರೆ. ಈ ಸಮುದಾಯದ ಹೆಚ್ಚಿನ ಉತ್ತರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅವರು ಅಲೆಮಾರಿ ಸಮುದಾಯವಾಗಿದ್ದರು,  ಹಿಂದಿ ಮಾತನಾಡುತ್ತಾರೆ ಆದರೆ ತಮ್ಮದೇ ಆದ ನಿರ್ದಿಷ್ಟ ಉಪಭಾಷೆಯನ್ನು ಹೊಂದಿದ್ದಾರೆ.

ಇವರಲ್ಲಿ ಹೆಚ್ಚಿನವರು ಭೂರಹಿತರಾಗಿದ್ದಾರೆ. ಅದ್ಭುತವಾದ ಜಿಮ್ನಾಸ್ಟಿಕ್ ಸಾಹಸ, ಜಾನುವಾರುಗಳನ್ನು ನೋಡಿಕೊಳ್ಳುವುದು ಅಥವಾ ಬೈಸಿಕಲ್‌ಗಳನ್ನು ದುರಸ್ತಿ ಮಾಡುವುದು. ಕೆಲವರು ದಿನಗೂಲಿಗಳಾಗಿ ಕೂಡ ಕೆಲಸ ಮಾಡುತ್ತಾರೆ. ಹೆಚ್ಚಿನವರು ಬಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದಾರೆ.  2011ರ ಜನಗಣತಿಯು ಉತ್ತರಪ್ರದೇಶದಲ್ಲಿ ಕಲಾಬಾಜ್ ಸಮುದಾಯದ 11,199 ಜನರಿದ್ದಾರೆ ಎಂದು ಹೇಳಿದೆ. ಈ ಸಮುದಾಯವು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದೆ.

ಇದನ್ನು ಓದಿ:ಎಐಸಿಸಿ ಸೆಂಟ್ರಲ್‌ ವಾರ್‌ರೂಂ ಅಧ್ಯಕ್ಷರಾಗಿ ಶಶಿಕಾಂತ್‌ ಸೆಂಥಿಲ್‌ ನೇಮಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...